Homeಕರೋನಾ ತಲ್ಲಣಮಹಾರಾಷ್ಟ್ರ, ಕೇರಳದಲ್ಲಿ ಹೆಚ್ಚುತ್ತಲೇ ಇದೆ ಸೋಂಕಿನ ಸಂಖ್ಯೆ-ಉತ್ತರ ಪ್ರದೇಶದಲ್ಲಿ ಕಪ್ಪಾ ರೂಪಾಂತರಿ ಪತ್ತೆ

ಮಹಾರಾಷ್ಟ್ರ, ಕೇರಳದಲ್ಲಿ ಹೆಚ್ಚುತ್ತಲೇ ಇದೆ ಸೋಂಕಿನ ಸಂಖ್ಯೆ-ಉತ್ತರ ಪ್ರದೇಶದಲ್ಲಿ ಕಪ್ಪಾ ರೂಪಾಂತರಿ ಪತ್ತೆ

- Advertisement -
- Advertisement -

ದೇಶದಲ್ಲಿ ಕೋವಿಡ್‌ ಎರಡನೇ ಅಲೆ ಮುಕ್ತಾಯವಾಯಿತು ಎಂದು ಅನ್ನುತ್ತಿರುವಾಗಲೇ ಮತ್ತೊಮ್ಮೆ ಕೊರೋನಾ ಭೀತಿ ಆರಂಭವಾಗಿದೆ. ಇದಕ್ಕೆ ಕಾರಣ ಕೆಲವು ರಾಜ್ಯಗಳಲ್ಲಿ ಕಳೆದೊಂದು ವಾರದಿಂದ ಹೆಚ್ಚುತ್ತಿರುವ ಕೊರೋನಾ ಸೊಂಕಿನ ಸಂಖ್ಯೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಜುಲೈ ಮೊದಲವಾರದಿಂದ ಆರಂಭವಾದ ಸೋಂಕಿತರ ಸಂಖ್ಯೆಯಲ್ಲಿನ ಹೆಚ್ಚಳ ಎರಡನೇ ವಾರದ ಹೊತ್ತಿಗೆ ಗಣನೀಯ ಸಂಖ್ಯೆಯನ್ನು ತಲುಪಿದೆ. ನಿರ್ಭಂದಗಳನ್ನು ತೆರವುಗೊಳಿಸಿದ ಪರಿಣಾಮವಾಗಿ ಪ್ರವಾಸಿ ತಾಣಗಳು ತುಂಬಿ ತುಳುಕಾಡುತ್ತಿವೆ. ಇದರ ನಡುವೆ ಹೊಸ ಅಪಾಯಕಾರಿ ಕಪ್ಪಾ ರೂಪಾಂತರಿ ವೈರಸ್‌ ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದೆ.

ದೇಶದ ಕೋವಿಡ್ -19 ಪರಿಸ್ಥಿತಿಯ ಕುರಿತು ಪತ್ರಿಕಾಗೋಷ್ಠಿಯನ್ನು ನಡೆಸಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್, ದೇಶದಲ್ಲಿ  ವೈರಸ್ ಇನ್ನೂ ಹರಡುತ್ತಿದೆ. ಕೋವಿಡ್ ಮಾನದಂಡಗಳ ಉಲ್ಲಂಘನೆ ಕಳವಳಕಾರಿಯಾಗಿದೆ.ದೇಶದ ಒಟ್ಟು ಕೋವಿಡ್ -19 ಪ್ರಕರಣಗಳಲ್ಲಿ  50% ಕ್ಕು ಹೆಚ್ಚು ಪ್ರಕರಣಗಳು ಮಹಾರಾಷ್ಟ್ರ ಮತ್ತು ಕೇರಳದಿಂದ ಬಂದಿವೆ. ಕೇರಳದ 14 ಮತ್ತು ಮಹಾರಾಷ್ಟ್ರದ 15 ಜಿಲ್ಲೆಗಳ ಪರಿಸ್ಥಿತಿ ಕಳವಳಕಾರಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೇರಳದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ವೈರಸ್‌ನ 13,772 ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ 9,083 ಜನರು ಸೋಂಕಿಗೆ ತುತ್ತಾಗಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆ 43,504 ಇದೆ. 3,211 ಪ್ರಕರಣಗಳೊಂದಿಗೆ ತಮಿಳುನಾಡು, ಆಂಧ್ರಪ್ರದೇಶ 2,982 ಗಳು ನಂತರ ಸ್ಥಾನದಲ್ಲಿ ಇವೆ. ಅಸ್ಸಾಂನಲ್ಲಿ 2,644 ಹೊಸ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಮಕ್ಕಳಿಗೂ ಬಂತು ಕೋವಿಡ್ ಲಸಿಕೆ : ಸೆಪ್ಟೆಂಬರ್‌ನಲ್ಲಿ ಝೈಡಸ್‌ ಕ್ಯಾಡಿಲಾ ವ್ಯಾಕ್ಸಿನ್‌-ಎನ್‌.ಕೆ. ಅರೋರಾ

