Homeಮುಖಪುಟರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ ಅನ್ನುತ್ತಾರೆ ತುಮಕೂರು ಜನ..

ರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ ಅನ್ನುತ್ತಾರೆ ತುಮಕೂರು ಜನ..

ಕೊರೋನ ವೈರಸ್ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತುಹೋಗುವ ಭೀತಿ ಎದುರಾಗಿದೆ. ಸರ್ಕಾರಗಳು ಜನರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ ಎನ್ನುತ್ತಾರೆ ರಂಗಸ್ವಾಮಿ...

- Advertisement -
- Advertisement -

ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರ ಒಂದು ವಾರ ರಜೆ ಘೋಷಣೆ ಮಾಡಿರುವ ಬೆನ್ನಲ್ಲೇ ಜನರು ಕೂಡ ಮನೆಯಿಂದ ಹೊರಬಂದಿಲ್ಲ. ಬಿಸಿಲು, ಧೂಳು ಮತ್ತು ಕೊರೋನ ವೈರಸ್ ಭೀತಿಯಿಂದ ತುಮಕೂರು ನಗರದಲ್ಲಿ ಅಘೋಷಿತ ಬಂದ್ ವಾತಾವರಣ ಕಂಡುಬಂತು. ಸಾರ್ವಜನಿಕ ಸ್ಥಳಗಳು ಬಿಕೋ ಎನ್ನುತ್ತಿದ್ದವು. ಎರಡನೇ ಶನಿವಾರದ ಹಿನ್ನೆಲೆಯಲ್ಲಿ ಎಲ್ಲೆಡೆ ರಜೆಯ ವಾತಾವರಣವಿತ್ತು.

ಜನರಿಂದ ಗಿಜಿಗುಡುತ್ತಿದ್ದ ಬಿ.ಎಚ್.ರಸ್ತೆ, ಅಶೋಕ ರಸ್ತೆ, ಎಂ.ಜಿ.ರಸ್ತೆ, ಸೋಮೇಶ್ವರಪುರಂ ರಸ್ತೆ, ರೈಲ್ವೆ ಸ್ಟೇಷನ್ ರಸ್ತೆಗಳಲ್ಲಿ ಜನರೇ ಕಂಡುಬರಲಿಲ್ಲ. ಆಟೋಗಳು ಕೂಡ ರಸ್ತೆಗೆ ಇಳಿದಿರಲಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್‌ಗಳ ಸಂಚಾರವು ಕ್ಷೀಣವಾಗಿತ್ತು. ಕೆಲವೇ ಮಂದಿ ಇದ್ದ ಪ್ರಯಾಣಿಕರು ತಮ್ಮ ಲಗೇಜುಗಳನ್ನು ತಲೆ ಮೇಲೆ ಹೊತ್ತು ಸಾಗಿದರು. ವಾಹನ ಸೌಲಭ್ಯವಿಲ್ಲದೆ ಪ್ರಯಾಣಿಕರ ಪರದಾಡಿದರು.

ರೈಲ್ವೆ ನಿಲ್ದಾಣ, ಸರ್ಕಾರಿ ಬಸ್‌ ನಿಲ್ದಾಣ ಮತ್ತು ಖಾಸಗಿ ಬಸ್ ನಿಲ್ದಾಣ ಮತ್ತು ಟೌನ್ ಹಾಲ್‌ನಲ್ಲಿ ಜನರ ಓಡಾಟ ವಿರಳವಾಗಿತ್ತು. ಶಾಲಾ ಕಾಲೇಜುಗಳು, ಚಿತ್ರಮಂದಿರಗಳು, ಸಭೆ ಸಮಾರಂಭಗಳು ನಡೆಸುವುದಕ್ಕೆ ನಿರ್ಬಂಧ ವಿಧಿಸಿದ್ದರಿಂದ ಎಲ್ಲೆಡೆಯೂ ಬಂದ್ ವಾತಾವರಣವಿತ್ತು. ಹೋಟೆಲ್‌ಗಳು, ಬೇಕರಿಗಳು ಮತ್ತು ಅಂಗಡಿ ಮಳಿಗೆಗಳಿಗೆ ಭೇಟಿ ನೀಡುವವರ ಸಂಖ್ಯೆಯೂ ಕೊರೋನಾ ಭೀತಿಯಿಂದ ಕಡಿಮೆಯಾಗಿದೆ.

ರಾಜ್ಯ ಸರ್ಕಾರ ಕೊರೋನಾ ವೈರಸ್ ಹರಡದಂತೆ ನಿಯಂತ್ರಣ ಹೇರಿರುವುದಕ್ಕೆ ಬಹುತೇಕರು ವಿರೋಧ ವ್ಯಕ್ತಪಡಿಸುತ್ತಿರುವುದು ಸಾಮಾನ್ಯವಾಗಿದೆ. ಕೊರೊನಾ ವೈರಸ್ ಬಾದಿತರು ದೇಶದಲ್ಲಿ ಕಂಡು ಬರುತ್ತಿದ್ದಂತೆಯೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರೆ ಸ್ವಲ್ಪ ಪ್ರಮಾಣದಲ್ಲಾದರೂ ನಿಯಂತ್ರಿಸಬಹುದಿತ್ತು. ಆದರೆ 70ಕ್ಕೂ ಹೆಚ್ಚು ಪ್ರಕರಣಗಳು ಪತ್ರೆಯಾದ ನಂತರ ಬಹಳ ತಡವಾಗಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಈಗ ರಜೆ ನೀಡುವುದರಿಂದ ಪ್ರಯೋಜವಾಗುವುದಿಲ್ಲ. ರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ. ಸರ್ಕಾರ ಮಾಸ್ಕ್‌ಗಳನ್ನು ಧರಿಸಬೇಕು ಎಂದು ಹೇಳುತ್ತದೆ ಆದರೆ ಯಾವ ಭಾಗದಲ್ಲೂ ಮಾಸ್ಕ್ ಗಳು ದೊರೆಯುತ್ತಿಲ್ಲ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದೆ.

