Homeಕರೋನಾ ತಲ್ಲಣಕೋವಿಡ್ ಇಳಿಮುಖ: ಭಾರತದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆ ದೈನಂದಿನ ಪ್ರಕರಣಗಳು

ಕೋವಿಡ್ ಇಳಿಮುಖ: ಭಾರತದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆ ದೈನಂದಿನ ಪ್ರಕರಣಗಳು

- Advertisement -
- Advertisement -

ದೇಶದಲ್ಲಿ ಕೊರೊನಾ ವೈರಸ್‌ನ ಮೂರನೇ ಅಲೆ ಕಡಿಮೆಯಾದಂತೆ ಭಾಸವಾಗುತ್ತಿದ್ದು, ಭಾರತದ ದೈನಂದಿನ ಕೋವಿಡ್ -19 ಸೊಂಕಿತ ಪ್ರಕರಣಗಳ ಸಂಖ್ಯೆ ಸೋಮವಾರ ಒಂದು ಲಕ್ಷಕ್ಕಿಂತ ಕಡಿಮೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ದೈನಂದಿನ ಆರೋಗ್ಯ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ 83,876 ಹೊಸ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಒಟ್ಟಾರೆ ಸೊಂಕಿತರ ಸಂಖ್ಯೆ ಈಗ 4,22,72,014ಕ್ಕೆ ತಲುಪಿದೆ.

ಒಂದು ದಿನದಲ್ಲಿ 895 ಕೋವಿಡ್‌ ಸಂಬಂಧಿತ ಸಾವುನೋವುಗಳೊಂದಿಗೆ, ಭಾರತದ ಒಟ್ಟು ಸಾವಿನ ಸಂಖ್ಯೆ 5,02,874ಗೆ ತಲುಪಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 1,16,073 ಪ್ರಕರಣಗಳನ್ನು ಕಡಿಮೆಯಾದ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ 11,08,938 ಕ್ಕೆ ಇಳಿದಿದೆ. ಒಟ್ಟು ಸೋಂಕಿತ ಪ್ರಕರಣಗಳಲ್ಲಿ 2.62 ಪ್ರತಿಶತನಷ್ಟು ಸಕ್ರಿಯ ಸೋಂಕಿತ ಪ್ರಕರಣಗಳಲ್ಲಿ ಇಳಿಕೆಯಾಗಿದೆ.

ಆರೋಗ್ಸ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕೋವಿಡ್‌ ಪಾಸಿಟಿವ್ ದರವು ಶೇಕಡಾ 7.25 ಕ್ಕೆ ಕುಸಿದಿದೆ ಹಾಗೆಯೆ ರಾಷ್ಟ್ರೀಯ ಕೋವಿಡ್ -19 ಚೇತರಿಕೆಯ ದರವು ಶೇಕಡಾ 96.19 ಕ್ಕೆ ಸುಧಾರಿಸಿದೆ. ವಾರದ ಪಾಸಿಟಿವ್ ದರವು ಶೇ. 9.18 ರಷ್ಟಾಗಿದೆ.

ಸೋಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,06,60,202 ಕ್ಕೆ ಏರಿದೆ. ಆದರೆ ಸೋಂಕಿನಿಂದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ ಎಂದು ಬುಲೆಟಿನ್ ತಿಳಿಸಿದೆ.

ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕೆ ಅಭಿಯಾನ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 169.63 ಕೋಟಿ ಡೋಸ್‌ಗಳನ್ನು ನೀಡಲಾಗಿದೆ.

ಪ್ರಕರಣಗಳ ಇಳಿಕೆ ಮತ್ತು ಚೇತರಿಕೆ ಪ್ರಮಾಣ ಹೆಚ್ಚಾದ ಹಿನ್ನೆಲೆ, ಅನೇಕ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತ ಮಂಡಳಿಯವರು ಶಿಕ್ಷಣ ಸಂಸ್ಥೆಗಳನ್ನು ಪುನಃ ತೆರೆಯಲು ನಿರ್ಧರಿಸಿದ್ದಾರೆ.

ಅನೇಕ ರಾಜ್ಯ ಸರ್ಕಾರಗಳು ಸೋಮವಾರದಿಂದ (ಫೆಬ್ರವರಿ 7) ಶಾಲೆಗಳು ಮತ್ತು ಕಾಲೇಜುಗಳನ್ನು ಪುನರಾರಂಭಿಸುತ್ತಿವೆ. ಆದರೆ ಹಲವು ರಾಜ್ಯಗಳು ಪ್ರೌಢ ತರಗತಿಗಳಿಗೆ ಮಾತ್ರ (9 ರಿಂದ 12) ಅನುಮತಿ ನೀಡಿವೆ. ಇನ್ನೂ ಕೆಲವು ರಾಜ್ಯಗಳಲ್ಲಿ ಪ್ರಾಥಮಿಕ ಶಾಲೆಗಳನ್ನೂ ಸಹ ಪುನಃ ತೆರೆಯಲು ಆದೇಶಿಸಿವೆ.

ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು ಭಾನುವಾರ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರೊಂದಿಗೆ ಪರಿಶೀಲನಾ ಸಭೆಯನ್ನು ನಡೆಸಿದ್ದು, ಕೇಂದ್ರ ಸರ್ಕಾರದ ನೌಕರರನ್ನು ಯಾವುದೇ ವಿನಾಯಿತಿ ಇಲ್ಲದೆ ದೈಹಿಕವಾಗಿ ಕಚೇರಿಗೆ ಹಾಜರಾಗಲು ಆದೇಶ ಹೊರಡಿಸಿದೆ. ಅದರ ನಂತರ ತನ್ನ ನೌಕರರ 100% ಭರ್ತಿಯೊಂದಿಗೆ ಪುನರಾರಂಭಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.


ಇದನ್ನು ಓದಿ: ಬಹುಜನ ಭಾರತ; ದೇಶದ ಬಹುಜನರ ಅಣಕಿಸುವ ಬಜೆಟ್!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...