Homeಮುಖಪುಟರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ ಅನ್ನುತ್ತಾರೆ ತುಮಕೂರು ಜನ..

ರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ ಅನ್ನುತ್ತಾರೆ ತುಮಕೂರು ಜನ..

ಕೊರೋನ ವೈರಸ್ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತುಹೋಗುವ ಭೀತಿ ಎದುರಾಗಿದೆ. ಸರ್ಕಾರಗಳು ಜನರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ ಎನ್ನುತ್ತಾರೆ ರಂಗಸ್ವಾಮಿ...

- Advertisement -
- Advertisement -

ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರ ಒಂದು ವಾರ ರಜೆ ಘೋಷಣೆ ಮಾಡಿರುವ ಬೆನ್ನಲ್ಲೇ ಜನರು ಕೂಡ ಮನೆಯಿಂದ ಹೊರಬಂದಿಲ್ಲ. ಬಿಸಿಲು, ಧೂಳು ಮತ್ತು ಕೊರೋನ ವೈರಸ್ ಭೀತಿಯಿಂದ ತುಮಕೂರು ನಗರದಲ್ಲಿ ಅಘೋಷಿತ ಬಂದ್ ವಾತಾವರಣ ಕಂಡುಬಂತು. ಸಾರ್ವಜನಿಕ ಸ್ಥಳಗಳು ಬಿಕೋ ಎನ್ನುತ್ತಿದ್ದವು. ಎರಡನೇ ಶನಿವಾರದ ಹಿನ್ನೆಲೆಯಲ್ಲಿ ಎಲ್ಲೆಡೆ ರಜೆಯ ವಾತಾವರಣವಿತ್ತು.

ಜನರಿಂದ ಗಿಜಿಗುಡುತ್ತಿದ್ದ ಬಿ.ಎಚ್.ರಸ್ತೆ, ಅಶೋಕ ರಸ್ತೆ, ಎಂ.ಜಿ.ರಸ್ತೆ, ಸೋಮೇಶ್ವರಪುರಂ ರಸ್ತೆ, ರೈಲ್ವೆ ಸ್ಟೇಷನ್ ರಸ್ತೆಗಳಲ್ಲಿ ಜನರೇ ಕಂಡುಬರಲಿಲ್ಲ. ಆಟೋಗಳು ಕೂಡ ರಸ್ತೆಗೆ ಇಳಿದಿರಲಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್‌ಗಳ ಸಂಚಾರವು ಕ್ಷೀಣವಾಗಿತ್ತು. ಕೆಲವೇ ಮಂದಿ ಇದ್ದ ಪ್ರಯಾಣಿಕರು ತಮ್ಮ ಲಗೇಜುಗಳನ್ನು ತಲೆ ಮೇಲೆ ಹೊತ್ತು ಸಾಗಿದರು. ವಾಹನ ಸೌಲಭ್ಯವಿಲ್ಲದೆ ಪ್ರಯಾಣಿಕರ ಪರದಾಡಿದರು.

ರೈಲ್ವೆ ನಿಲ್ದಾಣ, ಸರ್ಕಾರಿ ಬಸ್‌ ನಿಲ್ದಾಣ ಮತ್ತು ಖಾಸಗಿ ಬಸ್ ನಿಲ್ದಾಣ ಮತ್ತು ಟೌನ್ ಹಾಲ್‌ನಲ್ಲಿ ಜನರ ಓಡಾಟ ವಿರಳವಾಗಿತ್ತು. ಶಾಲಾ ಕಾಲೇಜುಗಳು, ಚಿತ್ರಮಂದಿರಗಳು, ಸಭೆ ಸಮಾರಂಭಗಳು ನಡೆಸುವುದಕ್ಕೆ ನಿರ್ಬಂಧ ವಿಧಿಸಿದ್ದರಿಂದ ಎಲ್ಲೆಡೆಯೂ ಬಂದ್ ವಾತಾವರಣವಿತ್ತು. ಹೋಟೆಲ್‌ಗಳು, ಬೇಕರಿಗಳು ಮತ್ತು ಅಂಗಡಿ ಮಳಿಗೆಗಳಿಗೆ ಭೇಟಿ ನೀಡುವವರ ಸಂಖ್ಯೆಯೂ ಕೊರೋನಾ ಭೀತಿಯಿಂದ ಕಡಿಮೆಯಾಗಿದೆ.

ರಾಜ್ಯ ಸರ್ಕಾರ ಕೊರೋನಾ ವೈರಸ್ ಹರಡದಂತೆ ನಿಯಂತ್ರಣ ಹೇರಿರುವುದಕ್ಕೆ ಬಹುತೇಕರು ವಿರೋಧ ವ್ಯಕ್ತಪಡಿಸುತ್ತಿರುವುದು ಸಾಮಾನ್ಯವಾಗಿದೆ. ಕೊರೊನಾ ವೈರಸ್ ಬಾದಿತರು ದೇಶದಲ್ಲಿ ಕಂಡು ಬರುತ್ತಿದ್ದಂತೆಯೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರೆ ಸ್ವಲ್ಪ ಪ್ರಮಾಣದಲ್ಲಾದರೂ ನಿಯಂತ್ರಿಸಬಹುದಿತ್ತು. ಆದರೆ 70ಕ್ಕೂ ಹೆಚ್ಚು ಪ್ರಕರಣಗಳು ಪತ್ರೆಯಾದ ನಂತರ ಬಹಳ ತಡವಾಗಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಈಗ ರಜೆ ನೀಡುವುದರಿಂದ ಪ್ರಯೋಜವಾಗುವುದಿಲ್ಲ. ರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ. ಸರ್ಕಾರ ಮಾಸ್ಕ್‌ಗಳನ್ನು ಧರಿಸಬೇಕು ಎಂದು ಹೇಳುತ್ತದೆ ಆದರೆ ಯಾವ ಭಾಗದಲ್ಲೂ ಮಾಸ್ಕ್ ಗಳು ದೊರೆಯುತ್ತಿಲ್ಲ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದೆ.

