Homeಕರೋನಾ ತಲ್ಲಣಮಹಾರಾಷ್ಟ್ರ, ಕೇರಳದಲ್ಲಿ ಹೆಚ್ಚುತ್ತಲೇ ಇದೆ ಸೋಂಕಿನ ಸಂಖ್ಯೆ-ಉತ್ತರ ಪ್ರದೇಶದಲ್ಲಿ ಕಪ್ಪಾ ರೂಪಾಂತರಿ ಪತ್ತೆ

ಮಹಾರಾಷ್ಟ್ರ, ಕೇರಳದಲ್ಲಿ ಹೆಚ್ಚುತ್ತಲೇ ಇದೆ ಸೋಂಕಿನ ಸಂಖ್ಯೆ-ಉತ್ತರ ಪ್ರದೇಶದಲ್ಲಿ ಕಪ್ಪಾ ರೂಪಾಂತರಿ ಪತ್ತೆ

- Advertisement -
- Advertisement -

ದೇಶದಲ್ಲಿ ಕೋವಿಡ್‌ ಎರಡನೇ ಅಲೆ ಮುಕ್ತಾಯವಾಯಿತು ಎಂದು ಅನ್ನುತ್ತಿರುವಾಗಲೇ ಮತ್ತೊಮ್ಮೆ ಕೊರೋನಾ ಭೀತಿ ಆರಂಭವಾಗಿದೆ. ಇದಕ್ಕೆ ಕಾರಣ ಕೆಲವು ರಾಜ್ಯಗಳಲ್ಲಿ ಕಳೆದೊಂದು ವಾರದಿಂದ ಹೆಚ್ಚುತ್ತಿರುವ ಕೊರೋನಾ ಸೊಂಕಿನ ಸಂಖ್ಯೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಜುಲೈ ಮೊದಲವಾರದಿಂದ ಆರಂಭವಾದ ಸೋಂಕಿತರ ಸಂಖ್ಯೆಯಲ್ಲಿನ ಹೆಚ್ಚಳ ಎರಡನೇ ವಾರದ ಹೊತ್ತಿಗೆ ಗಣನೀಯ ಸಂಖ್ಯೆಯನ್ನು ತಲುಪಿದೆ. ನಿರ್ಭಂದಗಳನ್ನು ತೆರವುಗೊಳಿಸಿದ ಪರಿಣಾಮವಾಗಿ ಪ್ರವಾಸಿ ತಾಣಗಳು ತುಂಬಿ ತುಳುಕಾಡುತ್ತಿವೆ. ಇದರ ನಡುವೆ ಹೊಸ ಅಪಾಯಕಾರಿ ಕಪ್ಪಾ ರೂಪಾಂತರಿ ವೈರಸ್‌ ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದೆ.

ದೇಶದ ಕೋವಿಡ್ -19 ಪರಿಸ್ಥಿತಿಯ ಕುರಿತು ಪತ್ರಿಕಾಗೋಷ್ಠಿಯನ್ನು ನಡೆಸಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್, ದೇಶದಲ್ಲಿ  ವೈರಸ್ ಇನ್ನೂ ಹರಡುತ್ತಿದೆ. ಕೋವಿಡ್ ಮಾನದಂಡಗಳ ಉಲ್ಲಂಘನೆ ಕಳವಳಕಾರಿಯಾಗಿದೆ.ದೇಶದ ಒಟ್ಟು ಕೋವಿಡ್ -19 ಪ್ರಕರಣಗಳಲ್ಲಿ  50% ಕ್ಕು ಹೆಚ್ಚು ಪ್ರಕರಣಗಳು ಮಹಾರಾಷ್ಟ್ರ ಮತ್ತು ಕೇರಳದಿಂದ ಬಂದಿವೆ. ಕೇರಳದ 14 ಮತ್ತು ಮಹಾರಾಷ್ಟ್ರದ 15 ಜಿಲ್ಲೆಗಳ ಪರಿಸ್ಥಿತಿ ಕಳವಳಕಾರಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೇರಳದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ವೈರಸ್‌ನ 13,772 ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ 9,083 ಜನರು ಸೋಂಕಿಗೆ ತುತ್ತಾಗಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆ 43,504 ಇದೆ. 3,211 ಪ್ರಕರಣಗಳೊಂದಿಗೆ ತಮಿಳುನಾಡು, ಆಂಧ್ರಪ್ರದೇಶ 2,982 ಗಳು ನಂತರ ಸ್ಥಾನದಲ್ಲಿ ಇವೆ. ಅಸ್ಸಾಂನಲ್ಲಿ 2,644 ಹೊಸ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಮಕ್ಕಳಿಗೂ ಬಂತು ಕೋವಿಡ್ ಲಸಿಕೆ : ಸೆಪ್ಟೆಂಬರ್‌ನಲ್ಲಿ ಝೈಡಸ್‌ ಕ್ಯಾಡಿಲಾ ವ್ಯಾಕ್ಸಿನ್‌-ಎನ್‌.ಕೆ. ಅರೋರಾ

