Homeಅಂತರಾಷ್ಟ್ರೀಯಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಜಾನ್ಸನ್ & ಜಾನ್ಸನ್ ಕಂಪನಿ ಕೂಡ ಅಧ್ಯಯನದಲ್ಲಿ ಭಾಗವಹಿಸಿದ ಒಬ್ಬರಿಗೆ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

- Advertisement -
- Advertisement -

ಇಂಗ್ಲೆಂಡ್​ನ ಔಷಧ ತಯಾರಕ ಸಂಸ್ಥೆ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದ್ದ ಕೊರೊನಾ ಲಸಿಕೆ ಕ್ಲಿನಿಕಲ್ ಪ್ರಯೋಗದ ವೇಳೆಯಲ್ಲಿ ಬ್ರೆಜಿಲ್‌ನ ಸ್ವಯಂ ಸೇವಕರೊಬ್ಬರು ಮೃತಪಟ್ಟಿದ್ದಾರೆ.

ಬ್ರೆಜಿಲಿಯನ್ ಆರೋಗ್ಯ ಪ್ರಾಧಿಕಾರ ಅನ್ವೀಸಾ ಬುಧವಾರ ಸಾವಿನ ಕುರಿತು ತಿಳಿಸಿದೆ. ಅಲ್ಲದೆ, ಪ್ರಕರಣದ ತನಿಖೆಯ ಮಾಹಿತಿಯನ್ನು ಅದು ಪಡೆದುಕೊಂಡಿರುವುದಾಗಿ ಹೇಳಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಕ್ಲಿನಿಕಲ್‌ ಪ್ರಯೋಗದ‌ ವೇಳೆ ಸಂಭವಿಸಿದ ‌ಸಾವಿನ ನಂತರವೂ ಲಸಿಕೆ ಪರೀಕ್ಷೆ ಮುಂದುವರಿಯುತ್ತಿರುವುದಾಗಿ ಪ್ರಾಧಿಕಾರ ತಿಳಿಸಿದೆ.

ಪ್ರಯೋಗದಲ್ಲಿ ಭಾಗಿಯಾದವರ ಮಾಹಿತಿಯನ್ನ ಗೌಪ್ಯವಾಗಿಡಬೇಕೆಂಬ ಕಾರಣ ನೀಡಿ ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಲಾಗಿದೆ. ಲಸಿಕೆಯ 3 ನೇ ಹಂತದ ಕ್ಲಿನಿಕಲ್ ಟ್ರಯಲ್‌ಗೆ ನೆರವಾಗಿರುವ ಸಾವೊ ಪಾಲೊನ ಫೆಡರಲ್ ವಿಶ್ವವಿದ್ಯಾಲಯ ಸಾವಿನ ಕುರಿತು ಪ್ರತಿಕ್ರಿಯಿಸಿದ್ದು, ವಾಲಂಟಿಯರ್‌ ಬ್ರೆಜಿಲ್‌ನವರೇ. ಆದರೆ, ಆ ವ್ಯಕ್ತಿಯ ವಿವರಗಳನ್ನು ಹೇಳಲಾಗದು ಎಂದಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜೆನೆಕಾ ಕಂಪನಿ

ಕೊರೊನಾ ಸೋಂಕಿನಿಂದ ಮೃತಪಟ್ಟ ಸ್ವಯಂಸೇವಕ ಪ್ರಾಯೋಗಿಕ ಲಸಿಕೆ ಪಡೆದಿದ್ದಾನೆಯೇ ಎಂಬುದು ಸ್ಪಷ್ಟವಾಗಿಲ್ಲ, ಆದರೆ ತಜ್ಞರ ಪ್ರಕಾರ, ಪ್ರಾಯೋಗಿಕ ಲಸಿಕೆ ಪಡೆದ ನಂತರ ಸ್ವಯಂಸೇವಕರು ಸಾವನ್ನಪ್ಪಿದ್ದರೆ, ಕಂಪನಿಯು ಸುರಕ್ಷತೆಗೆ ಗಮನಕೊಟ್ಟು ಪ್ರಯೋಗ ನಿಲ್ಲಿಸಬಹುದೆಂದು ಹೇಳಿದ್ದಾರೆ ಎಂದು ಓ ಗ್ಲೋಬೊ ಎಂಬ ಬ್ರೆಜಿಲ್ ಪತ್ರಿಕೆ ವರದಿ ಮಾಡಿದೆ.

