Homeಮುಖಪುಟಕೋವಿಡ್ ಸಾವುಗಳು ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ: ವರದಿಗೆ ಕಿಡಿಕಾರಿದ ಕೇಂದ್ರ

ಕೋವಿಡ್ ಸಾವುಗಳು ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ: ವರದಿಗೆ ಕಿಡಿಕಾರಿದ ಕೇಂದ್ರ

- Advertisement -
- Advertisement -

ಭಾರತದ ಹಲವು ರಾಜ್ಯಗಳು ಕೋವಿಡ್ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯನ್ನು ಮುಚ್ಚಿಡುತ್ತಿವೆ ಎಂಬ ಆರೋಪ ಕಳೆದ ನಾಲ್ಕೈದು ತಿಂಗಳಿಂದ ಪದೇ ಪದೇ ಕೇಳಿಬರುತ್ತಿದೆ. ರಾಜ್ಯ ಸರ್ಕಾರಗಳು ನೀಡುತ್ತಿರುವ ವರದಿ ಸುಳ್ಳೆಂದು ಹಲವಾರು ಪತ್ರಿಕೆಗಳು ಚಿತಾಗಾರಗಳಲ್ಲಿ ಲೆಕ್ಕ ಹಾಕಿ ದಾಖಲೆ ಸಮೇತ ನಿರೂಪಿಸಿದ್ದಾರೆ. ಅಲ್ಲದೇ ಬಿಹಾರ ಸರ್ಕಾರ ಕೋವಿಡ್ ಸಾವುಗಳ ಸಂಖ್ಯೆ ಮುಚ್ಚಿಟ್ಟಿದೆ ಎಂದು ಪಾಟ್ನಾ ಹೈಕೋರ್ಟ್ ಆಡಿಟ್‌ಗೆ ಸೂಚಿಸಿದಾಗ ಒಂದೇ ದಿನ ಬಿಹಾರ 3500 ಹೆಚ್ಚು ಸಾವುಗಳನ್ನು ಪರಿಷ್ಕರಿಸಿ ಸೇರಿಸಿತ್ತು.. ಇಷ್ಟೆಲ್ಲ ನಡೆಯುತ್ತಿರುವ ಸಂದರ್ಭ ಭಾರತದಲ್ಲಿ ಕೋವಿಡ್ ಸಾವುಗಳು ಸರ್ಕಾರ ಪ್ರಕಟಿಸಿದ ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ ಎಂಬ ಸುದ್ದಿ ಲೇಖನದ ವಿರುದ್ಧ ಕೇಂದ್ರ ಸರ್ಕಾರ ತಿರುಗಿಬಿದ್ದಿದೆ.

ಭಾರತದಲ್ಲಿ ಅಧಿಕೃತ ಕೋವಿಡ್‌ ಸಾವುಗಳ ಸಂಖ್ಯೆಗಿಂತ 5-7 ಹೆಚ್ಚಿದ ಎಂಬ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಇದು ಯಾವುದೇ ಸಾಂಕ್ರಾಮಿಕ ರೋಗಶಾಸ್ತ್ರೀಯ ಪುರಾವೆಗಳಿಲ್ಲದ ದತ್ತಾಂಶ ಎಂದು ಟೀಕಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಪತ್ರಿಕೆ ಅಥವಾ ವರದಿಯ ಹೆಸರು ಹೇಳದೆ ಕಿಡಿಕಾರಿದೆ.

ಯಾವುದೇ ಆಧಾರವಿಲ್ಲದ, ಊಹಾಪೋಹದಿಂದ ಕೂಡಿದ ವರದಿಯಿದು. ಯಾವುದೇ ದೇಶ ಅಥವಾ ಪ್ರದೇಶದ ಸಾವಿನ ಪ್ರಮಾಣವನ್ನು ನಿರ್ಧರಿಸಲು ಮರಣ ಪ್ರಮಾಣವನ್ನು ಅಂದಾಜು ಮಾಡಲು ನಿಯತಕಾಲಿಕವು ಬಳಸಿದ ಅಧ್ಯಯನಗಳು ಮೌಲ್ಯೀಕರಿಸಿದ ಸಾಧನಗಳಲ್ಲ ಎಂದು ಕೇಂದ್ರ ಹೇಳಿದೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಪಿಐಬಿ ಫ್ಯಾಕ್ಟ್‌ಚೆಕ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆರೋಗ್ಯ ಸಚಿವಾಲಯ ಸರಿಯಾದ, ಪಾರದರ್ಶಕ ಮಾಹಿತಿಯನ್ನು ಪ್ರಕಟಿಸುತ್ತಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಲೇಖನದಲ್ಲಿ ಪುರಾವೆಯಾಗಿ ವಿಮಾ ಹಕ್ಕುಗಳ ಆಧಾರದ ಮೇಲೆ ತೆಲಂಗಾಣದಲ್ಲಿ ನಡೆಸಿದ ಅಧ್ಯಯನವನ್ನು ಹೆಸರಿಸಲಾಗಿದೆ. ಅಲ್ಲಿಯೂ ವೈಜ್ಞಾನಿಕ ದತ್ತಾಂಶಗಳು ಲಭ್ಯವಿಲ್ಲ ಎಂದು ಕೇಂದ್ರದ ಹೇಳಿಕೆ ತಿಳಿಸಿದೆ.

“ಮತದಾನದ ಸಮೀಕ್ಷೆಗಳನ್ನು ನಡೆಸುವುದು, ಊಹಿಸುವುದು ಮತ್ತು ವಿಶ್ಲೇಷಿಸುವುದರಲ್ಲಿ ಚೆನ್ನಾಗಿ ಪರಿಣತಿ ಹೊಂದಿರುವ ಪ್ರಶ್ನಮ್” ಮತ್ತು “ಸಿ-ವೋಟರ್” ಎಂಬ ಗುಂಪುಗಳು ನಡೆಸಿದ ಇತರ ಎರಡು ಅಧ್ಯಯನಗಳನ್ನು ಲೇಖಣ ಆಧರಿಸಿದೆ. ಆದರೆ ಅವು ಎಂದಿಗೂ ಸಾರ್ವಜನಿಕ ಆರೋಗ್ಯ ಸಂಶೋಧನೆಯೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಕೇಂದ್ರ ಹೇಳಿದೆ.

ತಮ್ಮದೇ ಆದ ಅಂದಾಜು ಅಭಿಪ್ರಾಯಗಳ ಮೂಲಕ ವಿಶ್ವಾಸಾರ್ಹವಲ್ಲದ ಸ್ಥಳೀಯ ಸರ್ಕಾರದ ದತ್ತಾಂಶಗಳಿಂದ, ಕಂಪನಿಯ ದಾಖಲೆಗಳಿಂದ ಮತ್ತು ಶ್ರದ್ಧಾಂಜಲಿ ಬರಹಗಳ ವಿಶ್ಲೇಷಣೆಗಳಿಂದ ಈ ವರದಿ ರಚಿಸಲಾಗಿದೆ ಎಂದು ಕೇಂದ್ರ ಕಿಡಿಕಾರಿದೆ.


ಇದನ್ನೂ ಓದಿ: ಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ: ಕೋವಿಡ್ ನಿರ್ವಹಣೆ ಕುರಿತು ಮೋದಿ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...