ಹೋಟೆಲ್ ಉದ್ಯಮ ಲಾಸ್ ಆಗುತ್ತಿದೆ. ಕಟ್ಟಡ ಕಾರ್ಮಿಕರು, ದಿನಗೂಲಿ ನೌಕರರಿಗೆ ಕೆಲಸ  ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಧ್ಯಮಗಲು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಇದೇ ಕಾರಣಕ್ಕೆ ಜನರು ಮತ್ತಷ್ಟು ಭಯಗ್ರಸ್ತರಾಗಿದ್ದಾರೆ. ರಾಜ್ಯದಲ್ಲಿ ಏನಾಗುತ್ತಿದೆ ಎಂದು ತಿಳಿಯುತ್ತಲೇ ಇಲ್ಲ. ಕೊರೋನ ವೈರಸ್ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತುಹೋಗುವ ಭೀತಿ ಎದುರಾಗಿದೆ. ಸರ್ಕಾರಗಳು ಜನರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ ಎಂದು ರಂಗಸ್ವಾಮಿ ಆರೋಪಿಸಿದರು.

ಬೀದಿಬದಿ ವ್ಯಾಪಾರಿಗಳು, ಹಣ್ಣಿನ ವ್ಯಾಪಾರಿಗಳು, ಕಾಫಿ ಟೀ ಅಂಗಡಿಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ. ಟೌನ್ ಹಾಲ್‌ನಲ್ಲಿ ಶೆಟ್ಟಿಹಳ್ಳಿ ಟೀ ಸ್ಟಾಲ್ ತುಮಕೂರಿನಲ್ಲೇ ಪ್ರಸಿದ್ದವಾದುದು. ಒಳ್ಳೆಯ ಟೀ ಕೊಡುತ್ತಿದ್ದರು. ಅದೇ ಕಾರಣಕ್ಕೆ ಜನರು ಹುಡುಕಿಕೊಂಡು ಹೋಗಿ ಶೆಟ್ಟಿಹಳ್ಳಿ ಟೀ ಸ್ಟಾಲ್ ನಲ್ಲಿ ಬಗೆಬಗೆಯ ಟೀ ಸವಿಯುತ್ತಿದ್ದರು. ಕೋವಿಡ್-19 ಬಂದ ಮೇಲೆ ಜನರೇ ಇಲ್ಲದಂತಾಗಿದೆ. ನಮಗೆ ವ್ಯಾಪಾರ ನಡೆಯುತ್ತಿಲ್ಲ. ಜೀವನ ನಡೆಯಬೇಕಲ್ಲ.ಅಂಗಡಿ ತೆರೆದಿದ್ದೇನೆ. ಜನರು ಬರುತ್ತಿಲ್ಲ. ಎಲ್ಲ ಭಯ ಬಿದ್ದಿದ್ದಾರೆ ಸರ್ ಎಂದು ನಗುತ್ತಲೇ ಹೇಳುತ್ತಾರೆ ಟೀ ಸ್ಟಾಲ್ ಉಮೇಶ್.

ಒಟ್ಟಾರೆ ಕೊರೊನಾ ವೈರಸ್ ಸುದ್ದಿ ಹರಡುತ್ತಿರುವ ವೇಗದಲ್ಲಿಯೇ ವ್ಯಾಪಾರ-ವಹಿವಾಟು ಕುಸಿಯುತ್ತಿದೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಸರ್ಕಾರಕ್ಕೆ ಬರಬೇಕಾದ ಪರೋಕ್ಷ ತೆರಿಗೆಯ ಪ್ರಮಾಣದಲ್ಲೂ ಇಳಿಕೆ ಕಂಡುಬರುತ್ತದೆ. ಸರ್ಕಾರವನ್ನು ನಡೆಸುವುದು ಕಷ್ಟವಾಗುತ್ತದೆ. ಕೇಂದ್ರ ಸರ್ಕಾರವೂ ತನ್ನ ಪಾಲಿನ ಹಣವನ್ನು ನೀಡುತ್ತಿಲ್ಲ. ಕೊರೋನಾ ವೈರಸ್ ಆರ್ಥಿಕ ವ್ಯವಸ್ಥೆ ಮತ್ತಷ್ಟು ಕುಸಿಯಲು ಕಾರಣವಾಗಬಹುದು. ಹೀಗಾಗಿ ಸರ್ಕಾರ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಜನರನ್ನು ಬೀತಿಯಿಂದ ಹೊರತರಬೇಕು. ವ್ಯಾಪಾರ ವಹಿವಾಟು ಮತ್ತು ಆರ್ಥಿಕ ಚೇತರಿಕೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಸಮಸ್ಯೆ ಎದುರಿಸಲು ಸಾಧ್ಯವಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...