Homeಕರ್ನಾಟಕಕಾವೇರಿದ ಚುನಾವಣಾ ಕದನ: ಅವಾಚ್ಯ ಪದಗಳಿಂದ ಪರಸ್ಪರ ನಿಂದಿಸಿಕೊಂಡ ಬಿಜೆಪಿ-ಕಾಂಗ್ರೆಸ್ ನಾಯಕರು

ಕಾವೇರಿದ ಚುನಾವಣಾ ಕದನ: ಅವಾಚ್ಯ ಪದಗಳಿಂದ ಪರಸ್ಪರ ನಿಂದಿಸಿಕೊಂಡ ಬಿಜೆಪಿ-ಕಾಂಗ್ರೆಸ್ ನಾಯಕರು

- Advertisement -
- Advertisement -

2018 ರಲ್ಲಿ ಮೈತ್ರಿ ಸರ್ಕಾರವನ್ನು ಉರುಳಿಸಿ ಬಿಜೆಪಿಗೆ ಪಕ್ಷಾಂತರಗೊಂಡ ಶಾಸಕರನ್ನು ವೇಶ್ಯೆಯರಿಗೆ ಹೋಲಿಸುವ ಮೂಲಕ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರು ವಿವಾದ ಹುಟ್ಟುಹಾಕಿದ್ದಾರೆ.

“ಜೀವನಕ್ಕಾಗಿ ವೇಶ್ಯಾವಾಟಿಕೆಗೆ ಪ್ರವೇಶಿಸುವ ಮಹಿಳೆಯನ್ನು ‘ವೇಶ್ಯೆ’ ಎಂದು ಕರೆಯಲಾಗುತ್ತದೆ. ತಮ್ಮನ್ನು ತಾವು ಮಾರಿಕೊಂಡ ಶಾಸಕರನ್ನು ಏನೆಂದು ಕರೆಯುತ್ತೀರಿ? ಬಿಸಿ ಪಾಟಿಲ್ ಪೊಲೀಸ್ ಅಧಿಕಾರಿ ಇದ್ದಾಗ ಯಶವಂತಪುರದಲ್ಲಿ ಚಪ್ಪಲಿ, ಪೊರಕೆ ಸೇವೆ ಮಾಡಿದ್ದು ಯಾಕೆ ಅಂತ ಹೇಳಲಿ. ಬೋರಿಂಗ್ ಇನ್ಸ್ಟಿಟ್ಯೂಟ್ ಅಲ್ಲಿ ಕಾಲಪತ್ಥರ್ ರೌಡಿಗೆ ಯಾವ ಸೇವೆ ಮಾಡಿದ್ದಾರೆ ಎನ್ನುವುದು ಗೊತ್ತಿದೆ” ಎಂದು ಬಿಸಿ ಪಾಟೀಲ್ ವಿರುದ್ಧ ಬಿಕೆ ಹರಿಪ್ರಸಾದ್  ವಾಗ್ಧಾಳಿ ನಡೆಸಿದರು.

ಬಿಜೆಪಿಯಲ್ಲಿ ಸ್ಯಾಂಟ್ರೊ ರವಿ, ಸಿಟಿ ರವಿ, ಪೈಟರ್ ರವಿ, ಪಿಂಪ್ ರವಿಗಳೇ ತುಂಬಿ ತುಳುಕುತ್ತಿದ್ದಾರೆ. ಇವರಿಂದ ಏನು ನಿರೀಕ್ಷೆ ಮಾಡೋದಕ್ಕೆ ಆಗೋದಿಲ್ಲ ಎಂದು ಸಿಟಿ ರವಿಗೆ ಬಿಕೆ ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

ಸ್ಯಾಂಟ್ರೊ ರವಿಗೂ ಕಾಂಗ್ರೆಸ್ ಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿಕೆ ನೀಡಿದ್ದ ಮುನಿರತ್ನಗೆ ತಿರುಗೇಟು ನೀಡಿದ ಹರಿಪ್ರಸಾದ್, “ಮುನಿರತ್ನ ನನ್ನ ಗರಡಿಯಲ್ಲಿ ಬೆಳೆದವನು, ಅವನು ಹೇಗೆ ಅಂತ ಗೊತ್ತಿದೆ. ಧೈರ್ಯ ಇದ್ದರೆ ಮಾತಾಡಲಿ, ನಾನು ಮಾತಾಡ್ತೀನಿ” ಎಂದರು.

“ಯತ್ನಾಳ್ ಅವರೇ ಖುದ್ದಾಗಿ ಹೇಳಿದ್ದಾರೆ. ಬಿಜೆಪಿ ಸರಕಾರದ ಮಂತ್ರಿಗಳು ಸಪ್ಲೈ ಮಾಡಿ ಮಂತ್ರಿಗಳಾಗಿದ್ದಾರೆ ಎಂದು, ಇನ್ನೊಬ್ಬ ಶಾಸಕರು ಹೇಳ್ತಾರೆ ಇವರು ಪಿಂಪ್ ಕೆಲಸ ಮಾಡಿ ಮಂತ್ರಿ ಆಗಿದ್ದಾರಂತೆ. ಇವರೆಲ್ಲಾ (ವಲಸೆ ಸಚಿವರು) ಮಂತ್ರಿಗಳು ನಮ್ಮ ಸರಕಾರದಲ್ಲಿ ಮಂತ್ರಿ ಆಗೋದಕ್ಕೆ ಏನು ಮಾಡಿದಾರೆ ಎನ್ನುವುದು ಗೊತ್ತಿದೆ. ಆದರೆ ಅದನ್ನು ಹೇಳಿ ನನ್ನ ಬಾಯಿ ಹೊಲಸು ಮಾಡಿಕೊಳ್ಳುವುದಿಲ್ಲ” ಎಂದು ಹರಿಪ್ರಸಾದ್ ಅವರು ವಲಸೆ ಸಚಿವರ ಮೇಲೆ ಕಿಡಿಕಾರಿದ್ದಾರೆ.

“ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಬಹುಮತ ನೀಡದೇ ಅತಂತ್ರ ಫಲಿತಾಂಶ ನೀಡಿದ್ದರು. ಹಾಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಒಂದಾಗಿ ಸಮ್ಮಿಶ್ರ ಸರ್ಕಾರ ರಚನೆಯಾಯಿತು. ಆದರೆ, ಸಮ್ಮಿಶ್ರ ಸರ್ಕಾರವನ್ನು ಕೆಳಗಿಳಿಸಲು ಕೆಲ ಶಾಸಕರು ತಮ್ಮನ್ನೇ ತಾವು ಮಾರಿಕೊಂಡಿದ್ದಾರೆ, ಅವರನ್ನು ಏನೆಂದು ಕರೆಯುತ್ತೀರಿ? ಇದೀಗ ಮತ್ತೆ ಚುನಾವಣೆ ಬರುತ್ತಿದೆ. ಈ ವೇಳೆ ಸ್ಥಳೀಯ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಿದೆ” ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರನ್ನು ಗುರಿಯಾಗಿಸಿಕೊಂಡು ಹೊಸಪೇಟೆಯಲ್ಲಿ ಮುಖಂಡರು ಮನವಿ ಮಾಡಿದರು.

ಹರಿಪ್ರಸಾದ್ ಅವರ ವೇಶ್ಯೆ ಪದ ಬಳಕೆಯು ರಾಜ್ಯರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ತನ್ನ ಮಾತುಗಳನ್ನು ತಿರುಚುತ್ತಿದೆ ಮತ್ತು ಲೈಂಗಿಕ ಕಾರ್ಯಕರ್ತರ ಬಗ್ಗೆ ಅನಗತ್ಯ ವಿವಾದವನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

“ನಮಗೆ ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಅಪಾರ ಗೌರವವಿದೆ. ಅವರಿಗೆ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ” ಎಂದು ಹರಿಪ್ರಸಾದ್ ಹೇಳಿದ್ದಾರೆ.

ಹರಿಪ್ರಸಾದ್‌ಗೆ ತಿರುಗೇಟುವ ನೀಡುವ ಭರದಲ್ಲಿ ಬಿಸಿ ಪಾಟೀಲ್ ಕೂಡ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. “ಕಾಂಗ್ರೆಸ್ ಪಕ್ಷ ದ್ರೋಹ ಮಾಡಿದ್ದಕ್ಕೆ ನಾವು ರಾಜೀನಾಮೆ ಕೊಟ್ಟು ಹೊರಗಡೆ ಬಂದೆವು. ಆ ಬಳಿಕ ಬಿಜೆಪಿ ಸೇರಿ, ಜನಾದೇಶದ ಮೇಲೆ ಮರು ಆಯ್ಕೆಯಾಗಿದ್ದೇವೆ. ಆಮೇಲೆ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡುತ್ತಿದ್ದೇವೆ.
ಹರಿಪ್ರಸಾದ್ ಯಾವ ಚುನಾವಣೆಯಲ್ಲಿ ಗೆದ್ದಿದ್ದಾರೆ? ನಾವು ಜನರಿಂದ ಆಯ್ಕೆಯಾಗಿದ್ದೇವೆ. ಹರಿಪ್ರಸಾದ್ ಯಾವ ಜನರಿಂದ ಆಯ್ಕೆಯಾಗಿದ್ದಾರೆ? ಅವರು ಹಿಂಬಾಗಿಲಿನಿಂದ ಬಂದು ಇವತ್ತು ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಿಂಬದಿಯಿಂದ ಬಂದವರನ್ನ ‘ಪಿಂಪ್‌’ಗಳು ಅಂತ ಹೇಳಬೇಕಾಗತ್ತದೆ. ಆದರೆ ಆ ರೀತಿ ಹೇಳಲು ನಮ್ಮ ನಾಲಿಗೆ ಒಪ್ಪಲ್ಲ. ಏಕೆಂದರೆ ಅವರ ಸಂಸ್ಕೃತಿಯೆರ ಬೇರೆ ನಮ್ಮ ಸಂಸ್ಕೃತಿಯೇ ಬೇರೆ. ಹಾಗಾಗಿ ಇನ್ನಾದ್ರೂ ನಾಲಿಗೆ ಬಿಗಿ ಹಿಡಿದು ಮಾತನಾಡಲಿ. ಕಾಂಗ್ರೆಸ್ ನವರು ಹತಾಶೆಯಿಂದ ಈ ರೀತಿಯ ಮಾತುಗಳನ್ನು ಆಡುತ್ತಿದ್ದಾರೆ” ಎಂದರು.

“ಅವರು ಅಧಿಕಾರಕ್ಕೆ ಬರ್ತಾರೆ ಎಂದು ಕನಸ ಕಂಡಿದ್ದಾರೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದ್ರು ಎನ್ನುವ ಹಾಗೆ ಈಗಲೇ ಸಿಎಂ ಗಾಗಿ ತಮ್ಮಲ್ಲೇ ಕಾದಾಡುತ್ತಿದ್ದಾರೆ” ಎಂದರು.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಕ್ರಿಯೆ ಕೇಳಿದ ಮಾಧ್ಯಮಗಳಿಗೆ ಉತ್ತರ ನೀಡಿದ ಸಿಎಂ, “ಅಂತಹ ಕೀಳು, ಮಟ್ಟದ ಹೇಳಿಕೆಗೆ ನಾನು ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಇಷ್ಟೇ ನನ್ನ ಪ್ರತಿಕ್ರಿಯೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...