Homeಮುಖಪುಟಪ್ಲೇಗ್ ಹಾಗೂ ಕೋವಿಡ್ 19 ನಡುವೆ ಕೆಲವು ಹೋಲಿಕೆಗಳು

ಪ್ಲೇಗ್ ಹಾಗೂ ಕೋವಿಡ್ 19 ನಡುವೆ ಕೆಲವು ಹೋಲಿಕೆಗಳು

ಕಳೆದ ಶತಮಾನದಲ್ಲಿ ಕೋಟಿಗಟ್ಟಲೆ ಜನರನ್ನ ಬಲಿ ತೆಗೆದುಕೊಂಡಿದ್ದ ಪ್ಲೇಗ್‌ ಮತ್ತು ಇದೀಗ ಅಂತಹುದೇ ಹೆದರಿಕೆ ಹುಟ್ಟಿಸಿರುವ ಕೊರೊನಾ ನಡುವಿನ ಒಂದು ತುಲನೆ. ಮೂಲ ಲೇಖನ ʼದಿ ಹಿಂದುʼ ಪತ್ರಿಕೆಯದ್ದು.

- Advertisement -
- Advertisement -

ಅನುವಾದ: ನಿಝಾಮ್ ಅನ್ಸಾರಿ ಕಲ್ಲಡ್ಕ

ಕೃಪೆ : ದಿ ಹಿಂದೂ (ಮಾರ್ಚ್27)

ಸುಮಾರು 20 ಮಿಲಿಯನ್ ಯುರೋಪ್ಯನ್ ಜನತೆಯನ್ನು ಆಹುತಿ ತೆಗೆದುಕೊಂಡ ಪ್ಲೇಗ್ (ಬ್ಲಾಕ್ ಡೆತ್) ಮಹಾ ದುರಂತ ಸಂಭವಿಸಿದ್ದೂ ಇಟಲಿಯಲ್ಲೇ ಆಗಿತ್ತು. 700 ವರ್ಷಗಳ ಹಿಂದೆ ಹರಡಿದ ಈ ಮಹಾಮಾರಿ ಅತಿ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದ್ದು ಫ್ಲೋರನ್ಸ್ ನಲ್ಲಿ.  ಅಂದಿನ ಸಾಮಾಜಿಕ ಅಂತರ (ಸೋಶೀಯಲ್ ಡಿಸ್ಟೆನ್ಸಿಂಗ್), ಏಕಾಂತ ವಾಸ (ಕ್ವಾರಂಟೈನ್) ಇತ್ಯಾದಿಗಳನ್ನು ನಂತರ ಅನೇಕರು ಅಧ್ಯಯನ ವಿಷಯವನ್ನಾಗಿಸಿದರು.

2011 ರಲ್ಲಿ ಅಂತರರಾಷ್ಟ್ರೀಯ ವಿಜ್ಞಾನಿಗಳ ಸಮಿತಿಯೊಂದು ‘ನೇಚರ್’ ಎಂಬ ಜರ್ನಲ್‌ನಲ್ಲಿ  ಮಧ್ಯಯುಗದಲ್ಲಿ ಸಂಭವಿಸಿದ ಮಹಾಮಾರಿಗೆ ಕಾರಣವಾದ ‘ಯೆರ್ಸಿನಿಯ ಪೆಸ್ಟಿಸ್’ ಎಂಬ ಬ್ಯಾಕ್ಟೀರಿಯಾದ ಕುರಿತು ಒಂದು ಪತ್ರವನ್ನು ಹೊರಡಿಸಿದರು. ‘ಪ್ಯೂಬೋನಿಕ್ ಪ್ಲೇಗ್’ ಎಂದಾಗಿತ್ತು ಆ ರೋಗದ ಹೆಸರು. ಅವರ ಪರಿಶೋಧನೆಯಲ್ಲಿ ಈ ಬ್ಯಾಕ್ಟೀರಿಯ ಬಂದಿದ್ದು ಚೀನಾದಿಂದಲೋ ಅಥವಾ ಸಮೀಪ ಪ್ರದೇಶಗಳಿಂದಲೋ ಎಂದಾಗಿತ್ತು. ಅವರು ಇಂದಿನ ಸಿಲ್ಕ್ ರೋಡ್ ಮತ್ತು ಇತರ ಲ್ಯಾಂಡ್ ಟ್ರೇಡ್ ರೂಟ್‍ಗಳ ನೀಲನಕ್ಷೆ ತಯಾರಿಸಿದರು. ಅಂತಿಮವಾಗಿ, ಅದು ಸಮುದ್ರ ಹಾದಿಯಾಗಿ, ಇಟಲಿಯನ್ ಬಂದರು ಪ್ರದೇಶವಾದ ಮೆಸ್ಸಿನಗೆ ಬಂದು ತಲುಪಿತು. ಅಂದೂ ಅದರ ಹುಟ್ಟು ಪ್ರಾಣಿಗಳಿಂದ ಮನುಷ್ಯನಿಗೆ ಹರಡುವುದೇ ಆಗಿತ್ತು. ಇಲಿ, ಅಳಿಲು, ಹಾವು ಇತ್ಯಾದಿ ಜೀವಿಗಳಿಂದ ಬಂದಿದ್ದು ಎಂದು ಅಂದು ಹೇಳಲಾಗಿತ್ತು. ಭಯ, ಆತಂಕ ಹಾಗೂ ನಿರೀಕ್ಷೆಯೇ ಆಗಿತ್ತು ಇಂದಿನಂತೆಯೇ ಅಂದಿನ ಜನರ ಮನಸ್ಥಿತಿ. ’ನಮಗೇನಾಗುತ್ತಿದೆ’ ಎಂಬುದೇ ಅಲ್ಲಿ ಕೇಳುತ್ತಿದ್ದುದು. ಏಕಾಂತತೆ (ಐಸೊಲೇಶನ್) ಮಾತ್ರವಾಗಿತ್ತು ಪ್ರತಿರೋಧದ ಔಷಧ. ಅಂದು ಬ್ಯಾಕ್ಟೀರಿಯ ಇಂದು ವೈರಸ್, ಸಾರ್ಸ್, ಕೋವಿಡ್ 19 (ಕೋವ್2) ಎಂಬ ಈ ಎರಡೂ ಕೂಡಾ ಶರೀರದ ಶ್ವಾಸ ವ್ಯವಸ್ಥೆಯನ್ನು ಬಾಧಿಸುವುದಾಗಿತ್ತು, 1916-20 ಗಳಲ್ಲಿ ಬಂದ ‘ಸ್ಪ್ಯಾನಿಶ್ ಫ್ಲೂ’ ವಿಗೂ ಇದಕ್ಕೂ ಸಮಾನ ಹೋಲಿಕೆಗಳಿವೆ.

