Homeಮುಖಪುಟಮಧ್ಯಪ್ರದೇಶದಲ್ಲಿ ಕೊವ್ಯಾಕ್ಸಿನ್ ಟ್ರಯಲ್: ಅನಿಲ ದುರಂತ ಸಂತ್ರಸ್ತರ ಮೇಲೆ ಲಸಿಕೆ ದಾಳಿ

ಮಧ್ಯಪ್ರದೇಶದಲ್ಲಿ ಕೊವ್ಯಾಕ್ಸಿನ್ ಟ್ರಯಲ್: ಅನಿಲ ದುರಂತ ಸಂತ್ರಸ್ತರ ಮೇಲೆ ಲಸಿಕೆ ದಾಳಿ

ಭಾರತದ ಮೊದಲ ದೇಸಿ ಕೊವಿಡ್ ಲಸಿಕೆ ಎನಿಸಿರುವ ಕೊವ್ಯಾಕ್ಸಿನ್‌ಗೆ ಈಗ ಜನ-ಸಂಘಟನೆಗಳಿಂದಲೂ ವಿರೋಧ ವ್ಯಕ್ತವಾಗುತ್ತಿದೆ.

- Advertisement -
- Advertisement -

ಭೋಪಾಲ್‌ನಲ್ಲಿ ನಡೆಯುತ್ತಿರುವ ಕೊವ್ಯಾಕ್ಸಿನ್ ಮೂರನೆ ಹಂತದ ಟ್ರಯಲ್ಸ್ ರದ್ದು ಮಾಡಬೇಕು, ಮೂರನೇ ಹಂತದಲ್ಲಿ ಲಸಿಕೆ ಸ್ವೀಕರಿಸಿ ಮೃತರಾದ ವ್ಯಕ್ತಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಇದಕ್ಕೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರಧಾನಿ ಮೋದಿಯವರಿಗೆ ಭೋಪಾಲ್ ಅನಿಲ ದುರಂತದ ಸಂತ್ರಸ್ತರ ಪರ ಕೆಲಸ ಮಾಡುತ್ತಿರುವ ನಾಲ್ಕು ಸಂಘಟನೆಗಳು ಪತ್ರ ಬರೆದಿವೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ದೇಶದ ಐಕೈಕ ‘ದೇಸಿ’ ಲಸಿಕೆ ಎಂದು ಹೆಸರು ಪಡೆದಿದೆ.

ಟ್ರಯಲ್ಸ್ ನಡೆಸುತ್ತಿರುವ ಭೋಪಾಲ್‌ನ ಪೀಪಲ್ಸ್ ಕಾಲೇಜ್ ಆಫ್ ಮೆಡಿಸಿನ್ & ರಿಸರ್ಚ್, ಲಸಿಕೆಯ ಡೋಸ್‌ನಿಂದ ಸಾವು ಸಂಭವಿಸಿಲ್ಲ ಎಂಬ ಹೇಳಿಕೆ ನೀಡಿದ್ದು, ಮಧ್ಯಪ್ರದೇಶ ಸರ್ಕಾರ ಕೂಡ ಕಾಲೇಜಿಗೆ ಕ್ಲೀನ್‌ಚಿಟ್ ನೀಡಿದೆ.

ಸಾವಿಗೀಡಾದ ಸ್ವಯಂಸೇವಕ ಭರ್ತಿ (ರಿಕ್ರೂಟ್‌ಮೆಂಟ್) ಸಂದರ್ಭದಲ್ಲಿ ಎಲ್ಲ ಮಾನದಂಡಗಳಲ್ಲು ತೇರ್ಗಡೆಯಾಗಿದ್ದ ಮತ್ತು ಲಸಿಕೆಯ ಡೋಸ್ ನೀಡಿದ ಹಿಂದಿನ 7 ದಿನ ಕಾಲ ಆರೋಗ್ಯವಂತ ಸ್ಥಿತಿಯಲ್ಲೇ ಇದ್ದ, ಯಾವುದೇ ಅಡ್ಡ ಪರಿಣಾಮ ಕೂಡ ಸಂಭವಿಸಿರಲಿಲ್ಲ ಎಂದು ಹಲವು ಮಾಧ್ಯಮಗಳ ವರದಿಗಳು ಹೇಳುತ್ತಿವೆ.

ಭೋಪಾಲ್‌ನ ಗಾಂಧಿ ಮೆಡಿಕಲ್ ಕಾಲೇಜ್ ನೀಡಿರುವ ಮರಣೋತ್ತರ ವರದಿ ಉಲ್ಲೇಖಿಸಿರುವ ಭಾರತ್ ಬಯೋಟೆಕ್, ‘ಕಾರ್ಡಿಯೋ-ರೆಸ್ಪಿರೆಟರಿ ಸಮಸ್ಯೆಯಿಂದ ಸಾವು ಸಂಭವಿಸಿದೆ, ಬಹುಷಃ ವಿಷಪ್ರಾಸನ ನಡೆದಿರಬಹುದು’ ಎಂದು ಹೇಳುತ್ತಿದೆ.

