Homeಕರ್ನಾಟಕಕಾವೇರಿದ ಚುನಾವಣಾ ಕದನ: ಅವಾಚ್ಯ ಪದಗಳಿಂದ ಪರಸ್ಪರ ನಿಂದಿಸಿಕೊಂಡ ಬಿಜೆಪಿ-ಕಾಂಗ್ರೆಸ್ ನಾಯಕರು

ಕಾವೇರಿದ ಚುನಾವಣಾ ಕದನ: ಅವಾಚ್ಯ ಪದಗಳಿಂದ ಪರಸ್ಪರ ನಿಂದಿಸಿಕೊಂಡ ಬಿಜೆಪಿ-ಕಾಂಗ್ರೆಸ್ ನಾಯಕರು

- Advertisement -
- Advertisement -

2018 ರಲ್ಲಿ ಮೈತ್ರಿ ಸರ್ಕಾರವನ್ನು ಉರುಳಿಸಿ ಬಿಜೆಪಿಗೆ ಪಕ್ಷಾಂತರಗೊಂಡ ಶಾಸಕರನ್ನು ವೇಶ್ಯೆಯರಿಗೆ ಹೋಲಿಸುವ ಮೂಲಕ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರು ವಿವಾದ ಹುಟ್ಟುಹಾಕಿದ್ದಾರೆ.

“ಜೀವನಕ್ಕಾಗಿ ವೇಶ್ಯಾವಾಟಿಕೆಗೆ ಪ್ರವೇಶಿಸುವ ಮಹಿಳೆಯನ್ನು ‘ವೇಶ್ಯೆ’ ಎಂದು ಕರೆಯಲಾಗುತ್ತದೆ. ತಮ್ಮನ್ನು ತಾವು ಮಾರಿಕೊಂಡ ಶಾಸಕರನ್ನು ಏನೆಂದು ಕರೆಯುತ್ತೀರಿ? ಬಿಸಿ ಪಾಟಿಲ್ ಪೊಲೀಸ್ ಅಧಿಕಾರಿ ಇದ್ದಾಗ ಯಶವಂತಪುರದಲ್ಲಿ ಚಪ್ಪಲಿ, ಪೊರಕೆ ಸೇವೆ ಮಾಡಿದ್ದು ಯಾಕೆ ಅಂತ ಹೇಳಲಿ. ಬೋರಿಂಗ್ ಇನ್ಸ್ಟಿಟ್ಯೂಟ್ ಅಲ್ಲಿ ಕಾಲಪತ್ಥರ್ ರೌಡಿಗೆ ಯಾವ ಸೇವೆ ಮಾಡಿದ್ದಾರೆ ಎನ್ನುವುದು ಗೊತ್ತಿದೆ” ಎಂದು ಬಿಸಿ ಪಾಟೀಲ್ ವಿರುದ್ಧ ಬಿಕೆ ಹರಿಪ್ರಸಾದ್  ವಾಗ್ಧಾಳಿ ನಡೆಸಿದರು.

ಬಿಜೆಪಿಯಲ್ಲಿ ಸ್ಯಾಂಟ್ರೊ ರವಿ, ಸಿಟಿ ರವಿ, ಪೈಟರ್ ರವಿ, ಪಿಂಪ್ ರವಿಗಳೇ ತುಂಬಿ ತುಳುಕುತ್ತಿದ್ದಾರೆ. ಇವರಿಂದ ಏನು ನಿರೀಕ್ಷೆ ಮಾಡೋದಕ್ಕೆ ಆಗೋದಿಲ್ಲ ಎಂದು ಸಿಟಿ ರವಿಗೆ ಬಿಕೆ ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

ಸ್ಯಾಂಟ್ರೊ ರವಿಗೂ ಕಾಂಗ್ರೆಸ್ ಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿಕೆ ನೀಡಿದ್ದ ಮುನಿರತ್ನಗೆ ತಿರುಗೇಟು ನೀಡಿದ ಹರಿಪ್ರಸಾದ್, “ಮುನಿರತ್ನ ನನ್ನ ಗರಡಿಯಲ್ಲಿ ಬೆಳೆದವನು, ಅವನು ಹೇಗೆ ಅಂತ ಗೊತ್ತಿದೆ. ಧೈರ್ಯ ಇದ್ದರೆ ಮಾತಾಡಲಿ, ನಾನು ಮಾತಾಡ್ತೀನಿ” ಎಂದರು.

“ಯತ್ನಾಳ್ ಅವರೇ ಖುದ್ದಾಗಿ ಹೇಳಿದ್ದಾರೆ. ಬಿಜೆಪಿ ಸರಕಾರದ ಮಂತ್ರಿಗಳು ಸಪ್ಲೈ ಮಾಡಿ ಮಂತ್ರಿಗಳಾಗಿದ್ದಾರೆ ಎಂದು, ಇನ್ನೊಬ್ಬ ಶಾಸಕರು ಹೇಳ್ತಾರೆ ಇವರು ಪಿಂಪ್ ಕೆಲಸ ಮಾಡಿ ಮಂತ್ರಿ ಆಗಿದ್ದಾರಂತೆ. ಇವರೆಲ್ಲಾ (ವಲಸೆ ಸಚಿವರು) ಮಂತ್ರಿಗಳು ನಮ್ಮ ಸರಕಾರದಲ್ಲಿ ಮಂತ್ರಿ ಆಗೋದಕ್ಕೆ ಏನು ಮಾಡಿದಾರೆ ಎನ್ನುವುದು ಗೊತ್ತಿದೆ. ಆದರೆ ಅದನ್ನು ಹೇಳಿ ನನ್ನ ಬಾಯಿ ಹೊಲಸು ಮಾಡಿಕೊಳ್ಳುವುದಿಲ್ಲ” ಎಂದು ಹರಿಪ್ರಸಾದ್ ಅವರು ವಲಸೆ ಸಚಿವರ ಮೇಲೆ ಕಿಡಿಕಾರಿದ್ದಾರೆ.

“ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಬಹುಮತ ನೀಡದೇ ಅತಂತ್ರ ಫಲಿತಾಂಶ ನೀಡಿದ್ದರು. ಹಾಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಒಂದಾಗಿ ಸಮ್ಮಿಶ್ರ ಸರ್ಕಾರ ರಚನೆಯಾಯಿತು. ಆದರೆ, ಸಮ್ಮಿಶ್ರ ಸರ್ಕಾರವನ್ನು ಕೆಳಗಿಳಿಸಲು ಕೆಲ ಶಾಸಕರು ತಮ್ಮನ್ನೇ ತಾವು ಮಾರಿಕೊಂಡಿದ್ದಾರೆ, ಅವರನ್ನು ಏನೆಂದು ಕರೆಯುತ್ತೀರಿ? ಇದೀಗ ಮತ್ತೆ ಚುನಾವಣೆ ಬರುತ್ತಿದೆ. ಈ ವೇಳೆ ಸ್ಥಳೀಯ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಿದೆ” ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರನ್ನು ಗುರಿಯಾಗಿಸಿಕೊಂಡು ಹೊಸಪೇಟೆಯಲ್ಲಿ ಮುಖಂಡರು ಮನವಿ ಮಾಡಿದರು.

ಹರಿಪ್ರಸಾದ್ ಅವರ ವೇಶ್ಯೆ ಪದ ಬಳಕೆಯು ರಾಜ್ಯರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ತನ್ನ ಮಾತುಗಳನ್ನು ತಿರುಚುತ್ತಿದೆ ಮತ್ತು ಲೈಂಗಿಕ ಕಾರ್ಯಕರ್ತರ ಬಗ್ಗೆ ಅನಗತ್ಯ ವಿವಾದವನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

“ನಮಗೆ ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಅಪಾರ ಗೌರವವಿದೆ. ಅವರಿಗೆ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ” ಎಂದು ಹರಿಪ್ರಸಾದ್ ಹೇಳಿದ್ದಾರೆ.

ಹರಿಪ್ರಸಾದ್‌ಗೆ ತಿರುಗೇಟುವ ನೀಡುವ ಭರದಲ್ಲಿ ಬಿಸಿ ಪಾಟೀಲ್ ಕೂಡ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. “ಕಾಂಗ್ರೆಸ್ ಪಕ್ಷ ದ್ರೋಹ ಮಾಡಿದ್ದಕ್ಕೆ ನಾವು ರಾಜೀನಾಮೆ ಕೊಟ್ಟು ಹೊರಗಡೆ ಬಂದೆವು. ಆ ಬಳಿಕ ಬಿಜೆಪಿ ಸೇರಿ, ಜನಾದೇಶದ ಮೇಲೆ ಮರು ಆಯ್ಕೆಯಾಗಿದ್ದೇವೆ. ಆಮೇಲೆ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡುತ್ತಿದ್ದೇವೆ.
ಹರಿಪ್ರಸಾದ್ ಯಾವ ಚುನಾವಣೆಯಲ್ಲಿ ಗೆದ್ದಿದ್ದಾರೆ? ನಾವು ಜನರಿಂದ ಆಯ್ಕೆಯಾಗಿದ್ದೇವೆ. ಹರಿಪ್ರಸಾದ್ ಯಾವ ಜನರಿಂದ ಆಯ್ಕೆಯಾಗಿದ್ದಾರೆ? ಅವರು ಹಿಂಬಾಗಿಲಿನಿಂದ ಬಂದು ಇವತ್ತು ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಿಂಬದಿಯಿಂದ ಬಂದವರನ್ನ ‘ಪಿಂಪ್‌’ಗಳು ಅಂತ ಹೇಳಬೇಕಾಗತ್ತದೆ. ಆದರೆ ಆ ರೀತಿ ಹೇಳಲು ನಮ್ಮ ನಾಲಿಗೆ ಒಪ್ಪಲ್ಲ. ಏಕೆಂದರೆ ಅವರ ಸಂಸ್ಕೃತಿಯೆರ ಬೇರೆ ನಮ್ಮ ಸಂಸ್ಕೃತಿಯೇ ಬೇರೆ. ಹಾಗಾಗಿ ಇನ್ನಾದ್ರೂ ನಾಲಿಗೆ ಬಿಗಿ ಹಿಡಿದು ಮಾತನಾಡಲಿ. ಕಾಂಗ್ರೆಸ್ ನವರು ಹತಾಶೆಯಿಂದ ಈ ರೀತಿಯ ಮಾತುಗಳನ್ನು ಆಡುತ್ತಿದ್ದಾರೆ” ಎಂದರು.

“ಅವರು ಅಧಿಕಾರಕ್ಕೆ ಬರ್ತಾರೆ ಎಂದು ಕನಸ ಕಂಡಿದ್ದಾರೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದ್ರು ಎನ್ನುವ ಹಾಗೆ ಈಗಲೇ ಸಿಎಂ ಗಾಗಿ ತಮ್ಮಲ್ಲೇ ಕಾದಾಡುತ್ತಿದ್ದಾರೆ” ಎಂದರು.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಕ್ರಿಯೆ ಕೇಳಿದ ಮಾಧ್ಯಮಗಳಿಗೆ ಉತ್ತರ ನೀಡಿದ ಸಿಎಂ, “ಅಂತಹ ಕೀಳು, ಮಟ್ಟದ ಹೇಳಿಕೆಗೆ ನಾನು ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಇಷ್ಟೇ ನನ್ನ ಪ್ರತಿಕ್ರಿಯೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...