ತರತಮಗಳಿಲ್ಲದೆ ಸಮಾಧಾನ ಶಾಂತಿ ತುಂಬಿ ತುಳುಕುತ್ತಿದ್ದ ಸಮಯದಲ್ಲೇ ಯುರೋಪನ್ನು ‘ಬ್ಲಾಕ್ ಡೆತ್’ ಆವರಿಸಿದ್ದು. ರಕ್ತಸಿಕ್ತವಾದ ಶಿಲುಬೆ ಯುದ್ಧ ನಡೆದು ಒಂದು ಶತಮಾನದ ನಂತರ, ಇಂದಿಗೂ ಅದೇ ತರತಮ, ತುಲನೆಗಳಿಲ್ಲದ ಶಾಂತಿ ನೆಲೆಗೊಳ್ಳುವ (ಆಪೇಕ್ಷಿತ ಮಾತ್ರ) ಕಾಲದಲ್ಲಿ ಕೊರೋನಾ ಬಂದು ಬಿಟ್ಟಿದೆ. ಬ್ಲಾಕ್ ಡೆತ್ ನಂತೆ ಇದರಿಂದ ಉಂಟಾಗಬುಹುದಾದಂತಹ ಆರ್ಥಿಕ ಮುಗ್ಗಟ್ಟು ಗುರುತರವಾದದ್ದು. ಎಲ್ಲೆಡೆ ಆವರಿಸಬಹುದಾದ ಬಡತನ, ದಾರಿದ್ರ್ಯ, ಹಸಿವು, ಸಂಘರ್ಷ ಎಂಬಿತ್ಯಾದಿಗಳು ಇದನ್ನು ಎದುರಿಸುವ ಭಾಗವಾಗಿ ಉಂಟಾಗುತ್ತವೆ. ಮಕಾಡೆ ಮಲಗಿರುವ ಜಾಗತಿಕ ಆರ್ಥಿಕತೆ ಮೇಲೇಳಲು ಶತಮಾನವೊಂದು ಬೇಕಾದೀತು ಎಂದು ಬ್ಲಾಕ್ ಡೆತ್ ಇಂಪ್ಯಾಕ್ಟ್ ಹೇಳುತ್ತವೆ.

ಅಂದಿನ ಮಕ್ಕಳ ಬಾಯಿಂದ ಕೇಳಿ ಬರುತ್ತಿದ್ದ ಹಾಡು ಇದಾಗಿತ್ತು.

“Ring a Ringa roses…..all fall down”

ಇದರಲ್ಲಿ ರೋಸಸ್ ಎಂಬುದು ಬಾಧಿತರ ಶರೀರದಲ್ಲಿರುವ ಬ್ಲೂಬೋಸ್ ಅನ್ನು ಸೂಚಿಸಿದರೆ, ‘ಆಲ್ ಫಾಲ್ ಡೌನ್’ ಎಂಬುದು ಸಾಮೂಹಿಕ ಮರಣದೆಡೆಗೆ ಬೊಟ್ಟು ಮಾಡುತ್ತದೆ. ಆದರೆ, ಅಂದಿನ ಅಷ್ಟೊಂದು ಸಾಹಿತ್ಯಗಳು ಇಂತಹ ರೋಗಗಳ ಹಿನ್ನೆಲೆಯಲ್ಲಿ 20,21 ಶತಮಾನಗಳಲ್ಲಿ ಬರೆಯಲ್ಪಟ್ಟಿಲ್ಲ.
ಬೊಕೊಚಿಯೊ ಅವರ ಮಾಸ್ಟರ್ ಪೀಸ್ ಕೃತಿಯಾಗಿ ಗುರುತಿಸಲ್ಪಡುವ ‘ದಿ ಡೆಕಾಮರೂನ್’ ಆ ಕಾಲದಲ್ಲಿ ಬರೆಯಲ್ಪಟ್ಟ ಬಹುದೊಡ್ಡ ಸಾಹಿತ್ಯ ಕೃತಿಯಾಗಿದೆ. ಬ್ಲಾಕ್ ಡೆತ್‍ನ ಹಿನ್ನೆಲೆಯಲ್ಲಿ ಅಂದಿನ ಸಾಹಿತ್ಯದ ಮೇರು ಪರ್ವತವೆಂದೇ ಖ್ಯಾತನಾಮರಾಗಿದ್ದ ಬೊಕಾಚಿಯೊ ಏಕಾಂತ ಬಂಧನದಲ್ಲಿದ್ದ ರೋಗಿಗಳ ಕತೆಗಳನ್ನು ದಾಖಲಿಸಿ ‘ಡೆಕಾಮರೂನ್’ ಬರೆದು ಮುಗಿಸಿದ್ದು. ಸೆಲ್ಫ್ ಕ್ವಾರಂಟೈನ್‍ನಲ್ಲಿದ್ದ ಮೂರು ಪುರುಷರ ಹಾಗೂ ಏಳು ಸ್ರೀಯರ ಕಥೆಗಳು ಇದರಲ್ಲಿವೆ.