ಕರ್ನಾಟಕದಲ್ಲಿ  2,530 ಹೊಸ ಪ್ರಕರಣಗಳು ದಾಖಲಾಗಿದ್ದು 62 ಜನರು ಕೋವಿಡ್‌ ಕಾರಣದಿಂದ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಮಾತ್ರ ಕೋವಿಡ್ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು ಒಂದೇ ದಿನ 439 ಜನರು ಸೋಂಕಿಗೆ ಮೃತಪಟ್ಟಿದ್ದಾರೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್‌ ಪಾಸಿಟಿವಿಟಿ ದರ 10% ಕ್ಕಿಂತಲೂ ಹೆಚ್ಚಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ನಿರ್ಬಂಧಗಳನ್ನು ಸಡಿಲಿಸಿದ ಕಾರಣಕ್ಕೆ  ಜನರ ಓಡಾಟವೂ ಹೆಚ್ಚಿದ್ದು ಮುಂಬೈ. ದೆಹಲಿ ಸೇರಿದಂತೆ ದೇಶದ ನಗರಗಳ ಸಾರ್ವಜನಿಕ ಸ್ಥಳಗಳಲ್ಲಿ ಜನ ಸಂದಣಿ ಉಂಟಾಗುತ್ತಿರುವುದು ಕೂಡ ಸೋಂಕು ಹೆಚ್ಚುಳಕ್ಕೆ ಒಂದು ಕಾರಣ. ಕೋವಿಡ್ ಮೂರನೆ ಅಲೆ ದೇಶದಲ್ಲಿ ಆರಂಭವಾಗಿರುವ ಸೂಚನೆ ಇದಾಗಿರಬಹುದು. ಕೇಂದ್ರ ಆರೋಗ್ಯ ಇಲಾಖೆಯಾಗಲಿ ಅಥವಾ ತಜ್ಞರಾಗಲಿ ಮೂರನೇ ಅಲೆ ಆರಂಭವಾಗಿರುವ ಕುರಿತು ಇದುವರೆಗೆ ಅಧಿಕೃತವಾದ ಮಾಹಿತಿ ನೀಡಿಲ್ಲ.

ಪಂಜಾಬ್‌ನಲ್ಲಿ ಕ್ಯಾಪ್ಟನ್‌ ಅಮರಿಂರ್‌ ಸಿಂಗ್ ಸರ್ಕಾರ ವಾರಾಂತ್ಯದ ಕರ್ಪ್ಯು ಮತ್ತು ರಾತ್ರಿ ಕರ್ಪ್ಯುಗಳನ್ನು ತೆಗೆದಿದೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಡೆಲ್ಟಾ ರೂಪಾಂತರಿಯಿಂದ ಹೆಚ್ಚಾದ, ಕೊರೊನಾ ಪ್ರಕರಣಗಳು!

