Homeಅಂತರಾಷ್ಟ್ರೀಯಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಜಾನ್ಸನ್ & ಜಾನ್ಸನ್ ಕಂಪನಿ ಕೂಡ ಅಧ್ಯಯನದಲ್ಲಿ ಭಾಗವಹಿಸಿದ ಒಬ್ಬರಿಗೆ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

- Advertisement -
- Advertisement -

ಇಂಗ್ಲೆಂಡ್​ನ ಔಷಧ ತಯಾರಕ ಸಂಸ್ಥೆ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದ್ದ ಕೊರೊನಾ ಲಸಿಕೆ ಕ್ಲಿನಿಕಲ್ ಪ್ರಯೋಗದ ವೇಳೆಯಲ್ಲಿ ಬ್ರೆಜಿಲ್‌ನ ಸ್ವಯಂ ಸೇವಕರೊಬ್ಬರು ಮೃತಪಟ್ಟಿದ್ದಾರೆ.

ಬ್ರೆಜಿಲಿಯನ್ ಆರೋಗ್ಯ ಪ್ರಾಧಿಕಾರ ಅನ್ವೀಸಾ ಬುಧವಾರ ಸಾವಿನ ಕುರಿತು ತಿಳಿಸಿದೆ. ಅಲ್ಲದೆ, ಪ್ರಕರಣದ ತನಿಖೆಯ ಮಾಹಿತಿಯನ್ನು ಅದು ಪಡೆದುಕೊಂಡಿರುವುದಾಗಿ ಹೇಳಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಕ್ಲಿನಿಕಲ್‌ ಪ್ರಯೋಗದ‌ ವೇಳೆ ಸಂಭವಿಸಿದ ‌ಸಾವಿನ ನಂತರವೂ ಲಸಿಕೆ ಪರೀಕ್ಷೆ ಮುಂದುವರಿಯುತ್ತಿರುವುದಾಗಿ ಪ್ರಾಧಿಕಾರ ತಿಳಿಸಿದೆ.

ಪ್ರಯೋಗದಲ್ಲಿ ಭಾಗಿಯಾದವರ ಮಾಹಿತಿಯನ್ನ ಗೌಪ್ಯವಾಗಿಡಬೇಕೆಂಬ ಕಾರಣ ನೀಡಿ ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಲಾಗಿದೆ. ಲಸಿಕೆಯ 3 ನೇ ಹಂತದ ಕ್ಲಿನಿಕಲ್ ಟ್ರಯಲ್‌ಗೆ ನೆರವಾಗಿರುವ ಸಾವೊ ಪಾಲೊನ ಫೆಡರಲ್ ವಿಶ್ವವಿದ್ಯಾಲಯ ಸಾವಿನ ಕುರಿತು ಪ್ರತಿಕ್ರಿಯಿಸಿದ್ದು, ವಾಲಂಟಿಯರ್‌ ಬ್ರೆಜಿಲ್‌ನವರೇ. ಆದರೆ, ಆ ವ್ಯಕ್ತಿಯ ವಿವರಗಳನ್ನು ಹೇಳಲಾಗದು ಎಂದಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜೆನೆಕಾ ಕಂಪನಿ

ಕೊರೊನಾ ಸೋಂಕಿನಿಂದ ಮೃತಪಟ್ಟ ಸ್ವಯಂಸೇವಕ ಪ್ರಾಯೋಗಿಕ ಲಸಿಕೆ ಪಡೆದಿದ್ದಾನೆಯೇ ಎಂಬುದು ಸ್ಪಷ್ಟವಾಗಿಲ್ಲ, ಆದರೆ ತಜ್ಞರ ಪ್ರಕಾರ, ಪ್ರಾಯೋಗಿಕ ಲಸಿಕೆ ಪಡೆದ ನಂತರ ಸ್ವಯಂಸೇವಕರು ಸಾವನ್ನಪ್ಪಿದ್ದರೆ, ಕಂಪನಿಯು ಸುರಕ್ಷತೆಗೆ ಗಮನಕೊಟ್ಟು ಪ್ರಯೋಗ ನಿಲ್ಲಿಸಬಹುದೆಂದು ಹೇಳಿದ್ದಾರೆ ಎಂದು ಓ ಗ್ಲೋಬೊ ಎಂಬ ಬ್ರೆಜಿಲ್ ಪತ್ರಿಕೆ ವರದಿ ಮಾಡಿದೆ.