ಅಸ್ಟ್ರಾಜೆನೆಕಾ ಕಂಪನಿಯ ವಕ್ತಾರ ಬ್ರೆಂಡನ್ ಮೆಕ್‌ವೊಯ್, ವೈದ್ಯಕೀಯ ಗೌಪ್ಯತೆಯನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಆದರೆ ಅಗತ್ಯವಿರುವ ಎಲ್ಲ ಪರಿಶೀಲನಾ ಕಾರ್ಯವಿಧಾನಗಳನ್ನು ಅನುಸರಿಸಲಾಗಿದೆ ಎಂದು ಹೇಳಿದರು. “ಪ್ರಯೋಗದಲ್ಲಿ ಭಾಗವಹಿಸುವ ಸ್ವಯಂಸೇವಕರನ್ನು ಒಳಗೊಂಡು, ಲಸಿಕೆ-ಸಂಬಂಧಿತ ಯಾವುದೇ ತೊಡಕುಗಳ ಕಳವಳವಿಲ್ಲದೆ, ಎಲ್ಲವೂ ನಿರೀಕ್ಷೆಯಂತೆ ಮುಂದುವರಿಯುತ್ತಿದೆ” ಎಂದು ತಿಳಿಸಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಈ ಅಧ್ಯಯನಕ್ಕೆ ಸ್ಥಳೀಯ ಪಾಲುದಾರರಾಗಿ ಸೇವೆ ಸಲ್ಲಿಸಿದ ಬ್ರೆಜಿಲ್‌ನ ವೈದ್ಯಕೀಯ ಸಂಶೋಧನಾ ಕೇಂದ್ರವಾದ ಇನ್‌ಸ್ಟಿಟ್ಯೂಟೊ ಡಿ’ಓರ್ ತನ್ನ ಹೇಳಿಕೆಯಲ್ಲಿ, ’ಸುಮಾರು 8,000 ಬ್ರೆಜಿಲಿಯನ್ನರು ಪ್ರಯೋಗದಲ್ಲಿ ಭಾಗವಹಿಸಿದ್ದಾರೆ. ಯಾವುದೇ ಸುರಕ್ಷತಾ ಸಮಸ್ಯೆಗಳು ವರದಿಯಾಗಿಲ್ಲ’ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ಅಸ್ಟ್ರಾಜೆನೆಕಾ ಲಸಿಕೆಯನ್ನು ಖರೀದಿಸಿ, ಬ್ರೆಜಿಲ್‌ನ ಬಯೋಮೆಡಿಕಲ್ ಸಂಶೋಧನಾ ಕೇಂದ್ರ ಫಿಯೋಕ್ರೂಜ್​ನಲ್ಲಿ ಉತ್ಪಾದನೆ ಮಾಡಲು ಬ್ರೆಜಿಲ್ ಸರ್ಕಾರ ಯೋಜನೆ ಮಾಡಿದೆ. ಇನ್ನೊಂದೆಡೆ, ಚೀನಾದ ಸಿನೋವ್ಯಾಕ್ ಲಸಿಕೆಯನ್ನು ಸಾವೊ ಪಾಲೊದ ಸಂಶೋಧನಾ ಕೇಂದ್ರ ಬುಟಾಂಟನ್‌ನಲ್ಲಿ ಪರೀಕ್ಷಿಸಲಾಗುತ್ತಿದೆ.

ಪ್ರಾಯೋಗಿಕ ಲಸಿಕೆ ಪಡೆದವರಲ್ಲಿ ಕೆಲವರು ಅನಾರೋಗ್ಯದಿಂದ ಅನಾರೋಗ್ಯಕ್ಕೆ ಒಳಗಾದ ನಂತರ ಅಸ್ಟ್ರಾಜೆನೆಕಾ ತನ್ನ ಜಾಗತಿಕ ಪ್ರಯೋಗಗಳನ್ನು ನಿಲ್ಲಿಸಿದ ಕೆಲವೇ ವಾರಗಳ ನಂತರ ಈ ಸಾವು ಸಂಭವಿಸಿದೆ. ಆದರೆ, ಕೆಲವೇ ದಿನಗಳಲ್ಲಿ, ಅಸ್ಟ್ರಾಜೆನೆಕಾ ಯುನೈಟೆಡ್ ಕಿಂಗ್‌ಡಂನಲ್ಲಿ ತನ್ನ ಪ್ರಯೋಗಗಳನ್ನು ಪುನರಾರಂಭಿಸಿತ್ತು.

ಜಾನ್ಸನ್ & ಜಾನ್ಸನ್ ಕಂಪನಿ ಕೂಡ ಅಧ್ಯಯನದಲ್ಲಿ ಭಾಗವಹಿಸಿದವರಲ್ಲಿ ವಿವರಿಸಲಾಗದ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಕಾರಣ ಮೂರನೇ ಮತ್ತು ಅಂತಿಮ ಹಂತದ ಕ್ಲಿನಿಕಲ್ ಪ್ರಯೋಗವನ್ನು ಅ.12ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.


ಇದನ್ನೂ ಓದಿ: ಕೊರೊನಾ ನಂತರ 1.10 ಕೋಟಿ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ- ಯುನೆಸ್ಕೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...