Homeಅಂತರಾಷ್ಟ್ರೀಯಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಜಾನ್ಸನ್ & ಜಾನ್ಸನ್ ಕಂಪನಿ ಕೂಡ ಅಧ್ಯಯನದಲ್ಲಿ ಭಾಗವಹಿಸಿದ ಒಬ್ಬರಿಗೆ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

- Advertisement -
- Advertisement -

ಇಂಗ್ಲೆಂಡ್​ನ ಔಷಧ ತಯಾರಕ ಸಂಸ್ಥೆ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದ್ದ ಕೊರೊನಾ ಲಸಿಕೆ ಕ್ಲಿನಿಕಲ್ ಪ್ರಯೋಗದ ವೇಳೆಯಲ್ಲಿ ಬ್ರೆಜಿಲ್‌ನ ಸ್ವಯಂ ಸೇವಕರೊಬ್ಬರು ಮೃತಪಟ್ಟಿದ್ದಾರೆ.

ಬ್ರೆಜಿಲಿಯನ್ ಆರೋಗ್ಯ ಪ್ರಾಧಿಕಾರ ಅನ್ವೀಸಾ ಬುಧವಾರ ಸಾವಿನ ಕುರಿತು ತಿಳಿಸಿದೆ. ಅಲ್ಲದೆ, ಪ್ರಕರಣದ ತನಿಖೆಯ ಮಾಹಿತಿಯನ್ನು ಅದು ಪಡೆದುಕೊಂಡಿರುವುದಾಗಿ ಹೇಳಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಕ್ಲಿನಿಕಲ್‌ ಪ್ರಯೋಗದ‌ ವೇಳೆ ಸಂಭವಿಸಿದ ‌ಸಾವಿನ ನಂತರವೂ ಲಸಿಕೆ ಪರೀಕ್ಷೆ ಮುಂದುವರಿಯುತ್ತಿರುವುದಾಗಿ ಪ್ರಾಧಿಕಾರ ತಿಳಿಸಿದೆ.

ಪ್ರಯೋಗದಲ್ಲಿ ಭಾಗಿಯಾದವರ ಮಾಹಿತಿಯನ್ನ ಗೌಪ್ಯವಾಗಿಡಬೇಕೆಂಬ ಕಾರಣ ನೀಡಿ ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಲಾಗಿದೆ. ಲಸಿಕೆಯ 3 ನೇ ಹಂತದ ಕ್ಲಿನಿಕಲ್ ಟ್ರಯಲ್‌ಗೆ ನೆರವಾಗಿರುವ ಸಾವೊ ಪಾಲೊನ ಫೆಡರಲ್ ವಿಶ್ವವಿದ್ಯಾಲಯ ಸಾವಿನ ಕುರಿತು ಪ್ರತಿಕ್ರಿಯಿಸಿದ್ದು, ವಾಲಂಟಿಯರ್‌ ಬ್ರೆಜಿಲ್‌ನವರೇ. ಆದರೆ, ಆ ವ್ಯಕ್ತಿಯ ವಿವರಗಳನ್ನು ಹೇಳಲಾಗದು ಎಂದಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜೆನೆಕಾ ಕಂಪನಿ

ಕೊರೊನಾ ಸೋಂಕಿನಿಂದ ಮೃತಪಟ್ಟ ಸ್ವಯಂಸೇವಕ ಪ್ರಾಯೋಗಿಕ ಲಸಿಕೆ ಪಡೆದಿದ್ದಾನೆಯೇ ಎಂಬುದು ಸ್ಪಷ್ಟವಾಗಿಲ್ಲ, ಆದರೆ ತಜ್ಞರ ಪ್ರಕಾರ, ಪ್ರಾಯೋಗಿಕ ಲಸಿಕೆ ಪಡೆದ ನಂತರ ಸ್ವಯಂಸೇವಕರು ಸಾವನ್ನಪ್ಪಿದ್ದರೆ, ಕಂಪನಿಯು ಸುರಕ್ಷತೆಗೆ ಗಮನಕೊಟ್ಟು ಪ್ರಯೋಗ ನಿಲ್ಲಿಸಬಹುದೆಂದು ಹೇಳಿದ್ದಾರೆ ಎಂದು ಓ ಗ್ಲೋಬೊ ಎಂಬ ಬ್ರೆಜಿಲ್ ಪತ್ರಿಕೆ ವರದಿ ಮಾಡಿದೆ.

