Homeಮುಖಪುಟಪ್ಲೇಗ್ ಹಾಗೂ ಕೋವಿಡ್ 19 ನಡುವೆ ಕೆಲವು ಹೋಲಿಕೆಗಳು

ಪ್ಲೇಗ್ ಹಾಗೂ ಕೋವಿಡ್ 19 ನಡುವೆ ಕೆಲವು ಹೋಲಿಕೆಗಳು

ಕಳೆದ ಶತಮಾನದಲ್ಲಿ ಕೋಟಿಗಟ್ಟಲೆ ಜನರನ್ನ ಬಲಿ ತೆಗೆದುಕೊಂಡಿದ್ದ ಪ್ಲೇಗ್‌ ಮತ್ತು ಇದೀಗ ಅಂತಹುದೇ ಹೆದರಿಕೆ ಹುಟ್ಟಿಸಿರುವ ಕೊರೊನಾ ನಡುವಿನ ಒಂದು ತುಲನೆ. ಮೂಲ ಲೇಖನ ʼದಿ ಹಿಂದುʼ ಪತ್ರಿಕೆಯದ್ದು.

- Advertisement -
- Advertisement -

ಅನುವಾದ: ನಿಝಾಮ್ ಅನ್ಸಾರಿ ಕಲ್ಲಡ್ಕ

ಕೃಪೆ : ದಿ ಹಿಂದೂ (ಮಾರ್ಚ್27)

ಸುಮಾರು 20 ಮಿಲಿಯನ್ ಯುರೋಪ್ಯನ್ ಜನತೆಯನ್ನು ಆಹುತಿ ತೆಗೆದುಕೊಂಡ ಪ್ಲೇಗ್ (ಬ್ಲಾಕ್ ಡೆತ್) ಮಹಾ ದುರಂತ ಸಂಭವಿಸಿದ್ದೂ ಇಟಲಿಯಲ್ಲೇ ಆಗಿತ್ತು. 700 ವರ್ಷಗಳ ಹಿಂದೆ ಹರಡಿದ ಈ ಮಹಾಮಾರಿ ಅತಿ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದ್ದು ಫ್ಲೋರನ್ಸ್ ನಲ್ಲಿ.  ಅಂದಿನ ಸಾಮಾಜಿಕ ಅಂತರ (ಸೋಶೀಯಲ್ ಡಿಸ್ಟೆನ್ಸಿಂಗ್), ಏಕಾಂತ ವಾಸ (ಕ್ವಾರಂಟೈನ್) ಇತ್ಯಾದಿಗಳನ್ನು ನಂತರ ಅನೇಕರು ಅಧ್ಯಯನ ವಿಷಯವನ್ನಾಗಿಸಿದರು.

