Homeಮುಖಪುಟಮಧ್ಯಪ್ರದೇಶದಲ್ಲಿ ಕೊವ್ಯಾಕ್ಸಿನ್ ಟ್ರಯಲ್: ಅನಿಲ ದುರಂತ ಸಂತ್ರಸ್ತರ ಮೇಲೆ ಲಸಿಕೆ ದಾಳಿ

ಮಧ್ಯಪ್ರದೇಶದಲ್ಲಿ ಕೊವ್ಯಾಕ್ಸಿನ್ ಟ್ರಯಲ್: ಅನಿಲ ದುರಂತ ಸಂತ್ರಸ್ತರ ಮೇಲೆ ಲಸಿಕೆ ದಾಳಿ

ಭಾರತದ ಮೊದಲ ದೇಸಿ ಕೊವಿಡ್ ಲಸಿಕೆ ಎನಿಸಿರುವ ಕೊವ್ಯಾಕ್ಸಿನ್‌ಗೆ ಈಗ ಜನ-ಸಂಘಟನೆಗಳಿಂದಲೂ ವಿರೋಧ ವ್ಯಕ್ತವಾಗುತ್ತಿದೆ.

- Advertisement -
- Advertisement -

ಭೋಪಾಲ್‌ನಲ್ಲಿ ನಡೆಯುತ್ತಿರುವ ಕೊವ್ಯಾಕ್ಸಿನ್ ಮೂರನೆ ಹಂತದ ಟ್ರಯಲ್ಸ್ ರದ್ದು ಮಾಡಬೇಕು, ಮೂರನೇ ಹಂತದಲ್ಲಿ ಲಸಿಕೆ ಸ್ವೀಕರಿಸಿ ಮೃತರಾದ ವ್ಯಕ್ತಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಇದಕ್ಕೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರಧಾನಿ ಮೋದಿಯವರಿಗೆ ಭೋಪಾಲ್ ಅನಿಲ ದುರಂತದ ಸಂತ್ರಸ್ತರ ಪರ ಕೆಲಸ ಮಾಡುತ್ತಿರುವ ನಾಲ್ಕು ಸಂಘಟನೆಗಳು ಪತ್ರ ಬರೆದಿವೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ದೇಶದ ಐಕೈಕ ‘ದೇಸಿ’ ಲಸಿಕೆ ಎಂದು ಹೆಸರು ಪಡೆದಿದೆ.

ಟ್ರಯಲ್ಸ್ ನಡೆಸುತ್ತಿರುವ ಭೋಪಾಲ್‌ನ ಪೀಪಲ್ಸ್ ಕಾಲೇಜ್ ಆಫ್ ಮೆಡಿಸಿನ್ & ರಿಸರ್ಚ್, ಲಸಿಕೆಯ ಡೋಸ್‌ನಿಂದ ಸಾವು ಸಂಭವಿಸಿಲ್ಲ ಎಂಬ ಹೇಳಿಕೆ ನೀಡಿದ್ದು, ಮಧ್ಯಪ್ರದೇಶ ಸರ್ಕಾರ ಕೂಡ ಕಾಲೇಜಿಗೆ ಕ್ಲೀನ್‌ಚಿಟ್ ನೀಡಿದೆ.

ಸಾವಿಗೀಡಾದ ಸ್ವಯಂಸೇವಕ ಭರ್ತಿ (ರಿಕ್ರೂಟ್‌ಮೆಂಟ್) ಸಂದರ್ಭದಲ್ಲಿ ಎಲ್ಲ ಮಾನದಂಡಗಳಲ್ಲು ತೇರ್ಗಡೆಯಾಗಿದ್ದ ಮತ್ತು ಲಸಿಕೆಯ ಡೋಸ್ ನೀಡಿದ ಹಿಂದಿನ 7 ದಿನ ಕಾಲ ಆರೋಗ್ಯವಂತ ಸ್ಥಿತಿಯಲ್ಲೇ ಇದ್ದ, ಯಾವುದೇ ಅಡ್ಡ ಪರಿಣಾಮ ಕೂಡ ಸಂಭವಿಸಿರಲಿಲ್ಲ ಎಂದು ಹಲವು ಮಾಧ್ಯಮಗಳ ವರದಿಗಳು ಹೇಳುತ್ತಿವೆ.

ಭೋಪಾಲ್‌ನ ಗಾಂಧಿ ಮೆಡಿಕಲ್ ಕಾಲೇಜ್ ನೀಡಿರುವ ಮರಣೋತ್ತರ ವರದಿ ಉಲ್ಲೇಖಿಸಿರುವ ಭಾರತ್ ಬಯೋಟೆಕ್, ‘ಕಾರ್ಡಿಯೋ-ರೆಸ್ಪಿರೆಟರಿ ಸಮಸ್ಯೆಯಿಂದ ಸಾವು ಸಂಭವಿಸಿದೆ, ಬಹುಷಃ ವಿಷಪ್ರಾಸನ ನಡೆದಿರಬಹುದು’ ಎಂದು ಹೇಳುತ್ತಿದೆ.

