Homeಮುಖಪುಟರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ ಅನ್ನುತ್ತಾರೆ ತುಮಕೂರು ಜನ..

ರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ ಅನ್ನುತ್ತಾರೆ ತುಮಕೂರು ಜನ..

ಕೊರೋನ ವೈರಸ್ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತುಹೋಗುವ ಭೀತಿ ಎದುರಾಗಿದೆ. ಸರ್ಕಾರಗಳು ಜನರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ ಎನ್ನುತ್ತಾರೆ ರಂಗಸ್ವಾಮಿ...

- Advertisement -
- Advertisement -

ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರ ಒಂದು ವಾರ ರಜೆ ಘೋಷಣೆ ಮಾಡಿರುವ ಬೆನ್ನಲ್ಲೇ ಜನರು ಕೂಡ ಮನೆಯಿಂದ ಹೊರಬಂದಿಲ್ಲ. ಬಿಸಿಲು, ಧೂಳು ಮತ್ತು ಕೊರೋನ ವೈರಸ್ ಭೀತಿಯಿಂದ ತುಮಕೂರು ನಗರದಲ್ಲಿ ಅಘೋಷಿತ ಬಂದ್ ವಾತಾವರಣ ಕಂಡುಬಂತು. ಸಾರ್ವಜನಿಕ ಸ್ಥಳಗಳು ಬಿಕೋ ಎನ್ನುತ್ತಿದ್ದವು. ಎರಡನೇ ಶನಿವಾರದ ಹಿನ್ನೆಲೆಯಲ್ಲಿ ಎಲ್ಲೆಡೆ ರಜೆಯ ವಾತಾವರಣವಿತ್ತು.

ಜನರಿಂದ ಗಿಜಿಗುಡುತ್ತಿದ್ದ ಬಿ.ಎಚ್.ರಸ್ತೆ, ಅಶೋಕ ರಸ್ತೆ, ಎಂ.ಜಿ.ರಸ್ತೆ, ಸೋಮೇಶ್ವರಪುರಂ ರಸ್ತೆ, ರೈಲ್ವೆ ಸ್ಟೇಷನ್ ರಸ್ತೆಗಳಲ್ಲಿ ಜನರೇ ಕಂಡುಬರಲಿಲ್ಲ. ಆಟೋಗಳು ಕೂಡ ರಸ್ತೆಗೆ ಇಳಿದಿರಲಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್‌ಗಳ ಸಂಚಾರವು ಕ್ಷೀಣವಾಗಿತ್ತು. ಕೆಲವೇ ಮಂದಿ ಇದ್ದ ಪ್ರಯಾಣಿಕರು ತಮ್ಮ ಲಗೇಜುಗಳನ್ನು ತಲೆ ಮೇಲೆ ಹೊತ್ತು ಸಾಗಿದರು. ವಾಹನ ಸೌಲಭ್ಯವಿಲ್ಲದೆ ಪ್ರಯಾಣಿಕರ ಪರದಾಡಿದರು.

ರೈಲ್ವೆ ನಿಲ್ದಾಣ, ಸರ್ಕಾರಿ ಬಸ್‌ ನಿಲ್ದಾಣ ಮತ್ತು ಖಾಸಗಿ ಬಸ್ ನಿಲ್ದಾಣ ಮತ್ತು ಟೌನ್ ಹಾಲ್‌ನಲ್ಲಿ ಜನರ ಓಡಾಟ ವಿರಳವಾಗಿತ್ತು. ಶಾಲಾ ಕಾಲೇಜುಗಳು, ಚಿತ್ರಮಂದಿರಗಳು, ಸಭೆ ಸಮಾರಂಭಗಳು ನಡೆಸುವುದಕ್ಕೆ ನಿರ್ಬಂಧ ವಿಧಿಸಿದ್ದರಿಂದ ಎಲ್ಲೆಡೆಯೂ ಬಂದ್ ವಾತಾವರಣವಿತ್ತು. ಹೋಟೆಲ್‌ಗಳು, ಬೇಕರಿಗಳು ಮತ್ತು ಅಂಗಡಿ ಮಳಿಗೆಗಳಿಗೆ ಭೇಟಿ ನೀಡುವವರ ಸಂಖ್ಯೆಯೂ ಕೊರೋನಾ ಭೀತಿಯಿಂದ ಕಡಿಮೆಯಾಗಿದೆ.

ರಾಜ್ಯ ಸರ್ಕಾರ ಕೊರೋನಾ ವೈರಸ್ ಹರಡದಂತೆ ನಿಯಂತ್ರಣ ಹೇರಿರುವುದಕ್ಕೆ ಬಹುತೇಕರು ವಿರೋಧ ವ್ಯಕ್ತಪಡಿಸುತ್ತಿರುವುದು ಸಾಮಾನ್ಯವಾಗಿದೆ. ಕೊರೊನಾ ವೈರಸ್ ಬಾದಿತರು ದೇಶದಲ್ಲಿ ಕಂಡು ಬರುತ್ತಿದ್ದಂತೆಯೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರೆ ಸ್ವಲ್ಪ ಪ್ರಮಾಣದಲ್ಲಾದರೂ ನಿಯಂತ್ರಿಸಬಹುದಿತ್ತು. ಆದರೆ 70ಕ್ಕೂ ಹೆಚ್ಚು ಪ್ರಕರಣಗಳು ಪತ್ರೆಯಾದ ನಂತರ ಬಹಳ ತಡವಾಗಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಈಗ ರಜೆ ನೀಡುವುದರಿಂದ ಪ್ರಯೋಜವಾಗುವುದಿಲ್ಲ. ರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ. ಸರ್ಕಾರ ಮಾಸ್ಕ್‌ಗಳನ್ನು ಧರಿಸಬೇಕು ಎಂದು ಹೇಳುತ್ತದೆ ಆದರೆ ಯಾವ ಭಾಗದಲ್ಲೂ ಮಾಸ್ಕ್ ಗಳು ದೊರೆಯುತ್ತಿಲ್ಲ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದೆ.