2011 ರಲ್ಲಿ ಅಂತರರಾಷ್ಟ್ರೀಯ ವಿಜ್ಞಾನಿಗಳ ಸಮಿತಿಯೊಂದು ‘ನೇಚರ್’ ಎಂಬ ಜರ್ನಲ್‌ನಲ್ಲಿ  ಮಧ್ಯಯುಗದಲ್ಲಿ ಸಂಭವಿಸಿದ ಮಹಾಮಾರಿಗೆ ಕಾರಣವಾದ ‘ಯೆರ್ಸಿನಿಯ ಪೆಸ್ಟಿಸ್’ ಎಂಬ ಬ್ಯಾಕ್ಟೀರಿಯಾದ ಕುರಿತು ಒಂದು ಪತ್ರವನ್ನು ಹೊರಡಿಸಿದರು. ‘ಪ್ಯೂಬೋನಿಕ್ ಪ್ಲೇಗ್’ ಎಂದಾಗಿತ್ತು ಆ ರೋಗದ ಹೆಸರು. ಅವರ ಪರಿಶೋಧನೆಯಲ್ಲಿ ಈ ಬ್ಯಾಕ್ಟೀರಿಯ ಬಂದಿದ್ದು ಚೀನಾದಿಂದಲೋ ಅಥವಾ ಸಮೀಪ ಪ್ರದೇಶಗಳಿಂದಲೋ ಎಂದಾಗಿತ್ತು. ಅವರು ಇಂದಿನ ಸಿಲ್ಕ್ ರೋಡ್ ಮತ್ತು ಇತರ ಲ್ಯಾಂಡ್ ಟ್ರೇಡ್ ರೂಟ್‍ಗಳ ನೀಲನಕ್ಷೆ ತಯಾರಿಸಿದರು. ಅಂತಿಮವಾಗಿ, ಅದು ಸಮುದ್ರ ಹಾದಿಯಾಗಿ, ಇಟಲಿಯನ್ ಬಂದರು ಪ್ರದೇಶವಾದ ಮೆಸ್ಸಿನಗೆ ಬಂದು ತಲುಪಿತು. ಅಂದೂ ಅದರ ಹುಟ್ಟು ಪ್ರಾಣಿಗಳಿಂದ ಮನುಷ್ಯನಿಗೆ ಹರಡುವುದೇ ಆಗಿತ್ತು. ಇಲಿ, ಅಳಿಲು, ಹಾವು ಇತ್ಯಾದಿ ಜೀವಿಗಳಿಂದ ಬಂದಿದ್ದು ಎಂದು ಅಂದು ಹೇಳಲಾಗಿತ್ತು. ಭಯ, ಆತಂಕ ಹಾಗೂ ನಿರೀಕ್ಷೆಯೇ ಆಗಿತ್ತು ಇಂದಿನಂತೆಯೇ ಅಂದಿನ ಜನರ ಮನಸ್ಥಿತಿ. ’ನಮಗೇನಾಗುತ್ತಿದೆ’ ಎಂಬುದೇ ಅಲ್ಲಿ ಕೇಳುತ್ತಿದ್ದುದು. ಏಕಾಂತತೆ (ಐಸೊಲೇಶನ್) ಮಾತ್ರವಾಗಿತ್ತು ಪ್ರತಿರೋಧದ ಔಷಧ. ಅಂದು ಬ್ಯಾಕ್ಟೀರಿಯ ಇಂದು ವೈರಸ್, ಸಾರ್ಸ್, ಕೋವಿಡ್ 19 (ಕೋವ್2) ಎಂಬ ಈ ಎರಡೂ ಕೂಡಾ ಶರೀರದ ಶ್ವಾಸ ವ್ಯವಸ್ಥೆಯನ್ನು ಬಾಧಿಸುವುದಾಗಿತ್ತು, 1916-20 ಗಳಲ್ಲಿ ಬಂದ ‘ಸ್ಪ್ಯಾನಿಶ್ ಫ್ಲೂ’ ವಿಗೂ ಇದಕ್ಕೂ ಸಮಾನ ಹೋಲಿಕೆಗಳಿವೆ.

