Homeಮುಖಪುಟಮಧ್ಯಪ್ರದೇಶದಲ್ಲಿ ಕೊವ್ಯಾಕ್ಸಿನ್ ಟ್ರಯಲ್: ಅನಿಲ ದುರಂತ ಸಂತ್ರಸ್ತರ ಮೇಲೆ ಲಸಿಕೆ ದಾಳಿ

ಮಧ್ಯಪ್ರದೇಶದಲ್ಲಿ ಕೊವ್ಯಾಕ್ಸಿನ್ ಟ್ರಯಲ್: ಅನಿಲ ದುರಂತ ಸಂತ್ರಸ್ತರ ಮೇಲೆ ಲಸಿಕೆ ದಾಳಿ

ಭಾರತದ ಮೊದಲ ದೇಸಿ ಕೊವಿಡ್ ಲಸಿಕೆ ಎನಿಸಿರುವ ಕೊವ್ಯಾಕ್ಸಿನ್‌ಗೆ ಈಗ ಜನ-ಸಂಘಟನೆಗಳಿಂದಲೂ ವಿರೋಧ ವ್ಯಕ್ತವಾಗುತ್ತಿದೆ.

- Advertisement -
- Advertisement -

ಭೋಪಾಲ್‌ನಲ್ಲಿ ನಡೆಯುತ್ತಿರುವ ಕೊವ್ಯಾಕ್ಸಿನ್ ಮೂರನೆ ಹಂತದ ಟ್ರಯಲ್ಸ್ ರದ್ದು ಮಾಡಬೇಕು, ಮೂರನೇ ಹಂತದಲ್ಲಿ ಲಸಿಕೆ ಸ್ವೀಕರಿಸಿ ಮೃತರಾದ ವ್ಯಕ್ತಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಇದಕ್ಕೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರಧಾನಿ ಮೋದಿಯವರಿಗೆ ಭೋಪಾಲ್ ಅನಿಲ ದುರಂತದ ಸಂತ್ರಸ್ತರ ಪರ ಕೆಲಸ ಮಾಡುತ್ತಿರುವ ನಾಲ್ಕು ಸಂಘಟನೆಗಳು ಪತ್ರ ಬರೆದಿವೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ದೇಶದ ಐಕೈಕ ‘ದೇಸಿ’ ಲಸಿಕೆ ಎಂದು ಹೆಸರು ಪಡೆದಿದೆ.

ಟ್ರಯಲ್ಸ್ ನಡೆಸುತ್ತಿರುವ ಭೋಪಾಲ್‌ನ ಪೀಪಲ್ಸ್ ಕಾಲೇಜ್ ಆಫ್ ಮೆಡಿಸಿನ್ & ರಿಸರ್ಚ್, ಲಸಿಕೆಯ ಡೋಸ್‌ನಿಂದ ಸಾವು ಸಂಭವಿಸಿಲ್ಲ ಎಂಬ ಹೇಳಿಕೆ ನೀಡಿದ್ದು, ಮಧ್ಯಪ್ರದೇಶ ಸರ್ಕಾರ ಕೂಡ ಕಾಲೇಜಿಗೆ ಕ್ಲೀನ್‌ಚಿಟ್ ನೀಡಿದೆ.

ಸಾವಿಗೀಡಾದ ಸ್ವಯಂಸೇವಕ ಭರ್ತಿ (ರಿಕ್ರೂಟ್‌ಮೆಂಟ್) ಸಂದರ್ಭದಲ್ಲಿ ಎಲ್ಲ ಮಾನದಂಡಗಳಲ್ಲು ತೇರ್ಗಡೆಯಾಗಿದ್ದ ಮತ್ತು ಲಸಿಕೆಯ ಡೋಸ್ ನೀಡಿದ ಹಿಂದಿನ 7 ದಿನ ಕಾಲ ಆರೋಗ್ಯವಂತ ಸ್ಥಿತಿಯಲ್ಲೇ ಇದ್ದ, ಯಾವುದೇ ಅಡ್ಡ ಪರಿಣಾಮ ಕೂಡ ಸಂಭವಿಸಿರಲಿಲ್ಲ ಎಂದು ಹಲವು ಮಾಧ್ಯಮಗಳ ವರದಿಗಳು ಹೇಳುತ್ತಿವೆ.

ಭೋಪಾಲ್‌ನ ಗಾಂಧಿ ಮೆಡಿಕಲ್ ಕಾಲೇಜ್ ನೀಡಿರುವ ಮರಣೋತ್ತರ ವರದಿ ಉಲ್ಲೇಖಿಸಿರುವ ಭಾರತ್ ಬಯೋಟೆಕ್, ‘ಕಾರ್ಡಿಯೋ-ರೆಸ್ಪಿರೆಟರಿ ಸಮಸ್ಯೆಯಿಂದ ಸಾವು ಸಂಭವಿಸಿದೆ, ಬಹುಷಃ ವಿಷಪ್ರಾಸನ ನಡೆದಿರಬಹುದು’ ಎಂದು ಹೇಳುತ್ತಿದೆ.

