Homeಮುಖಪುಟಮಧ್ಯಪ್ರದೇಶದಲ್ಲಿ ಕೊವ್ಯಾಕ್ಸಿನ್ ಟ್ರಯಲ್: ಅನಿಲ ದುರಂತ ಸಂತ್ರಸ್ತರ ಮೇಲೆ ಲಸಿಕೆ ದಾಳಿ

ಮಧ್ಯಪ್ರದೇಶದಲ್ಲಿ ಕೊವ್ಯಾಕ್ಸಿನ್ ಟ್ರಯಲ್: ಅನಿಲ ದುರಂತ ಸಂತ್ರಸ್ತರ ಮೇಲೆ ಲಸಿಕೆ ದಾಳಿ

ಭಾರತದ ಮೊದಲ ದೇಸಿ ಕೊವಿಡ್ ಲಸಿಕೆ ಎನಿಸಿರುವ ಕೊವ್ಯಾಕ್ಸಿನ್‌ಗೆ ಈಗ ಜನ-ಸಂಘಟನೆಗಳಿಂದಲೂ ವಿರೋಧ ವ್ಯಕ್ತವಾಗುತ್ತಿದೆ.

- Advertisement -
- Advertisement -

ಭೋಪಾಲ್‌ನಲ್ಲಿ ನಡೆಯುತ್ತಿರುವ ಕೊವ್ಯಾಕ್ಸಿನ್ ಮೂರನೆ ಹಂತದ ಟ್ರಯಲ್ಸ್ ರದ್ದು ಮಾಡಬೇಕು, ಮೂರನೇ ಹಂತದಲ್ಲಿ ಲಸಿಕೆ ಸ್ವೀಕರಿಸಿ ಮೃತರಾದ ವ್ಯಕ್ತಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಇದಕ್ಕೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರಧಾನಿ ಮೋದಿಯವರಿಗೆ ಭೋಪಾಲ್ ಅನಿಲ ದುರಂತದ ಸಂತ್ರಸ್ತರ ಪರ ಕೆಲಸ ಮಾಡುತ್ತಿರುವ ನಾಲ್ಕು ಸಂಘಟನೆಗಳು ಪತ್ರ ಬರೆದಿವೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ದೇಶದ ಐಕೈಕ ‘ದೇಸಿ’ ಲಸಿಕೆ ಎಂದು ಹೆಸರು ಪಡೆದಿದೆ.

ಟ್ರಯಲ್ಸ್ ನಡೆಸುತ್ತಿರುವ ಭೋಪಾಲ್‌ನ ಪೀಪಲ್ಸ್ ಕಾಲೇಜ್ ಆಫ್ ಮೆಡಿಸಿನ್ & ರಿಸರ್ಚ್, ಲಸಿಕೆಯ ಡೋಸ್‌ನಿಂದ ಸಾವು ಸಂಭವಿಸಿಲ್ಲ ಎಂಬ ಹೇಳಿಕೆ ನೀಡಿದ್ದು, ಮಧ್ಯಪ್ರದೇಶ ಸರ್ಕಾರ ಕೂಡ ಕಾಲೇಜಿಗೆ ಕ್ಲೀನ್‌ಚಿಟ್ ನೀಡಿದೆ.

ಸಾವಿಗೀಡಾದ ಸ್ವಯಂಸೇವಕ ಭರ್ತಿ (ರಿಕ್ರೂಟ್‌ಮೆಂಟ್) ಸಂದರ್ಭದಲ್ಲಿ ಎಲ್ಲ ಮಾನದಂಡಗಳಲ್ಲು ತೇರ್ಗಡೆಯಾಗಿದ್ದ ಮತ್ತು ಲಸಿಕೆಯ ಡೋಸ್ ನೀಡಿದ ಹಿಂದಿನ 7 ದಿನ ಕಾಲ ಆರೋಗ್ಯವಂತ ಸ್ಥಿತಿಯಲ್ಲೇ ಇದ್ದ, ಯಾವುದೇ ಅಡ್ಡ ಪರಿಣಾಮ ಕೂಡ ಸಂಭವಿಸಿರಲಿಲ್ಲ ಎಂದು ಹಲವು ಮಾಧ್ಯಮಗಳ ವರದಿಗಳು ಹೇಳುತ್ತಿವೆ.

ಭೋಪಾಲ್‌ನ ಗಾಂಧಿ ಮೆಡಿಕಲ್ ಕಾಲೇಜ್ ನೀಡಿರುವ ಮರಣೋತ್ತರ ವರದಿ ಉಲ್ಲೇಖಿಸಿರುವ ಭಾರತ್ ಬಯೋಟೆಕ್, ‘ಕಾರ್ಡಿಯೋ-ರೆಸ್ಪಿರೆಟರಿ ಸಮಸ್ಯೆಯಿಂದ ಸಾವು ಸಂಭವಿಸಿದೆ, ಬಹುಷಃ ವಿಷಪ್ರಾಸನ ನಡೆದಿರಬಹುದು’ ಎಂದು ಹೇಳುತ್ತಿದೆ.