ಹೋಟೆಲ್ ಉದ್ಯಮ ಲಾಸ್ ಆಗುತ್ತಿದೆ. ಕಟ್ಟಡ ಕಾರ್ಮಿಕರು, ದಿನಗೂಲಿ ನೌಕರರಿಗೆ ಕೆಲಸ  ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಧ್ಯಮಗಲು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಇದೇ ಕಾರಣಕ್ಕೆ ಜನರು ಮತ್ತಷ್ಟು ಭಯಗ್ರಸ್ತರಾಗಿದ್ದಾರೆ. ರಾಜ್ಯದಲ್ಲಿ ಏನಾಗುತ್ತಿದೆ ಎಂದು ತಿಳಿಯುತ್ತಲೇ ಇಲ್ಲ. ಕೊರೋನ ವೈರಸ್ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತುಹೋಗುವ ಭೀತಿ ಎದುರಾಗಿದೆ. ಸರ್ಕಾರಗಳು ಜನರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ ಎಂದು ರಂಗಸ್ವಾಮಿ ಆರೋಪಿಸಿದರು.

ಬೀದಿಬದಿ ವ್ಯಾಪಾರಿಗಳು, ಹಣ್ಣಿನ ವ್ಯಾಪಾರಿಗಳು, ಕಾಫಿ ಟೀ ಅಂಗಡಿಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ. ಟೌನ್ ಹಾಲ್‌ನಲ್ಲಿ ಶೆಟ್ಟಿಹಳ್ಳಿ ಟೀ ಸ್ಟಾಲ್ ತುಮಕೂರಿನಲ್ಲೇ ಪ್ರಸಿದ್ದವಾದುದು. ಒಳ್ಳೆಯ ಟೀ ಕೊಡುತ್ತಿದ್ದರು. ಅದೇ ಕಾರಣಕ್ಕೆ ಜನರು ಹುಡುಕಿಕೊಂಡು ಹೋಗಿ ಶೆಟ್ಟಿಹಳ್ಳಿ ಟೀ ಸ್ಟಾಲ್ ನಲ್ಲಿ ಬಗೆಬಗೆಯ ಟೀ ಸವಿಯುತ್ತಿದ್ದರು. ಕೋವಿಡ್-19 ಬಂದ ಮೇಲೆ ಜನರೇ ಇಲ್ಲದಂತಾಗಿದೆ. ನಮಗೆ ವ್ಯಾಪಾರ ನಡೆಯುತ್ತಿಲ್ಲ. ಜೀವನ ನಡೆಯಬೇಕಲ್ಲ.ಅಂಗಡಿ ತೆರೆದಿದ್ದೇನೆ. ಜನರು ಬರುತ್ತಿಲ್ಲ. ಎಲ್ಲ ಭಯ ಬಿದ್ದಿದ್ದಾರೆ ಸರ್ ಎಂದು ನಗುತ್ತಲೇ ಹೇಳುತ್ತಾರೆ ಟೀ ಸ್ಟಾಲ್ ಉಮೇಶ್.

ಒಟ್ಟಾರೆ ಕೊರೊನಾ ವೈರಸ್ ಸುದ್ದಿ ಹರಡುತ್ತಿರುವ ವೇಗದಲ್ಲಿಯೇ ವ್ಯಾಪಾರ-ವಹಿವಾಟು ಕುಸಿಯುತ್ತಿದೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಸರ್ಕಾರಕ್ಕೆ ಬರಬೇಕಾದ ಪರೋಕ್ಷ ತೆರಿಗೆಯ ಪ್ರಮಾಣದಲ್ಲೂ ಇಳಿಕೆ ಕಂಡುಬರುತ್ತದೆ. ಸರ್ಕಾರವನ್ನು ನಡೆಸುವುದು ಕಷ್ಟವಾಗುತ್ತದೆ. ಕೇಂದ್ರ ಸರ್ಕಾರವೂ ತನ್ನ ಪಾಲಿನ ಹಣವನ್ನು ನೀಡುತ್ತಿಲ್ಲ. ಕೊರೋನಾ ವೈರಸ್ ಆರ್ಥಿಕ ವ್ಯವಸ್ಥೆ ಮತ್ತಷ್ಟು ಕುಸಿಯಲು ಕಾರಣವಾಗಬಹುದು. ಹೀಗಾಗಿ ಸರ್ಕಾರ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಜನರನ್ನು ಬೀತಿಯಿಂದ ಹೊರತರಬೇಕು. ವ್ಯಾಪಾರ ವಹಿವಾಟು ಮತ್ತು ಆರ್ಥಿಕ ಚೇತರಿಕೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಸಮಸ್ಯೆ ಎದುರಿಸಲು ಸಾಧ್ಯವಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....