Homeಕರೋನಾ ತಲ್ಲಣಮಹಾರಾಷ್ಟ್ರ, ಕೇರಳದಲ್ಲಿ ಹೆಚ್ಚುತ್ತಲೇ ಇದೆ ಸೋಂಕಿನ ಸಂಖ್ಯೆ-ಉತ್ತರ ಪ್ರದೇಶದಲ್ಲಿ ಕಪ್ಪಾ ರೂಪಾಂತರಿ ಪತ್ತೆ

ಮಹಾರಾಷ್ಟ್ರ, ಕೇರಳದಲ್ಲಿ ಹೆಚ್ಚುತ್ತಲೇ ಇದೆ ಸೋಂಕಿನ ಸಂಖ್ಯೆ-ಉತ್ತರ ಪ್ರದೇಶದಲ್ಲಿ ಕಪ್ಪಾ ರೂಪಾಂತರಿ ಪತ್ತೆ

- Advertisement -
- Advertisement -

ದೇಶದಲ್ಲಿ ಕೋವಿಡ್‌ ಎರಡನೇ ಅಲೆ ಮುಕ್ತಾಯವಾಯಿತು ಎಂದು ಅನ್ನುತ್ತಿರುವಾಗಲೇ ಮತ್ತೊಮ್ಮೆ ಕೊರೋನಾ ಭೀತಿ ಆರಂಭವಾಗಿದೆ. ಇದಕ್ಕೆ ಕಾರಣ ಕೆಲವು ರಾಜ್ಯಗಳಲ್ಲಿ ಕಳೆದೊಂದು ವಾರದಿಂದ ಹೆಚ್ಚುತ್ತಿರುವ ಕೊರೋನಾ ಸೊಂಕಿನ ಸಂಖ್ಯೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಜುಲೈ ಮೊದಲವಾರದಿಂದ ಆರಂಭವಾದ ಸೋಂಕಿತರ ಸಂಖ್ಯೆಯಲ್ಲಿನ ಹೆಚ್ಚಳ ಎರಡನೇ ವಾರದ ಹೊತ್ತಿಗೆ ಗಣನೀಯ ಸಂಖ್ಯೆಯನ್ನು ತಲುಪಿದೆ. ನಿರ್ಭಂದಗಳನ್ನು ತೆರವುಗೊಳಿಸಿದ ಪರಿಣಾಮವಾಗಿ ಪ್ರವಾಸಿ ತಾಣಗಳು ತುಂಬಿ ತುಳುಕಾಡುತ್ತಿವೆ. ಇದರ ನಡುವೆ ಹೊಸ ಅಪಾಯಕಾರಿ ಕಪ್ಪಾ ರೂಪಾಂತರಿ ವೈರಸ್‌ ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದೆ.

ದೇಶದ ಕೋವಿಡ್ -19 ಪರಿಸ್ಥಿತಿಯ ಕುರಿತು ಪತ್ರಿಕಾಗೋಷ್ಠಿಯನ್ನು ನಡೆಸಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್, ದೇಶದಲ್ಲಿ  ವೈರಸ್ ಇನ್ನೂ ಹರಡುತ್ತಿದೆ. ಕೋವಿಡ್ ಮಾನದಂಡಗಳ ಉಲ್ಲಂಘನೆ ಕಳವಳಕಾರಿಯಾಗಿದೆ.ದೇಶದ ಒಟ್ಟು ಕೋವಿಡ್ -19 ಪ್ರಕರಣಗಳಲ್ಲಿ  50% ಕ್ಕು ಹೆಚ್ಚು ಪ್ರಕರಣಗಳು ಮಹಾರಾಷ್ಟ್ರ ಮತ್ತು ಕೇರಳದಿಂದ ಬಂದಿವೆ. ಕೇರಳದ 14 ಮತ್ತು ಮಹಾರಾಷ್ಟ್ರದ 15 ಜಿಲ್ಲೆಗಳ ಪರಿಸ್ಥಿತಿ ಕಳವಳಕಾರಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೇರಳದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ವೈರಸ್‌ನ 13,772 ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ 9,083 ಜನರು ಸೋಂಕಿಗೆ ತುತ್ತಾಗಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆ 43,504 ಇದೆ. 3,211 ಪ್ರಕರಣಗಳೊಂದಿಗೆ ತಮಿಳುನಾಡು, ಆಂಧ್ರಪ್ರದೇಶ 2,982 ಗಳು ನಂತರ ಸ್ಥಾನದಲ್ಲಿ ಇವೆ. ಅಸ್ಸಾಂನಲ್ಲಿ 2,644 ಹೊಸ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಮಕ್ಕಳಿಗೂ ಬಂತು ಕೋವಿಡ್ ಲಸಿಕೆ : ಸೆಪ್ಟೆಂಬರ್‌ನಲ್ಲಿ ಝೈಡಸ್‌ ಕ್ಯಾಡಿಲಾ ವ್ಯಾಕ್ಸಿನ್‌-ಎನ್‌.ಕೆ. ಅರೋರಾ

