Homeಕರೋನಾ ತಲ್ಲಣಕೋವಿಡ್ ಇಳಿಮುಖ: ಭಾರತದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆ ದೈನಂದಿನ ಪ್ರಕರಣಗಳು

ಕೋವಿಡ್ ಇಳಿಮುಖ: ಭಾರತದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆ ದೈನಂದಿನ ಪ್ರಕರಣಗಳು

- Advertisement -
- Advertisement -

ದೇಶದಲ್ಲಿ ಕೊರೊನಾ ವೈರಸ್‌ನ ಮೂರನೇ ಅಲೆ ಕಡಿಮೆಯಾದಂತೆ ಭಾಸವಾಗುತ್ತಿದ್ದು, ಭಾರತದ ದೈನಂದಿನ ಕೋವಿಡ್ -19 ಸೊಂಕಿತ ಪ್ರಕರಣಗಳ ಸಂಖ್ಯೆ ಸೋಮವಾರ ಒಂದು ಲಕ್ಷಕ್ಕಿಂತ ಕಡಿಮೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ದೈನಂದಿನ ಆರೋಗ್ಯ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ 83,876 ಹೊಸ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಒಟ್ಟಾರೆ ಸೊಂಕಿತರ ಸಂಖ್ಯೆ ಈಗ 4,22,72,014ಕ್ಕೆ ತಲುಪಿದೆ.

ಒಂದು ದಿನದಲ್ಲಿ 895 ಕೋವಿಡ್‌ ಸಂಬಂಧಿತ ಸಾವುನೋವುಗಳೊಂದಿಗೆ, ಭಾರತದ ಒಟ್ಟು ಸಾವಿನ ಸಂಖ್ಯೆ 5,02,874ಗೆ ತಲುಪಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 1,16,073 ಪ್ರಕರಣಗಳನ್ನು ಕಡಿಮೆಯಾದ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ 11,08,938 ಕ್ಕೆ ಇಳಿದಿದೆ. ಒಟ್ಟು ಸೋಂಕಿತ ಪ್ರಕರಣಗಳಲ್ಲಿ 2.62 ಪ್ರತಿಶತನಷ್ಟು ಸಕ್ರಿಯ ಸೋಂಕಿತ ಪ್ರಕರಣಗಳಲ್ಲಿ ಇಳಿಕೆಯಾಗಿದೆ.

ಆರೋಗ್ಸ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕೋವಿಡ್‌ ಪಾಸಿಟಿವ್ ದರವು ಶೇಕಡಾ 7.25 ಕ್ಕೆ ಕುಸಿದಿದೆ ಹಾಗೆಯೆ ರಾಷ್ಟ್ರೀಯ ಕೋವಿಡ್ -19 ಚೇತರಿಕೆಯ ದರವು ಶೇಕಡಾ 96.19 ಕ್ಕೆ ಸುಧಾರಿಸಿದೆ. ವಾರದ ಪಾಸಿಟಿವ್ ದರವು ಶೇ. 9.18 ರಷ್ಟಾಗಿದೆ.

ಸೋಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,06,60,202 ಕ್ಕೆ ಏರಿದೆ. ಆದರೆ ಸೋಂಕಿನಿಂದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ ಎಂದು ಬುಲೆಟಿನ್ ತಿಳಿಸಿದೆ.

ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕೆ ಅಭಿಯಾನ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 169.63 ಕೋಟಿ ಡೋಸ್‌ಗಳನ್ನು ನೀಡಲಾಗಿದೆ.

ಪ್ರಕರಣಗಳ ಇಳಿಕೆ ಮತ್ತು ಚೇತರಿಕೆ ಪ್ರಮಾಣ ಹೆಚ್ಚಾದ ಹಿನ್ನೆಲೆ, ಅನೇಕ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತ ಮಂಡಳಿಯವರು ಶಿಕ್ಷಣ ಸಂಸ್ಥೆಗಳನ್ನು ಪುನಃ ತೆರೆಯಲು ನಿರ್ಧರಿಸಿದ್ದಾರೆ.

ಅನೇಕ ರಾಜ್ಯ ಸರ್ಕಾರಗಳು ಸೋಮವಾರದಿಂದ (ಫೆಬ್ರವರಿ 7) ಶಾಲೆಗಳು ಮತ್ತು ಕಾಲೇಜುಗಳನ್ನು ಪುನರಾರಂಭಿಸುತ್ತಿವೆ. ಆದರೆ ಹಲವು ರಾಜ್ಯಗಳು ಪ್ರೌಢ ತರಗತಿಗಳಿಗೆ ಮಾತ್ರ (9 ರಿಂದ 12) ಅನುಮತಿ ನೀಡಿವೆ. ಇನ್ನೂ ಕೆಲವು ರಾಜ್ಯಗಳಲ್ಲಿ ಪ್ರಾಥಮಿಕ ಶಾಲೆಗಳನ್ನೂ ಸಹ ಪುನಃ ತೆರೆಯಲು ಆದೇಶಿಸಿವೆ.

ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು ಭಾನುವಾರ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರೊಂದಿಗೆ ಪರಿಶೀಲನಾ ಸಭೆಯನ್ನು ನಡೆಸಿದ್ದು, ಕೇಂದ್ರ ಸರ್ಕಾರದ ನೌಕರರನ್ನು ಯಾವುದೇ ವಿನಾಯಿತಿ ಇಲ್ಲದೆ ದೈಹಿಕವಾಗಿ ಕಚೇರಿಗೆ ಹಾಜರಾಗಲು ಆದೇಶ ಹೊರಡಿಸಿದೆ. ಅದರ ನಂತರ ತನ್ನ ನೌಕರರ 100% ಭರ್ತಿಯೊಂದಿಗೆ ಪುನರಾರಂಭಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.


ಇದನ್ನು ಓದಿ: ಬಹುಜನ ಭಾರತ; ದೇಶದ ಬಹುಜನರ ಅಣಕಿಸುವ ಬಜೆಟ್!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...