Homeಮುಖಪುಟಪ್ಲೇಗ್ ಹಾಗೂ ಕೋವಿಡ್ 19 ನಡುವೆ ಕೆಲವು ಹೋಲಿಕೆಗಳು

ಪ್ಲೇಗ್ ಹಾಗೂ ಕೋವಿಡ್ 19 ನಡುವೆ ಕೆಲವು ಹೋಲಿಕೆಗಳು

ಕಳೆದ ಶತಮಾನದಲ್ಲಿ ಕೋಟಿಗಟ್ಟಲೆ ಜನರನ್ನ ಬಲಿ ತೆಗೆದುಕೊಂಡಿದ್ದ ಪ್ಲೇಗ್‌ ಮತ್ತು ಇದೀಗ ಅಂತಹುದೇ ಹೆದರಿಕೆ ಹುಟ್ಟಿಸಿರುವ ಕೊರೊನಾ ನಡುವಿನ ಒಂದು ತುಲನೆ. ಮೂಲ ಲೇಖನ ʼದಿ ಹಿಂದುʼ ಪತ್ರಿಕೆಯದ್ದು.

- Advertisement -
- Advertisement -

ಅನುವಾದ: ನಿಝಾಮ್ ಅನ್ಸಾರಿ ಕಲ್ಲಡ್ಕ

ಕೃಪೆ : ದಿ ಹಿಂದೂ (ಮಾರ್ಚ್27)

ಸುಮಾರು 20 ಮಿಲಿಯನ್ ಯುರೋಪ್ಯನ್ ಜನತೆಯನ್ನು ಆಹುತಿ ತೆಗೆದುಕೊಂಡ ಪ್ಲೇಗ್ (ಬ್ಲಾಕ್ ಡೆತ್) ಮಹಾ ದುರಂತ ಸಂಭವಿಸಿದ್ದೂ ಇಟಲಿಯಲ್ಲೇ ಆಗಿತ್ತು. 700 ವರ್ಷಗಳ ಹಿಂದೆ ಹರಡಿದ ಈ ಮಹಾಮಾರಿ ಅತಿ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದ್ದು ಫ್ಲೋರನ್ಸ್ ನಲ್ಲಿ.  ಅಂದಿನ ಸಾಮಾಜಿಕ ಅಂತರ (ಸೋಶೀಯಲ್ ಡಿಸ್ಟೆನ್ಸಿಂಗ್), ಏಕಾಂತ ವಾಸ (ಕ್ವಾರಂಟೈನ್) ಇತ್ಯಾದಿಗಳನ್ನು ನಂತರ ಅನೇಕರು ಅಧ್ಯಯನ ವಿಷಯವನ್ನಾಗಿಸಿದರು.

