Homeಮುಖಪುಟಕೋವಿಡ್ -19 ರೂಪಾಂತರಿ 'ಜೆಎನ್ 1' ಕೇರಳದಲ್ಲಿ ಪತ್ತೆ; ಎಷ್ಟು ಅಪಾಯಕಾರಿ?

ಕೋವಿಡ್ -19 ರೂಪಾಂತರಿ ‘ಜೆಎನ್ 1’ ಕೇರಳದಲ್ಲಿ ಪತ್ತೆ; ಎಷ್ಟು ಅಪಾಯಕಾರಿ?

- Advertisement -
- Advertisement -

ಕೇರಳದ ಮಹಿಳೆಯೊಬ್ಬರಲ್ಲಿ ಕೋವಿಡ್ -19 ಉಪ ರೂಪಾಂತರಿ ಜೆಎನ್ 1 (JN-1) ವೈರಾಣು ಡಿಸೆಂಬರ್ 8 ರಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. 79 ವರ್ಷದ ಮಹಿಳೆಗೆ ನ.18 ರಂದು ನಡೆಸಿದ ಆರ್‌ಟಿ-ಪಿಸಿಆರ್ ಪರೀಕ್ಷೆಯಲ್ಲಿ ರೂಪಾಂತರಿ ಜೆಎನ್ 1 ಪತ್ತೆಯಾಗಿದ್ದು, ಅವರಲ್ಲಿ ಇನ್ಫ್ಲುಯೆನ್ಜಾ ಮಾದರಿಯ ರೋಗ ಲಕ್ಷಣಗಳು ಕಂಡುಬಂದಿತ್ತು. ಚಿಕಿತ್ಸೆ ನಂತರ ಅವರು ಕೋವಿಡ್ -19ನಿಂದ ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿ ಪ್ರಸ್ತುತ ಪತ್ತೆಯಾಗುತ್ತಿರುವ ಕೋವಿಡ್ -19 ಪ್ರಕರಣಗಳಲ್ಲಿ 90% ಕ್ಕಿಂತ ಹೆಚ್ಚು ಪ್ರಕರಣಗಳನ್ನು ಸೌಮ್ಯ ಎಂದು ವರ್ಗೀಕರಿಸಲಾಗಿದೆ. ಬಹುತೇಕ ಸೋಂಕಿತರು ತಮ್ಮ ಮನೆಗಳಲ್ಲೇ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಪಡೆದುಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸುತ್ತಿದೆ.

ಕೆಲವು ದಿನಗಳ ಹಿಂದೆ ಸಿಂಗಾಪುರದಿಂದ ತಮಿಳುನಾಡಿನ ತಿರುಚಿರಾಪಳ್ಳಿಗೆ ಪ್ರಯಾಣಿಸಿದ್ದ ವ್ಯಕ್ತಿಯೊಬ್ಬರಲ್ಲಿ ಜೆಎನ್ 1 ರೂಪಾಂತರಿ ಕಾಣಿಸಿಕೊಂಡಿತ್ತು. ಅವರು ಗುಣಮುಖರಾದ ನಂತರ ತಮಿಳುನಾಡಿನ ಇತರೆ ಪ್ರದೇಶಗಳಲ್ಲಿ ಈ ರೂಪಾಂತರಿ ವೈರಸ್ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿಲ್ಲ.

ಚೀನಾದಲ್ಲಿ ಏಳು ಪ್ರಕರಣ ಪತ್ತೆ:

ಕೋವಿಡ್-19 ರೂಪಾಂತರಿ ಜೆಎನ್ 1ರ ಏಳು ಪಾಸಿಟಿವ್ ಪ್ರಕರಣಗಳು ಚೀನಾದಲ್ಲಿ ಪತ್ತೆಯಾಗಿದೆ ಎಂದು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಆದರೆ, ರೂಪಾಂತರಿ ವೈರಾಣು ಹರಡುವಿಕೆ ಮಟ್ಟವು ಮಾತ್ರ ತುಂಬಾ ಕಡಿಮೆ ಇದೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ. ವಿದೇಶದಿಂದ ಬಂದಿರುವ ವೈರಾಣುಗಳು ಚೀನಾದಲ್ಲಿ ಪ್ರಬಲವಾಗುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಜೆಎನ್ 1 ಎಂದರೇನು?