ಅಸ್ಟ್ರಾಜೆನೆಕಾ ಕಂಪನಿಯ ವಕ್ತಾರ ಬ್ರೆಂಡನ್ ಮೆಕ್‌ವೊಯ್, ವೈದ್ಯಕೀಯ ಗೌಪ್ಯತೆಯನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಆದರೆ ಅಗತ್ಯವಿರುವ ಎಲ್ಲ ಪರಿಶೀಲನಾ ಕಾರ್ಯವಿಧಾನಗಳನ್ನು ಅನುಸರಿಸಲಾಗಿದೆ ಎಂದು ಹೇಳಿದರು. “ಪ್ರಯೋಗದಲ್ಲಿ ಭಾಗವಹಿಸುವ ಸ್ವಯಂಸೇವಕರನ್ನು ಒಳಗೊಂಡು, ಲಸಿಕೆ-ಸಂಬಂಧಿತ ಯಾವುದೇ ತೊಡಕುಗಳ ಕಳವಳವಿಲ್ಲದೆ, ಎಲ್ಲವೂ ನಿರೀಕ್ಷೆಯಂತೆ ಮುಂದುವರಿಯುತ್ತಿದೆ” ಎಂದು ತಿಳಿಸಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಈ ಅಧ್ಯಯನಕ್ಕೆ ಸ್ಥಳೀಯ ಪಾಲುದಾರರಾಗಿ ಸೇವೆ ಸಲ್ಲಿಸಿದ ಬ್ರೆಜಿಲ್‌ನ ವೈದ್ಯಕೀಯ ಸಂಶೋಧನಾ ಕೇಂದ್ರವಾದ ಇನ್‌ಸ್ಟಿಟ್ಯೂಟೊ ಡಿ’ಓರ್ ತನ್ನ ಹೇಳಿಕೆಯಲ್ಲಿ, ’ಸುಮಾರು 8,000 ಬ್ರೆಜಿಲಿಯನ್ನರು ಪ್ರಯೋಗದಲ್ಲಿ ಭಾಗವಹಿಸಿದ್ದಾರೆ. ಯಾವುದೇ ಸುರಕ್ಷತಾ ಸಮಸ್ಯೆಗಳು ವರದಿಯಾಗಿಲ್ಲ’ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ಅಸ್ಟ್ರಾಜೆನೆಕಾ ಲಸಿಕೆಯನ್ನು ಖರೀದಿಸಿ, ಬ್ರೆಜಿಲ್‌ನ ಬಯೋಮೆಡಿಕಲ್ ಸಂಶೋಧನಾ ಕೇಂದ್ರ ಫಿಯೋಕ್ರೂಜ್​ನಲ್ಲಿ ಉತ್ಪಾದನೆ ಮಾಡಲು ಬ್ರೆಜಿಲ್ ಸರ್ಕಾರ ಯೋಜನೆ ಮಾಡಿದೆ. ಇನ್ನೊಂದೆಡೆ, ಚೀನಾದ ಸಿನೋವ್ಯಾಕ್ ಲಸಿಕೆಯನ್ನು ಸಾವೊ ಪಾಲೊದ ಸಂಶೋಧನಾ ಕೇಂದ್ರ ಬುಟಾಂಟನ್‌ನಲ್ಲಿ ಪರೀಕ್ಷಿಸಲಾಗುತ್ತಿದೆ.

ಪ್ರಾಯೋಗಿಕ ಲಸಿಕೆ ಪಡೆದವರಲ್ಲಿ ಕೆಲವರು ಅನಾರೋಗ್ಯದಿಂದ ಅನಾರೋಗ್ಯಕ್ಕೆ ಒಳಗಾದ ನಂತರ ಅಸ್ಟ್ರಾಜೆನೆಕಾ ತನ್ನ ಜಾಗತಿಕ ಪ್ರಯೋಗಗಳನ್ನು ನಿಲ್ಲಿಸಿದ ಕೆಲವೇ ವಾರಗಳ ನಂತರ ಈ ಸಾವು ಸಂಭವಿಸಿದೆ. ಆದರೆ, ಕೆಲವೇ ದಿನಗಳಲ್ಲಿ, ಅಸ್ಟ್ರಾಜೆನೆಕಾ ಯುನೈಟೆಡ್ ಕಿಂಗ್‌ಡಂನಲ್ಲಿ ತನ್ನ ಪ್ರಯೋಗಗಳನ್ನು ಪುನರಾರಂಭಿಸಿತ್ತು.

ಜಾನ್ಸನ್ & ಜಾನ್ಸನ್ ಕಂಪನಿ ಕೂಡ ಅಧ್ಯಯನದಲ್ಲಿ ಭಾಗವಹಿಸಿದವರಲ್ಲಿ ವಿವರಿಸಲಾಗದ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಕಾರಣ ಮೂರನೇ ಮತ್ತು ಅಂತಿಮ ಹಂತದ ಕ್ಲಿನಿಕಲ್ ಪ್ರಯೋಗವನ್ನು ಅ.12ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.


ಇದನ್ನೂ ಓದಿ: ಕೊರೊನಾ ನಂತರ 1.10 ಕೋಟಿ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ- ಯುನೆಸ್ಕೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...