2011 ರಲ್ಲಿ ಅಂತರರಾಷ್ಟ್ರೀಯ ವಿಜ್ಞಾನಿಗಳ ಸಮಿತಿಯೊಂದು ‘ನೇಚರ್’ ಎಂಬ ಜರ್ನಲ್‌ನಲ್ಲಿ  ಮಧ್ಯಯುಗದಲ್ಲಿ ಸಂಭವಿಸಿದ ಮಹಾಮಾರಿಗೆ ಕಾರಣವಾದ ‘ಯೆರ್ಸಿನಿಯ ಪೆಸ್ಟಿಸ್’ ಎಂಬ ಬ್ಯಾಕ್ಟೀರಿಯಾದ ಕುರಿತು ಒಂದು ಪತ್ರವನ್ನು ಹೊರಡಿಸಿದರು. ‘ಪ್ಯೂಬೋನಿಕ್ ಪ್ಲೇಗ್’ ಎಂದಾಗಿತ್ತು ಆ ರೋಗದ ಹೆಸರು. ಅವರ ಪರಿಶೋಧನೆಯಲ್ಲಿ ಈ ಬ್ಯಾಕ್ಟೀರಿಯ ಬಂದಿದ್ದು ಚೀನಾದಿಂದಲೋ ಅಥವಾ ಸಮೀಪ ಪ್ರದೇಶಗಳಿಂದಲೋ ಎಂದಾಗಿತ್ತು. ಅವರು ಇಂದಿನ ಸಿಲ್ಕ್ ರೋಡ್ ಮತ್ತು ಇತರ ಲ್ಯಾಂಡ್ ಟ್ರೇಡ್ ರೂಟ್‍ಗಳ ನೀಲನಕ್ಷೆ ತಯಾರಿಸಿದರು. ಅಂತಿಮವಾಗಿ, ಅದು ಸಮುದ್ರ ಹಾದಿಯಾಗಿ, ಇಟಲಿಯನ್ ಬಂದರು ಪ್ರದೇಶವಾದ ಮೆಸ್ಸಿನಗೆ ಬಂದು ತಲುಪಿತು. ಅಂದೂ ಅದರ ಹುಟ್ಟು ಪ್ರಾಣಿಗಳಿಂದ ಮನುಷ್ಯನಿಗೆ ಹರಡುವುದೇ ಆಗಿತ್ತು. ಇಲಿ, ಅಳಿಲು, ಹಾವು ಇತ್ಯಾದಿ ಜೀವಿಗಳಿಂದ ಬಂದಿದ್ದು ಎಂದು ಅಂದು ಹೇಳಲಾಗಿತ್ತು. ಭಯ, ಆತಂಕ ಹಾಗೂ ನಿರೀಕ್ಷೆಯೇ ಆಗಿತ್ತು ಇಂದಿನಂತೆಯೇ ಅಂದಿನ ಜನರ ಮನಸ್ಥಿತಿ. ’ನಮಗೇನಾಗುತ್ತಿದೆ’ ಎಂಬುದೇ ಅಲ್ಲಿ ಕೇಳುತ್ತಿದ್ದುದು. ಏಕಾಂತತೆ (ಐಸೊಲೇಶನ್) ಮಾತ್ರವಾಗಿತ್ತು ಪ್ರತಿರೋಧದ ಔಷಧ. ಅಂದು ಬ್ಯಾಕ್ಟೀರಿಯ ಇಂದು ವೈರಸ್, ಸಾರ್ಸ್, ಕೋವಿಡ್ 19 (ಕೋವ್2) ಎಂಬ ಈ ಎರಡೂ ಕೂಡಾ ಶರೀರದ ಶ್ವಾಸ ವ್ಯವಸ್ಥೆಯನ್ನು ಬಾಧಿಸುವುದಾಗಿತ್ತು, 1916-20 ಗಳಲ್ಲಿ ಬಂದ ‘ಸ್ಪ್ಯಾನಿಶ್ ಫ್ಲೂ’ ವಿಗೂ ಇದಕ್ಕೂ ಸಮಾನ ಹೋಲಿಕೆಗಳಿವೆ.

