Homeಅಂತರಾಷ್ಟ್ರೀಯಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಜಾನ್ಸನ್ & ಜಾನ್ಸನ್ ಕಂಪನಿ ಕೂಡ ಅಧ್ಯಯನದಲ್ಲಿ ಭಾಗವಹಿಸಿದ ಒಬ್ಬರಿಗೆ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

- Advertisement -
- Advertisement -

ಇಂಗ್ಲೆಂಡ್​ನ ಔಷಧ ತಯಾರಕ ಸಂಸ್ಥೆ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದ್ದ ಕೊರೊನಾ ಲಸಿಕೆ ಕ್ಲಿನಿಕಲ್ ಪ್ರಯೋಗದ ವೇಳೆಯಲ್ಲಿ ಬ್ರೆಜಿಲ್‌ನ ಸ್ವಯಂ ಸೇವಕರೊಬ್ಬರು ಮೃತಪಟ್ಟಿದ್ದಾರೆ.

ಬ್ರೆಜಿಲಿಯನ್ ಆರೋಗ್ಯ ಪ್ರಾಧಿಕಾರ ಅನ್ವೀಸಾ ಬುಧವಾರ ಸಾವಿನ ಕುರಿತು ತಿಳಿಸಿದೆ. ಅಲ್ಲದೆ, ಪ್ರಕರಣದ ತನಿಖೆಯ ಮಾಹಿತಿಯನ್ನು ಅದು ಪಡೆದುಕೊಂಡಿರುವುದಾಗಿ ಹೇಳಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಕ್ಲಿನಿಕಲ್‌ ಪ್ರಯೋಗದ‌ ವೇಳೆ ಸಂಭವಿಸಿದ ‌ಸಾವಿನ ನಂತರವೂ ಲಸಿಕೆ ಪರೀಕ್ಷೆ ಮುಂದುವರಿಯುತ್ತಿರುವುದಾಗಿ ಪ್ರಾಧಿಕಾರ ತಿಳಿಸಿದೆ.

ಪ್ರಯೋಗದಲ್ಲಿ ಭಾಗಿಯಾದವರ ಮಾಹಿತಿಯನ್ನ ಗೌಪ್ಯವಾಗಿಡಬೇಕೆಂಬ ಕಾರಣ ನೀಡಿ ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಲಾಗಿದೆ. ಲಸಿಕೆಯ 3 ನೇ ಹಂತದ ಕ್ಲಿನಿಕಲ್ ಟ್ರಯಲ್‌ಗೆ ನೆರವಾಗಿರುವ ಸಾವೊ ಪಾಲೊನ ಫೆಡರಲ್ ವಿಶ್ವವಿದ್ಯಾಲಯ ಸಾವಿನ ಕುರಿತು ಪ್ರತಿಕ್ರಿಯಿಸಿದ್ದು, ವಾಲಂಟಿಯರ್‌ ಬ್ರೆಜಿಲ್‌ನವರೇ. ಆದರೆ, ಆ ವ್ಯಕ್ತಿಯ ವಿವರಗಳನ್ನು ಹೇಳಲಾಗದು ಎಂದಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜೆನೆಕಾ ಕಂಪನಿ

ಕೊರೊನಾ ಸೋಂಕಿನಿಂದ ಮೃತಪಟ್ಟ ಸ್ವಯಂಸೇವಕ ಪ್ರಾಯೋಗಿಕ ಲಸಿಕೆ ಪಡೆದಿದ್ದಾನೆಯೇ ಎಂಬುದು ಸ್ಪಷ್ಟವಾಗಿಲ್ಲ, ಆದರೆ ತಜ್ಞರ ಪ್ರಕಾರ, ಪ್ರಾಯೋಗಿಕ ಲಸಿಕೆ ಪಡೆದ ನಂತರ ಸ್ವಯಂಸೇವಕರು ಸಾವನ್ನಪ್ಪಿದ್ದರೆ, ಕಂಪನಿಯು ಸುರಕ್ಷತೆಗೆ ಗಮನಕೊಟ್ಟು ಪ್ರಯೋಗ ನಿಲ್ಲಿಸಬಹುದೆಂದು ಹೇಳಿದ್ದಾರೆ ಎಂದು ಓ ಗ್ಲೋಬೊ ಎಂಬ ಬ್ರೆಜಿಲ್ ಪತ್ರಿಕೆ ವರದಿ ಮಾಡಿದೆ.

