Homeಮುಖಪುಟಪ್ಲೇಗ್ ಹಾಗೂ ಕೋವಿಡ್ 19 ನಡುವೆ ಕೆಲವು ಹೋಲಿಕೆಗಳು

ಪ್ಲೇಗ್ ಹಾಗೂ ಕೋವಿಡ್ 19 ನಡುವೆ ಕೆಲವು ಹೋಲಿಕೆಗಳು

ಕಳೆದ ಶತಮಾನದಲ್ಲಿ ಕೋಟಿಗಟ್ಟಲೆ ಜನರನ್ನ ಬಲಿ ತೆಗೆದುಕೊಂಡಿದ್ದ ಪ್ಲೇಗ್‌ ಮತ್ತು ಇದೀಗ ಅಂತಹುದೇ ಹೆದರಿಕೆ ಹುಟ್ಟಿಸಿರುವ ಕೊರೊನಾ ನಡುವಿನ ಒಂದು ತುಲನೆ. ಮೂಲ ಲೇಖನ ʼದಿ ಹಿಂದುʼ ಪತ್ರಿಕೆಯದ್ದು.

- Advertisement -
- Advertisement -

ಅನುವಾದ: ನಿಝಾಮ್ ಅನ್ಸಾರಿ ಕಲ್ಲಡ್ಕ

ಕೃಪೆ : ದಿ ಹಿಂದೂ (ಮಾರ್ಚ್27)

ಸುಮಾರು 20 ಮಿಲಿಯನ್ ಯುರೋಪ್ಯನ್ ಜನತೆಯನ್ನು ಆಹುತಿ ತೆಗೆದುಕೊಂಡ ಪ್ಲೇಗ್ (ಬ್ಲಾಕ್ ಡೆತ್) ಮಹಾ ದುರಂತ ಸಂಭವಿಸಿದ್ದೂ ಇಟಲಿಯಲ್ಲೇ ಆಗಿತ್ತು. 700 ವರ್ಷಗಳ ಹಿಂದೆ ಹರಡಿದ ಈ ಮಹಾಮಾರಿ ಅತಿ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದ್ದು ಫ್ಲೋರನ್ಸ್ ನಲ್ಲಿ.  ಅಂದಿನ ಸಾಮಾಜಿಕ ಅಂತರ (ಸೋಶೀಯಲ್ ಡಿಸ್ಟೆನ್ಸಿಂಗ್), ಏಕಾಂತ ವಾಸ (ಕ್ವಾರಂಟೈನ್) ಇತ್ಯಾದಿಗಳನ್ನು ನಂತರ ಅನೇಕರು ಅಧ್ಯಯನ ವಿಷಯವನ್ನಾಗಿಸಿದರು.