ಆದರೆ, ಈ ಲಸಿಕೆಯ ಟ್ರಯಲ್ಸ್ ಅನ್ನು ಕೂಡಲೇ ನಿಲ್ಲಿಸಬೇಕೆಂದು ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಸಂಘ, ಭೋಪಾಲ್ ಗ್ಯಾಸ್ ಪೀಡಿತ್ ಪುರುಷ್ ಸಂಘ, ಭೋಪಾಲ್ ಗ್ರೂಪ್ ಫಾರ್ ಇನ್ಫಾರ್ಮೆಷನ್ & ಆಕ್ಚನ್ ಮತ್ತು ಚಿಲ್ಡ್ರನ್ ಅಗೇನಸ್ಟ್ ಡೌ ಕಾರ್ಬೈಡ್- ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಿವೆ.

‘ಲಸಿಕೆ ಪ್ರಯೋಗಗೊಂಡ 1,700 ಜನರ ಪೈಕಿ ಕನಿಷ್ಠ 700 ಜನರು ಭೋಪಾಲ್ ಅನಿಲ ದುರಂತದಿಂದ ಸಂಭವಿಸಿದ ಕಾಯಿಲೆಗಳಿಂದ ನರಳುತ್ತಿದ್ದಾರೆ. ಲಸಿಕೆ ಪಡೆದ 10 ದಿನದಲ್ಲೇ ಒಬ್ಬ ಅನಿಲ ದುರಂತ ಸಂತ್ರಸ್ತ ತೀರಿಕೊಂಡಿದ್ದು, ಲಸಿಕೆ ಪಡೆದ ಇತರ ಸಂತ್ರಸ್ತರು ಗಂಭೀರ ಆರೋಗ್ಯ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ. ಇಂತಹ ಅಸಮರ್ಪಕ ಟ್ರಯಲ್ಸ್ ಕಾರಣದಿಂದ 12 ವರ್ಷದ ಹಿಂದೆ 13 ಅನಿಲ ದುರಂತ ಸಂತ್ರಸ್ತರು ಸಾವೀಗೀಡಾಗಿದ್ದರು. ಈಗಲೂ ಆ ಘಟನೆಗೆ ಕಾರಣಾದವರ ಮೇಲೆ ಕ್ರಮ ಜರುಗಿಸಿಲ್ಲ’ ಎಂದು ಮಾಧ್ಯಮಗಳಿಗೆ ಹೇಳಿರುವ ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಸಂಘದ ರಷೀದಾ ಬೀ, ಇಂಥದ್ದು ಮತ್ತೆ ಸಂಭವಿಸಲಾರದು ಎಂದು ಪ್ರಧಾನಿ ಭರವಸೆ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.

‘ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಅವರ ಸಮ್ಮತಿಯಿಲ್ಲದೇ ಕೊವ್ಯಾಕ್ಸಿನ್ ಲಸಿಕೆಯ ಟ್ರಯಲ್ ಶಾಟ್ಸ್/ಡೋಸ್ ನೀಡಲಾಗಿದೆ. ಟ್ರಯಲ್ಸ್ ನಂತರ ಅವರ ಆರೋಗ್ಯ ಕುರಿತ ಅಪ್ಡೇಟ್‌ಗಳನ್ನು ಕೂಡ ಮೆಂಟೇನ್ ಮಾಡಿಲ್ಲ. ಕೆಲವರು ಟ್ರಯಲ್‌ನಿಂದ ಹೊರಬಂದರು. ಅವರಿಗೆ ನಂತರದಲ್ಲಿ ಸೂಕ್ತ ಆರೋಗ್ಯ ಚಿಕಿತ್ಸೆಯ ಏರ್ಪಾಟನ್ನೂ ಮಾಡಿಲ್ಲ’ ಎಂದು ಭೋಪಾಲ್ ಗ್ರೂಪ್ ಫಾರ್ ಇನ್ಫಾರ್ಮೆಷನ್ & ಆಕ್ಚನ್ ಸಂಘಟನೆಯ ರೀಚಾ ಧಿಂಗ್ರಾ ಕಿಡಿ ಕಾರಿದ್ದಾರೆ.

‘ಕಂಪನಿಯೊಂದನ್ನು ರಕ್ಷಿಸಲು ಕೇಂದ್ರ ಸರ್ಕಾರ ಸಾರ್ವಜನಿಕ ಆರೋಗ್ಯವನ್ನೇ ಹಾಳು ಮಾಡುತ್ತಿದೆ’ ಎಂದು ಸಂಘಟನೆಗಳು ದೂಷಿಸಿವೆ. ಮಧ್ಯಪ್ರದೇಶದ ಆರೋಗ್ಯ ಸಚಿವ ವಿಶ್ವಾಸ್ ಸಾರಂಗ್ ‘ಭಾರತ್ ಬಯೋಟೆಕ್ ತಪ್ಪು ಮಾಡಿಲ್ಲ’ ಎಂದು ಪ್ರತಿಪಾದಿಸುತ್ತಿದ್ದಾರೆ.


ಇದನ್ನೂ ಓದಿ: ಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...