Homeಕರ್ನಾಟಕಕಾವೇರಿದ ಚುನಾವಣಾ ಕದನ: ಅವಾಚ್ಯ ಪದಗಳಿಂದ ಪರಸ್ಪರ ನಿಂದಿಸಿಕೊಂಡ ಬಿಜೆಪಿ-ಕಾಂಗ್ರೆಸ್ ನಾಯಕರು

ಕಾವೇರಿದ ಚುನಾವಣಾ ಕದನ: ಅವಾಚ್ಯ ಪದಗಳಿಂದ ಪರಸ್ಪರ ನಿಂದಿಸಿಕೊಂಡ ಬಿಜೆಪಿ-ಕಾಂಗ್ರೆಸ್ ನಾಯಕರು

- Advertisement -
- Advertisement -

2018 ರಲ್ಲಿ ಮೈತ್ರಿ ಸರ್ಕಾರವನ್ನು ಉರುಳಿಸಿ ಬಿಜೆಪಿಗೆ ಪಕ್ಷಾಂತರಗೊಂಡ ಶಾಸಕರನ್ನು ವೇಶ್ಯೆಯರಿಗೆ ಹೋಲಿಸುವ ಮೂಲಕ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರು ವಿವಾದ ಹುಟ್ಟುಹಾಕಿದ್ದಾರೆ.

“ಜೀವನಕ್ಕಾಗಿ ವೇಶ್ಯಾವಾಟಿಕೆಗೆ ಪ್ರವೇಶಿಸುವ ಮಹಿಳೆಯನ್ನು ‘ವೇಶ್ಯೆ’ ಎಂದು ಕರೆಯಲಾಗುತ್ತದೆ. ತಮ್ಮನ್ನು ತಾವು ಮಾರಿಕೊಂಡ ಶಾಸಕರನ್ನು ಏನೆಂದು ಕರೆಯುತ್ತೀರಿ? ಬಿಸಿ ಪಾಟಿಲ್ ಪೊಲೀಸ್ ಅಧಿಕಾರಿ ಇದ್ದಾಗ ಯಶವಂತಪುರದಲ್ಲಿ ಚಪ್ಪಲಿ, ಪೊರಕೆ ಸೇವೆ ಮಾಡಿದ್ದು ಯಾಕೆ ಅಂತ ಹೇಳಲಿ. ಬೋರಿಂಗ್ ಇನ್ಸ್ಟಿಟ್ಯೂಟ್ ಅಲ್ಲಿ ಕಾಲಪತ್ಥರ್ ರೌಡಿಗೆ ಯಾವ ಸೇವೆ ಮಾಡಿದ್ದಾರೆ ಎನ್ನುವುದು ಗೊತ್ತಿದೆ” ಎಂದು ಬಿಸಿ ಪಾಟೀಲ್ ವಿರುದ್ಧ ಬಿಕೆ ಹರಿಪ್ರಸಾದ್  ವಾಗ್ಧಾಳಿ ನಡೆಸಿದರು.

ಬಿಜೆಪಿಯಲ್ಲಿ ಸ್ಯಾಂಟ್ರೊ ರವಿ, ಸಿಟಿ ರವಿ, ಪೈಟರ್ ರವಿ, ಪಿಂಪ್ ರವಿಗಳೇ ತುಂಬಿ ತುಳುಕುತ್ತಿದ್ದಾರೆ. ಇವರಿಂದ ಏನು ನಿರೀಕ್ಷೆ ಮಾಡೋದಕ್ಕೆ ಆಗೋದಿಲ್ಲ ಎಂದು ಸಿಟಿ ರವಿಗೆ ಬಿಕೆ ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

ಸ್ಯಾಂಟ್ರೊ ರವಿಗೂ ಕಾಂಗ್ರೆಸ್ ಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿಕೆ ನೀಡಿದ್ದ ಮುನಿರತ್ನಗೆ ತಿರುಗೇಟು ನೀಡಿದ ಹರಿಪ್ರಸಾದ್, “ಮುನಿರತ್ನ ನನ್ನ ಗರಡಿಯಲ್ಲಿ ಬೆಳೆದವನು, ಅವನು ಹೇಗೆ ಅಂತ ಗೊತ್ತಿದೆ. ಧೈರ್ಯ ಇದ್ದರೆ ಮಾತಾಡಲಿ, ನಾನು ಮಾತಾಡ್ತೀನಿ” ಎಂದರು.

“ಯತ್ನಾಳ್ ಅವರೇ ಖುದ್ದಾಗಿ ಹೇಳಿದ್ದಾರೆ. ಬಿಜೆಪಿ ಸರಕಾರದ ಮಂತ್ರಿಗಳು ಸಪ್ಲೈ ಮಾಡಿ ಮಂತ್ರಿಗಳಾಗಿದ್ದಾರೆ ಎಂದು, ಇನ್ನೊಬ್ಬ ಶಾಸಕರು ಹೇಳ್ತಾರೆ ಇವರು ಪಿಂಪ್ ಕೆಲಸ ಮಾಡಿ ಮಂತ್ರಿ ಆಗಿದ್ದಾರಂತೆ. ಇವರೆಲ್ಲಾ (ವಲಸೆ ಸಚಿವರು) ಮಂತ್ರಿಗಳು ನಮ್ಮ ಸರಕಾರದಲ್ಲಿ ಮಂತ್ರಿ ಆಗೋದಕ್ಕೆ ಏನು ಮಾಡಿದಾರೆ ಎನ್ನುವುದು ಗೊತ್ತಿದೆ. ಆದರೆ ಅದನ್ನು ಹೇಳಿ ನನ್ನ ಬಾಯಿ ಹೊಲಸು ಮಾಡಿಕೊಳ್ಳುವುದಿಲ್ಲ” ಎಂದು ಹರಿಪ್ರಸಾದ್ ಅವರು ವಲಸೆ ಸಚಿವರ ಮೇಲೆ ಕಿಡಿಕಾರಿದ್ದಾರೆ.

“ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಬಹುಮತ ನೀಡದೇ ಅತಂತ್ರ ಫಲಿತಾಂಶ ನೀಡಿದ್ದರು. ಹಾಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಒಂದಾಗಿ ಸಮ್ಮಿಶ್ರ ಸರ್ಕಾರ ರಚನೆಯಾಯಿತು. ಆದರೆ, ಸಮ್ಮಿಶ್ರ ಸರ್ಕಾರವನ್ನು ಕೆಳಗಿಳಿಸಲು ಕೆಲ ಶಾಸಕರು ತಮ್ಮನ್ನೇ ತಾವು ಮಾರಿಕೊಂಡಿದ್ದಾರೆ, ಅವರನ್ನು ಏನೆಂದು ಕರೆಯುತ್ತೀರಿ? ಇದೀಗ ಮತ್ತೆ ಚುನಾವಣೆ ಬರುತ್ತಿದೆ. ಈ ವೇಳೆ ಸ್ಥಳೀಯ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಿದೆ” ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರನ್ನು ಗುರಿಯಾಗಿಸಿಕೊಂಡು ಹೊಸಪೇಟೆಯಲ್ಲಿ ಮುಖಂಡರು ಮನವಿ ಮಾಡಿದರು.

ಹರಿಪ್ರಸಾದ್ ಅವರ ವೇಶ್ಯೆ ಪದ ಬಳಕೆಯು ರಾಜ್ಯರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ತನ್ನ ಮಾತುಗಳನ್ನು ತಿರುಚುತ್ತಿದೆ ಮತ್ತು ಲೈಂಗಿಕ ಕಾರ್ಯಕರ್ತರ ಬಗ್ಗೆ ಅನಗತ್ಯ ವಿವಾದವನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

“ನಮಗೆ ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಅಪಾರ ಗೌರವವಿದೆ. ಅವರಿಗೆ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ” ಎಂದು ಹರಿಪ್ರಸಾದ್ ಹೇಳಿದ್ದಾರೆ.

ಹರಿಪ್ರಸಾದ್‌ಗೆ ತಿರುಗೇಟುವ ನೀಡುವ ಭರದಲ್ಲಿ ಬಿಸಿ ಪಾಟೀಲ್ ಕೂಡ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. “ಕಾಂಗ್ರೆಸ್ ಪಕ್ಷ ದ್ರೋಹ ಮಾಡಿದ್ದಕ್ಕೆ ನಾವು ರಾಜೀನಾಮೆ ಕೊಟ್ಟು ಹೊರಗಡೆ ಬಂದೆವು. ಆ ಬಳಿಕ ಬಿಜೆಪಿ ಸೇರಿ, ಜನಾದೇಶದ ಮೇಲೆ ಮರು ಆಯ್ಕೆಯಾಗಿದ್ದೇವೆ. ಆಮೇಲೆ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡುತ್ತಿದ್ದೇವೆ.
ಹರಿಪ್ರಸಾದ್ ಯಾವ ಚುನಾವಣೆಯಲ್ಲಿ ಗೆದ್ದಿದ್ದಾರೆ? ನಾವು ಜನರಿಂದ ಆಯ್ಕೆಯಾಗಿದ್ದೇವೆ. ಹರಿಪ್ರಸಾದ್ ಯಾವ ಜನರಿಂದ ಆಯ್ಕೆಯಾಗಿದ್ದಾರೆ? ಅವರು ಹಿಂಬಾಗಿಲಿನಿಂದ ಬಂದು ಇವತ್ತು ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಿಂಬದಿಯಿಂದ ಬಂದವರನ್ನ ‘ಪಿಂಪ್‌’ಗಳು ಅಂತ ಹೇಳಬೇಕಾಗತ್ತದೆ. ಆದರೆ ಆ ರೀತಿ ಹೇಳಲು ನಮ್ಮ ನಾಲಿಗೆ ಒಪ್ಪಲ್ಲ. ಏಕೆಂದರೆ ಅವರ ಸಂಸ್ಕೃತಿಯೆರ ಬೇರೆ ನಮ್ಮ ಸಂಸ್ಕೃತಿಯೇ ಬೇರೆ. ಹಾಗಾಗಿ ಇನ್ನಾದ್ರೂ ನಾಲಿಗೆ ಬಿಗಿ ಹಿಡಿದು ಮಾತನಾಡಲಿ. ಕಾಂಗ್ರೆಸ್ ನವರು ಹತಾಶೆಯಿಂದ ಈ ರೀತಿಯ ಮಾತುಗಳನ್ನು ಆಡುತ್ತಿದ್ದಾರೆ” ಎಂದರು.

“ಅವರು ಅಧಿಕಾರಕ್ಕೆ ಬರ್ತಾರೆ ಎಂದು ಕನಸ ಕಂಡಿದ್ದಾರೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದ್ರು ಎನ್ನುವ ಹಾಗೆ ಈಗಲೇ ಸಿಎಂ ಗಾಗಿ ತಮ್ಮಲ್ಲೇ ಕಾದಾಡುತ್ತಿದ್ದಾರೆ” ಎಂದರು.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಕ್ರಿಯೆ ಕೇಳಿದ ಮಾಧ್ಯಮಗಳಿಗೆ ಉತ್ತರ ನೀಡಿದ ಸಿಎಂ, “ಅಂತಹ ಕೀಳು, ಮಟ್ಟದ ಹೇಳಿಕೆಗೆ ನಾನು ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಇಷ್ಟೇ ನನ್ನ ಪ್ರತಿಕ್ರಿಯೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...