Homeಮುಖಪುಟರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ ಅನ್ನುತ್ತಾರೆ ತುಮಕೂರು ಜನ..

ರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ ಅನ್ನುತ್ತಾರೆ ತುಮಕೂರು ಜನ..

ಕೊರೋನ ವೈರಸ್ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತುಹೋಗುವ ಭೀತಿ ಎದುರಾಗಿದೆ. ಸರ್ಕಾರಗಳು ಜನರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ ಎನ್ನುತ್ತಾರೆ ರಂಗಸ್ವಾಮಿ...

- Advertisement -
- Advertisement -

ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರ ಒಂದು ವಾರ ರಜೆ ಘೋಷಣೆ ಮಾಡಿರುವ ಬೆನ್ನಲ್ಲೇ ಜನರು ಕೂಡ ಮನೆಯಿಂದ ಹೊರಬಂದಿಲ್ಲ. ಬಿಸಿಲು, ಧೂಳು ಮತ್ತು ಕೊರೋನ ವೈರಸ್ ಭೀತಿಯಿಂದ ತುಮಕೂರು ನಗರದಲ್ಲಿ ಅಘೋಷಿತ ಬಂದ್ ವಾತಾವರಣ ಕಂಡುಬಂತು. ಸಾರ್ವಜನಿಕ ಸ್ಥಳಗಳು ಬಿಕೋ ಎನ್ನುತ್ತಿದ್ದವು. ಎರಡನೇ ಶನಿವಾರದ ಹಿನ್ನೆಲೆಯಲ್ಲಿ ಎಲ್ಲೆಡೆ ರಜೆಯ ವಾತಾವರಣವಿತ್ತು.

ಜನರಿಂದ ಗಿಜಿಗುಡುತ್ತಿದ್ದ ಬಿ.ಎಚ್.ರಸ್ತೆ, ಅಶೋಕ ರಸ್ತೆ, ಎಂ.ಜಿ.ರಸ್ತೆ, ಸೋಮೇಶ್ವರಪುರಂ ರಸ್ತೆ, ರೈಲ್ವೆ ಸ್ಟೇಷನ್ ರಸ್ತೆಗಳಲ್ಲಿ ಜನರೇ ಕಂಡುಬರಲಿಲ್ಲ. ಆಟೋಗಳು ಕೂಡ ರಸ್ತೆಗೆ ಇಳಿದಿರಲಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್‌ಗಳ ಸಂಚಾರವು ಕ್ಷೀಣವಾಗಿತ್ತು. ಕೆಲವೇ ಮಂದಿ ಇದ್ದ ಪ್ರಯಾಣಿಕರು ತಮ್ಮ ಲಗೇಜುಗಳನ್ನು ತಲೆ ಮೇಲೆ ಹೊತ್ತು ಸಾಗಿದರು. ವಾಹನ ಸೌಲಭ್ಯವಿಲ್ಲದೆ ಪ್ರಯಾಣಿಕರ ಪರದಾಡಿದರು.

ರೈಲ್ವೆ ನಿಲ್ದಾಣ, ಸರ್ಕಾರಿ ಬಸ್‌ ನಿಲ್ದಾಣ ಮತ್ತು ಖಾಸಗಿ ಬಸ್ ನಿಲ್ದಾಣ ಮತ್ತು ಟೌನ್ ಹಾಲ್‌ನಲ್ಲಿ ಜನರ ಓಡಾಟ ವಿರಳವಾಗಿತ್ತು. ಶಾಲಾ ಕಾಲೇಜುಗಳು, ಚಿತ್ರಮಂದಿರಗಳು, ಸಭೆ ಸಮಾರಂಭಗಳು ನಡೆಸುವುದಕ್ಕೆ ನಿರ್ಬಂಧ ವಿಧಿಸಿದ್ದರಿಂದ ಎಲ್ಲೆಡೆಯೂ ಬಂದ್ ವಾತಾವರಣವಿತ್ತು. ಹೋಟೆಲ್‌ಗಳು, ಬೇಕರಿಗಳು ಮತ್ತು ಅಂಗಡಿ ಮಳಿಗೆಗಳಿಗೆ ಭೇಟಿ ನೀಡುವವರ ಸಂಖ್ಯೆಯೂ ಕೊರೋನಾ ಭೀತಿಯಿಂದ ಕಡಿಮೆಯಾಗಿದೆ.

ರಾಜ್ಯ ಸರ್ಕಾರ ಕೊರೋನಾ ವೈರಸ್ ಹರಡದಂತೆ ನಿಯಂತ್ರಣ ಹೇರಿರುವುದಕ್ಕೆ ಬಹುತೇಕರು ವಿರೋಧ ವ್ಯಕ್ತಪಡಿಸುತ್ತಿರುವುದು ಸಾಮಾನ್ಯವಾಗಿದೆ. ಕೊರೊನಾ ವೈರಸ್ ಬಾದಿತರು ದೇಶದಲ್ಲಿ ಕಂಡು ಬರುತ್ತಿದ್ದಂತೆಯೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರೆ ಸ್ವಲ್ಪ ಪ್ರಮಾಣದಲ್ಲಾದರೂ ನಿಯಂತ್ರಿಸಬಹುದಿತ್ತು. ಆದರೆ 70ಕ್ಕೂ ಹೆಚ್ಚು ಪ್ರಕರಣಗಳು ಪತ್ರೆಯಾದ ನಂತರ ಬಹಳ ತಡವಾಗಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಈಗ ರಜೆ ನೀಡುವುದರಿಂದ ಪ್ರಯೋಜವಾಗುವುದಿಲ್ಲ. ರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ. ಸರ್ಕಾರ ಮಾಸ್ಕ್‌ಗಳನ್ನು ಧರಿಸಬೇಕು ಎಂದು ಹೇಳುತ್ತದೆ ಆದರೆ ಯಾವ ಭಾಗದಲ್ಲೂ ಮಾಸ್ಕ್ ಗಳು ದೊರೆಯುತ್ತಿಲ್ಲ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದೆ.