ಕರ್ನಾಟಕದಲ್ಲಿ  2,530 ಹೊಸ ಪ್ರಕರಣಗಳು ದಾಖಲಾಗಿದ್ದು 62 ಜನರು ಕೋವಿಡ್‌ ಕಾರಣದಿಂದ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಮಾತ್ರ ಕೋವಿಡ್ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು ಒಂದೇ ದಿನ 439 ಜನರು ಸೋಂಕಿಗೆ ಮೃತಪಟ್ಟಿದ್ದಾರೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್‌ ಪಾಸಿಟಿವಿಟಿ ದರ 10% ಕ್ಕಿಂತಲೂ ಹೆಚ್ಚಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ನಿರ್ಬಂಧಗಳನ್ನು ಸಡಿಲಿಸಿದ ಕಾರಣಕ್ಕೆ  ಜನರ ಓಡಾಟವೂ ಹೆಚ್ಚಿದ್ದು ಮುಂಬೈ. ದೆಹಲಿ ಸೇರಿದಂತೆ ದೇಶದ ನಗರಗಳ ಸಾರ್ವಜನಿಕ ಸ್ಥಳಗಳಲ್ಲಿ ಜನ ಸಂದಣಿ ಉಂಟಾಗುತ್ತಿರುವುದು ಕೂಡ ಸೋಂಕು ಹೆಚ್ಚುಳಕ್ಕೆ ಒಂದು ಕಾರಣ. ಕೋವಿಡ್ ಮೂರನೆ ಅಲೆ ದೇಶದಲ್ಲಿ ಆರಂಭವಾಗಿರುವ ಸೂಚನೆ ಇದಾಗಿರಬಹುದು. ಕೇಂದ್ರ ಆರೋಗ್ಯ ಇಲಾಖೆಯಾಗಲಿ ಅಥವಾ ತಜ್ಞರಾಗಲಿ ಮೂರನೇ ಅಲೆ ಆರಂಭವಾಗಿರುವ ಕುರಿತು ಇದುವರೆಗೆ ಅಧಿಕೃತವಾದ ಮಾಹಿತಿ ನೀಡಿಲ್ಲ.

ಪಂಜಾಬ್‌ನಲ್ಲಿ ಕ್ಯಾಪ್ಟನ್‌ ಅಮರಿಂರ್‌ ಸಿಂಗ್ ಸರ್ಕಾರ ವಾರಾಂತ್ಯದ ಕರ್ಪ್ಯು ಮತ್ತು ರಾತ್ರಿ ಕರ್ಪ್ಯುಗಳನ್ನು ತೆಗೆದಿದೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಡೆಲ್ಟಾ ರೂಪಾಂತರಿಯಿಂದ ಹೆಚ್ಚಾದ, ಕೊರೊನಾ ಪ್ರಕರಣಗಳು!