ಅಸ್ಟ್ರಾಜೆನೆಕಾ ಕಂಪನಿಯ ವಕ್ತಾರ ಬ್ರೆಂಡನ್ ಮೆಕ್‌ವೊಯ್, ವೈದ್ಯಕೀಯ ಗೌಪ್ಯತೆಯನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಆದರೆ ಅಗತ್ಯವಿರುವ ಎಲ್ಲ ಪರಿಶೀಲನಾ ಕಾರ್ಯವಿಧಾನಗಳನ್ನು ಅನುಸರಿಸಲಾಗಿದೆ ಎಂದು ಹೇಳಿದರು. “ಪ್ರಯೋಗದಲ್ಲಿ ಭಾಗವಹಿಸುವ ಸ್ವಯಂಸೇವಕರನ್ನು ಒಳಗೊಂಡು, ಲಸಿಕೆ-ಸಂಬಂಧಿತ ಯಾವುದೇ ತೊಡಕುಗಳ ಕಳವಳವಿಲ್ಲದೆ, ಎಲ್ಲವೂ ನಿರೀಕ್ಷೆಯಂತೆ ಮುಂದುವರಿಯುತ್ತಿದೆ” ಎಂದು ತಿಳಿಸಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಈ ಅಧ್ಯಯನಕ್ಕೆ ಸ್ಥಳೀಯ ಪಾಲುದಾರರಾಗಿ ಸೇವೆ ಸಲ್ಲಿಸಿದ ಬ್ರೆಜಿಲ್‌ನ ವೈದ್ಯಕೀಯ ಸಂಶೋಧನಾ ಕೇಂದ್ರವಾದ ಇನ್‌ಸ್ಟಿಟ್ಯೂಟೊ ಡಿ’ಓರ್ ತನ್ನ ಹೇಳಿಕೆಯಲ್ಲಿ, ’ಸುಮಾರು 8,000 ಬ್ರೆಜಿಲಿಯನ್ನರು ಪ್ರಯೋಗದಲ್ಲಿ ಭಾಗವಹಿಸಿದ್ದಾರೆ. ಯಾವುದೇ ಸುರಕ್ಷತಾ ಸಮಸ್ಯೆಗಳು ವರದಿಯಾಗಿಲ್ಲ’ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ಅಸ್ಟ್ರಾಜೆನೆಕಾ ಲಸಿಕೆಯನ್ನು ಖರೀದಿಸಿ, ಬ್ರೆಜಿಲ್‌ನ ಬಯೋಮೆಡಿಕಲ್ ಸಂಶೋಧನಾ ಕೇಂದ್ರ ಫಿಯೋಕ್ರೂಜ್​ನಲ್ಲಿ ಉತ್ಪಾದನೆ ಮಾಡಲು ಬ್ರೆಜಿಲ್ ಸರ್ಕಾರ ಯೋಜನೆ ಮಾಡಿದೆ. ಇನ್ನೊಂದೆಡೆ, ಚೀನಾದ ಸಿನೋವ್ಯಾಕ್ ಲಸಿಕೆಯನ್ನು ಸಾವೊ ಪಾಲೊದ ಸಂಶೋಧನಾ ಕೇಂದ್ರ ಬುಟಾಂಟನ್‌ನಲ್ಲಿ ಪರೀಕ್ಷಿಸಲಾಗುತ್ತಿದೆ.

ಪ್ರಾಯೋಗಿಕ ಲಸಿಕೆ ಪಡೆದವರಲ್ಲಿ ಕೆಲವರು ಅನಾರೋಗ್ಯದಿಂದ ಅನಾರೋಗ್ಯಕ್ಕೆ ಒಳಗಾದ ನಂತರ ಅಸ್ಟ್ರಾಜೆನೆಕಾ ತನ್ನ ಜಾಗತಿಕ ಪ್ರಯೋಗಗಳನ್ನು ನಿಲ್ಲಿಸಿದ ಕೆಲವೇ ವಾರಗಳ ನಂತರ ಈ ಸಾವು ಸಂಭವಿಸಿದೆ. ಆದರೆ, ಕೆಲವೇ ದಿನಗಳಲ್ಲಿ, ಅಸ್ಟ್ರಾಜೆನೆಕಾ ಯುನೈಟೆಡ್ ಕಿಂಗ್‌ಡಂನಲ್ಲಿ ತನ್ನ ಪ್ರಯೋಗಗಳನ್ನು ಪುನರಾರಂಭಿಸಿತ್ತು.

ಜಾನ್ಸನ್ & ಜಾನ್ಸನ್ ಕಂಪನಿ ಕೂಡ ಅಧ್ಯಯನದಲ್ಲಿ ಭಾಗವಹಿಸಿದವರಲ್ಲಿ ವಿವರಿಸಲಾಗದ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಕಾರಣ ಮೂರನೇ ಮತ್ತು ಅಂತಿಮ ಹಂತದ ಕ್ಲಿನಿಕಲ್ ಪ್ರಯೋಗವನ್ನು ಅ.12ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.


ಇದನ್ನೂ ಓದಿ: ಕೊರೊನಾ ನಂತರ 1.10 ಕೋಟಿ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ- ಯುನೆಸ್ಕೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...