Homeಮುಖಪುಟರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ ಅನ್ನುತ್ತಾರೆ ತುಮಕೂರು ಜನ..

ರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ ಅನ್ನುತ್ತಾರೆ ತುಮಕೂರು ಜನ..

ಕೊರೋನ ವೈರಸ್ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತುಹೋಗುವ ಭೀತಿ ಎದುರಾಗಿದೆ. ಸರ್ಕಾರಗಳು ಜನರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ ಎನ್ನುತ್ತಾರೆ ರಂಗಸ್ವಾಮಿ...

- Advertisement -
- Advertisement -

ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರ ಒಂದು ವಾರ ರಜೆ ಘೋಷಣೆ ಮಾಡಿರುವ ಬೆನ್ನಲ್ಲೇ ಜನರು ಕೂಡ ಮನೆಯಿಂದ ಹೊರಬಂದಿಲ್ಲ. ಬಿಸಿಲು, ಧೂಳು ಮತ್ತು ಕೊರೋನ ವೈರಸ್ ಭೀತಿಯಿಂದ ತುಮಕೂರು ನಗರದಲ್ಲಿ ಅಘೋಷಿತ ಬಂದ್ ವಾತಾವರಣ ಕಂಡುಬಂತು. ಸಾರ್ವಜನಿಕ ಸ್ಥಳಗಳು ಬಿಕೋ ಎನ್ನುತ್ತಿದ್ದವು. ಎರಡನೇ ಶನಿವಾರದ ಹಿನ್ನೆಲೆಯಲ್ಲಿ ಎಲ್ಲೆಡೆ ರಜೆಯ ವಾತಾವರಣವಿತ್ತು.

ಜನರಿಂದ ಗಿಜಿಗುಡುತ್ತಿದ್ದ ಬಿ.ಎಚ್.ರಸ್ತೆ, ಅಶೋಕ ರಸ್ತೆ, ಎಂ.ಜಿ.ರಸ್ತೆ, ಸೋಮೇಶ್ವರಪುರಂ ರಸ್ತೆ, ರೈಲ್ವೆ ಸ್ಟೇಷನ್ ರಸ್ತೆಗಳಲ್ಲಿ ಜನರೇ ಕಂಡುಬರಲಿಲ್ಲ. ಆಟೋಗಳು ಕೂಡ ರಸ್ತೆಗೆ ಇಳಿದಿರಲಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್‌ಗಳ ಸಂಚಾರವು ಕ್ಷೀಣವಾಗಿತ್ತು. ಕೆಲವೇ ಮಂದಿ ಇದ್ದ ಪ್ರಯಾಣಿಕರು ತಮ್ಮ ಲಗೇಜುಗಳನ್ನು ತಲೆ ಮೇಲೆ ಹೊತ್ತು ಸಾಗಿದರು. ವಾಹನ ಸೌಲಭ್ಯವಿಲ್ಲದೆ ಪ್ರಯಾಣಿಕರ ಪರದಾಡಿದರು.

ರೈಲ್ವೆ ನಿಲ್ದಾಣ, ಸರ್ಕಾರಿ ಬಸ್‌ ನಿಲ್ದಾಣ ಮತ್ತು ಖಾಸಗಿ ಬಸ್ ನಿಲ್ದಾಣ ಮತ್ತು ಟೌನ್ ಹಾಲ್‌ನಲ್ಲಿ ಜನರ ಓಡಾಟ ವಿರಳವಾಗಿತ್ತು. ಶಾಲಾ ಕಾಲೇಜುಗಳು, ಚಿತ್ರಮಂದಿರಗಳು, ಸಭೆ ಸಮಾರಂಭಗಳು ನಡೆಸುವುದಕ್ಕೆ ನಿರ್ಬಂಧ ವಿಧಿಸಿದ್ದರಿಂದ ಎಲ್ಲೆಡೆಯೂ ಬಂದ್ ವಾತಾವರಣವಿತ್ತು. ಹೋಟೆಲ್‌ಗಳು, ಬೇಕರಿಗಳು ಮತ್ತು ಅಂಗಡಿ ಮಳಿಗೆಗಳಿಗೆ ಭೇಟಿ ನೀಡುವವರ ಸಂಖ್ಯೆಯೂ ಕೊರೋನಾ ಭೀತಿಯಿಂದ ಕಡಿಮೆಯಾಗಿದೆ.

ರಾಜ್ಯ ಸರ್ಕಾರ ಕೊರೋನಾ ವೈರಸ್ ಹರಡದಂತೆ ನಿಯಂತ್ರಣ ಹೇರಿರುವುದಕ್ಕೆ ಬಹುತೇಕರು ವಿರೋಧ ವ್ಯಕ್ತಪಡಿಸುತ್ತಿರುವುದು ಸಾಮಾನ್ಯವಾಗಿದೆ. ಕೊರೊನಾ ವೈರಸ್ ಬಾದಿತರು ದೇಶದಲ್ಲಿ ಕಂಡು ಬರುತ್ತಿದ್ದಂತೆಯೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರೆ ಸ್ವಲ್ಪ ಪ್ರಮಾಣದಲ್ಲಾದರೂ ನಿಯಂತ್ರಿಸಬಹುದಿತ್ತು. ಆದರೆ 70ಕ್ಕೂ ಹೆಚ್ಚು ಪ್ರಕರಣಗಳು ಪತ್ರೆಯಾದ ನಂತರ ಬಹಳ ತಡವಾಗಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಈಗ ರಜೆ ನೀಡುವುದರಿಂದ ಪ್ರಯೋಜವಾಗುವುದಿಲ್ಲ. ರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ. ಸರ್ಕಾರ ಮಾಸ್ಕ್‌ಗಳನ್ನು ಧರಿಸಬೇಕು ಎಂದು ಹೇಳುತ್ತದೆ ಆದರೆ ಯಾವ ಭಾಗದಲ್ಲೂ ಮಾಸ್ಕ್ ಗಳು ದೊರೆಯುತ್ತಿಲ್ಲ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದೆ.