ತರತಮಗಳಿಲ್ಲದೆ ಸಮಾಧಾನ ಶಾಂತಿ ತುಂಬಿ ತುಳುಕುತ್ತಿದ್ದ ಸಮಯದಲ್ಲೇ ಯುರೋಪನ್ನು ‘ಬ್ಲಾಕ್ ಡೆತ್’ ಆವರಿಸಿದ್ದು. ರಕ್ತಸಿಕ್ತವಾದ ಶಿಲುಬೆ ಯುದ್ಧ ನಡೆದು ಒಂದು ಶತಮಾನದ ನಂತರ, ಇಂದಿಗೂ ಅದೇ ತರತಮ, ತುಲನೆಗಳಿಲ್ಲದ ಶಾಂತಿ ನೆಲೆಗೊಳ್ಳುವ (ಆಪೇಕ್ಷಿತ ಮಾತ್ರ) ಕಾಲದಲ್ಲಿ ಕೊರೋನಾ ಬಂದು ಬಿಟ್ಟಿದೆ. ಬ್ಲಾಕ್ ಡೆತ್ ನಂತೆ ಇದರಿಂದ ಉಂಟಾಗಬುಹುದಾದಂತಹ ಆರ್ಥಿಕ ಮುಗ್ಗಟ್ಟು ಗುರುತರವಾದದ್ದು. ಎಲ್ಲೆಡೆ ಆವರಿಸಬಹುದಾದ ಬಡತನ, ದಾರಿದ್ರ್ಯ, ಹಸಿವು, ಸಂಘರ್ಷ ಎಂಬಿತ್ಯಾದಿಗಳು ಇದನ್ನು ಎದುರಿಸುವ ಭಾಗವಾಗಿ ಉಂಟಾಗುತ್ತವೆ. ಮಕಾಡೆ ಮಲಗಿರುವ ಜಾಗತಿಕ ಆರ್ಥಿಕತೆ ಮೇಲೇಳಲು ಶತಮಾನವೊಂದು ಬೇಕಾದೀತು ಎಂದು ಬ್ಲಾಕ್ ಡೆತ್ ಇಂಪ್ಯಾಕ್ಟ್ ಹೇಳುತ್ತವೆ.

ಅಂದಿನ ಮಕ್ಕಳ ಬಾಯಿಂದ ಕೇಳಿ ಬರುತ್ತಿದ್ದ ಹಾಡು ಇದಾಗಿತ್ತು.

“Ring a Ringa roses…..all fall down”

ಇದರಲ್ಲಿ ರೋಸಸ್ ಎಂಬುದು ಬಾಧಿತರ ಶರೀರದಲ್ಲಿರುವ ಬ್ಲೂಬೋಸ್ ಅನ್ನು ಸೂಚಿಸಿದರೆ, ‘ಆಲ್ ಫಾಲ್ ಡೌನ್’ ಎಂಬುದು ಸಾಮೂಹಿಕ ಮರಣದೆಡೆಗೆ ಬೊಟ್ಟು ಮಾಡುತ್ತದೆ. ಆದರೆ, ಅಂದಿನ ಅಷ್ಟೊಂದು ಸಾಹಿತ್ಯಗಳು ಇಂತಹ ರೋಗಗಳ ಹಿನ್ನೆಲೆಯಲ್ಲಿ 20,21 ಶತಮಾನಗಳಲ್ಲಿ ಬರೆಯಲ್ಪಟ್ಟಿಲ್ಲ.
ಬೊಕೊಚಿಯೊ ಅವರ ಮಾಸ್ಟರ್ ಪೀಸ್ ಕೃತಿಯಾಗಿ ಗುರುತಿಸಲ್ಪಡುವ ‘ದಿ ಡೆಕಾಮರೂನ್’ ಆ ಕಾಲದಲ್ಲಿ ಬರೆಯಲ್ಪಟ್ಟ ಬಹುದೊಡ್ಡ ಸಾಹಿತ್ಯ ಕೃತಿಯಾಗಿದೆ. ಬ್ಲಾಕ್ ಡೆತ್‍ನ ಹಿನ್ನೆಲೆಯಲ್ಲಿ ಅಂದಿನ ಸಾಹಿತ್ಯದ ಮೇರು ಪರ್ವತವೆಂದೇ ಖ್ಯಾತನಾಮರಾಗಿದ್ದ ಬೊಕಾಚಿಯೊ ಏಕಾಂತ ಬಂಧನದಲ್ಲಿದ್ದ ರೋಗಿಗಳ ಕತೆಗಳನ್ನು ದಾಖಲಿಸಿ ‘ಡೆಕಾಮರೂನ್’ ಬರೆದು ಮುಗಿಸಿದ್ದು. ಸೆಲ್ಫ್ ಕ್ವಾರಂಟೈನ್‍ನಲ್ಲಿದ್ದ ಮೂರು ಪುರುಷರ ಹಾಗೂ ಏಳು ಸ್ರೀಯರ ಕಥೆಗಳು ಇದರಲ್ಲಿವೆ.

