Homeಮುಖಪುಟರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ ಅನ್ನುತ್ತಾರೆ ತುಮಕೂರು ಜನ..

ರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ ಅನ್ನುತ್ತಾರೆ ತುಮಕೂರು ಜನ..

ಕೊರೋನ ವೈರಸ್ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತುಹೋಗುವ ಭೀತಿ ಎದುರಾಗಿದೆ. ಸರ್ಕಾರಗಳು ಜನರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ ಎನ್ನುತ್ತಾರೆ ರಂಗಸ್ವಾಮಿ...

- Advertisement -
- Advertisement -

ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರ ಒಂದು ವಾರ ರಜೆ ಘೋಷಣೆ ಮಾಡಿರುವ ಬೆನ್ನಲ್ಲೇ ಜನರು ಕೂಡ ಮನೆಯಿಂದ ಹೊರಬಂದಿಲ್ಲ. ಬಿಸಿಲು, ಧೂಳು ಮತ್ತು ಕೊರೋನ ವೈರಸ್ ಭೀತಿಯಿಂದ ತುಮಕೂರು ನಗರದಲ್ಲಿ ಅಘೋಷಿತ ಬಂದ್ ವಾತಾವರಣ ಕಂಡುಬಂತು. ಸಾರ್ವಜನಿಕ ಸ್ಥಳಗಳು ಬಿಕೋ ಎನ್ನುತ್ತಿದ್ದವು. ಎರಡನೇ ಶನಿವಾರದ ಹಿನ್ನೆಲೆಯಲ್ಲಿ ಎಲ್ಲೆಡೆ ರಜೆಯ ವಾತಾವರಣವಿತ್ತು.

ಜನರಿಂದ ಗಿಜಿಗುಡುತ್ತಿದ್ದ ಬಿ.ಎಚ್.ರಸ್ತೆ, ಅಶೋಕ ರಸ್ತೆ, ಎಂ.ಜಿ.ರಸ್ತೆ, ಸೋಮೇಶ್ವರಪುರಂ ರಸ್ತೆ, ರೈಲ್ವೆ ಸ್ಟೇಷನ್ ರಸ್ತೆಗಳಲ್ಲಿ ಜನರೇ ಕಂಡುಬರಲಿಲ್ಲ. ಆಟೋಗಳು ಕೂಡ ರಸ್ತೆಗೆ ಇಳಿದಿರಲಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್‌ಗಳ ಸಂಚಾರವು ಕ್ಷೀಣವಾಗಿತ್ತು. ಕೆಲವೇ ಮಂದಿ ಇದ್ದ ಪ್ರಯಾಣಿಕರು ತಮ್ಮ ಲಗೇಜುಗಳನ್ನು ತಲೆ ಮೇಲೆ ಹೊತ್ತು ಸಾಗಿದರು. ವಾಹನ ಸೌಲಭ್ಯವಿಲ್ಲದೆ ಪ್ರಯಾಣಿಕರ ಪರದಾಡಿದರು.

ರೈಲ್ವೆ ನಿಲ್ದಾಣ, ಸರ್ಕಾರಿ ಬಸ್‌ ನಿಲ್ದಾಣ ಮತ್ತು ಖಾಸಗಿ ಬಸ್ ನಿಲ್ದಾಣ ಮತ್ತು ಟೌನ್ ಹಾಲ್‌ನಲ್ಲಿ ಜನರ ಓಡಾಟ ವಿರಳವಾಗಿತ್ತು. ಶಾಲಾ ಕಾಲೇಜುಗಳು, ಚಿತ್ರಮಂದಿರಗಳು, ಸಭೆ ಸಮಾರಂಭಗಳು ನಡೆಸುವುದಕ್ಕೆ ನಿರ್ಬಂಧ ವಿಧಿಸಿದ್ದರಿಂದ ಎಲ್ಲೆಡೆಯೂ ಬಂದ್ ವಾತಾವರಣವಿತ್ತು. ಹೋಟೆಲ್‌ಗಳು, ಬೇಕರಿಗಳು ಮತ್ತು ಅಂಗಡಿ ಮಳಿಗೆಗಳಿಗೆ ಭೇಟಿ ನೀಡುವವರ ಸಂಖ್ಯೆಯೂ ಕೊರೋನಾ ಭೀತಿಯಿಂದ ಕಡಿಮೆಯಾಗಿದೆ.

ರಾಜ್ಯ ಸರ್ಕಾರ ಕೊರೋನಾ ವೈರಸ್ ಹರಡದಂತೆ ನಿಯಂತ್ರಣ ಹೇರಿರುವುದಕ್ಕೆ ಬಹುತೇಕರು ವಿರೋಧ ವ್ಯಕ್ತಪಡಿಸುತ್ತಿರುವುದು ಸಾಮಾನ್ಯವಾಗಿದೆ. ಕೊರೊನಾ ವೈರಸ್ ಬಾದಿತರು ದೇಶದಲ್ಲಿ ಕಂಡು ಬರುತ್ತಿದ್ದಂತೆಯೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರೆ ಸ್ವಲ್ಪ ಪ್ರಮಾಣದಲ್ಲಾದರೂ ನಿಯಂತ್ರಿಸಬಹುದಿತ್ತು. ಆದರೆ 70ಕ್ಕೂ ಹೆಚ್ಚು ಪ್ರಕರಣಗಳು ಪತ್ರೆಯಾದ ನಂತರ ಬಹಳ ತಡವಾಗಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಈಗ ರಜೆ ನೀಡುವುದರಿಂದ ಪ್ರಯೋಜವಾಗುವುದಿಲ್ಲ. ರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ. ಸರ್ಕಾರ ಮಾಸ್ಕ್‌ಗಳನ್ನು ಧರಿಸಬೇಕು ಎಂದು ಹೇಳುತ್ತದೆ ಆದರೆ ಯಾವ ಭಾಗದಲ್ಲೂ ಮಾಸ್ಕ್ ಗಳು ದೊರೆಯುತ್ತಿಲ್ಲ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದೆ.