ಉತ್ತರ ಪ್ರದೇಶದಲ್ಲಿ ಹೊಸ ರೂಪಾಂತರಿ ಕಪ್ಪಾ ವೈರಸ್‌ ತಳಿಯ 2 ಪ್ರಕರಣಗಳು ಪತ್ತೆ

ವ್ಯಾಪಕವಾಗಿ ಹರಡಬಲ್ಲ ಕೊವಿಡ್-19ನ ಕಪ್ಪಾ ತಳಿ ರೂಪಾಂತರ ಸೋಂಕುಗಳು ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದೆ.ಕಪ್ಪಾ ತಳಿಯ ಎರಡು ಪ್ರಕರಣಗಳು ಇಲ್ಲಿ ಪತ್ತೆಯಾಗಿರುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಅಧಿಕೃತ ಹೇಳಿಕೆಯ ಪ್ರಕಾರ ಲಖನೌದ ಕಿಂಗ್ ಜಾರ್ಜ್ ವೈದ್ಯಕೀಯ ಕಾಲೇಜಿನಲ್ಲನ ಮಾದರಿಗಳನ್ನು ಪರೀಕ್ಷೆಗೊಳಪಡಿಸಿದಾಗ ಈ ತಳಿ ಪತ್ತೆಯಾಗಿದೆ. ಶುಕ್ರವಾರ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಈ ಬಗ್ಗೆ  ಮಾಹಿತಿ ನೀಡಿದೆ.

ಕಾಪ್ಪಾ ರೂಪಂತರಿ ಕುರಿತಾಗಿ ಮಾಹಿತಿ ನೀಡಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮಿತ್ ಮೋಹನ್ ಪ್ರಸಾದ್ ಅವರು, ‘ಜೀನೋಮ್ ಸೀಕ್ವೆನ್ಸಿಂಗ್ ಎನ್ನುವುದು ಪ್ರಯೋಗಾಲಯ ಪ್ರಕ್ರಿಯೆಯಾಗಿದ್ದು, ಇದು ರೂಪಾಂತರಗಳನ್ನು ನಿರೂಪಿಸಲು ಮತ್ತು ರೋಗ ಪತ್ತೆಹಚ್ಚಲಿರುವ ವಿಧಾನವಾಗಿದೆ. ಪ್ರಸ್ತುತ, ಉತ್ತರ ಪ್ರದೇಶ  ರಾಜ್ಯದಲ್ಲಿ ದೈನಂದಿನ ಕೋವಿಡ್‌ ಪಾಸಿಟಿವಿಟಿ ದರವು ಶೇಕಡಾ 0.04ರಷ್ಟಿದೆ.ಈ ಹಿಂದೆಯೇ ಈ ಕಪ್ಪಾ ರೂಪಾಂತರಿ ತಳಿಯ  ಪ್ರಕರಣಗಳು ರಾಜ್ಯದಲ್ಲಿ ಕಂಡುಬಂದಿವೆ ಎಂದು ಹೇಳಿದ್ದಾರೆ.

ಈ ಕಪ್ಪಾರೂಪಾಂತರಿ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ. ಇದು ಕೊರೊನಾ ವೈರಸ್ನ ಒಂದು ರೂಪಾಂತರವಾಗಿದೆ ಮತ್ತು ಅದರ ಚಿಕಿತ್ಸೆಯು ಸಾಧ್ಯವಿದೆ. ಎಚ್ಚರಿಕೆಯ ಕ್ರಮವಾಗಿ, ಪೀಡಿತ ಜಿಲ್ಲೆಗಳ ಹೆಸರುಗಳು ಅಥವಾ ಅದರ ಮೂಲದ ಸ್ಥಳಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಪ್ರಸಾದ್ ಹೇಳಿದರು.

 ಸೋಂಕಿನ ಎರಡನೆಯ ಅಲೆಯ ನಡುವೆಯೇ ಡೆಲ್ಟಾ, ಆಲ್ಫಾ ಮತ್ತು ಕಪ್ಪಾದಂತಹ ರೂಪಾಂತರಗಳು ಹೆಚ್ಚು ಹರಡುತ್ತವೆ ಎಂದು ಹೇಳಲಾಗುತ್ತಿರುವುದರಿಂದ ರಾಜ್ಯಗಳಿಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಈಗಾಗಲೇ ಎಚ್ಚರಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತರಾಗಿ, ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದಾರೆ ಕರ್ನಾಟಕದ ಮಾನವ ಕಂಪ್ಯೂಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...