Homeಅಂತರಾಷ್ಟ್ರೀಯಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಜಾನ್ಸನ್ & ಜಾನ್ಸನ್ ಕಂಪನಿ ಕೂಡ ಅಧ್ಯಯನದಲ್ಲಿ ಭಾಗವಹಿಸಿದ ಒಬ್ಬರಿಗೆ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

- Advertisement -
- Advertisement -

ಇಂಗ್ಲೆಂಡ್​ನ ಔಷಧ ತಯಾರಕ ಸಂಸ್ಥೆ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದ್ದ ಕೊರೊನಾ ಲಸಿಕೆ ಕ್ಲಿನಿಕಲ್ ಪ್ರಯೋಗದ ವೇಳೆಯಲ್ಲಿ ಬ್ರೆಜಿಲ್‌ನ ಸ್ವಯಂ ಸೇವಕರೊಬ್ಬರು ಮೃತಪಟ್ಟಿದ್ದಾರೆ.

ಬ್ರೆಜಿಲಿಯನ್ ಆರೋಗ್ಯ ಪ್ರಾಧಿಕಾರ ಅನ್ವೀಸಾ ಬುಧವಾರ ಸಾವಿನ ಕುರಿತು ತಿಳಿಸಿದೆ. ಅಲ್ಲದೆ, ಪ್ರಕರಣದ ತನಿಖೆಯ ಮಾಹಿತಿಯನ್ನು ಅದು ಪಡೆದುಕೊಂಡಿರುವುದಾಗಿ ಹೇಳಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಕ್ಲಿನಿಕಲ್‌ ಪ್ರಯೋಗದ‌ ವೇಳೆ ಸಂಭವಿಸಿದ ‌ಸಾವಿನ ನಂತರವೂ ಲಸಿಕೆ ಪರೀಕ್ಷೆ ಮುಂದುವರಿಯುತ್ತಿರುವುದಾಗಿ ಪ್ರಾಧಿಕಾರ ತಿಳಿಸಿದೆ.

ಪ್ರಯೋಗದಲ್ಲಿ ಭಾಗಿಯಾದವರ ಮಾಹಿತಿಯನ್ನ ಗೌಪ್ಯವಾಗಿಡಬೇಕೆಂಬ ಕಾರಣ ನೀಡಿ ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಲಾಗಿದೆ. ಲಸಿಕೆಯ 3 ನೇ ಹಂತದ ಕ್ಲಿನಿಕಲ್ ಟ್ರಯಲ್‌ಗೆ ನೆರವಾಗಿರುವ ಸಾವೊ ಪಾಲೊನ ಫೆಡರಲ್ ವಿಶ್ವವಿದ್ಯಾಲಯ ಸಾವಿನ ಕುರಿತು ಪ್ರತಿಕ್ರಿಯಿಸಿದ್ದು, ವಾಲಂಟಿಯರ್‌ ಬ್ರೆಜಿಲ್‌ನವರೇ. ಆದರೆ, ಆ ವ್ಯಕ್ತಿಯ ವಿವರಗಳನ್ನು ಹೇಳಲಾಗದು ಎಂದಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜೆನೆಕಾ ಕಂಪನಿ

ಕೊರೊನಾ ಸೋಂಕಿನಿಂದ ಮೃತಪಟ್ಟ ಸ್ವಯಂಸೇವಕ ಪ್ರಾಯೋಗಿಕ ಲಸಿಕೆ ಪಡೆದಿದ್ದಾನೆಯೇ ಎಂಬುದು ಸ್ಪಷ್ಟವಾಗಿಲ್ಲ, ಆದರೆ ತಜ್ಞರ ಪ್ರಕಾರ, ಪ್ರಾಯೋಗಿಕ ಲಸಿಕೆ ಪಡೆದ ನಂತರ ಸ್ವಯಂಸೇವಕರು ಸಾವನ್ನಪ್ಪಿದ್ದರೆ, ಕಂಪನಿಯು ಸುರಕ್ಷತೆಗೆ ಗಮನಕೊಟ್ಟು ಪ್ರಯೋಗ ನಿಲ್ಲಿಸಬಹುದೆಂದು ಹೇಳಿದ್ದಾರೆ ಎಂದು ಓ ಗ್ಲೋಬೊ ಎಂಬ ಬ್ರೆಜಿಲ್ ಪತ್ರಿಕೆ ವರದಿ ಮಾಡಿದೆ.