ಅಸ್ಟ್ರಾಜೆನೆಕಾ ಕಂಪನಿಯ ವಕ್ತಾರ ಬ್ರೆಂಡನ್ ಮೆಕ್‌ವೊಯ್, ವೈದ್ಯಕೀಯ ಗೌಪ್ಯತೆಯನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಆದರೆ ಅಗತ್ಯವಿರುವ ಎಲ್ಲ ಪರಿಶೀಲನಾ ಕಾರ್ಯವಿಧಾನಗಳನ್ನು ಅನುಸರಿಸಲಾಗಿದೆ ಎಂದು ಹೇಳಿದರು. “ಪ್ರಯೋಗದಲ್ಲಿ ಭಾಗವಹಿಸುವ ಸ್ವಯಂಸೇವಕರನ್ನು ಒಳಗೊಂಡು, ಲಸಿಕೆ-ಸಂಬಂಧಿತ ಯಾವುದೇ ತೊಡಕುಗಳ ಕಳವಳವಿಲ್ಲದೆ, ಎಲ್ಲವೂ ನಿರೀಕ್ಷೆಯಂತೆ ಮುಂದುವರಿಯುತ್ತಿದೆ” ಎಂದು ತಿಳಿಸಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಈ ಅಧ್ಯಯನಕ್ಕೆ ಸ್ಥಳೀಯ ಪಾಲುದಾರರಾಗಿ ಸೇವೆ ಸಲ್ಲಿಸಿದ ಬ್ರೆಜಿಲ್‌ನ ವೈದ್ಯಕೀಯ ಸಂಶೋಧನಾ ಕೇಂದ್ರವಾದ ಇನ್‌ಸ್ಟಿಟ್ಯೂಟೊ ಡಿ’ಓರ್ ತನ್ನ ಹೇಳಿಕೆಯಲ್ಲಿ, ’ಸುಮಾರು 8,000 ಬ್ರೆಜಿಲಿಯನ್ನರು ಪ್ರಯೋಗದಲ್ಲಿ ಭಾಗವಹಿಸಿದ್ದಾರೆ. ಯಾವುದೇ ಸುರಕ್ಷತಾ ಸಮಸ್ಯೆಗಳು ವರದಿಯಾಗಿಲ್ಲ’ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ಅಸ್ಟ್ರಾಜೆನೆಕಾ ಲಸಿಕೆಯನ್ನು ಖರೀದಿಸಿ, ಬ್ರೆಜಿಲ್‌ನ ಬಯೋಮೆಡಿಕಲ್ ಸಂಶೋಧನಾ ಕೇಂದ್ರ ಫಿಯೋಕ್ರೂಜ್​ನಲ್ಲಿ ಉತ್ಪಾದನೆ ಮಾಡಲು ಬ್ರೆಜಿಲ್ ಸರ್ಕಾರ ಯೋಜನೆ ಮಾಡಿದೆ. ಇನ್ನೊಂದೆಡೆ, ಚೀನಾದ ಸಿನೋವ್ಯಾಕ್ ಲಸಿಕೆಯನ್ನು ಸಾವೊ ಪಾಲೊದ ಸಂಶೋಧನಾ ಕೇಂದ್ರ ಬುಟಾಂಟನ್‌ನಲ್ಲಿ ಪರೀಕ್ಷಿಸಲಾಗುತ್ತಿದೆ.

ಪ್ರಾಯೋಗಿಕ ಲಸಿಕೆ ಪಡೆದವರಲ್ಲಿ ಕೆಲವರು ಅನಾರೋಗ್ಯದಿಂದ ಅನಾರೋಗ್ಯಕ್ಕೆ ಒಳಗಾದ ನಂತರ ಅಸ್ಟ್ರಾಜೆನೆಕಾ ತನ್ನ ಜಾಗತಿಕ ಪ್ರಯೋಗಗಳನ್ನು ನಿಲ್ಲಿಸಿದ ಕೆಲವೇ ವಾರಗಳ ನಂತರ ಈ ಸಾವು ಸಂಭವಿಸಿದೆ. ಆದರೆ, ಕೆಲವೇ ದಿನಗಳಲ್ಲಿ, ಅಸ್ಟ್ರಾಜೆನೆಕಾ ಯುನೈಟೆಡ್ ಕಿಂಗ್‌ಡಂನಲ್ಲಿ ತನ್ನ ಪ್ರಯೋಗಗಳನ್ನು ಪುನರಾರಂಭಿಸಿತ್ತು.

ಜಾನ್ಸನ್ & ಜಾನ್ಸನ್ ಕಂಪನಿ ಕೂಡ ಅಧ್ಯಯನದಲ್ಲಿ ಭಾಗವಹಿಸಿದವರಲ್ಲಿ ವಿವರಿಸಲಾಗದ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಕಾರಣ ಮೂರನೇ ಮತ್ತು ಅಂತಿಮ ಹಂತದ ಕ್ಲಿನಿಕಲ್ ಪ್ರಯೋಗವನ್ನು ಅ.12ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.


ಇದನ್ನೂ ಓದಿ: ಕೊರೊನಾ ನಂತರ 1.10 ಕೋಟಿ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ- ಯುನೆಸ್ಕೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...