ಹೋಟೆಲ್ ಉದ್ಯಮ ಲಾಸ್ ಆಗುತ್ತಿದೆ. ಕಟ್ಟಡ ಕಾರ್ಮಿಕರು, ದಿನಗೂಲಿ ನೌಕರರಿಗೆ ಕೆಲಸ  ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಧ್ಯಮಗಲು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಇದೇ ಕಾರಣಕ್ಕೆ ಜನರು ಮತ್ತಷ್ಟು ಭಯಗ್ರಸ್ತರಾಗಿದ್ದಾರೆ. ರಾಜ್ಯದಲ್ಲಿ ಏನಾಗುತ್ತಿದೆ ಎಂದು ತಿಳಿಯುತ್ತಲೇ ಇಲ್ಲ. ಕೊರೋನ ವೈರಸ್ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತುಹೋಗುವ ಭೀತಿ ಎದುರಾಗಿದೆ. ಸರ್ಕಾರಗಳು ಜನರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ ಎಂದು ರಂಗಸ್ವಾಮಿ ಆರೋಪಿಸಿದರು.

ಬೀದಿಬದಿ ವ್ಯಾಪಾರಿಗಳು, ಹಣ್ಣಿನ ವ್ಯಾಪಾರಿಗಳು, ಕಾಫಿ ಟೀ ಅಂಗಡಿಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ. ಟೌನ್ ಹಾಲ್‌ನಲ್ಲಿ ಶೆಟ್ಟಿಹಳ್ಳಿ ಟೀ ಸ್ಟಾಲ್ ತುಮಕೂರಿನಲ್ಲೇ ಪ್ರಸಿದ್ದವಾದುದು. ಒಳ್ಳೆಯ ಟೀ ಕೊಡುತ್ತಿದ್ದರು. ಅದೇ ಕಾರಣಕ್ಕೆ ಜನರು ಹುಡುಕಿಕೊಂಡು ಹೋಗಿ ಶೆಟ್ಟಿಹಳ್ಳಿ ಟೀ ಸ್ಟಾಲ್ ನಲ್ಲಿ ಬಗೆಬಗೆಯ ಟೀ ಸವಿಯುತ್ತಿದ್ದರು. ಕೋವಿಡ್-19 ಬಂದ ಮೇಲೆ ಜನರೇ ಇಲ್ಲದಂತಾಗಿದೆ. ನಮಗೆ ವ್ಯಾಪಾರ ನಡೆಯುತ್ತಿಲ್ಲ. ಜೀವನ ನಡೆಯಬೇಕಲ್ಲ.ಅಂಗಡಿ ತೆರೆದಿದ್ದೇನೆ. ಜನರು ಬರುತ್ತಿಲ್ಲ. ಎಲ್ಲ ಭಯ ಬಿದ್ದಿದ್ದಾರೆ ಸರ್ ಎಂದು ನಗುತ್ತಲೇ ಹೇಳುತ್ತಾರೆ ಟೀ ಸ್ಟಾಲ್ ಉಮೇಶ್.

ಒಟ್ಟಾರೆ ಕೊರೊನಾ ವೈರಸ್ ಸುದ್ದಿ ಹರಡುತ್ತಿರುವ ವೇಗದಲ್ಲಿಯೇ ವ್ಯಾಪಾರ-ವಹಿವಾಟು ಕುಸಿಯುತ್ತಿದೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಸರ್ಕಾರಕ್ಕೆ ಬರಬೇಕಾದ ಪರೋಕ್ಷ ತೆರಿಗೆಯ ಪ್ರಮಾಣದಲ್ಲೂ ಇಳಿಕೆ ಕಂಡುಬರುತ್ತದೆ. ಸರ್ಕಾರವನ್ನು ನಡೆಸುವುದು ಕಷ್ಟವಾಗುತ್ತದೆ. ಕೇಂದ್ರ ಸರ್ಕಾರವೂ ತನ್ನ ಪಾಲಿನ ಹಣವನ್ನು ನೀಡುತ್ತಿಲ್ಲ. ಕೊರೋನಾ ವೈರಸ್ ಆರ್ಥಿಕ ವ್ಯವಸ್ಥೆ ಮತ್ತಷ್ಟು ಕುಸಿಯಲು ಕಾರಣವಾಗಬಹುದು. ಹೀಗಾಗಿ ಸರ್ಕಾರ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಜನರನ್ನು ಬೀತಿಯಿಂದ ಹೊರತರಬೇಕು. ವ್ಯಾಪಾರ ವಹಿವಾಟು ಮತ್ತು ಆರ್ಥಿಕ ಚೇತರಿಕೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಸಮಸ್ಯೆ ಎದುರಿಸಲು ಸಾಧ್ಯವಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...