ಅಸ್ಟ್ರಾಜೆನೆಕಾ ಕಂಪನಿಯ ವಕ್ತಾರ ಬ್ರೆಂಡನ್ ಮೆಕ್‌ವೊಯ್, ವೈದ್ಯಕೀಯ ಗೌಪ್ಯತೆಯನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಆದರೆ ಅಗತ್ಯವಿರುವ ಎಲ್ಲ ಪರಿಶೀಲನಾ ಕಾರ್ಯವಿಧಾನಗಳನ್ನು ಅನುಸರಿಸಲಾಗಿದೆ ಎಂದು ಹೇಳಿದರು. “ಪ್ರಯೋಗದಲ್ಲಿ ಭಾಗವಹಿಸುವ ಸ್ವಯಂಸೇವಕರನ್ನು ಒಳಗೊಂಡು, ಲಸಿಕೆ-ಸಂಬಂಧಿತ ಯಾವುದೇ ತೊಡಕುಗಳ ಕಳವಳವಿಲ್ಲದೆ, ಎಲ್ಲವೂ ನಿರೀಕ್ಷೆಯಂತೆ ಮುಂದುವರಿಯುತ್ತಿದೆ” ಎಂದು ತಿಳಿಸಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಈ ಅಧ್ಯಯನಕ್ಕೆ ಸ್ಥಳೀಯ ಪಾಲುದಾರರಾಗಿ ಸೇವೆ ಸಲ್ಲಿಸಿದ ಬ್ರೆಜಿಲ್‌ನ ವೈದ್ಯಕೀಯ ಸಂಶೋಧನಾ ಕೇಂದ್ರವಾದ ಇನ್‌ಸ್ಟಿಟ್ಯೂಟೊ ಡಿ’ಓರ್ ತನ್ನ ಹೇಳಿಕೆಯಲ್ಲಿ, ’ಸುಮಾರು 8,000 ಬ್ರೆಜಿಲಿಯನ್ನರು ಪ್ರಯೋಗದಲ್ಲಿ ಭಾಗವಹಿಸಿದ್ದಾರೆ. ಯಾವುದೇ ಸುರಕ್ಷತಾ ಸಮಸ್ಯೆಗಳು ವರದಿಯಾಗಿಲ್ಲ’ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ಅಸ್ಟ್ರಾಜೆನೆಕಾ ಲಸಿಕೆಯನ್ನು ಖರೀದಿಸಿ, ಬ್ರೆಜಿಲ್‌ನ ಬಯೋಮೆಡಿಕಲ್ ಸಂಶೋಧನಾ ಕೇಂದ್ರ ಫಿಯೋಕ್ರೂಜ್​ನಲ್ಲಿ ಉತ್ಪಾದನೆ ಮಾಡಲು ಬ್ರೆಜಿಲ್ ಸರ್ಕಾರ ಯೋಜನೆ ಮಾಡಿದೆ. ಇನ್ನೊಂದೆಡೆ, ಚೀನಾದ ಸಿನೋವ್ಯಾಕ್ ಲಸಿಕೆಯನ್ನು ಸಾವೊ ಪಾಲೊದ ಸಂಶೋಧನಾ ಕೇಂದ್ರ ಬುಟಾಂಟನ್‌ನಲ್ಲಿ ಪರೀಕ್ಷಿಸಲಾಗುತ್ತಿದೆ.

ಪ್ರಾಯೋಗಿಕ ಲಸಿಕೆ ಪಡೆದವರಲ್ಲಿ ಕೆಲವರು ಅನಾರೋಗ್ಯದಿಂದ ಅನಾರೋಗ್ಯಕ್ಕೆ ಒಳಗಾದ ನಂತರ ಅಸ್ಟ್ರಾಜೆನೆಕಾ ತನ್ನ ಜಾಗತಿಕ ಪ್ರಯೋಗಗಳನ್ನು ನಿಲ್ಲಿಸಿದ ಕೆಲವೇ ವಾರಗಳ ನಂತರ ಈ ಸಾವು ಸಂಭವಿಸಿದೆ. ಆದರೆ, ಕೆಲವೇ ದಿನಗಳಲ್ಲಿ, ಅಸ್ಟ್ರಾಜೆನೆಕಾ ಯುನೈಟೆಡ್ ಕಿಂಗ್‌ಡಂನಲ್ಲಿ ತನ್ನ ಪ್ರಯೋಗಗಳನ್ನು ಪುನರಾರಂಭಿಸಿತ್ತು.

ಜಾನ್ಸನ್ & ಜಾನ್ಸನ್ ಕಂಪನಿ ಕೂಡ ಅಧ್ಯಯನದಲ್ಲಿ ಭಾಗವಹಿಸಿದವರಲ್ಲಿ ವಿವರಿಸಲಾಗದ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಕಾರಣ ಮೂರನೇ ಮತ್ತು ಅಂತಿಮ ಹಂತದ ಕ್ಲಿನಿಕಲ್ ಪ್ರಯೋಗವನ್ನು ಅ.12ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.


ಇದನ್ನೂ ಓದಿ: ಕೊರೊನಾ ನಂತರ 1.10 ಕೋಟಿ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ- ಯುನೆಸ್ಕೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...