ಹೋಟೆಲ್ ಉದ್ಯಮ ಲಾಸ್ ಆಗುತ್ತಿದೆ. ಕಟ್ಟಡ ಕಾರ್ಮಿಕರು, ದಿನಗೂಲಿ ನೌಕರರಿಗೆ ಕೆಲಸ  ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಧ್ಯಮಗಲು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಇದೇ ಕಾರಣಕ್ಕೆ ಜನರು ಮತ್ತಷ್ಟು ಭಯಗ್ರಸ್ತರಾಗಿದ್ದಾರೆ. ರಾಜ್ಯದಲ್ಲಿ ಏನಾಗುತ್ತಿದೆ ಎಂದು ತಿಳಿಯುತ್ತಲೇ ಇಲ್ಲ. ಕೊರೋನ ವೈರಸ್ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತುಹೋಗುವ ಭೀತಿ ಎದುರಾಗಿದೆ. ಸರ್ಕಾರಗಳು ಜನರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ ಎಂದು ರಂಗಸ್ವಾಮಿ ಆರೋಪಿಸಿದರು.

ಬೀದಿಬದಿ ವ್ಯಾಪಾರಿಗಳು, ಹಣ್ಣಿನ ವ್ಯಾಪಾರಿಗಳು, ಕಾಫಿ ಟೀ ಅಂಗಡಿಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ. ಟೌನ್ ಹಾಲ್‌ನಲ್ಲಿ ಶೆಟ್ಟಿಹಳ್ಳಿ ಟೀ ಸ್ಟಾಲ್ ತುಮಕೂರಿನಲ್ಲೇ ಪ್ರಸಿದ್ದವಾದುದು. ಒಳ್ಳೆಯ ಟೀ ಕೊಡುತ್ತಿದ್ದರು. ಅದೇ ಕಾರಣಕ್ಕೆ ಜನರು ಹುಡುಕಿಕೊಂಡು ಹೋಗಿ ಶೆಟ್ಟಿಹಳ್ಳಿ ಟೀ ಸ್ಟಾಲ್ ನಲ್ಲಿ ಬಗೆಬಗೆಯ ಟೀ ಸವಿಯುತ್ತಿದ್ದರು. ಕೋವಿಡ್-19 ಬಂದ ಮೇಲೆ ಜನರೇ ಇಲ್ಲದಂತಾಗಿದೆ. ನಮಗೆ ವ್ಯಾಪಾರ ನಡೆಯುತ್ತಿಲ್ಲ. ಜೀವನ ನಡೆಯಬೇಕಲ್ಲ.ಅಂಗಡಿ ತೆರೆದಿದ್ದೇನೆ. ಜನರು ಬರುತ್ತಿಲ್ಲ. ಎಲ್ಲ ಭಯ ಬಿದ್ದಿದ್ದಾರೆ ಸರ್ ಎಂದು ನಗುತ್ತಲೇ ಹೇಳುತ್ತಾರೆ ಟೀ ಸ್ಟಾಲ್ ಉಮೇಶ್.

ಒಟ್ಟಾರೆ ಕೊರೊನಾ ವೈರಸ್ ಸುದ್ದಿ ಹರಡುತ್ತಿರುವ ವೇಗದಲ್ಲಿಯೇ ವ್ಯಾಪಾರ-ವಹಿವಾಟು ಕುಸಿಯುತ್ತಿದೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಸರ್ಕಾರಕ್ಕೆ ಬರಬೇಕಾದ ಪರೋಕ್ಷ ತೆರಿಗೆಯ ಪ್ರಮಾಣದಲ್ಲೂ ಇಳಿಕೆ ಕಂಡುಬರುತ್ತದೆ. ಸರ್ಕಾರವನ್ನು ನಡೆಸುವುದು ಕಷ್ಟವಾಗುತ್ತದೆ. ಕೇಂದ್ರ ಸರ್ಕಾರವೂ ತನ್ನ ಪಾಲಿನ ಹಣವನ್ನು ನೀಡುತ್ತಿಲ್ಲ. ಕೊರೋನಾ ವೈರಸ್ ಆರ್ಥಿಕ ವ್ಯವಸ್ಥೆ ಮತ್ತಷ್ಟು ಕುಸಿಯಲು ಕಾರಣವಾಗಬಹುದು. ಹೀಗಾಗಿ ಸರ್ಕಾರ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಜನರನ್ನು ಬೀತಿಯಿಂದ ಹೊರತರಬೇಕು. ವ್ಯಾಪಾರ ವಹಿವಾಟು ಮತ್ತು ಆರ್ಥಿಕ ಚೇತರಿಕೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಸಮಸ್ಯೆ ಎದುರಿಸಲು ಸಾಧ್ಯವಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...