Homeಮುಖಪುಟಕೋವಿಡ್ -19 ರೂಪಾಂತರಿ 'ಜೆಎನ್ 1' ಕೇರಳದಲ್ಲಿ ಪತ್ತೆ; ಎಷ್ಟು ಅಪಾಯಕಾರಿ?

ಕೋವಿಡ್ -19 ರೂಪಾಂತರಿ ‘ಜೆಎನ್ 1’ ಕೇರಳದಲ್ಲಿ ಪತ್ತೆ; ಎಷ್ಟು ಅಪಾಯಕಾರಿ?

- Advertisement -
- Advertisement -

ಕೇರಳದ ಮಹಿಳೆಯೊಬ್ಬರಲ್ಲಿ ಕೋವಿಡ್ -19 ಉಪ ರೂಪಾಂತರಿ ಜೆಎನ್ 1 (JN-1) ವೈರಾಣು ಡಿಸೆಂಬರ್ 8 ರಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. 79 ವರ್ಷದ ಮಹಿಳೆಗೆ ನ.18 ರಂದು ನಡೆಸಿದ ಆರ್‌ಟಿ-ಪಿಸಿಆರ್ ಪರೀಕ್ಷೆಯಲ್ಲಿ ರೂಪಾಂತರಿ ಜೆಎನ್ 1 ಪತ್ತೆಯಾಗಿದ್ದು, ಅವರಲ್ಲಿ ಇನ್ಫ್ಲುಯೆನ್ಜಾ ಮಾದರಿಯ ರೋಗ ಲಕ್ಷಣಗಳು ಕಂಡುಬಂದಿತ್ತು. ಚಿಕಿತ್ಸೆ ನಂತರ ಅವರು ಕೋವಿಡ್ -19ನಿಂದ ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿ ಪ್ರಸ್ತುತ ಪತ್ತೆಯಾಗುತ್ತಿರುವ ಕೋವಿಡ್ -19 ಪ್ರಕರಣಗಳಲ್ಲಿ 90% ಕ್ಕಿಂತ ಹೆಚ್ಚು ಪ್ರಕರಣಗಳನ್ನು ಸೌಮ್ಯ ಎಂದು ವರ್ಗೀಕರಿಸಲಾಗಿದೆ. ಬಹುತೇಕ ಸೋಂಕಿತರು ತಮ್ಮ ಮನೆಗಳಲ್ಲೇ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಪಡೆದುಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸುತ್ತಿದೆ.

ಕೆಲವು ದಿನಗಳ ಹಿಂದೆ ಸಿಂಗಾಪುರದಿಂದ ತಮಿಳುನಾಡಿನ ತಿರುಚಿರಾಪಳ್ಳಿಗೆ ಪ್ರಯಾಣಿಸಿದ್ದ ವ್ಯಕ್ತಿಯೊಬ್ಬರಲ್ಲಿ ಜೆಎನ್ 1 ರೂಪಾಂತರಿ ಕಾಣಿಸಿಕೊಂಡಿತ್ತು. ಅವರು ಗುಣಮುಖರಾದ ನಂತರ ತಮಿಳುನಾಡಿನ ಇತರೆ ಪ್ರದೇಶಗಳಲ್ಲಿ ಈ ರೂಪಾಂತರಿ ವೈರಸ್ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿಲ್ಲ.

ಚೀನಾದಲ್ಲಿ ಏಳು ಪ್ರಕರಣ ಪತ್ತೆ:

ಕೋವಿಡ್-19 ರೂಪಾಂತರಿ ಜೆಎನ್ 1ರ ಏಳು ಪಾಸಿಟಿವ್ ಪ್ರಕರಣಗಳು ಚೀನಾದಲ್ಲಿ ಪತ್ತೆಯಾಗಿದೆ ಎಂದು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಆದರೆ, ರೂಪಾಂತರಿ ವೈರಾಣು ಹರಡುವಿಕೆ ಮಟ್ಟವು ಮಾತ್ರ ತುಂಬಾ ಕಡಿಮೆ ಇದೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ. ವಿದೇಶದಿಂದ ಬಂದಿರುವ ವೈರಾಣುಗಳು ಚೀನಾದಲ್ಲಿ ಪ್ರಬಲವಾಗುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಜೆಎನ್ 1 ಎಂದರೇನು?