2011 ರಲ್ಲಿ ಅಂತರರಾಷ್ಟ್ರೀಯ ವಿಜ್ಞಾನಿಗಳ ಸಮಿತಿಯೊಂದು ‘ನೇಚರ್’ ಎಂಬ ಜರ್ನಲ್‌ನಲ್ಲಿ  ಮಧ್ಯಯುಗದಲ್ಲಿ ಸಂಭವಿಸಿದ ಮಹಾಮಾರಿಗೆ ಕಾರಣವಾದ ‘ಯೆರ್ಸಿನಿಯ ಪೆಸ್ಟಿಸ್’ ಎಂಬ ಬ್ಯಾಕ್ಟೀರಿಯಾದ ಕುರಿತು ಒಂದು ಪತ್ರವನ್ನು ಹೊರಡಿಸಿದರು. ‘ಪ್ಯೂಬೋನಿಕ್ ಪ್ಲೇಗ್’ ಎಂದಾಗಿತ್ತು ಆ ರೋಗದ ಹೆಸರು. ಅವರ ಪರಿಶೋಧನೆಯಲ್ಲಿ ಈ ಬ್ಯಾಕ್ಟೀರಿಯ ಬಂದಿದ್ದು ಚೀನಾದಿಂದಲೋ ಅಥವಾ ಸಮೀಪ ಪ್ರದೇಶಗಳಿಂದಲೋ ಎಂದಾಗಿತ್ತು. ಅವರು ಇಂದಿನ ಸಿಲ್ಕ್ ರೋಡ್ ಮತ್ತು ಇತರ ಲ್ಯಾಂಡ್ ಟ್ರೇಡ್ ರೂಟ್‍ಗಳ ನೀಲನಕ್ಷೆ ತಯಾರಿಸಿದರು. ಅಂತಿಮವಾಗಿ, ಅದು ಸಮುದ್ರ ಹಾದಿಯಾಗಿ, ಇಟಲಿಯನ್ ಬಂದರು ಪ್ರದೇಶವಾದ ಮೆಸ್ಸಿನಗೆ ಬಂದು ತಲುಪಿತು. ಅಂದೂ ಅದರ ಹುಟ್ಟು ಪ್ರಾಣಿಗಳಿಂದ ಮನುಷ್ಯನಿಗೆ ಹರಡುವುದೇ ಆಗಿತ್ತು. ಇಲಿ, ಅಳಿಲು, ಹಾವು ಇತ್ಯಾದಿ ಜೀವಿಗಳಿಂದ ಬಂದಿದ್ದು ಎಂದು ಅಂದು ಹೇಳಲಾಗಿತ್ತು. ಭಯ, ಆತಂಕ ಹಾಗೂ ನಿರೀಕ್ಷೆಯೇ ಆಗಿತ್ತು ಇಂದಿನಂತೆಯೇ ಅಂದಿನ ಜನರ ಮನಸ್ಥಿತಿ. ’ನಮಗೇನಾಗುತ್ತಿದೆ’ ಎಂಬುದೇ ಅಲ್ಲಿ ಕೇಳುತ್ತಿದ್ದುದು. ಏಕಾಂತತೆ (ಐಸೊಲೇಶನ್) ಮಾತ್ರವಾಗಿತ್ತು ಪ್ರತಿರೋಧದ ಔಷಧ. ಅಂದು ಬ್ಯಾಕ್ಟೀರಿಯ ಇಂದು ವೈರಸ್, ಸಾರ್ಸ್, ಕೋವಿಡ್ 19 (ಕೋವ್2) ಎಂಬ ಈ ಎರಡೂ ಕೂಡಾ ಶರೀರದ ಶ್ವಾಸ ವ್ಯವಸ್ಥೆಯನ್ನು ಬಾಧಿಸುವುದಾಗಿತ್ತು, 1916-20 ಗಳಲ್ಲಿ ಬಂದ ‘ಸ್ಪ್ಯಾನಿಶ್ ಫ್ಲೂ’ ವಿಗೂ ಇದಕ್ಕೂ ಸಮಾನ ಹೋಲಿಕೆಗಳಿವೆ.

