Homeಮುಖಪುಟಕೋವಿಡ್ -19 ರೂಪಾಂತರಿ 'ಜೆಎನ್ 1' ಕೇರಳದಲ್ಲಿ ಪತ್ತೆ; ಎಷ್ಟು ಅಪಾಯಕಾರಿ?

ಕೋವಿಡ್ -19 ರೂಪಾಂತರಿ ‘ಜೆಎನ್ 1’ ಕೇರಳದಲ್ಲಿ ಪತ್ತೆ; ಎಷ್ಟು ಅಪಾಯಕಾರಿ?

- Advertisement -
- Advertisement -

ಕೇರಳದ ಮಹಿಳೆಯೊಬ್ಬರಲ್ಲಿ ಕೋವಿಡ್ -19 ಉಪ ರೂಪಾಂತರಿ ಜೆಎನ್ 1 (JN-1) ವೈರಾಣು ಡಿಸೆಂಬರ್ 8 ರಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. 79 ವರ್ಷದ ಮಹಿಳೆಗೆ ನ.18 ರಂದು ನಡೆಸಿದ ಆರ್‌ಟಿ-ಪಿಸಿಆರ್ ಪರೀಕ್ಷೆಯಲ್ಲಿ ರೂಪಾಂತರಿ ಜೆಎನ್ 1 ಪತ್ತೆಯಾಗಿದ್ದು, ಅವರಲ್ಲಿ ಇನ್ಫ್ಲುಯೆನ್ಜಾ ಮಾದರಿಯ ರೋಗ ಲಕ್ಷಣಗಳು ಕಂಡುಬಂದಿತ್ತು. ಚಿಕಿತ್ಸೆ ನಂತರ ಅವರು ಕೋವಿಡ್ -19ನಿಂದ ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿ ಪ್ರಸ್ತುತ ಪತ್ತೆಯಾಗುತ್ತಿರುವ ಕೋವಿಡ್ -19 ಪ್ರಕರಣಗಳಲ್ಲಿ 90% ಕ್ಕಿಂತ ಹೆಚ್ಚು ಪ್ರಕರಣಗಳನ್ನು ಸೌಮ್ಯ ಎಂದು ವರ್ಗೀಕರಿಸಲಾಗಿದೆ. ಬಹುತೇಕ ಸೋಂಕಿತರು ತಮ್ಮ ಮನೆಗಳಲ್ಲೇ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಪಡೆದುಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸುತ್ತಿದೆ.

ಕೆಲವು ದಿನಗಳ ಹಿಂದೆ ಸಿಂಗಾಪುರದಿಂದ ತಮಿಳುನಾಡಿನ ತಿರುಚಿರಾಪಳ್ಳಿಗೆ ಪ್ರಯಾಣಿಸಿದ್ದ ವ್ಯಕ್ತಿಯೊಬ್ಬರಲ್ಲಿ ಜೆಎನ್ 1 ರೂಪಾಂತರಿ ಕಾಣಿಸಿಕೊಂಡಿತ್ತು. ಅವರು ಗುಣಮುಖರಾದ ನಂತರ ತಮಿಳುನಾಡಿನ ಇತರೆ ಪ್ರದೇಶಗಳಲ್ಲಿ ಈ ರೂಪಾಂತರಿ ವೈರಸ್ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿಲ್ಲ.

ಚೀನಾದಲ್ಲಿ ಏಳು ಪ್ರಕರಣ ಪತ್ತೆ:

ಕೋವಿಡ್-19 ರೂಪಾಂತರಿ ಜೆಎನ್ 1ರ ಏಳು ಪಾಸಿಟಿವ್ ಪ್ರಕರಣಗಳು ಚೀನಾದಲ್ಲಿ ಪತ್ತೆಯಾಗಿದೆ ಎಂದು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಆದರೆ, ರೂಪಾಂತರಿ ವೈರಾಣು ಹರಡುವಿಕೆ ಮಟ್ಟವು ಮಾತ್ರ ತುಂಬಾ ಕಡಿಮೆ ಇದೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ. ವಿದೇಶದಿಂದ ಬಂದಿರುವ ವೈರಾಣುಗಳು ಚೀನಾದಲ್ಲಿ ಪ್ರಬಲವಾಗುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಜೆಎನ್ 1 ಎಂದರೇನು?

