Homeಕರೋನಾ ತಲ್ಲಣಕೋವ್ಯಾಕ್ಸಿನ್ ಲಸಿಕೆಗೆ ದರ ನಿಗಧಿ: ರಾಜ್ಯ ಸರ್ಕಾರಗಳಿಗೆ 600 ರೂ., ಖಾಸಗಿ ಆಸ್ಪತ್ರೆಗಳಿಗೆ 1,200 ರೂ.

ಕೋವ್ಯಾಕ್ಸಿನ್ ಲಸಿಕೆಗೆ ದರ ನಿಗಧಿ: ರಾಜ್ಯ ಸರ್ಕಾರಗಳಿಗೆ 600 ರೂ., ಖಾಸಗಿ ಆಸ್ಪತ್ರೆಗಳಿಗೆ 1,200 ರೂ.

- Advertisement -
- Advertisement -

ಶನಿವಾರ ಪ್ರಕಟಣೆ ಹೊರಡಿಸಿರುವ ಭಾರತ್ ಬಯೋಟೆಕ್ ಕಂಪನಿ ತನ್ನ ಕೋವ್ಯಾಕ್ಸಿನ್ ಲಸಿಕೆಗೆ ದರ ನಿಗದಿ ಮಾಡಿದೆ. ರಾಜ್ಯ ಸರ್ಕಾರಗಳಿಗೆ ಡೋಸ್ ಒಂದಕ್ಕೆ 600 ರೂ. ಮತ್ತು ಖಾಸಗಿ ಆಸ್ಪತ್ರೆಗಳಿಗೆ ಡೋಸ್ ಒಂದಕ್ಕೆ 1,200 ರೂ. ದರ ನಿಗದಿ ಮಾಡಿದೆ. ರಫ್ತು ಮಾಡುವ ಲಸಿಕೆಗೆ 15 ರಿಂದ 20 ಡಾಲರ್ ದರ ನಿಗದಿ ಮಾಡಲಾಗಿದೆ.

ದೇಶದ ಇನ್ನೊಂದು ಲಸಿಕೆ ತಯಾರಿಕಾ ಕಂಪನಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತನ್ನ ಕೋವಿಶೀಲ್ಡ್ ದರವನ್ನು ಮೊದಲೇ ಪ್ರಕಟಿಸಿತ್ತು. ಅದು ಕೇಂದ್ರ ಸರ್ಕಾರಕ್ಕೆ 150 ರೂ., ರಾಜ್ಯ ಸರ್ಕಾರಗಳಿಗೆ 400 ರೂ. ಮತ್ತು ಖಾಸಗಿ ಆಸ್ಪತ್ರೆಗಳಿಗೆ 600 ರೂ. ದರ ವಿಧಿಸಿದೆ.

ಪುಣೆಯಲ್ಲಿರುವ ಏಸಿಎಂಆರ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ನಿಷ್ಕ್ರಿಯಗೊಳಿಸಿದ ಕೋವಿಡ್ ವೈರಸ್ ತಂತುಗಳನ್ನು ಬಳಸಿ ಭಾರತ್ ಬಯೋಟೆಕ್ ಲಸಿಕೆ ತಯಾರಿಸಿದೆ. ಸದ್ಯಕ್ಕೆ ಅದು ವಿಧಿಸಿರುವ ದರ ವಿಶ್ವದ ಇತರೆಲ್ಲ ಲಸಿಕೆ ದರಗಳಿಗಿಂತ ದುಬಾರಿಯಿದೆ.

“ಇಂಟ್ರಾನಾಸಲ್ ಕೋವಿಡ್‌ನಂತಹ ಇತರ ಲಸಿಕೆಗಳತ್ತ ನಾವೀನ್ಯತೆಯ ಪ್ರಯಾಣದಲ್ಲಿ ವೆಚ್ಚವನ್ನು ಮರುಪಡೆಯುವುದು ಅತ್ಯಗತ್ಯ… ಕಳೆದ 25 ವರ್ಷಗಳಿಂದ ನಮ್ಮ ಪ್ರಮುಖ ಉದ್ದೇಶವೆಂದರೆ ಜಗತ್ತಿಗೆ ಕೈಗೆಟುಕುವ, ಆದರೆ ವಿಶ್ವದರ್ಜೆಯ ಆರೋಗ್ಯ ಪರಿಹಾರಗಳನ್ನು ಒದಗಿಸುವುದು” ಎಂದು ಭಾರತ್ ಬಯೋಟೆಕ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಂ ಯೆಲ್ಲಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೋವ್ಯಾಕ್ಸಿನ್ ನಿಷ್ಕ್ರಿಯಗೊಂಡ ಮತ್ತು ಹೆಚ್ಚು ಶುದ್ಧೀಕರಿಸಿದ ಲಸಿಕೆಯಾಗಿದ್ದು, ಪ್ರಕ್ರಿಯೆಯ ಸಂಕೀರ್ಣತೆಯಿಂದಾಗಿ ಉತ್ಪಾದನೆಯನ್ನು ದುಬಾರಿಯನ್ನಾಗಿ ಮಾಡುತ್ತದೆ ಎಂದು ಕಂಪನಿ ಹೇಳಿದೆ. “ಉತ್ಪನ್ನ ಅಭಿವೃದ್ಧಿ, ಉತ್ಪಾದನಾ ಸೌಲಭ್ಯಗಳು ಮತ್ತು ಕ್ಲಿನಿಕಲ್ ಪ್ರಯೋಗಗಳ ಎಲ್ಲಾ ವೆಚ್ಚಗಳನ್ನು ಪ್ರಾಥಮಿಕವಾಗಿ ಭಾರತ್ ಬಯೋಟೆಕ್‌ನ ಆಂತರಿಕ ಹಣ ಮತ್ತು ಸಂಪನ್ಮೂಲಗಳನ್ನು ಬಳಸಿ ನಿಯೋಜಿಸಲಾಗಿದೆ” ಎಂದು ಕಂಪನಿ ತಿಳಿಸಿದೆ.

ಭಾರತದ ಹೊಸ ಸುತ್ತಿನ ಲಸಿಕಾ ಅಭಿಯಾನ ಮೇ 1 ರಿಂದ ಪ್ರಾರಂಭವಾಗಲಿದ್ದು, ಈ ಬಾರಿ 18 ವರ್ಷಕ್ಕಿಂತ ಮೇಲ್ಪಟ್ಟವರು ಲಸಿಕೆ ತೆಗೆದುಕೊಳ್ಳಬಹುದು. ಹೆಚ್ಚಿನ ಖಾಸಗಿ ಲಸಿಕಾ ಕೇಂದ್ರಗಳನ್ನು “ಮಿಷನ್ ಮೋಡ್” ನಲ್ಲಿ ನೋಂದಾಯಿಸಲು ರಾಜ್ಯಗಳು ಪ್ರಯತ್ನಿಸಬೇಕು ಎಂದು ಕೇಂದ್ರ ಹೇಳಿದೆ.


ಇದನ್ನೂ ಓದಿ: ಲಸಿಕಾ ರಾಜಕೀಯ: ಮೇ 1 ರಿಂದ ಲಸಿಕೆ ಎಂಬುದು ನಿಜವೇ? ನಿಮಗೆ ಲಸಿಕೆ ಸಿಗಲು ಎಷ್ಟು ತಿಂಗಳು/ವರ್ಷ ಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....