Homeಕರ್ನಾಟಕಕಾವೇರಿದ ಚುನಾವಣಾ ಕದನ: ಅವಾಚ್ಯ ಪದಗಳಿಂದ ಪರಸ್ಪರ ನಿಂದಿಸಿಕೊಂಡ ಬಿಜೆಪಿ-ಕಾಂಗ್ರೆಸ್ ನಾಯಕರು

ಕಾವೇರಿದ ಚುನಾವಣಾ ಕದನ: ಅವಾಚ್ಯ ಪದಗಳಿಂದ ಪರಸ್ಪರ ನಿಂದಿಸಿಕೊಂಡ ಬಿಜೆಪಿ-ಕಾಂಗ್ರೆಸ್ ನಾಯಕರು

- Advertisement -
- Advertisement -

2018 ರಲ್ಲಿ ಮೈತ್ರಿ ಸರ್ಕಾರವನ್ನು ಉರುಳಿಸಿ ಬಿಜೆಪಿಗೆ ಪಕ್ಷಾಂತರಗೊಂಡ ಶಾಸಕರನ್ನು ವೇಶ್ಯೆಯರಿಗೆ ಹೋಲಿಸುವ ಮೂಲಕ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರು ವಿವಾದ ಹುಟ್ಟುಹಾಕಿದ್ದಾರೆ.

“ಜೀವನಕ್ಕಾಗಿ ವೇಶ್ಯಾವಾಟಿಕೆಗೆ ಪ್ರವೇಶಿಸುವ ಮಹಿಳೆಯನ್ನು ‘ವೇಶ್ಯೆ’ ಎಂದು ಕರೆಯಲಾಗುತ್ತದೆ. ತಮ್ಮನ್ನು ತಾವು ಮಾರಿಕೊಂಡ ಶಾಸಕರನ್ನು ಏನೆಂದು ಕರೆಯುತ್ತೀರಿ? ಬಿಸಿ ಪಾಟಿಲ್ ಪೊಲೀಸ್ ಅಧಿಕಾರಿ ಇದ್ದಾಗ ಯಶವಂತಪುರದಲ್ಲಿ ಚಪ್ಪಲಿ, ಪೊರಕೆ ಸೇವೆ ಮಾಡಿದ್ದು ಯಾಕೆ ಅಂತ ಹೇಳಲಿ. ಬೋರಿಂಗ್ ಇನ್ಸ್ಟಿಟ್ಯೂಟ್ ಅಲ್ಲಿ ಕಾಲಪತ್ಥರ್ ರೌಡಿಗೆ ಯಾವ ಸೇವೆ ಮಾಡಿದ್ದಾರೆ ಎನ್ನುವುದು ಗೊತ್ತಿದೆ” ಎಂದು ಬಿಸಿ ಪಾಟೀಲ್ ವಿರುದ್ಧ ಬಿಕೆ ಹರಿಪ್ರಸಾದ್  ವಾಗ್ಧಾಳಿ ನಡೆಸಿದರು.

ಬಿಜೆಪಿಯಲ್ಲಿ ಸ್ಯಾಂಟ್ರೊ ರವಿ, ಸಿಟಿ ರವಿ, ಪೈಟರ್ ರವಿ, ಪಿಂಪ್ ರವಿಗಳೇ ತುಂಬಿ ತುಳುಕುತ್ತಿದ್ದಾರೆ. ಇವರಿಂದ ಏನು ನಿರೀಕ್ಷೆ ಮಾಡೋದಕ್ಕೆ ಆಗೋದಿಲ್ಲ ಎಂದು ಸಿಟಿ ರವಿಗೆ ಬಿಕೆ ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

ಸ್ಯಾಂಟ್ರೊ ರವಿಗೂ ಕಾಂಗ್ರೆಸ್ ಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿಕೆ ನೀಡಿದ್ದ ಮುನಿರತ್ನಗೆ ತಿರುಗೇಟು ನೀಡಿದ ಹರಿಪ್ರಸಾದ್, “ಮುನಿರತ್ನ ನನ್ನ ಗರಡಿಯಲ್ಲಿ ಬೆಳೆದವನು, ಅವನು ಹೇಗೆ ಅಂತ ಗೊತ್ತಿದೆ. ಧೈರ್ಯ ಇದ್ದರೆ ಮಾತಾಡಲಿ, ನಾನು ಮಾತಾಡ್ತೀನಿ” ಎಂದರು.

“ಯತ್ನಾಳ್ ಅವರೇ ಖುದ್ದಾಗಿ ಹೇಳಿದ್ದಾರೆ. ಬಿಜೆಪಿ ಸರಕಾರದ ಮಂತ್ರಿಗಳು ಸಪ್ಲೈ ಮಾಡಿ ಮಂತ್ರಿಗಳಾಗಿದ್ದಾರೆ ಎಂದು, ಇನ್ನೊಬ್ಬ ಶಾಸಕರು ಹೇಳ್ತಾರೆ ಇವರು ಪಿಂಪ್ ಕೆಲಸ ಮಾಡಿ ಮಂತ್ರಿ ಆಗಿದ್ದಾರಂತೆ. ಇವರೆಲ್ಲಾ (ವಲಸೆ ಸಚಿವರು) ಮಂತ್ರಿಗಳು ನಮ್ಮ ಸರಕಾರದಲ್ಲಿ ಮಂತ್ರಿ ಆಗೋದಕ್ಕೆ ಏನು ಮಾಡಿದಾರೆ ಎನ್ನುವುದು ಗೊತ್ತಿದೆ. ಆದರೆ ಅದನ್ನು ಹೇಳಿ ನನ್ನ ಬಾಯಿ ಹೊಲಸು ಮಾಡಿಕೊಳ್ಳುವುದಿಲ್ಲ” ಎಂದು ಹರಿಪ್ರಸಾದ್ ಅವರು ವಲಸೆ ಸಚಿವರ ಮೇಲೆ ಕಿಡಿಕಾರಿದ್ದಾರೆ.

“ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಬಹುಮತ ನೀಡದೇ ಅತಂತ್ರ ಫಲಿತಾಂಶ ನೀಡಿದ್ದರು. ಹಾಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಒಂದಾಗಿ ಸಮ್ಮಿಶ್ರ ಸರ್ಕಾರ ರಚನೆಯಾಯಿತು. ಆದರೆ, ಸಮ್ಮಿಶ್ರ ಸರ್ಕಾರವನ್ನು ಕೆಳಗಿಳಿಸಲು ಕೆಲ ಶಾಸಕರು ತಮ್ಮನ್ನೇ ತಾವು ಮಾರಿಕೊಂಡಿದ್ದಾರೆ, ಅವರನ್ನು ಏನೆಂದು ಕರೆಯುತ್ತೀರಿ? ಇದೀಗ ಮತ್ತೆ ಚುನಾವಣೆ ಬರುತ್ತಿದೆ. ಈ ವೇಳೆ ಸ್ಥಳೀಯ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಿದೆ” ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರನ್ನು ಗುರಿಯಾಗಿಸಿಕೊಂಡು ಹೊಸಪೇಟೆಯಲ್ಲಿ ಮುಖಂಡರು ಮನವಿ ಮಾಡಿದರು.

ಹರಿಪ್ರಸಾದ್ ಅವರ ವೇಶ್ಯೆ ಪದ ಬಳಕೆಯು ರಾಜ್ಯರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ತನ್ನ ಮಾತುಗಳನ್ನು ತಿರುಚುತ್ತಿದೆ ಮತ್ತು ಲೈಂಗಿಕ ಕಾರ್ಯಕರ್ತರ ಬಗ್ಗೆ ಅನಗತ್ಯ ವಿವಾದವನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

“ನಮಗೆ ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಅಪಾರ ಗೌರವವಿದೆ. ಅವರಿಗೆ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ” ಎಂದು ಹರಿಪ್ರಸಾದ್ ಹೇಳಿದ್ದಾರೆ.

ಹರಿಪ್ರಸಾದ್‌ಗೆ ತಿರುಗೇಟುವ ನೀಡುವ ಭರದಲ್ಲಿ ಬಿಸಿ ಪಾಟೀಲ್ ಕೂಡ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. “ಕಾಂಗ್ರೆಸ್ ಪಕ್ಷ ದ್ರೋಹ ಮಾಡಿದ್ದಕ್ಕೆ ನಾವು ರಾಜೀನಾಮೆ ಕೊಟ್ಟು ಹೊರಗಡೆ ಬಂದೆವು. ಆ ಬಳಿಕ ಬಿಜೆಪಿ ಸೇರಿ, ಜನಾದೇಶದ ಮೇಲೆ ಮರು ಆಯ್ಕೆಯಾಗಿದ್ದೇವೆ. ಆಮೇಲೆ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡುತ್ತಿದ್ದೇವೆ.
ಹರಿಪ್ರಸಾದ್ ಯಾವ ಚುನಾವಣೆಯಲ್ಲಿ ಗೆದ್ದಿದ್ದಾರೆ? ನಾವು ಜನರಿಂದ ಆಯ್ಕೆಯಾಗಿದ್ದೇವೆ. ಹರಿಪ್ರಸಾದ್ ಯಾವ ಜನರಿಂದ ಆಯ್ಕೆಯಾಗಿದ್ದಾರೆ? ಅವರು ಹಿಂಬಾಗಿಲಿನಿಂದ ಬಂದು ಇವತ್ತು ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಿಂಬದಿಯಿಂದ ಬಂದವರನ್ನ ‘ಪಿಂಪ್‌’ಗಳು ಅಂತ ಹೇಳಬೇಕಾಗತ್ತದೆ. ಆದರೆ ಆ ರೀತಿ ಹೇಳಲು ನಮ್ಮ ನಾಲಿಗೆ ಒಪ್ಪಲ್ಲ. ಏಕೆಂದರೆ ಅವರ ಸಂಸ್ಕೃತಿಯೆರ ಬೇರೆ ನಮ್ಮ ಸಂಸ್ಕೃತಿಯೇ ಬೇರೆ. ಹಾಗಾಗಿ ಇನ್ನಾದ್ರೂ ನಾಲಿಗೆ ಬಿಗಿ ಹಿಡಿದು ಮಾತನಾಡಲಿ. ಕಾಂಗ್ರೆಸ್ ನವರು ಹತಾಶೆಯಿಂದ ಈ ರೀತಿಯ ಮಾತುಗಳನ್ನು ಆಡುತ್ತಿದ್ದಾರೆ” ಎಂದರು.

“ಅವರು ಅಧಿಕಾರಕ್ಕೆ ಬರ್ತಾರೆ ಎಂದು ಕನಸ ಕಂಡಿದ್ದಾರೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದ್ರು ಎನ್ನುವ ಹಾಗೆ ಈಗಲೇ ಸಿಎಂ ಗಾಗಿ ತಮ್ಮಲ್ಲೇ ಕಾದಾಡುತ್ತಿದ್ದಾರೆ” ಎಂದರು.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಕ್ರಿಯೆ ಕೇಳಿದ ಮಾಧ್ಯಮಗಳಿಗೆ ಉತ್ತರ ನೀಡಿದ ಸಿಎಂ, “ಅಂತಹ ಕೀಳು, ಮಟ್ಟದ ಹೇಳಿಕೆಗೆ ನಾನು ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಇಷ್ಟೇ ನನ್ನ ಪ್ರತಿಕ್ರಿಯೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...