ಕರ್ನಾಟಕದಲ್ಲಿ  2,530 ಹೊಸ ಪ್ರಕರಣಗಳು ದಾಖಲಾಗಿದ್ದು 62 ಜನರು ಕೋವಿಡ್‌ ಕಾರಣದಿಂದ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಮಾತ್ರ ಕೋವಿಡ್ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು ಒಂದೇ ದಿನ 439 ಜನರು ಸೋಂಕಿಗೆ ಮೃತಪಟ್ಟಿದ್ದಾರೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್‌ ಪಾಸಿಟಿವಿಟಿ ದರ 10% ಕ್ಕಿಂತಲೂ ಹೆಚ್ಚಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ನಿರ್ಬಂಧಗಳನ್ನು ಸಡಿಲಿಸಿದ ಕಾರಣಕ್ಕೆ  ಜನರ ಓಡಾಟವೂ ಹೆಚ್ಚಿದ್ದು ಮುಂಬೈ. ದೆಹಲಿ ಸೇರಿದಂತೆ ದೇಶದ ನಗರಗಳ ಸಾರ್ವಜನಿಕ ಸ್ಥಳಗಳಲ್ಲಿ ಜನ ಸಂದಣಿ ಉಂಟಾಗುತ್ತಿರುವುದು ಕೂಡ ಸೋಂಕು ಹೆಚ್ಚುಳಕ್ಕೆ ಒಂದು ಕಾರಣ. ಕೋವಿಡ್ ಮೂರನೆ ಅಲೆ ದೇಶದಲ್ಲಿ ಆರಂಭವಾಗಿರುವ ಸೂಚನೆ ಇದಾಗಿರಬಹುದು. ಕೇಂದ್ರ ಆರೋಗ್ಯ ಇಲಾಖೆಯಾಗಲಿ ಅಥವಾ ತಜ್ಞರಾಗಲಿ ಮೂರನೇ ಅಲೆ ಆರಂಭವಾಗಿರುವ ಕುರಿತು ಇದುವರೆಗೆ ಅಧಿಕೃತವಾದ ಮಾಹಿತಿ ನೀಡಿಲ್ಲ.

ಪಂಜಾಬ್‌ನಲ್ಲಿ ಕ್ಯಾಪ್ಟನ್‌ ಅಮರಿಂರ್‌ ಸಿಂಗ್ ಸರ್ಕಾರ ವಾರಾಂತ್ಯದ ಕರ್ಪ್ಯು ಮತ್ತು ರಾತ್ರಿ ಕರ್ಪ್ಯುಗಳನ್ನು ತೆಗೆದಿದೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಡೆಲ್ಟಾ ರೂಪಾಂತರಿಯಿಂದ ಹೆಚ್ಚಾದ, ಕೊರೊನಾ ಪ್ರಕರಣಗಳು!