ಹೋಟೆಲ್ ಉದ್ಯಮ ಲಾಸ್ ಆಗುತ್ತಿದೆ. ಕಟ್ಟಡ ಕಾರ್ಮಿಕರು, ದಿನಗೂಲಿ ನೌಕರರಿಗೆ ಕೆಲಸ  ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಧ್ಯಮಗಲು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಇದೇ ಕಾರಣಕ್ಕೆ ಜನರು ಮತ್ತಷ್ಟು ಭಯಗ್ರಸ್ತರಾಗಿದ್ದಾರೆ. ರಾಜ್ಯದಲ್ಲಿ ಏನಾಗುತ್ತಿದೆ ಎಂದು ತಿಳಿಯುತ್ತಲೇ ಇಲ್ಲ. ಕೊರೋನ ವೈರಸ್ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತುಹೋಗುವ ಭೀತಿ ಎದುರಾಗಿದೆ. ಸರ್ಕಾರಗಳು ಜನರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ ಎಂದು ರಂಗಸ್ವಾಮಿ ಆರೋಪಿಸಿದರು.

ಬೀದಿಬದಿ ವ್ಯಾಪಾರಿಗಳು, ಹಣ್ಣಿನ ವ್ಯಾಪಾರಿಗಳು, ಕಾಫಿ ಟೀ ಅಂಗಡಿಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ. ಟೌನ್ ಹಾಲ್‌ನಲ್ಲಿ ಶೆಟ್ಟಿಹಳ್ಳಿ ಟೀ ಸ್ಟಾಲ್ ತುಮಕೂರಿನಲ್ಲೇ ಪ್ರಸಿದ್ದವಾದುದು. ಒಳ್ಳೆಯ ಟೀ ಕೊಡುತ್ತಿದ್ದರು. ಅದೇ ಕಾರಣಕ್ಕೆ ಜನರು ಹುಡುಕಿಕೊಂಡು ಹೋಗಿ ಶೆಟ್ಟಿಹಳ್ಳಿ ಟೀ ಸ್ಟಾಲ್ ನಲ್ಲಿ ಬಗೆಬಗೆಯ ಟೀ ಸವಿಯುತ್ತಿದ್ದರು. ಕೋವಿಡ್-19 ಬಂದ ಮೇಲೆ ಜನರೇ ಇಲ್ಲದಂತಾಗಿದೆ. ನಮಗೆ ವ್ಯಾಪಾರ ನಡೆಯುತ್ತಿಲ್ಲ. ಜೀವನ ನಡೆಯಬೇಕಲ್ಲ.ಅಂಗಡಿ ತೆರೆದಿದ್ದೇನೆ. ಜನರು ಬರುತ್ತಿಲ್ಲ. ಎಲ್ಲ ಭಯ ಬಿದ್ದಿದ್ದಾರೆ ಸರ್ ಎಂದು ನಗುತ್ತಲೇ ಹೇಳುತ್ತಾರೆ ಟೀ ಸ್ಟಾಲ್ ಉಮೇಶ್.

ಒಟ್ಟಾರೆ ಕೊರೊನಾ ವೈರಸ್ ಸುದ್ದಿ ಹರಡುತ್ತಿರುವ ವೇಗದಲ್ಲಿಯೇ ವ್ಯಾಪಾರ-ವಹಿವಾಟು ಕುಸಿಯುತ್ತಿದೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಸರ್ಕಾರಕ್ಕೆ ಬರಬೇಕಾದ ಪರೋಕ್ಷ ತೆರಿಗೆಯ ಪ್ರಮಾಣದಲ್ಲೂ ಇಳಿಕೆ ಕಂಡುಬರುತ್ತದೆ. ಸರ್ಕಾರವನ್ನು ನಡೆಸುವುದು ಕಷ್ಟವಾಗುತ್ತದೆ. ಕೇಂದ್ರ ಸರ್ಕಾರವೂ ತನ್ನ ಪಾಲಿನ ಹಣವನ್ನು ನೀಡುತ್ತಿಲ್ಲ. ಕೊರೋನಾ ವೈರಸ್ ಆರ್ಥಿಕ ವ್ಯವಸ್ಥೆ ಮತ್ತಷ್ಟು ಕುಸಿಯಲು ಕಾರಣವಾಗಬಹುದು. ಹೀಗಾಗಿ ಸರ್ಕಾರ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಜನರನ್ನು ಬೀತಿಯಿಂದ ಹೊರತರಬೇಕು. ವ್ಯಾಪಾರ ವಹಿವಾಟು ಮತ್ತು ಆರ್ಥಿಕ ಚೇತರಿಕೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಸಮಸ್ಯೆ ಎದುರಿಸಲು ಸಾಧ್ಯವಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...