ಆದರೆ, ಈ ಲಸಿಕೆಯ ಟ್ರಯಲ್ಸ್ ಅನ್ನು ಕೂಡಲೇ ನಿಲ್ಲಿಸಬೇಕೆಂದು ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಸಂಘ, ಭೋಪಾಲ್ ಗ್ಯಾಸ್ ಪೀಡಿತ್ ಪುರುಷ್ ಸಂಘ, ಭೋಪಾಲ್ ಗ್ರೂಪ್ ಫಾರ್ ಇನ್ಫಾರ್ಮೆಷನ್ & ಆಕ್ಚನ್ ಮತ್ತು ಚಿಲ್ಡ್ರನ್ ಅಗೇನಸ್ಟ್ ಡೌ ಕಾರ್ಬೈಡ್- ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಿವೆ.

‘ಲಸಿಕೆ ಪ್ರಯೋಗಗೊಂಡ 1,700 ಜನರ ಪೈಕಿ ಕನಿಷ್ಠ 700 ಜನರು ಭೋಪಾಲ್ ಅನಿಲ ದುರಂತದಿಂದ ಸಂಭವಿಸಿದ ಕಾಯಿಲೆಗಳಿಂದ ನರಳುತ್ತಿದ್ದಾರೆ. ಲಸಿಕೆ ಪಡೆದ 10 ದಿನದಲ್ಲೇ ಒಬ್ಬ ಅನಿಲ ದುರಂತ ಸಂತ್ರಸ್ತ ತೀರಿಕೊಂಡಿದ್ದು, ಲಸಿಕೆ ಪಡೆದ ಇತರ ಸಂತ್ರಸ್ತರು ಗಂಭೀರ ಆರೋಗ್ಯ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ. ಇಂತಹ ಅಸಮರ್ಪಕ ಟ್ರಯಲ್ಸ್ ಕಾರಣದಿಂದ 12 ವರ್ಷದ ಹಿಂದೆ 13 ಅನಿಲ ದುರಂತ ಸಂತ್ರಸ್ತರು ಸಾವೀಗೀಡಾಗಿದ್ದರು. ಈಗಲೂ ಆ ಘಟನೆಗೆ ಕಾರಣಾದವರ ಮೇಲೆ ಕ್ರಮ ಜರುಗಿಸಿಲ್ಲ’ ಎಂದು ಮಾಧ್ಯಮಗಳಿಗೆ ಹೇಳಿರುವ ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಸಂಘದ ರಷೀದಾ ಬೀ, ಇಂಥದ್ದು ಮತ್ತೆ ಸಂಭವಿಸಲಾರದು ಎಂದು ಪ್ರಧಾನಿ ಭರವಸೆ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.

‘ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಅವರ ಸಮ್ಮತಿಯಿಲ್ಲದೇ ಕೊವ್ಯಾಕ್ಸಿನ್ ಲಸಿಕೆಯ ಟ್ರಯಲ್ ಶಾಟ್ಸ್/ಡೋಸ್ ನೀಡಲಾಗಿದೆ. ಟ್ರಯಲ್ಸ್ ನಂತರ ಅವರ ಆರೋಗ್ಯ ಕುರಿತ ಅಪ್ಡೇಟ್‌ಗಳನ್ನು ಕೂಡ ಮೆಂಟೇನ್ ಮಾಡಿಲ್ಲ. ಕೆಲವರು ಟ್ರಯಲ್‌ನಿಂದ ಹೊರಬಂದರು. ಅವರಿಗೆ ನಂತರದಲ್ಲಿ ಸೂಕ್ತ ಆರೋಗ್ಯ ಚಿಕಿತ್ಸೆಯ ಏರ್ಪಾಟನ್ನೂ ಮಾಡಿಲ್ಲ’ ಎಂದು ಭೋಪಾಲ್ ಗ್ರೂಪ್ ಫಾರ್ ಇನ್ಫಾರ್ಮೆಷನ್ & ಆಕ್ಚನ್ ಸಂಘಟನೆಯ ರೀಚಾ ಧಿಂಗ್ರಾ ಕಿಡಿ ಕಾರಿದ್ದಾರೆ.

‘ಕಂಪನಿಯೊಂದನ್ನು ರಕ್ಷಿಸಲು ಕೇಂದ್ರ ಸರ್ಕಾರ ಸಾರ್ವಜನಿಕ ಆರೋಗ್ಯವನ್ನೇ ಹಾಳು ಮಾಡುತ್ತಿದೆ’ ಎಂದು ಸಂಘಟನೆಗಳು ದೂಷಿಸಿವೆ. ಮಧ್ಯಪ್ರದೇಶದ ಆರೋಗ್ಯ ಸಚಿವ ವಿಶ್ವಾಸ್ ಸಾರಂಗ್ ‘ಭಾರತ್ ಬಯೋಟೆಕ್ ತಪ್ಪು ಮಾಡಿಲ್ಲ’ ಎಂದು ಪ್ರತಿಪಾದಿಸುತ್ತಿದ್ದಾರೆ.


ಇದನ್ನೂ ಓದಿ: ಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...