Homeಕರೋನಾ ತಲ್ಲಣಕೋವಿಡ್ ಇಳಿಮುಖ: ಭಾರತದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆ ದೈನಂದಿನ ಪ್ರಕರಣಗಳು

ಕೋವಿಡ್ ಇಳಿಮುಖ: ಭಾರತದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆ ದೈನಂದಿನ ಪ್ರಕರಣಗಳು

- Advertisement -
- Advertisement -

ದೇಶದಲ್ಲಿ ಕೊರೊನಾ ವೈರಸ್‌ನ ಮೂರನೇ ಅಲೆ ಕಡಿಮೆಯಾದಂತೆ ಭಾಸವಾಗುತ್ತಿದ್ದು, ಭಾರತದ ದೈನಂದಿನ ಕೋವಿಡ್ -19 ಸೊಂಕಿತ ಪ್ರಕರಣಗಳ ಸಂಖ್ಯೆ ಸೋಮವಾರ ಒಂದು ಲಕ್ಷಕ್ಕಿಂತ ಕಡಿಮೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ದೈನಂದಿನ ಆರೋಗ್ಯ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ 83,876 ಹೊಸ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಒಟ್ಟಾರೆ ಸೊಂಕಿತರ ಸಂಖ್ಯೆ ಈಗ 4,22,72,014ಕ್ಕೆ ತಲುಪಿದೆ.

ಒಂದು ದಿನದಲ್ಲಿ 895 ಕೋವಿಡ್‌ ಸಂಬಂಧಿತ ಸಾವುನೋವುಗಳೊಂದಿಗೆ, ಭಾರತದ ಒಟ್ಟು ಸಾವಿನ ಸಂಖ್ಯೆ 5,02,874ಗೆ ತಲುಪಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 1,16,073 ಪ್ರಕರಣಗಳನ್ನು ಕಡಿಮೆಯಾದ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ 11,08,938 ಕ್ಕೆ ಇಳಿದಿದೆ. ಒಟ್ಟು ಸೋಂಕಿತ ಪ್ರಕರಣಗಳಲ್ಲಿ 2.62 ಪ್ರತಿಶತನಷ್ಟು ಸಕ್ರಿಯ ಸೋಂಕಿತ ಪ್ರಕರಣಗಳಲ್ಲಿ ಇಳಿಕೆಯಾಗಿದೆ.

ಆರೋಗ್ಸ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕೋವಿಡ್‌ ಪಾಸಿಟಿವ್ ದರವು ಶೇಕಡಾ 7.25 ಕ್ಕೆ ಕುಸಿದಿದೆ ಹಾಗೆಯೆ ರಾಷ್ಟ್ರೀಯ ಕೋವಿಡ್ -19 ಚೇತರಿಕೆಯ ದರವು ಶೇಕಡಾ 96.19 ಕ್ಕೆ ಸುಧಾರಿಸಿದೆ. ವಾರದ ಪಾಸಿಟಿವ್ ದರವು ಶೇ. 9.18 ರಷ್ಟಾಗಿದೆ.

ಸೋಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,06,60,202 ಕ್ಕೆ ಏರಿದೆ. ಆದರೆ ಸೋಂಕಿನಿಂದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ ಎಂದು ಬುಲೆಟಿನ್ ತಿಳಿಸಿದೆ.

ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕೆ ಅಭಿಯಾನ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 169.63 ಕೋಟಿ ಡೋಸ್‌ಗಳನ್ನು ನೀಡಲಾಗಿದೆ.

ಪ್ರಕರಣಗಳ ಇಳಿಕೆ ಮತ್ತು ಚೇತರಿಕೆ ಪ್ರಮಾಣ ಹೆಚ್ಚಾದ ಹಿನ್ನೆಲೆ, ಅನೇಕ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತ ಮಂಡಳಿಯವರು ಶಿಕ್ಷಣ ಸಂಸ್ಥೆಗಳನ್ನು ಪುನಃ ತೆರೆಯಲು ನಿರ್ಧರಿಸಿದ್ದಾರೆ.

ಅನೇಕ ರಾಜ್ಯ ಸರ್ಕಾರಗಳು ಸೋಮವಾರದಿಂದ (ಫೆಬ್ರವರಿ 7) ಶಾಲೆಗಳು ಮತ್ತು ಕಾಲೇಜುಗಳನ್ನು ಪುನರಾರಂಭಿಸುತ್ತಿವೆ. ಆದರೆ ಹಲವು ರಾಜ್ಯಗಳು ಪ್ರೌಢ ತರಗತಿಗಳಿಗೆ ಮಾತ್ರ (9 ರಿಂದ 12) ಅನುಮತಿ ನೀಡಿವೆ. ಇನ್ನೂ ಕೆಲವು ರಾಜ್ಯಗಳಲ್ಲಿ ಪ್ರಾಥಮಿಕ ಶಾಲೆಗಳನ್ನೂ ಸಹ ಪುನಃ ತೆರೆಯಲು ಆದೇಶಿಸಿವೆ.

ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು ಭಾನುವಾರ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರೊಂದಿಗೆ ಪರಿಶೀಲನಾ ಸಭೆಯನ್ನು ನಡೆಸಿದ್ದು, ಕೇಂದ್ರ ಸರ್ಕಾರದ ನೌಕರರನ್ನು ಯಾವುದೇ ವಿನಾಯಿತಿ ಇಲ್ಲದೆ ದೈಹಿಕವಾಗಿ ಕಚೇರಿಗೆ ಹಾಜರಾಗಲು ಆದೇಶ ಹೊರಡಿಸಿದೆ. ಅದರ ನಂತರ ತನ್ನ ನೌಕರರ 100% ಭರ್ತಿಯೊಂದಿಗೆ ಪುನರಾರಂಭಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.


ಇದನ್ನು ಓದಿ: ಬಹುಜನ ಭಾರತ; ದೇಶದ ಬಹುಜನರ ಅಣಕಿಸುವ ಬಜೆಟ್!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...