Homeಮುಖಪುಟರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ ಅನ್ನುತ್ತಾರೆ ತುಮಕೂರು ಜನ..

ರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ ಅನ್ನುತ್ತಾರೆ ತುಮಕೂರು ಜನ..

ಕೊರೋನ ವೈರಸ್ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತುಹೋಗುವ ಭೀತಿ ಎದುರಾಗಿದೆ. ಸರ್ಕಾರಗಳು ಜನರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ ಎನ್ನುತ್ತಾರೆ ರಂಗಸ್ವಾಮಿ...

- Advertisement -
- Advertisement -

ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರ ಒಂದು ವಾರ ರಜೆ ಘೋಷಣೆ ಮಾಡಿರುವ ಬೆನ್ನಲ್ಲೇ ಜನರು ಕೂಡ ಮನೆಯಿಂದ ಹೊರಬಂದಿಲ್ಲ. ಬಿಸಿಲು, ಧೂಳು ಮತ್ತು ಕೊರೋನ ವೈರಸ್ ಭೀತಿಯಿಂದ ತುಮಕೂರು ನಗರದಲ್ಲಿ ಅಘೋಷಿತ ಬಂದ್ ವಾತಾವರಣ ಕಂಡುಬಂತು. ಸಾರ್ವಜನಿಕ ಸ್ಥಳಗಳು ಬಿಕೋ ಎನ್ನುತ್ತಿದ್ದವು. ಎರಡನೇ ಶನಿವಾರದ ಹಿನ್ನೆಲೆಯಲ್ಲಿ ಎಲ್ಲೆಡೆ ರಜೆಯ ವಾತಾವರಣವಿತ್ತು.

ಜನರಿಂದ ಗಿಜಿಗುಡುತ್ತಿದ್ದ ಬಿ.ಎಚ್.ರಸ್ತೆ, ಅಶೋಕ ರಸ್ತೆ, ಎಂ.ಜಿ.ರಸ್ತೆ, ಸೋಮೇಶ್ವರಪುರಂ ರಸ್ತೆ, ರೈಲ್ವೆ ಸ್ಟೇಷನ್ ರಸ್ತೆಗಳಲ್ಲಿ ಜನರೇ ಕಂಡುಬರಲಿಲ್ಲ. ಆಟೋಗಳು ಕೂಡ ರಸ್ತೆಗೆ ಇಳಿದಿರಲಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್‌ಗಳ ಸಂಚಾರವು ಕ್ಷೀಣವಾಗಿತ್ತು. ಕೆಲವೇ ಮಂದಿ ಇದ್ದ ಪ್ರಯಾಣಿಕರು ತಮ್ಮ ಲಗೇಜುಗಳನ್ನು ತಲೆ ಮೇಲೆ ಹೊತ್ತು ಸಾಗಿದರು. ವಾಹನ ಸೌಲಭ್ಯವಿಲ್ಲದೆ ಪ್ರಯಾಣಿಕರ ಪರದಾಡಿದರು.

ರೈಲ್ವೆ ನಿಲ್ದಾಣ, ಸರ್ಕಾರಿ ಬಸ್‌ ನಿಲ್ದಾಣ ಮತ್ತು ಖಾಸಗಿ ಬಸ್ ನಿಲ್ದಾಣ ಮತ್ತು ಟೌನ್ ಹಾಲ್‌ನಲ್ಲಿ ಜನರ ಓಡಾಟ ವಿರಳವಾಗಿತ್ತು. ಶಾಲಾ ಕಾಲೇಜುಗಳು, ಚಿತ್ರಮಂದಿರಗಳು, ಸಭೆ ಸಮಾರಂಭಗಳು ನಡೆಸುವುದಕ್ಕೆ ನಿರ್ಬಂಧ ವಿಧಿಸಿದ್ದರಿಂದ ಎಲ್ಲೆಡೆಯೂ ಬಂದ್ ವಾತಾವರಣವಿತ್ತು. ಹೋಟೆಲ್‌ಗಳು, ಬೇಕರಿಗಳು ಮತ್ತು ಅಂಗಡಿ ಮಳಿಗೆಗಳಿಗೆ ಭೇಟಿ ನೀಡುವವರ ಸಂಖ್ಯೆಯೂ ಕೊರೋನಾ ಭೀತಿಯಿಂದ ಕಡಿಮೆಯಾಗಿದೆ.

ರಾಜ್ಯ ಸರ್ಕಾರ ಕೊರೋನಾ ವೈರಸ್ ಹರಡದಂತೆ ನಿಯಂತ್ರಣ ಹೇರಿರುವುದಕ್ಕೆ ಬಹುತೇಕರು ವಿರೋಧ ವ್ಯಕ್ತಪಡಿಸುತ್ತಿರುವುದು ಸಾಮಾನ್ಯವಾಗಿದೆ. ಕೊರೊನಾ ವೈರಸ್ ಬಾದಿತರು ದೇಶದಲ್ಲಿ ಕಂಡು ಬರುತ್ತಿದ್ದಂತೆಯೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರೆ ಸ್ವಲ್ಪ ಪ್ರಮಾಣದಲ್ಲಾದರೂ ನಿಯಂತ್ರಿಸಬಹುದಿತ್ತು. ಆದರೆ 70ಕ್ಕೂ ಹೆಚ್ಚು ಪ್ರಕರಣಗಳು ಪತ್ರೆಯಾದ ನಂತರ ಬಹಳ ತಡವಾಗಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಈಗ ರಜೆ ನೀಡುವುದರಿಂದ ಪ್ರಯೋಜವಾಗುವುದಿಲ್ಲ. ರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ. ಸರ್ಕಾರ ಮಾಸ್ಕ್‌ಗಳನ್ನು ಧರಿಸಬೇಕು ಎಂದು ಹೇಳುತ್ತದೆ ಆದರೆ ಯಾವ ಭಾಗದಲ್ಲೂ ಮಾಸ್ಕ್ ಗಳು ದೊರೆಯುತ್ತಿಲ್ಲ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದೆ.

