Homeಮುಖಪುಟಕೋವಿಡ್ ಸಾವುಗಳು ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ: ವರದಿಗೆ ಕಿಡಿಕಾರಿದ ಕೇಂದ್ರ

ಕೋವಿಡ್ ಸಾವುಗಳು ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ: ವರದಿಗೆ ಕಿಡಿಕಾರಿದ ಕೇಂದ್ರ

- Advertisement -
- Advertisement -

ಭಾರತದ ಹಲವು ರಾಜ್ಯಗಳು ಕೋವಿಡ್ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯನ್ನು ಮುಚ್ಚಿಡುತ್ತಿವೆ ಎಂಬ ಆರೋಪ ಕಳೆದ ನಾಲ್ಕೈದು ತಿಂಗಳಿಂದ ಪದೇ ಪದೇ ಕೇಳಿಬರುತ್ತಿದೆ. ರಾಜ್ಯ ಸರ್ಕಾರಗಳು ನೀಡುತ್ತಿರುವ ವರದಿ ಸುಳ್ಳೆಂದು ಹಲವಾರು ಪತ್ರಿಕೆಗಳು ಚಿತಾಗಾರಗಳಲ್ಲಿ ಲೆಕ್ಕ ಹಾಕಿ ದಾಖಲೆ ಸಮೇತ ನಿರೂಪಿಸಿದ್ದಾರೆ. ಅಲ್ಲದೇ ಬಿಹಾರ ಸರ್ಕಾರ ಕೋವಿಡ್ ಸಾವುಗಳ ಸಂಖ್ಯೆ ಮುಚ್ಚಿಟ್ಟಿದೆ ಎಂದು ಪಾಟ್ನಾ ಹೈಕೋರ್ಟ್ ಆಡಿಟ್‌ಗೆ ಸೂಚಿಸಿದಾಗ ಒಂದೇ ದಿನ ಬಿಹಾರ 3500 ಹೆಚ್ಚು ಸಾವುಗಳನ್ನು ಪರಿಷ್ಕರಿಸಿ ಸೇರಿಸಿತ್ತು.. ಇಷ್ಟೆಲ್ಲ ನಡೆಯುತ್ತಿರುವ ಸಂದರ್ಭ ಭಾರತದಲ್ಲಿ ಕೋವಿಡ್ ಸಾವುಗಳು ಸರ್ಕಾರ ಪ್ರಕಟಿಸಿದ ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ ಎಂಬ ಸುದ್ದಿ ಲೇಖನದ ವಿರುದ್ಧ ಕೇಂದ್ರ ಸರ್ಕಾರ ತಿರುಗಿಬಿದ್ದಿದೆ.

ಭಾರತದಲ್ಲಿ ಅಧಿಕೃತ ಕೋವಿಡ್‌ ಸಾವುಗಳ ಸಂಖ್ಯೆಗಿಂತ 5-7 ಹೆಚ್ಚಿದ ಎಂಬ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಇದು ಯಾವುದೇ ಸಾಂಕ್ರಾಮಿಕ ರೋಗಶಾಸ್ತ್ರೀಯ ಪುರಾವೆಗಳಿಲ್ಲದ ದತ್ತಾಂಶ ಎಂದು ಟೀಕಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಪತ್ರಿಕೆ ಅಥವಾ ವರದಿಯ ಹೆಸರು ಹೇಳದೆ ಕಿಡಿಕಾರಿದೆ.

ಯಾವುದೇ ಆಧಾರವಿಲ್ಲದ, ಊಹಾಪೋಹದಿಂದ ಕೂಡಿದ ವರದಿಯಿದು. ಯಾವುದೇ ದೇಶ ಅಥವಾ ಪ್ರದೇಶದ ಸಾವಿನ ಪ್ರಮಾಣವನ್ನು ನಿರ್ಧರಿಸಲು ಮರಣ ಪ್ರಮಾಣವನ್ನು ಅಂದಾಜು ಮಾಡಲು ನಿಯತಕಾಲಿಕವು ಬಳಸಿದ ಅಧ್ಯಯನಗಳು ಮೌಲ್ಯೀಕರಿಸಿದ ಸಾಧನಗಳಲ್ಲ ಎಂದು ಕೇಂದ್ರ ಹೇಳಿದೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಪಿಐಬಿ ಫ್ಯಾಕ್ಟ್‌ಚೆಕ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆರೋಗ್ಯ ಸಚಿವಾಲಯ ಸರಿಯಾದ, ಪಾರದರ್ಶಕ ಮಾಹಿತಿಯನ್ನು ಪ್ರಕಟಿಸುತ್ತಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಲೇಖನದಲ್ಲಿ ಪುರಾವೆಯಾಗಿ ವಿಮಾ ಹಕ್ಕುಗಳ ಆಧಾರದ ಮೇಲೆ ತೆಲಂಗಾಣದಲ್ಲಿ ನಡೆಸಿದ ಅಧ್ಯಯನವನ್ನು ಹೆಸರಿಸಲಾಗಿದೆ. ಅಲ್ಲಿಯೂ ವೈಜ್ಞಾನಿಕ ದತ್ತಾಂಶಗಳು ಲಭ್ಯವಿಲ್ಲ ಎಂದು ಕೇಂದ್ರದ ಹೇಳಿಕೆ ತಿಳಿಸಿದೆ.

“ಮತದಾನದ ಸಮೀಕ್ಷೆಗಳನ್ನು ನಡೆಸುವುದು, ಊಹಿಸುವುದು ಮತ್ತು ವಿಶ್ಲೇಷಿಸುವುದರಲ್ಲಿ ಚೆನ್ನಾಗಿ ಪರಿಣತಿ ಹೊಂದಿರುವ ಪ್ರಶ್ನಮ್” ಮತ್ತು “ಸಿ-ವೋಟರ್” ಎಂಬ ಗುಂಪುಗಳು ನಡೆಸಿದ ಇತರ ಎರಡು ಅಧ್ಯಯನಗಳನ್ನು ಲೇಖಣ ಆಧರಿಸಿದೆ. ಆದರೆ ಅವು ಎಂದಿಗೂ ಸಾರ್ವಜನಿಕ ಆರೋಗ್ಯ ಸಂಶೋಧನೆಯೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಕೇಂದ್ರ ಹೇಳಿದೆ.

ತಮ್ಮದೇ ಆದ ಅಂದಾಜು ಅಭಿಪ್ರಾಯಗಳ ಮೂಲಕ ವಿಶ್ವಾಸಾರ್ಹವಲ್ಲದ ಸ್ಥಳೀಯ ಸರ್ಕಾರದ ದತ್ತಾಂಶಗಳಿಂದ, ಕಂಪನಿಯ ದಾಖಲೆಗಳಿಂದ ