Homeಮುಖಪುಟಕೋವಿಡ್ -19 ರೂಪಾಂತರಿ 'ಜೆಎನ್ 1' ಕೇರಳದಲ್ಲಿ ಪತ್ತೆ; ಎಷ್ಟು ಅಪಾಯಕಾರಿ?

ಕೋವಿಡ್ -19 ರೂಪಾಂತರಿ ‘ಜೆಎನ್ 1’ ಕೇರಳದಲ್ಲಿ ಪತ್ತೆ; ಎಷ್ಟು ಅಪಾಯಕಾರಿ?

- Advertisement -
- Advertisement -

ಕೇರಳದ ಮಹಿಳೆಯೊಬ್ಬರಲ್ಲಿ ಕೋವಿಡ್ -19 ಉಪ ರೂಪಾಂತರಿ ಜೆಎನ್ 1 (JN-1) ವೈರಾಣು ಡಿಸೆಂಬರ್ 8 ರಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. 79 ವರ್ಷದ ಮಹಿಳೆಗೆ ನ.18 ರಂದು ನಡೆಸಿದ ಆರ್‌ಟಿ-ಪಿಸಿಆರ್ ಪರೀಕ್ಷೆಯಲ್ಲಿ ರೂಪಾಂತರಿ ಜೆಎನ್ 1 ಪತ್ತೆಯಾಗಿದ್ದು, ಅವರಲ್ಲಿ ಇನ್ಫ್ಲುಯೆನ್ಜಾ ಮಾದರಿಯ ರೋಗ ಲಕ್ಷಣಗಳು ಕಂಡುಬಂದಿತ್ತು. ಚಿಕಿತ್ಸೆ ನಂತರ ಅವರು ಕೋವಿಡ್ -19ನಿಂದ ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿ ಪ್ರಸ್ತುತ ಪತ್ತೆಯಾಗುತ್ತಿರುವ ಕೋವಿಡ್ -19 ಪ್ರಕರಣಗಳಲ್ಲಿ 90% ಕ್ಕಿಂತ ಹೆಚ್ಚು ಪ್ರಕರಣಗಳನ್ನು ಸೌಮ್ಯ ಎಂದು ವರ್ಗೀಕರಿಸಲಾಗಿದೆ. ಬಹುತೇಕ ಸೋಂಕಿತರು ತಮ್ಮ ಮನೆಗಳಲ್ಲೇ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಪಡೆದುಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸುತ್ತಿದೆ.

ಕೆಲವು ದಿನಗಳ ಹಿಂದೆ ಸಿಂಗಾಪುರದಿಂದ ತಮಿಳುನಾಡಿನ ತಿರುಚಿರಾಪಳ್ಳಿಗೆ ಪ್ರಯಾಣಿಸಿದ್ದ ವ್ಯಕ್ತಿಯೊಬ್ಬರಲ್ಲಿ ಜೆಎನ್ 1 ರೂಪಾಂತರಿ ಕಾಣಿಸಿಕೊಂಡಿತ್ತು. ಅವರು ಗುಣಮುಖರಾದ ನಂತರ ತಮಿಳುನಾಡಿನ ಇತರೆ ಪ್ರದೇಶಗಳಲ್ಲಿ ಈ ರೂಪಾಂತರಿ ವೈರಸ್ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿಲ್ಲ.

ಚೀನಾದಲ್ಲಿ ಏಳು ಪ್ರಕರಣ ಪತ್ತೆ:

ಕೋವಿಡ್-19 ರೂಪಾಂತರಿ ಜೆಎನ್ 1ರ ಏಳು ಪಾಸಿಟಿವ್ ಪ್ರಕರಣಗಳು ಚೀನಾದಲ್ಲಿ ಪತ್ತೆಯಾಗಿದೆ ಎಂದು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಆದರೆ, ರೂಪಾಂತರಿ ವೈರಾಣು ಹರಡುವಿಕೆ ಮಟ್ಟವು ಮಾತ್ರ ತುಂಬಾ ಕಡಿಮೆ ಇದೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ. ವಿದೇಶದಿಂದ ಬಂದಿರುವ ವೈರಾಣುಗಳು ಚೀನಾದಲ್ಲಿ ಪ್ರಬಲವಾಗುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಜೆಎನ್ 1 ಎಂದರೇನು?

‘ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್’ (ಸಿಡಿಸಿ) ಪ್ರಕಾರ, ಕೋವಿಡ್-19 ಜ್ವರಕ್ಕೆ ಕಾರಣವಾಗುವ ವೈರಸ್‌ನ ರೂಪಾಂತರವಾದ ಜೆಎನ್ 1, ಬಿಎ.2.86ರ ರೂಪಾಂತರದ ಮಾದರಿಯಾಗಿದೆ. ಸಿಡಿಸಿ ಪ್ರಕಾರ, ಸ್ಪೈಕ್ ಪ್ರೊಟೀನ್‌ನಲ್ಲಿ JN.1 ಮತ್ತು BA.2.86 ನಡುವೆ ಒಂದೇ ಒಂದು ಬದಲಾವಣೆ ಮಾತ್ರ ಇದೆ ಎನ್ನಲಾಗಿದೆ.

ವೈರಾಣು ಪತ್ತೆಯಾಯಾಗಿದ್ದು ಯಾವಾಗ?

ಈ ವೈರಾಣುವನ್ನು ಮೊದಲ ಬಾರಿಗೆ ಅಮೆರಿಕಾದಲ್ಲಿ ಸೆಪ್ಟೆಂಬರ್ 2023 ರಂದು ಪತ್ತೆ ಮಾಡಲಾಯಿತು. ಡಿಸೆಂಬರ್ 8 ರ ಹೊತ್ತಿಗೆ, ಅಮೆರಿಕಾದ ಸಾರ್ವಜನಿಕ ಆರೋಗ್ಯ ಸಂಸ್ಥೆಯು JN.1 ರೂಪಾಂತರವು ದೇಶದ ಒಟ್ಟು ಪ್ರಕರಣಗಳಲ್ಲಿ ಶೇ.15-29ರ ನಡುವೆ ಇರುತ್ತದೆ ಎಂದು ಅಂದಾಜಿಸಿದೆ.

ಭಾರತದಲ್ಲಿದೆಯಾ ಜೆಎನ್ 1?

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಹೊಸ ಕೊರೋನ ವೈರಸ್ ರೂಪಾಂತರವನ್ನು ಮೊದಲು ಡಿಸೆಂಬರ್ 13 ರಂದು ಕೇರಳದಲ್ಲಿ ಕಂಡುಹಿಡಿಯಲಾಗಿದೆ. ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG) ಯ ಇತ್ತೀಚಿನ ಮಾಹಿತಿಯು ಕೇರಳದಲ್ಲಿ ಪತ್ತೆಯಾಗಿರುವ ಬಗ್ಗೆ ದೃಢಪಡಿಸಿದೆ.

ನ್ಯಾಶನಲ್ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಕೋವಿಡ್ ಟಾಸ್ಕ್ ಫೋರ್ಸ್‌ನ ಸಹ-ಅಧ್ಯಕ್ಷ ಡಾ. ರಾಜೀವ್ ಜಯದೇವನ್ ಮಾತನಾಡಿ, ಪ್ರಸ್ತುತ 1,296 ರಷ್ಟಿರುವ ಭಾರತದ ಕೋವಿಡ್ ಪ್ರಕರಣಗಳ ಇತ್ತೀಚಿಗೆ ಉಲ್ಬಣಿಸುತ್ತಿರುವುದಕ್ಕೆ ಜೆಎನ್.1 ಕಾರಣವಾಗಿರಬಹುದು’ ಎಂದು ಹೇಳಿದ್ದಾರೆ.

ರೂಪಾಂತರದ ಲಕ್ಷಣಗಳೇನು?

ಸಿಡಿಸಿಯ ಪ್ರಕಾರ, ಕೊರೊನಾ ವೈರಸ್‌ನ ಜೆಎನ್.1 ರೂಪಾಂತರವು ಇತರ ರೂಪಾಂತರಗಳಿಗಿಂತ ವಿಭಿನ್ನ ರೋಗಲಕ್ಷಣಗಳನ್ನು ಉಂಟುಮಾಡುತ್ತದೆಯಾ ಎಂಬ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ರೋಗ ಲಕ್ಷಣಗಳ ಪ್ರಕಾರಗಳು ಮತ್ತು ಅವು ಎಷ್ಟು ತೀವ್ರವಾಗಿರುತ್ತವೆ ಎಂಬುದು ಸಾಮಾನ್ಯವಾಗಿ ವ್ಯಕ್ತಿಯ ರೋಗನಿರೋಧಕ ಶಕ್ತಿ ಮತ್ತು ಒಟ್ಟಾರೆ ಆರೋಗ್ಯದ ಮೇಲೆ ಹೆಚ್ಚು ಅವಲಂಬಿತವಾಗಿರುತ್ತದೆ ಎಂದು ಹೇಳಿದೆ.

ಇದನ್ನೂ ಓದಿ; ಬೆಂಕಿ ಹಚ್ಚಿಕೊಳ್ಳಲು ಯೋಚಿಸಿದ್ದರಾ ಲೋಕಸಭೆ ಭದ್ರತೆ ಉಲ್ಲಂಘಿಸಿದ ಆರೋಪಿಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...