‘ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್’ (ಸಿಡಿಸಿ) ಪ್ರಕಾರ, ಕೋವಿಡ್-19 ಜ್ವರಕ್ಕೆ ಕಾರಣವಾಗುವ ವೈರಸ್‌ನ ರೂಪಾಂತರವಾದ ಜೆಎನ್ 1, ಬಿಎ.2.86ರ ರೂಪಾಂತರದ ಮಾದರಿಯಾಗಿದೆ. ಸಿಡಿಸಿ ಪ್ರಕಾರ, ಸ್ಪೈಕ್ ಪ್ರೊಟೀನ್‌ನಲ್ಲಿ JN.1 ಮತ್ತು BA.2.86 ನಡುವೆ ಒಂದೇ ಒಂದು ಬದಲಾವಣೆ ಮಾತ್ರ ಇದೆ ಎನ್ನಲಾಗಿದೆ.

ವೈರಾಣು ಪತ್ತೆಯಾಯಾಗಿದ್ದು ಯಾವಾಗ?

ಈ ವೈರಾಣುವನ್ನು ಮೊದಲ ಬಾರಿಗೆ ಅಮೆರಿಕಾದಲ್ಲಿ ಸೆಪ್ಟೆಂಬರ್ 2023 ರಂದು ಪತ್ತೆ ಮಾಡಲಾಯಿತು. ಡಿಸೆಂಬರ್ 8 ರ ಹೊತ್ತಿಗೆ, ಅಮೆರಿಕಾದ ಸಾರ್ವಜನಿಕ ಆರೋಗ್ಯ ಸಂಸ್ಥೆಯು JN.1 ರೂಪಾಂತರವು ದೇಶದ ಒಟ್ಟು ಪ್ರಕರಣಗಳಲ್ಲಿ ಶೇ.15-29ರ ನಡುವೆ ಇರುತ್ತದೆ ಎಂದು ಅಂದಾಜಿಸಿದೆ.

ಭಾರತದಲ್ಲಿದೆಯಾ ಜೆಎನ್ 1?

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಹೊಸ ಕೊರೋನ ವೈರಸ್ ರೂಪಾಂತರವನ್ನು ಮೊದಲು ಡಿಸೆಂಬರ್ 13 ರಂದು ಕೇರಳದಲ್ಲಿ ಕಂಡುಹಿಡಿಯಲಾಗಿದೆ. ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG) ಯ ಇತ್ತೀಚಿನ ಮಾಹಿತಿಯು ಕೇರಳದಲ್ಲಿ ಪತ್ತೆಯಾಗಿರುವ ಬಗ್ಗೆ ದೃಢಪಡಿಸಿದೆ.

ನ್ಯಾಶನಲ್ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಕೋವಿಡ್ ಟಾಸ್ಕ್ ಫೋರ್ಸ್‌ನ ಸಹ-ಅಧ್ಯಕ್ಷ ಡಾ. ರಾಜೀವ್ ಜಯದೇವನ್ ಮಾತನಾಡಿ, ಪ್ರಸ್ತುತ 1,296 ರಷ್ಟಿರುವ ಭಾರತದ ಕೋವಿಡ್ ಪ್ರಕರಣಗಳ ಇತ್ತೀಚಿಗೆ ಉಲ್ಬಣಿಸುತ್ತಿರುವುದಕ್ಕೆ ಜೆಎನ್.1 ಕಾರಣವಾಗಿರಬಹುದು’ ಎಂದು ಹೇಳಿದ್ದಾರೆ.

ರೂಪಾಂತರದ ಲಕ್ಷಣಗಳೇನು?

ಸಿಡಿಸಿಯ ಪ್ರಕಾರ, ಕೊರೊನಾ ವೈರಸ್‌ನ ಜೆಎನ್.1 ರೂಪಾಂತರವು ಇತರ ರೂಪಾಂತರಗಳಿಗಿಂತ ವಿಭಿನ್ನ ರೋಗಲಕ್ಷಣಗಳನ್ನು ಉಂಟುಮಾಡುತ್ತದೆಯಾ ಎಂಬ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ರೋಗ ಲಕ್ಷಣಗಳ ಪ್ರಕಾರಗಳು ಮತ್ತು ಅವು ಎಷ್ಟು ತೀವ್ರವಾಗಿರುತ್ತವೆ ಎಂಬುದು ಸಾಮಾನ್ಯವಾಗಿ ವ್ಯಕ್ತಿಯ ರೋಗನಿರೋಧಕ ಶಕ್ತಿ ಮತ್ತು ಒಟ್ಟಾರೆ ಆರೋಗ್ಯದ ಮೇಲೆ ಹೆಚ್ಚು ಅವಲಂಬಿತವಾಗಿರುತ್ತದೆ ಎಂದು ಹೇಳಿದೆ.

ಇದನ್ನೂ ಓದಿ; ಬೆಂಕಿ ಹಚ್ಚಿಕೊಳ್ಳಲು ಯೋಚಿಸಿದ್ದರಾ ಲೋಕಸಭೆ ಭದ್ರತೆ ಉಲ್ಲಂಘಿಸಿದ ಆರೋಪಿಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...