‘ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್’ (ಸಿಡಿಸಿ) ಪ್ರಕಾರ, ಕೋವಿಡ್-19 ಜ್ವರಕ್ಕೆ ಕಾರಣವಾಗುವ ವೈರಸ್‌ನ ರೂಪಾಂತರವಾದ ಜೆಎನ್ 1, ಬಿಎ.2.86ರ ರೂಪಾಂತರದ ಮಾದರಿಯಾಗಿದೆ. ಸಿಡಿಸಿ ಪ್ರಕಾರ, ಸ್ಪೈಕ್ ಪ್ರೊಟೀನ್‌ನಲ್ಲಿ JN.1 ಮತ್ತು BA.2.86 ನಡುವೆ ಒಂದೇ ಒಂದು ಬದಲಾವಣೆ ಮಾತ್ರ ಇದೆ ಎನ್ನಲಾಗಿದೆ.

ವೈರಾಣು ಪತ್ತೆಯಾಯಾಗಿದ್ದು ಯಾವಾಗ?

ಈ ವೈರಾಣುವನ್ನು ಮೊದಲ ಬಾರಿಗೆ ಅಮೆರಿಕಾದಲ್ಲಿ ಸೆಪ್ಟೆಂಬರ್ 2023 ರಂದು ಪತ್ತೆ ಮಾಡಲಾಯಿತು. ಡಿಸೆಂಬರ್ 8 ರ ಹೊತ್ತಿಗೆ, ಅಮೆರಿಕಾದ ಸಾರ್ವಜನಿಕ ಆರೋಗ್ಯ ಸಂಸ್ಥೆಯು JN.1 ರೂಪಾಂತರವು ದೇಶದ ಒಟ್ಟು ಪ್ರಕರಣಗಳಲ್ಲಿ ಶೇ.15-29ರ ನಡುವೆ ಇರುತ್ತದೆ ಎಂದು ಅಂದಾಜಿಸಿದೆ.

ಭಾರತದಲ್ಲಿದೆಯಾ ಜೆಎನ್ 1?

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಹೊಸ ಕೊರೋನ ವೈರಸ್ ರೂಪಾಂತರವನ್ನು ಮೊದಲು ಡಿಸೆಂಬರ್ 13 ರಂದು ಕೇರಳದಲ್ಲಿ ಕಂಡುಹಿಡಿಯಲಾಗಿದೆ. ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG) ಯ ಇತ್ತೀಚಿನ ಮಾಹಿತಿಯು ಕೇರಳದಲ್ಲಿ ಪತ್ತೆಯಾಗಿರುವ ಬಗ್ಗೆ ದೃಢಪಡಿಸಿದೆ.

ನ್ಯಾಶನಲ್ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಕೋವಿಡ್ ಟಾಸ್ಕ್ ಫೋರ್ಸ್‌ನ ಸಹ-ಅಧ್ಯಕ್ಷ ಡಾ. ರಾಜೀವ್ ಜಯದೇವನ್ ಮಾತನಾಡಿ, ಪ್ರಸ್ತುತ 1,296 ರಷ್ಟಿರುವ ಭಾರತದ ಕೋವಿಡ್ ಪ್ರಕರಣಗಳ ಇತ್ತೀಚಿಗೆ ಉಲ್ಬಣಿಸುತ್ತಿರುವುದಕ್ಕೆ ಜೆಎನ್.1 ಕಾರಣವಾಗಿರಬಹುದು’ ಎಂದು ಹೇಳಿದ್ದಾರೆ.

ರೂಪಾಂತರದ ಲಕ್ಷಣಗಳೇನು?

ಸಿಡಿಸಿಯ ಪ್ರಕಾರ, ಕೊರೊನಾ ವೈರಸ್‌ನ ಜೆಎನ್.1 ರೂಪಾಂತರವು ಇತರ ರೂಪಾಂತರಗಳಿಗಿಂತ ವಿಭಿನ್ನ ರೋಗಲಕ್ಷಣಗಳನ್ನು ಉಂಟುಮಾಡುತ್ತದೆಯಾ ಎಂಬ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ರೋಗ ಲಕ್ಷಣಗಳ ಪ್ರಕಾರಗಳು ಮತ್ತು ಅವು ಎಷ್ಟು ತೀವ್ರವಾಗಿರುತ್ತವೆ ಎಂಬುದು ಸಾಮಾನ್ಯವಾಗಿ ವ್ಯಕ್ತಿಯ ರೋಗನಿರೋಧಕ ಶಕ್ತಿ ಮತ್ತು ಒಟ್ಟಾರೆ ಆರೋಗ್ಯದ ಮೇಲೆ ಹೆಚ್ಚು ಅವಲಂಬಿತವಾಗಿರುತ್ತದೆ ಎಂದು ಹೇಳಿದೆ.

ಇದನ್ನೂ ಓದಿ; ಬೆಂಕಿ ಹಚ್ಚಿಕೊಳ್ಳಲು ಯೋಚಿಸಿದ್ದರಾ ಲೋಕಸಭೆ ಭದ್ರತೆ ಉಲ್ಲಂಘಿಸಿದ ಆರೋಪಿಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...