ಮೆಡಿಕೇಶನ್, ಡ್ರಗ್ಸ್, ಜನಟಿಕ್ಸ್, ಎಪ್ಪಿಡಮಾಲಜಿ, ಡಬ್ಲ್ಯೂ.ಎಚ್.ಒ ಮುಂತಾದ ಹೆಸರುಗಳ  ಬಗ್ಗೆ ಚಿಂತಿಸುವುದಕ್ಕೂ ಕೂಡಾ ಆಗದ ಕಾಲವದು. ಶೇಕ್ಸ್‍ಪಿಯರ್ ಮತ್ತು ಗಲಿಲಿಯೋ ಅವರಿಗಿಂತ 200 ವರ್ಷಗಳ ಹಿಂದೆ ಸಾಗಿ ಹೋದ ಪ್ಲೇಗ್‍ಗೆ, ‘ಡಕಾಮರೂನ್’ ನಂತಹ ಒಂದು ಕಾಲಾತೀತ ಸಾಹಿತ್ಯ ಕೃತಿಗೆ ಜನ್ಮ ಕೊಡಲು ಅಂದು ಸಾಧ್ಯವಾಯಿತು. ಆಧುನಿಕತೆ ಮತ್ತು ಯುಕ್ತಿಯಾಧಾರಿತ ಶಾಸ್ತ್ರವು ಆಗಿನ್ನೂ ರಂಗ ಪ್ರವೇಶ ಮಾಡದ ಹೊತ್ತಲ್ಲಿ, ಮಾನವೀಯತೆಯ ಹರಿಕಾರರಾದ ಡಾನ್‍ರೆ ಮತ್ತು ಬೊಕೊಚಿಯೊರಂತಹ ಸಾಹಿತ್ಯಕಾರರು ಜನ್ಮತಾಳಿದ್ದು.

ಬ್ಲಾಕ್ ಡೆತ್‍ನ ನಂತರವೇ ಆಗಿತ್ತು ಯುರೋಪಿನಲ್ಲಿ ನವೋತ್ಥಾನ ಆರಂಭಗೊಂಡಿರುವುದು.“Revival in arts and letters” ಅನ್ನೋದು ಒಂದು ಮಹಾ ಲಿಬರೇಶನ್ ಆಗಿತ್ತು. ಅದರ ಪರವಾಗಿ ಮತ್ತು ವಿರುದ್ಧವಾಗಿ ವಿಶ್ಲೇಷಣೆಗಳು, ವಿವರಣೆಗಳಿದ್ದರೂ, ಪ್ರಪಂಚಕ್ಕೆ ಹಲವಾರು ತಿರುವುಗಳನ್ನು ನೀಡಿದೆ. ಈ ಕೊರೋನಾ ಕಾಲವೂ ಕೂಡಾ ಬಹುಶಃ ಒಂದು ಮಹಾ ನವೋತ್ಥಾನಕ್ಕೆ ಕಾರಣವಾಗಲಿ ಎಂದು ನಾವು ಆಶಿಸಬಹುದು. ಈ ಕ್ವಾರಂಟೈನ್ ನಮ್ಮ ವ್ಯಕ್ತಿ ಜೀವನದಲ್ಲೂ, ಸಾಮಾಜಿಕ, ರಾಜಕೀಯ, ಸಾಹಿತ್ಯ ವಲಯಗಳಲ್ಲೂ ಮಂಗಳಕರವಾದ ಬೆಳವಣಿಗೆಗಳನ್ನುಂಟು ಮಾಡಲಿದೆ ಎಂದು ನಿರೀಕ್ಷಿಸೋಣ…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...