‘ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್’ (ಸಿಡಿಸಿ) ಪ್ರಕಾರ, ಕೋವಿಡ್-19 ಜ್ವರಕ್ಕೆ ಕಾರಣವಾಗುವ ವೈರಸ್‌ನ ರೂಪಾಂತರವಾದ ಜೆಎನ್ 1, ಬಿಎ.2.86ರ ರೂಪಾಂತರದ ಮಾದರಿಯಾಗಿದೆ. ಸಿಡಿಸಿ ಪ್ರಕಾರ, ಸ್ಪೈಕ್ ಪ್ರೊಟೀನ್‌ನಲ್ಲಿ JN.1 ಮತ್ತು BA.2.86 ನಡುವೆ ಒಂದೇ ಒಂದು ಬದಲಾವಣೆ ಮಾತ್ರ ಇದೆ ಎನ್ನಲಾಗಿದೆ.

ವೈರಾಣು ಪತ್ತೆಯಾಯಾಗಿದ್ದು ಯಾವಾಗ?

ಈ ವೈರಾಣುವನ್ನು ಮೊದಲ ಬಾರಿಗೆ ಅಮೆರಿಕಾದಲ್ಲಿ ಸೆಪ್ಟೆಂಬರ್ 2023 ರಂದು ಪತ್ತೆ ಮಾಡಲಾಯಿತು. ಡಿಸೆಂಬರ್ 8 ರ ಹೊತ್ತಿಗೆ, ಅಮೆರಿಕಾದ ಸಾರ್ವಜನಿಕ ಆರೋಗ್ಯ ಸಂಸ್ಥೆಯು JN.1 ರೂಪಾಂತರವು ದೇಶದ ಒಟ್ಟು ಪ್ರಕರಣಗಳಲ್ಲಿ ಶೇ.15-29ರ ನಡುವೆ ಇರುತ್ತದೆ ಎಂದು ಅಂದಾಜಿಸಿದೆ.

ಭಾರತದಲ್ಲಿದೆಯಾ ಜೆಎನ್ 1?

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಹೊಸ ಕೊರೋನ ವೈರಸ್ ರೂಪಾಂತರವನ್ನು ಮೊದಲು ಡಿಸೆಂಬರ್ 13 ರಂದು ಕೇರಳದಲ್ಲಿ ಕಂಡುಹಿಡಿಯಲಾಗಿದೆ. ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG) ಯ ಇತ್ತೀಚಿನ ಮಾಹಿತಿಯು ಕೇರಳದಲ್ಲಿ ಪತ್ತೆಯಾಗಿರುವ ಬಗ್ಗೆ ದೃಢಪಡಿಸಿದೆ.

ನ್ಯಾಶನಲ್ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಕೋವಿಡ್ ಟಾಸ್ಕ್ ಫೋರ್ಸ್‌ನ ಸಹ-ಅಧ್ಯಕ್ಷ ಡಾ. ರಾಜೀವ್ ಜಯದೇವನ್ ಮಾತನಾಡಿ, ಪ್ರಸ್ತುತ 1,296 ರಷ್ಟಿರುವ ಭಾರತದ ಕೋವಿಡ್ ಪ್ರಕರಣಗಳ ಇತ್ತೀಚಿಗೆ ಉಲ್ಬಣಿಸುತ್ತಿರುವುದಕ್ಕೆ ಜೆಎನ್.1 ಕಾರಣವಾಗಿರಬಹುದು’ ಎಂದು ಹೇಳಿದ್ದಾರೆ.

ರೂಪಾಂತರದ ಲಕ್ಷಣಗಳೇನು?

ಸಿಡಿಸಿಯ ಪ್ರಕಾರ, ಕೊರೊನಾ ವೈರಸ್‌ನ ಜೆಎನ್.1 ರೂಪಾಂತರವು ಇತರ ರೂಪಾಂತರಗಳಿಗಿಂತ ವಿಭಿನ್ನ ರೋಗಲಕ್ಷಣಗಳನ್ನು ಉಂಟುಮಾಡುತ್ತದೆಯಾ ಎಂಬ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ರೋಗ ಲಕ್ಷಣಗಳ ಪ್ರಕಾರಗಳು ಮತ್ತು ಅವು ಎಷ್ಟು ತೀವ್ರವಾಗಿರುತ್ತವೆ ಎಂಬುದು ಸಾಮಾನ್ಯವಾಗಿ ವ್ಯಕ್ತಿಯ ರೋಗನಿರೋಧಕ ಶಕ್ತಿ ಮತ್ತು ಒಟ್ಟಾರೆ ಆರೋಗ್ಯದ ಮೇಲೆ ಹೆಚ್ಚು ಅವಲಂಬಿತವಾಗಿರುತ್ತದೆ ಎಂದು ಹೇಳಿದೆ.

ಇದನ್ನೂ ಓದಿ; ಬೆಂಕಿ ಹಚ್ಚಿಕೊಳ್ಳಲು ಯೋಚಿಸಿದ್ದರಾ ಲೋಕಸಭೆ ಭದ್ರತೆ ಉಲ್ಲಂಘಿಸಿದ ಆರೋಪಿಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...