ಉತ್ತರ ಪ್ರದೇಶದಲ್ಲಿ ಹೊಸ ರೂಪಾಂತರಿ ಕಪ್ಪಾ ವೈರಸ್‌ ತಳಿಯ 2 ಪ್ರಕರಣಗಳು ಪತ್ತೆ

ವ್ಯಾಪಕವಾಗಿ ಹರಡಬಲ್ಲ ಕೊವಿಡ್-19ನ ಕಪ್ಪಾ ತಳಿ ರೂಪಾಂತರ ಸೋಂಕುಗಳು ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದೆ.ಕಪ್ಪಾ ತಳಿಯ ಎರಡು ಪ್ರಕರಣಗಳು ಇಲ್ಲಿ ಪತ್ತೆಯಾಗಿರುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಅಧಿಕೃತ ಹೇಳಿಕೆಯ ಪ್ರಕಾರ ಲಖನೌದ ಕಿಂಗ್ ಜಾರ್ಜ್ ವೈದ್ಯಕೀಯ ಕಾಲೇಜಿನಲ್ಲನ ಮಾದರಿಗಳನ್ನು ಪರೀಕ್ಷೆಗೊಳಪಡಿಸಿದಾಗ ಈ ತಳಿ ಪತ್ತೆಯಾಗಿದೆ. ಶುಕ್ರವಾರ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಈ ಬಗ್ಗೆ  ಮಾಹಿತಿ ನೀಡಿದೆ.

ಕಾಪ್ಪಾ ರೂಪಂತರಿ ಕುರಿತಾಗಿ ಮಾಹಿತಿ ನೀಡಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮಿತ್ ಮೋಹನ್ ಪ್ರಸಾದ್ ಅವರು, ‘ಜೀನೋಮ್ ಸೀಕ್ವೆನ್ಸಿಂಗ್ ಎನ್ನುವುದು ಪ್ರಯೋಗಾಲಯ ಪ್ರಕ್ರಿಯೆಯಾಗಿದ್ದು, ಇದು ರೂಪಾಂತರಗಳನ್ನು ನಿರೂಪಿಸಲು ಮತ್ತು ರೋಗ ಪತ್ತೆಹಚ್ಚಲಿರುವ ವಿಧಾನವಾಗಿದೆ. ಪ್ರಸ್ತುತ, ಉತ್ತರ ಪ್ರದೇಶ  ರಾಜ್ಯದಲ್ಲಿ ದೈನಂದಿನ ಕೋವಿಡ್‌ ಪಾಸಿಟಿವಿಟಿ ದರವು ಶೇಕಡಾ 0.04ರಷ್ಟಿದೆ.ಈ ಹಿಂದೆಯೇ ಈ ಕಪ್ಪಾ ರೂಪಾಂತರಿ ತಳಿಯ  ಪ್ರಕರಣಗಳು ರಾಜ್ಯದಲ್ಲಿ ಕಂಡುಬಂದಿವೆ ಎಂದು ಹೇಳಿದ್ದಾರೆ.

ಈ ಕಪ್ಪಾರೂಪಾಂತರಿ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ. ಇದು ಕೊರೊನಾ ವೈರಸ್ನ ಒಂದು ರೂಪಾಂತರವಾಗಿದೆ ಮತ್ತು ಅದರ ಚಿಕಿತ್ಸೆಯು ಸಾಧ್ಯವಿದೆ. ಎಚ್ಚರಿಕೆಯ ಕ್ರಮವಾಗಿ, ಪೀಡಿತ ಜಿಲ್ಲೆಗಳ ಹೆಸರುಗಳು ಅಥವಾ ಅದರ ಮೂಲದ ಸ್ಥಳಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಪ್ರಸಾದ್ ಹೇಳಿದರು.

 ಸೋಂಕಿನ ಎರಡನೆಯ ಅಲೆಯ ನಡುವೆಯೇ ಡೆಲ್ಟಾ, ಆಲ್ಫಾ ಮತ್ತು ಕಪ್ಪಾದಂತಹ ರೂಪಾಂತರಗಳು ಹೆಚ್ಚು ಹರಡುತ್ತವೆ ಎಂದು ಹೇಳಲಾಗುತ್ತಿರುವುದರಿಂದ ರಾಜ್ಯಗಳಿಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಈಗಾಗಲೇ ಎಚ್ಚರಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತರಾಗಿ, ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದಾರೆ ಕರ್ನಾಟಕದ ಮಾನವ ಕಂಪ್ಯೂಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....