ಮೆಡಿಕೇಶನ್, ಡ್ರಗ್ಸ್, ಜನಟಿಕ್ಸ್, ಎಪ್ಪಿಡಮಾಲಜಿ, ಡಬ್ಲ್ಯೂ.ಎಚ್.ಒ ಮುಂತಾದ ಹೆಸರುಗಳ  ಬಗ್ಗೆ ಚಿಂತಿಸುವುದಕ್ಕೂ ಕೂಡಾ ಆಗದ ಕಾಲವದು. ಶೇಕ್ಸ್‍ಪಿಯರ್ ಮತ್ತು ಗಲಿಲಿಯೋ ಅವರಿಗಿಂತ 200 ವರ್ಷಗಳ ಹಿಂದೆ ಸಾಗಿ ಹೋದ ಪ್ಲೇಗ್‍ಗೆ, ‘ಡಕಾಮರೂನ್’ ನಂತಹ ಒಂದು ಕಾಲಾತೀತ ಸಾಹಿತ್ಯ ಕೃತಿಗೆ ಜನ್ಮ ಕೊಡಲು ಅಂದು ಸಾಧ್ಯವಾಯಿತು. ಆಧುನಿಕತೆ ಮತ್ತು ಯುಕ್ತಿಯಾಧಾರಿತ ಶಾಸ್ತ್ರವು ಆಗಿನ್ನೂ ರಂಗ ಪ್ರವೇಶ ಮಾಡದ ಹೊತ್ತಲ್ಲಿ, ಮಾನವೀಯತೆಯ ಹರಿಕಾರರಾದ ಡಾನ್‍ರೆ ಮತ್ತು ಬೊಕೊಚಿಯೊರಂತಹ ಸಾಹಿತ್ಯಕಾರರು ಜನ್ಮತಾಳಿದ್ದು.

ಬ್ಲಾಕ್ ಡೆತ್‍ನ ನಂತರವೇ ಆಗಿತ್ತು ಯುರೋಪಿನಲ್ಲಿ ನವೋತ್ಥಾನ ಆರಂಭಗೊಂಡಿರುವುದು.“Revival in arts and letters” ಅನ್ನೋದು ಒಂದು ಮಹಾ ಲಿಬರೇಶನ್ ಆಗಿತ್ತು. ಅದರ ಪರವಾಗಿ ಮತ್ತು ವಿರುದ್ಧವಾಗಿ ವಿಶ್ಲೇಷಣೆಗಳು, ವಿವರಣೆಗಳಿದ್ದರೂ, ಪ್ರಪಂಚಕ್ಕೆ ಹಲವಾರು ತಿರುವುಗಳನ್ನು ನೀಡಿದೆ. ಈ ಕೊರೋನಾ ಕಾಲವೂ ಕೂಡಾ ಬಹುಶಃ ಒಂದು ಮಹಾ ನವೋತ್ಥಾನಕ್ಕೆ ಕಾರಣವಾಗಲಿ ಎಂದು ನಾವು ಆಶಿಸಬಹುದು. ಈ ಕ್ವಾರಂಟೈನ್ ನಮ್ಮ ವ್ಯಕ್ತಿ ಜೀವನದಲ್ಲೂ, ಸಾಮಾಜಿಕ, ರಾಜಕೀಯ, ಸಾಹಿತ್ಯ ವಲಯಗಳಲ್ಲೂ ಮಂಗಳಕರವಾದ ಬೆಳವಣಿಗೆಗಳನ್ನುಂಟು ಮಾಡಲಿದೆ ಎಂದು ನಿರೀಕ್ಷಿಸೋಣ…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...