ಆದರೆ, ಈ ಲಸಿಕೆಯ ಟ್ರಯಲ್ಸ್ ಅನ್ನು ಕೂಡಲೇ ನಿಲ್ಲಿಸಬೇಕೆಂದು ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಸಂಘ, ಭೋಪಾಲ್ ಗ್ಯಾಸ್ ಪೀಡಿತ್ ಪುರುಷ್ ಸಂಘ, ಭೋಪಾಲ್ ಗ್ರೂಪ್ ಫಾರ್ ಇನ್ಫಾರ್ಮೆಷನ್ & ಆಕ್ಚನ್ ಮತ್ತು ಚಿಲ್ಡ್ರನ್ ಅಗೇನಸ್ಟ್ ಡೌ ಕಾರ್ಬೈಡ್- ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಿವೆ.

‘ಲಸಿಕೆ ಪ್ರಯೋಗಗೊಂಡ 1,700 ಜನರ ಪೈಕಿ ಕನಿಷ್ಠ 700 ಜನರು ಭೋಪಾಲ್ ಅನಿಲ ದುರಂತದಿಂದ ಸಂಭವಿಸಿದ ಕಾಯಿಲೆಗಳಿಂದ ನರಳುತ್ತಿದ್ದಾರೆ. ಲಸಿಕೆ ಪಡೆದ 10 ದಿನದಲ್ಲೇ ಒಬ್ಬ ಅನಿಲ ದುರಂತ ಸಂತ್ರಸ್ತ ತೀರಿಕೊಂಡಿದ್ದು, ಲಸಿಕೆ ಪಡೆದ ಇತರ ಸಂತ್ರಸ್ತರು ಗಂಭೀರ ಆರೋಗ್ಯ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ. ಇಂತಹ ಅಸಮರ್ಪಕ ಟ್ರಯಲ್ಸ್ ಕಾರಣದಿಂದ 12 ವರ್ಷದ ಹಿಂದೆ 13 ಅನಿಲ ದುರಂತ ಸಂತ್ರಸ್ತರು ಸಾವೀಗೀಡಾಗಿದ್ದರು. ಈಗಲೂ ಆ ಘಟನೆಗೆ ಕಾರಣಾದವರ ಮೇಲೆ ಕ್ರಮ ಜರುಗಿಸಿಲ್ಲ’ ಎಂದು ಮಾಧ್ಯಮಗಳಿಗೆ ಹೇಳಿರುವ ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಸಂಘದ ರಷೀದಾ ಬೀ, ಇಂಥದ್ದು ಮತ್ತೆ ಸಂಭವಿಸಲಾರದು ಎಂದು ಪ್ರಧಾನಿ ಭರವಸೆ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.

‘ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಅವರ ಸಮ್ಮತಿಯಿಲ್ಲದೇ ಕೊವ್ಯಾಕ್ಸಿನ್ ಲಸಿಕೆಯ ಟ್ರಯಲ್ ಶಾಟ್ಸ್/ಡೋಸ್ ನೀಡಲಾಗಿದೆ. ಟ್ರಯಲ್ಸ್ ನಂತರ ಅವರ ಆರೋಗ್ಯ ಕುರಿತ ಅಪ್ಡೇಟ್‌ಗಳನ್ನು ಕೂಡ ಮೆಂಟೇನ್ ಮಾಡಿಲ್ಲ. ಕೆಲವರು ಟ್ರಯಲ್‌ನಿಂದ ಹೊರಬಂದರು. ಅವರಿಗೆ ನಂತರದಲ್ಲಿ ಸೂಕ್ತ ಆರೋಗ್ಯ ಚಿಕಿತ್ಸೆಯ ಏರ್ಪಾಟನ್ನೂ ಮಾಡಿಲ್ಲ’ ಎಂದು ಭೋಪಾಲ್ ಗ್ರೂಪ್ ಫಾರ್ ಇನ್ಫಾರ್ಮೆಷನ್ & ಆಕ್ಚನ್ ಸಂಘಟನೆಯ ರೀಚಾ ಧಿಂಗ್ರಾ ಕಿಡಿ ಕಾರಿದ್ದಾರೆ.

‘ಕಂಪನಿಯೊಂದನ್ನು ರಕ್ಷಿಸಲು ಕೇಂದ್ರ ಸರ್ಕಾರ ಸಾರ್ವಜನಿಕ ಆರೋಗ್ಯವನ್ನೇ ಹಾಳು ಮಾಡುತ್ತಿದೆ’ ಎಂದು ಸಂಘಟನೆಗಳು ದೂಷಿಸಿವೆ. ಮಧ್ಯಪ್ರದೇಶದ ಆರೋಗ್ಯ ಸಚಿವ ವಿಶ್ವಾಸ್ ಸಾರಂಗ್ ‘ಭಾರತ್ ಬಯೋಟೆಕ್ ತಪ್ಪು ಮಾಡಿಲ್ಲ’ ಎಂದು ಪ್ರತಿಪಾದಿಸುತ್ತಿದ್ದಾರೆ.


ಇದನ್ನೂ ಓದಿ: ಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...