ತರತಮಗಳಿಲ್ಲದೆ ಸಮಾಧಾನ ಶಾಂತಿ ತುಂಬಿ ತುಳುಕುತ್ತಿದ್ದ ಸಮಯದಲ್ಲೇ ಯುರೋಪನ್ನು ‘ಬ್ಲಾಕ್ ಡೆತ್’ ಆವರಿಸಿದ್ದು. ರಕ್ತಸಿಕ್ತವಾದ ಶಿಲುಬೆ ಯುದ್ಧ ನಡೆದು ಒಂದು ಶತಮಾನದ ನಂತರ, ಇಂದಿಗೂ ಅದೇ ತರತಮ, ತುಲನೆಗಳಿಲ್ಲದ ಶಾಂತಿ ನೆಲೆಗೊಳ್ಳುವ (ಆಪೇಕ್ಷಿತ ಮಾತ್ರ) ಕಾಲದಲ್ಲಿ ಕೊರೋನಾ ಬಂದು ಬಿಟ್ಟಿದೆ. ಬ್ಲಾಕ್ ಡೆತ್ ನಂತೆ ಇದರಿಂದ ಉಂಟಾಗಬುಹುದಾದಂತಹ ಆರ್ಥಿಕ ಮುಗ್ಗಟ್ಟು ಗುರುತರವಾದದ್ದು. ಎಲ್ಲೆಡೆ ಆವರಿಸಬಹುದಾದ ಬಡತನ, ದಾರಿದ್ರ್ಯ, ಹಸಿವು, ಸಂಘರ್ಷ ಎಂಬಿತ್ಯಾದಿಗಳು ಇದನ್ನು ಎದುರಿಸುವ ಭಾಗವಾಗಿ ಉಂಟಾಗುತ್ತವೆ. ಮಕಾಡೆ ಮಲಗಿರುವ ಜಾಗತಿಕ ಆರ್ಥಿಕತೆ ಮೇಲೇಳಲು ಶತಮಾನವೊಂದು ಬೇಕಾದೀತು ಎಂದು ಬ್ಲಾಕ್ ಡೆತ್ ಇಂಪ್ಯಾಕ್ಟ್ ಹೇಳುತ್ತವೆ.

ಅಂದಿನ ಮಕ್ಕಳ ಬಾಯಿಂದ ಕೇಳಿ ಬರುತ್ತಿದ್ದ ಹಾಡು ಇದಾಗಿತ್ತು.

“Ring a Ringa roses…..all fall down”

ಇದರಲ್ಲಿ ರೋಸಸ್ ಎಂಬುದು ಬಾಧಿತರ ಶರೀರದಲ್ಲಿರುವ ಬ್ಲೂಬೋಸ್ ಅನ್ನು ಸೂಚಿಸಿದರೆ, ‘ಆಲ್ ಫಾಲ್ ಡೌನ್’ ಎಂಬುದು ಸಾಮೂಹಿಕ ಮರಣದೆಡೆಗೆ ಬೊಟ್ಟು ಮಾಡುತ್ತದೆ. ಆದರೆ, ಅಂದಿನ ಅಷ್ಟೊಂದು ಸಾಹಿತ್ಯಗಳು ಇಂತಹ ರೋಗಗಳ ಹಿನ್ನೆಲೆಯಲ್ಲಿ 20,21 ಶತಮಾನಗಳಲ್ಲಿ ಬರೆಯಲ್ಪಟ್ಟಿಲ್ಲ.
ಬೊಕೊಚಿಯೊ ಅವರ ಮಾಸ್ಟರ್ ಪೀಸ್ ಕೃತಿಯಾಗಿ ಗುರುತಿಸಲ್ಪಡುವ ‘ದಿ ಡೆಕಾಮರೂನ್’ ಆ ಕಾಲದಲ್ಲಿ ಬರೆಯಲ್ಪಟ್ಟ ಬಹುದೊಡ್ಡ ಸಾಹಿತ್ಯ ಕೃತಿಯಾಗಿದೆ. ಬ್ಲಾಕ್ ಡೆತ್‍ನ ಹಿನ್ನೆಲೆಯಲ್ಲಿ ಅಂದಿನ ಸಾಹಿತ್ಯದ ಮೇರು ಪರ್ವತವೆಂದೇ ಖ್ಯಾತನಾಮರಾಗಿದ್ದ ಬೊಕಾಚಿಯೊ ಏಕಾಂತ ಬಂಧನದಲ್ಲಿದ್ದ ರೋಗಿಗಳ ಕತೆಗಳನ್ನು ದಾಖಲಿಸಿ ‘ಡೆಕಾಮರೂನ್’ ಬರೆದು ಮುಗಿಸಿದ್ದು. ಸೆಲ್ಫ್ ಕ್ವಾರಂಟೈನ್‍ನಲ್ಲಿದ್ದ ಮೂರು ಪುರುಷರ ಹಾಗೂ ಏಳು ಸ್ರೀಯರ ಕಥೆಗಳು ಇದರಲ್ಲಿವೆ.