ಹೋಟೆಲ್ ಉದ್ಯಮ ಲಾಸ್ ಆಗುತ್ತಿದೆ. ಕಟ್ಟಡ ಕಾರ್ಮಿಕರು, ದಿನಗೂಲಿ ನೌಕರರಿಗೆ ಕೆಲಸ  ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಧ್ಯಮಗಲು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಇದೇ ಕಾರಣಕ್ಕೆ ಜನರು ಮತ್ತಷ್ಟು ಭಯಗ್ರಸ್ತರಾಗಿದ್ದಾರೆ. ರಾಜ್ಯದಲ್ಲಿ ಏನಾಗುತ್ತಿದೆ ಎಂದು ತಿಳಿಯುತ್ತಲೇ ಇಲ್ಲ. ಕೊರೋನ ವೈರಸ್ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತುಹೋಗುವ ಭೀತಿ ಎದುರಾಗಿದೆ. ಸರ್ಕಾರಗಳು ಜನರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ ಎಂದು ರಂಗಸ್ವಾಮಿ ಆರೋಪಿಸಿದರು.

ಬೀದಿಬದಿ ವ್ಯಾಪಾರಿಗಳು, ಹಣ್ಣಿನ ವ್ಯಾಪಾರಿಗಳು, ಕಾಫಿ ಟೀ ಅಂಗಡಿಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ. ಟೌನ್ ಹಾಲ್‌ನಲ್ಲಿ ಶೆಟ್ಟಿಹಳ್ಳಿ ಟೀ ಸ್ಟಾಲ್ ತುಮಕೂರಿನಲ್ಲೇ ಪ್ರಸಿದ್ದವಾದುದು. ಒಳ್ಳೆಯ ಟೀ ಕೊಡುತ್ತಿದ್ದರು. ಅದೇ ಕಾರಣಕ್ಕೆ ಜನರು ಹುಡುಕಿಕೊಂಡು ಹೋಗಿ ಶೆಟ್ಟಿಹಳ್ಳಿ ಟೀ ಸ್ಟಾಲ್ ನಲ್ಲಿ ಬಗೆಬಗೆಯ ಟೀ ಸವಿಯುತ್ತಿದ್ದರು. ಕೋವಿಡ್-19 ಬಂದ ಮೇಲೆ ಜನರೇ ಇಲ್ಲದಂತಾಗಿದೆ. ನಮಗೆ ವ್ಯಾಪಾರ ನಡೆಯುತ್ತಿಲ್ಲ. ಜೀವನ ನಡೆಯಬೇಕಲ್ಲ.ಅಂಗಡಿ ತೆರೆದಿದ್ದೇನೆ. ಜನರು ಬರುತ್ತಿಲ್ಲ. ಎಲ್ಲ ಭಯ ಬಿದ್ದಿದ್ದಾರೆ ಸರ್ ಎಂದು ನಗುತ್ತಲೇ ಹೇಳುತ್ತಾರೆ ಟೀ ಸ್ಟಾಲ್ ಉಮೇಶ್.

ಒಟ್ಟಾರೆ ಕೊರೊನಾ ವೈರಸ್ ಸುದ್ದಿ ಹರಡುತ್ತಿರುವ ವೇಗದಲ್ಲಿಯೇ ವ್ಯಾಪಾರ-ವಹಿವಾಟು ಕುಸಿಯುತ್ತಿದೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಸರ್ಕಾರಕ್ಕೆ ಬರಬೇಕಾದ ಪರೋಕ್ಷ ತೆರಿಗೆಯ ಪ್ರಮಾಣದಲ್ಲೂ ಇಳಿಕೆ ಕಂಡುಬರುತ್ತದೆ. ಸರ್ಕಾರವನ್ನು ನಡೆಸುವುದು ಕಷ್ಟವಾಗುತ್ತದೆ. ಕೇಂದ್ರ ಸರ್ಕಾರವೂ ತನ್ನ ಪಾಲಿನ ಹಣವನ್ನು ನೀಡುತ್ತಿಲ್ಲ. ಕೊರೋನಾ ವೈರಸ್ ಆರ್ಥಿಕ ವ್ಯವಸ್ಥೆ ಮತ್ತಷ್ಟು ಕುಸಿಯಲು ಕಾರಣವಾಗಬಹುದು. ಹೀಗಾಗಿ ಸರ್ಕಾರ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಜನರನ್ನು ಬೀತಿಯಿಂದ ಹೊರತರಬೇಕು. ವ್ಯಾಪಾರ ವಹಿವಾಟು ಮತ್ತು ಆರ್ಥಿಕ ಚೇತರಿಕೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಸಮಸ್ಯೆ ಎದುರಿಸಲು ಸಾಧ್ಯವಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯ ಗರ್ಭಪಾತ ಮಾಡಿದ ಆರೋಪದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ...

ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ : ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೋರಿದ್ದ ಮಹಿಳೆಯ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿರುವ ಮಹಿಳೆಯೊಬ್ಬರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಏ.10) ತಿರಸ್ಕರಿಸಿದೆ ಎಂದು ಕಾನೂನು...

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...