ತರತಮಗಳಿಲ್ಲದೆ ಸಮಾಧಾನ ಶಾಂತಿ ತುಂಬಿ ತುಳುಕುತ್ತಿದ್ದ ಸಮಯದಲ್ಲೇ ಯುರೋಪನ್ನು ‘ಬ್ಲಾಕ್ ಡೆತ್’ ಆವರಿಸಿದ್ದು. ರಕ್ತಸಿಕ್ತವಾದ ಶಿಲುಬೆ ಯುದ್ಧ ನಡೆದು ಒಂದು ಶತಮಾನದ ನಂತರ, ಇಂದಿಗೂ ಅದೇ ತರತಮ, ತುಲನೆಗಳಿಲ್ಲದ ಶಾಂತಿ ನೆಲೆಗೊಳ್ಳುವ (ಆಪೇಕ್ಷಿತ ಮಾತ್ರ) ಕಾಲದಲ್ಲಿ ಕೊರೋನಾ ಬಂದು ಬಿಟ್ಟಿದೆ. ಬ್ಲಾಕ್ ಡೆತ್ ನಂತೆ ಇದರಿಂದ ಉಂಟಾಗಬುಹುದಾದಂತಹ ಆರ್ಥಿಕ ಮುಗ್ಗಟ್ಟು ಗುರುತರವಾದದ್ದು. ಎಲ್ಲೆಡೆ ಆವರಿಸಬಹುದಾದ ಬಡತನ, ದಾರಿದ್ರ್ಯ, ಹಸಿವು, ಸಂಘರ್ಷ ಎಂಬಿತ್ಯಾದಿಗಳು ಇದನ್ನು ಎದುರಿಸುವ ಭಾಗವಾಗಿ ಉಂಟಾಗುತ್ತವೆ. ಮಕಾಡೆ ಮಲಗಿರುವ ಜಾಗತಿಕ ಆರ್ಥಿಕತೆ ಮೇಲೇಳಲು ಶತಮಾನವೊಂದು ಬೇಕಾದೀತು ಎಂದು ಬ್ಲಾಕ್ ಡೆತ್ ಇಂಪ್ಯಾಕ್ಟ್ ಹೇಳುತ್ತವೆ.

ಅಂದಿನ ಮಕ್ಕಳ ಬಾಯಿಂದ ಕೇಳಿ ಬರುತ್ತಿದ್ದ ಹಾಡು ಇದಾಗಿತ್ತು.

“Ring a Ringa roses…..all fall down”

ಇದರಲ್ಲಿ ರೋಸಸ್ ಎಂಬುದು ಬಾಧಿತರ ಶರೀರದಲ್ಲಿರುವ ಬ್ಲೂಬೋಸ್ ಅನ್ನು ಸೂಚಿಸಿದರೆ, ‘ಆಲ್ ಫಾಲ್ ಡೌನ್’ ಎಂಬುದು ಸಾಮೂಹಿಕ ಮರಣದೆಡೆಗೆ ಬೊಟ್ಟು ಮಾಡುತ್ತದೆ. ಆದರೆ, ಅಂದಿನ ಅಷ್ಟೊಂದು ಸಾಹಿತ್ಯಗಳು ಇಂತಹ ರೋಗಗಳ ಹಿನ್ನೆಲೆಯಲ್ಲಿ 20,21 ಶತಮಾನಗಳಲ್ಲಿ ಬರೆಯಲ್ಪಟ್ಟಿಲ್ಲ.
ಬೊಕೊಚಿಯೊ ಅವರ ಮಾಸ್ಟರ್ ಪೀಸ್ ಕೃತಿಯಾಗಿ ಗುರುತಿಸಲ್ಪಡುವ ‘ದಿ ಡೆಕಾಮರೂನ್’ ಆ ಕಾಲದಲ್ಲಿ ಬರೆಯಲ್ಪಟ್ಟ ಬಹುದೊಡ್ಡ ಸಾಹಿತ್ಯ ಕೃತಿಯಾಗಿದೆ. ಬ್ಲಾಕ್ ಡೆತ್‍ನ ಹಿನ್ನೆಲೆಯಲ್ಲಿ ಅಂದಿನ ಸಾಹಿತ್ಯದ ಮೇರು ಪರ್ವತವೆಂದೇ ಖ್ಯಾತನಾಮರಾಗಿದ್ದ ಬೊಕಾಚಿಯೊ ಏಕಾಂತ ಬಂಧನದಲ್ಲಿದ್ದ ರೋಗಿಗಳ ಕತೆಗಳನ್ನು ದಾಖಲಿಸಿ ‘ಡೆಕಾಮರೂನ್’ ಬರೆದು ಮುಗಿಸಿದ್ದು. ಸೆಲ್ಫ್ ಕ್ವಾರಂಟೈನ್‍ನಲ್ಲಿದ್ದ ಮೂರು ಪುರುಷರ ಹಾಗೂ ಏಳು ಸ್ರೀಯರ ಕಥೆಗಳು ಇದರಲ್ಲಿವೆ.