ಮೆಡಿಕೇಶನ್, ಡ್ರಗ್ಸ್, ಜನಟಿಕ್ಸ್, ಎಪ್ಪಿಡಮಾಲಜಿ, ಡಬ್ಲ್ಯೂ.ಎಚ್.ಒ ಮುಂತಾದ ಹೆಸರುಗಳ  ಬಗ್ಗೆ ಚಿಂತಿಸುವುದಕ್ಕೂ ಕೂಡಾ ಆಗದ ಕಾಲವದು. ಶೇಕ್ಸ್‍ಪಿಯರ್ ಮತ್ತು ಗಲಿಲಿಯೋ ಅವರಿಗಿಂತ 200 ವರ್ಷಗಳ ಹಿಂದೆ ಸಾಗಿ ಹೋದ ಪ್ಲೇಗ್‍ಗೆ, ‘ಡಕಾಮರೂನ್’ ನಂತಹ ಒಂದು ಕಾಲಾತೀತ ಸಾಹಿತ್ಯ ಕೃತಿಗೆ ಜನ್ಮ ಕೊಡಲು ಅಂದು ಸಾಧ್ಯವಾಯಿತು. ಆಧುನಿಕತೆ ಮತ್ತು ಯುಕ್ತಿಯಾಧಾರಿತ ಶಾಸ್ತ್ರವು ಆಗಿನ್ನೂ ರಂಗ ಪ್ರವೇಶ ಮಾಡದ ಹೊತ್ತಲ್ಲಿ, ಮಾನವೀಯತೆಯ ಹರಿಕಾರರಾದ ಡಾನ್‍ರೆ ಮತ್ತು ಬೊಕೊಚಿಯೊರಂತಹ ಸಾಹಿತ್ಯಕಾರರು ಜನ್ಮತಾಳಿದ್ದು.

ಬ್ಲಾಕ್ ಡೆತ್‍ನ ನಂತರವೇ ಆಗಿತ್ತು ಯುರೋಪಿನಲ್ಲಿ ನವೋತ್ಥಾನ ಆರಂಭಗೊಂಡಿರುವುದು.“Revival in arts and letters” ಅನ್ನೋದು ಒಂದು ಮಹಾ ಲಿಬರೇಶನ್ ಆಗಿತ್ತು. ಅದರ ಪರವಾಗಿ ಮತ್ತು ವಿರುದ್ಧವಾಗಿ ವಿಶ್ಲೇಷಣೆಗಳು, ವಿವರಣೆಗಳಿದ್ದರೂ, ಪ್ರಪಂಚಕ್ಕೆ ಹಲವಾರು ತಿರುವುಗಳನ್ನು ನೀಡಿದೆ. ಈ ಕೊರೋನಾ ಕಾಲವೂ ಕೂಡಾ ಬಹುಶಃ ಒಂದು ಮಹಾ ನವೋತ್ಥಾನಕ್ಕೆ ಕಾರಣವಾಗಲಿ ಎಂದು ನಾವು ಆಶಿಸಬಹುದು. ಈ ಕ್ವಾರಂಟೈನ್ ನಮ್ಮ ವ್ಯಕ್ತಿ ಜೀವನದಲ್ಲೂ, ಸಾಮಾಜಿಕ, ರಾಜಕೀಯ, ಸಾಹಿತ್ಯ ವಲಯಗಳಲ್ಲೂ ಮಂಗಳಕರವಾದ ಬೆಳವಣಿಗೆಗಳನ್ನುಂಟು ಮಾಡಲಿದೆ ಎಂದು ನಿರೀಕ್ಷಿಸೋಣ…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...