ಹೋಟೆಲ್ ಉದ್ಯಮ ಲಾಸ್ ಆಗುತ್ತಿದೆ. ಕಟ್ಟಡ ಕಾರ್ಮಿಕರು, ದಿನಗೂಲಿ ನೌಕರರಿಗೆ ಕೆಲಸ  ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಧ್ಯಮಗಲು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಇದೇ ಕಾರಣಕ್ಕೆ ಜನರು ಮತ್ತಷ್ಟು ಭಯಗ್ರಸ್ತರಾಗಿದ್ದಾರೆ. ರಾಜ್ಯದಲ್ಲಿ ಏನಾಗುತ್ತಿದೆ ಎಂದು ತಿಳಿಯುತ್ತಲೇ ಇಲ್ಲ. ಕೊರೋನ ವೈರಸ್ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತುಹೋಗುವ ಭೀತಿ ಎದುರಾಗಿದೆ. ಸರ್ಕಾರಗಳು ಜನರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ ಎಂದು ರಂಗಸ್ವಾಮಿ ಆರೋಪಿಸಿದರು.

ಬೀದಿಬದಿ ವ್ಯಾಪಾರಿಗಳು, ಹಣ್ಣಿನ ವ್ಯಾಪಾರಿಗಳು, ಕಾಫಿ ಟೀ ಅಂಗಡಿಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ. ಟೌನ್ ಹಾಲ್‌ನಲ್ಲಿ ಶೆಟ್ಟಿಹಳ್ಳಿ ಟೀ ಸ್ಟಾಲ್ ತುಮಕೂರಿನಲ್ಲೇ ಪ್ರಸಿದ್ದವಾದುದು. ಒಳ್ಳೆಯ ಟೀ ಕೊಡುತ್ತಿದ್ದರು. ಅದೇ ಕಾರಣಕ್ಕೆ ಜನರು ಹುಡುಕಿಕೊಂಡು ಹೋಗಿ ಶೆಟ್ಟಿಹಳ್ಳಿ ಟೀ ಸ್ಟಾಲ್ ನಲ್ಲಿ ಬಗೆಬಗೆಯ ಟೀ ಸವಿಯುತ್ತಿದ್ದರು. ಕೋವಿಡ್-19 ಬಂದ ಮೇಲೆ ಜನರೇ ಇಲ್ಲದಂತಾಗಿದೆ. ನಮಗೆ ವ್ಯಾಪಾರ ನಡೆಯುತ್ತಿಲ್ಲ. ಜೀವನ ನಡೆಯಬೇಕಲ್ಲ.ಅಂಗಡಿ ತೆರೆದಿದ್ದೇನೆ. ಜನರು ಬರುತ್ತಿಲ್ಲ. ಎಲ್ಲ ಭಯ ಬಿದ್ದಿದ್ದಾರೆ ಸರ್ ಎಂದು ನಗುತ್ತಲೇ ಹೇಳುತ್ತಾರೆ ಟೀ ಸ್ಟಾಲ್ ಉಮೇಶ್.

ಒಟ್ಟಾರೆ ಕೊರೊನಾ ವೈರಸ್ ಸುದ್ದಿ ಹರಡುತ್ತಿರುವ ವೇಗದಲ್ಲಿಯೇ ವ್ಯಾಪಾರ-ವಹಿವಾಟು ಕುಸಿಯುತ್ತಿದೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಸರ್ಕಾರಕ್ಕೆ ಬರಬೇಕಾದ ಪರೋಕ್ಷ ತೆರಿಗೆಯ ಪ್ರಮಾಣದಲ್ಲೂ ಇಳಿಕೆ ಕಂಡುಬರುತ್ತದೆ. ಸರ್ಕಾರವನ್ನು ನಡೆಸುವುದು ಕಷ್ಟವಾಗುತ್ತದೆ. ಕೇಂದ್ರ ಸರ್ಕಾರವೂ ತನ್ನ ಪಾಲಿನ ಹಣವನ್ನು ನೀಡುತ್ತಿಲ್ಲ. ಕೊರೋನಾ ವೈರಸ್ ಆರ್ಥಿಕ ವ್ಯವಸ್ಥೆ ಮತ್ತಷ್ಟು ಕುಸಿಯಲು ಕಾರಣವಾಗಬಹುದು. ಹೀಗಾಗಿ ಸರ್ಕಾರ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಜನರನ್ನು ಬೀತಿಯಿಂದ ಹೊರತರಬೇಕು. ವ್ಯಾಪಾರ ವಹಿವಾಟು ಮತ್ತು ಆರ್ಥಿಕ ಚೇತರಿಕೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಸಮಸ್ಯೆ ಎದುರಿಸಲು ಸಾಧ್ಯವಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...