ಉತ್ತರ ಪ್ರದೇಶದಲ್ಲಿ ಹೊಸ ರೂಪಾಂತರಿ ಕಪ್ಪಾ ವೈರಸ್‌ ತಳಿಯ 2 ಪ್ರಕರಣಗಳು ಪತ್ತೆ

ವ್ಯಾಪಕವಾಗಿ ಹರಡಬಲ್ಲ ಕೊವಿಡ್-19ನ ಕಪ್ಪಾ ತಳಿ ರೂಪಾಂತರ ಸೋಂಕುಗಳು ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದೆ.ಕಪ್ಪಾ ತಳಿಯ ಎರಡು ಪ್ರಕರಣಗಳು ಇಲ್ಲಿ ಪತ್ತೆಯಾಗಿರುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಅಧಿಕೃತ ಹೇಳಿಕೆಯ ಪ್ರಕಾರ ಲಖನೌದ ಕಿಂಗ್ ಜಾರ್ಜ್ ವೈದ್ಯಕೀಯ ಕಾಲೇಜಿನಲ್ಲನ ಮಾದರಿಗಳನ್ನು ಪರೀಕ್ಷೆಗೊಳಪಡಿಸಿದಾಗ ಈ ತಳಿ ಪತ್ತೆಯಾಗಿದೆ. ಶುಕ್ರವಾರ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಈ ಬಗ್ಗೆ  ಮಾಹಿತಿ ನೀಡಿದೆ.

ಕಾಪ್ಪಾ ರೂಪಂತರಿ ಕುರಿತಾಗಿ ಮಾಹಿತಿ ನೀಡಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮಿತ್ ಮೋಹನ್ ಪ್ರಸಾದ್ ಅವರು, ‘ಜೀನೋಮ್ ಸೀಕ್ವೆನ್ಸಿಂಗ್ ಎನ್ನುವುದು ಪ್ರಯೋಗಾಲಯ ಪ್ರಕ್ರಿಯೆಯಾಗಿದ್ದು, ಇದು ರೂಪಾಂತರಗಳನ್ನು ನಿರೂಪಿಸಲು ಮತ್ತು ರೋಗ ಪತ್ತೆಹಚ್ಚಲಿರುವ ವಿಧಾನವಾಗಿದೆ. ಪ್ರಸ್ತುತ, ಉತ್ತರ ಪ್ರದೇಶ  ರಾಜ್ಯದಲ್ಲಿ ದೈನಂದಿನ ಕೋವಿಡ್‌ ಪಾಸಿಟಿವಿಟಿ ದರವು ಶೇಕಡಾ 0.04ರಷ್ಟಿದೆ.ಈ ಹಿಂದೆಯೇ ಈ ಕಪ್ಪಾ ರೂಪಾಂತರಿ ತಳಿಯ  ಪ್ರಕರಣಗಳು ರಾಜ್ಯದಲ್ಲಿ ಕಂಡುಬಂದಿವೆ ಎಂದು ಹೇಳಿದ್ದಾರೆ.

ಈ ಕಪ್ಪಾರೂಪಾಂತರಿ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ. ಇದು ಕೊರೊನಾ ವೈರಸ್ನ ಒಂದು ರೂಪಾಂತರವಾಗಿದೆ ಮತ್ತು ಅದರ ಚಿಕಿತ್ಸೆಯು ಸಾಧ್ಯವಿದೆ. ಎಚ್ಚರಿಕೆಯ ಕ್ರಮವಾಗಿ, ಪೀಡಿತ ಜಿಲ್ಲೆಗಳ ಹೆಸರುಗಳು ಅಥವಾ ಅದರ ಮೂಲದ ಸ್ಥಳಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಪ್ರಸಾದ್ ಹೇಳಿದರು.

 ಸೋಂಕಿನ ಎರಡನೆಯ ಅಲೆಯ ನಡುವೆಯೇ ಡೆಲ್ಟಾ, ಆಲ್ಫಾ ಮತ್ತು ಕಪ್ಪಾದಂತಹ ರೂಪಾಂತರಗಳು ಹೆಚ್ಚು ಹರಡುತ್ತವೆ ಎಂದು ಹೇಳಲಾಗುತ್ತಿರುವುದರಿಂದ ರಾಜ್ಯಗಳಿಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಈಗಾಗಲೇ ಎಚ್ಚರಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತರಾಗಿ, ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದಾರೆ ಕರ್ನಾಟಕದ ಮಾನವ ಕಂಪ್ಯೂಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...