ಆದರೆ, ಈ ಲಸಿಕೆಯ ಟ್ರಯಲ್ಸ್ ಅನ್ನು ಕೂಡಲೇ ನಿಲ್ಲಿಸಬೇಕೆಂದು ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಸಂಘ, ಭೋಪಾಲ್ ಗ್ಯಾಸ್ ಪೀಡಿತ್ ಪುರುಷ್ ಸಂಘ, ಭೋಪಾಲ್ ಗ್ರೂಪ್ ಫಾರ್ ಇನ್ಫಾರ್ಮೆಷನ್ & ಆಕ್ಚನ್ ಮತ್ತು ಚಿಲ್ಡ್ರನ್ ಅಗೇನಸ್ಟ್ ಡೌ ಕಾರ್ಬೈಡ್- ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಿವೆ.

‘ಲಸಿಕೆ ಪ್ರಯೋಗಗೊಂಡ 1,700 ಜನರ ಪೈಕಿ ಕನಿಷ್ಠ 700 ಜನರು ಭೋಪಾಲ್ ಅನಿಲ ದುರಂತದಿಂದ ಸಂಭವಿಸಿದ ಕಾಯಿಲೆಗಳಿಂದ ನರಳುತ್ತಿದ್ದಾರೆ. ಲಸಿಕೆ ಪಡೆದ 10 ದಿನದಲ್ಲೇ ಒಬ್ಬ ಅನಿಲ ದುರಂತ ಸಂತ್ರಸ್ತ ತೀರಿಕೊಂಡಿದ್ದು, ಲಸಿಕೆ ಪಡೆದ ಇತರ ಸಂತ್ರಸ್ತರು ಗಂಭೀರ ಆರೋಗ್ಯ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ. ಇಂತಹ ಅಸಮರ್ಪಕ ಟ್ರಯಲ್ಸ್ ಕಾರಣದಿಂದ 12 ವರ್ಷದ ಹಿಂದೆ 13 ಅನಿಲ ದುರಂತ ಸಂತ್ರಸ್ತರು ಸಾವೀಗೀಡಾಗಿದ್ದರು. ಈಗಲೂ ಆ ಘಟನೆಗೆ ಕಾರಣಾದವರ ಮೇಲೆ ಕ್ರಮ ಜರುಗಿಸಿಲ್ಲ’ ಎಂದು ಮಾಧ್ಯಮಗಳಿಗೆ ಹೇಳಿರುವ ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಸಂಘದ ರಷೀದಾ ಬೀ, ಇಂಥದ್ದು ಮತ್ತೆ ಸಂಭವಿಸಲಾರದು ಎಂದು ಪ್ರಧಾನಿ ಭರವಸೆ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.

‘ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಅವರ ಸಮ್ಮತಿಯಿಲ್ಲದೇ ಕೊವ್ಯಾಕ್ಸಿನ್ ಲಸಿಕೆಯ ಟ್ರಯಲ್ ಶಾಟ್ಸ್/ಡೋಸ್ ನೀಡಲಾಗಿದೆ. ಟ್ರಯಲ್ಸ್ ನಂತರ ಅವರ ಆರೋಗ್ಯ ಕುರಿತ ಅಪ್ಡೇಟ್‌ಗಳನ್ನು ಕೂಡ ಮೆಂಟೇನ್ ಮಾಡಿಲ್ಲ. ಕೆಲವರು ಟ್ರಯಲ್‌ನಿಂದ ಹೊರಬಂದರು. ಅವರಿಗೆ ನಂತರದಲ್ಲಿ ಸೂಕ್ತ ಆರೋಗ್ಯ ಚಿಕಿತ್ಸೆಯ ಏರ್ಪಾಟನ್ನೂ ಮಾಡಿಲ್ಲ’ ಎಂದು ಭೋಪಾಲ್ ಗ್ರೂಪ್ ಫಾರ್ ಇನ್ಫಾರ್ಮೆಷನ್ & ಆಕ್ಚನ್ ಸಂಘಟನೆಯ ರೀಚಾ ಧಿಂಗ್ರಾ ಕಿಡಿ ಕಾರಿದ್ದಾರೆ.

‘ಕಂಪನಿಯೊಂದನ್ನು ರಕ್ಷಿಸಲು ಕೇಂದ್ರ ಸರ್ಕಾರ ಸಾರ್ವಜನಿಕ ಆರೋಗ್ಯವನ್ನೇ ಹಾಳು ಮಾಡುತ್ತಿದೆ’ ಎಂದು ಸಂಘಟನೆಗಳು ದೂಷಿಸಿವೆ. ಮಧ್ಯಪ್ರದೇಶದ ಆರೋಗ್ಯ ಸಚಿವ ವಿಶ್ವಾಸ್ ಸಾರಂಗ್ ‘ಭಾರತ್ ಬಯೋಟೆಕ್ ತಪ್ಪು ಮಾಡಿಲ್ಲ’ ಎಂದು ಪ್ರತಿಪಾದಿಸುತ್ತಿದ್ದಾರೆ.


ಇದನ್ನೂ ಓದಿ: ಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...