ಮೆಡಿಕೇಶನ್, ಡ್ರಗ್ಸ್, ಜನಟಿಕ್ಸ್, ಎಪ್ಪಿಡಮಾಲಜಿ, ಡಬ್ಲ್ಯೂ.ಎಚ್.ಒ ಮುಂತಾದ ಹೆಸರುಗಳ  ಬಗ್ಗೆ ಚಿಂತಿಸುವುದಕ್ಕೂ ಕೂಡಾ ಆಗದ ಕಾಲವದು. ಶೇಕ್ಸ್‍ಪಿಯರ್ ಮತ್ತು ಗಲಿಲಿಯೋ ಅವರಿಗಿಂತ 200 ವರ್ಷಗಳ ಹಿಂದೆ ಸಾಗಿ ಹೋದ ಪ್ಲೇಗ್‍ಗೆ, ‘ಡಕಾಮರೂನ್’ ನಂತಹ ಒಂದು ಕಾಲಾತೀತ ಸಾಹಿತ್ಯ ಕೃತಿಗೆ ಜನ್ಮ ಕೊಡಲು ಅಂದು ಸಾಧ್ಯವಾಯಿತು. ಆಧುನಿಕತೆ ಮತ್ತು ಯುಕ್ತಿಯಾಧಾರಿತ ಶಾಸ್ತ್ರವು ಆಗಿನ್ನೂ ರಂಗ ಪ್ರವೇಶ ಮಾಡದ ಹೊತ್ತಲ್ಲಿ, ಮಾನವೀಯತೆಯ ಹರಿಕಾರರಾದ ಡಾನ್‍ರೆ ಮತ್ತು ಬೊಕೊಚಿಯೊರಂತಹ ಸಾಹಿತ್ಯಕಾರರು ಜನ್ಮತಾಳಿದ್ದು.

ಬ್ಲಾಕ್ ಡೆತ್‍ನ ನಂತರವೇ ಆಗಿತ್ತು ಯುರೋಪಿನಲ್ಲಿ ನವೋತ್ಥಾನ ಆರಂಭಗೊಂಡಿರುವುದು.“Revival in arts and letters” ಅನ್ನೋದು ಒಂದು ಮಹಾ ಲಿಬರೇಶನ್ ಆಗಿತ್ತು. ಅದರ ಪರವಾಗಿ ಮತ್ತು ವಿರುದ್ಧವಾಗಿ ವಿಶ್ಲೇಷಣೆಗಳು, ವಿವರಣೆಗಳಿದ್ದರೂ, ಪ್ರಪಂಚಕ್ಕೆ ಹಲವಾರು ತಿರುವುಗಳನ್ನು ನೀಡಿದೆ. ಈ ಕೊರೋನಾ ಕಾಲವೂ ಕೂಡಾ ಬಹುಶಃ ಒಂದು ಮಹಾ ನವೋತ್ಥಾನಕ್ಕೆ ಕಾರಣವಾಗಲಿ ಎಂದು ನಾವು ಆಶಿಸಬಹುದು. ಈ ಕ್ವಾರಂಟೈನ್ ನಮ್ಮ ವ್ಯಕ್ತಿ ಜೀವನದಲ್ಲೂ, ಸಾಮಾಜಿಕ, ರಾಜಕೀಯ, ಸಾಹಿತ್ಯ ವಲಯಗಳಲ್ಲೂ ಮಂಗಳಕರವಾದ ಬೆಳವಣಿಗೆಗಳನ್ನುಂಟು ಮಾಡಲಿದೆ ಎಂದು ನಿರೀಕ್ಷಿಸೋಣ…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...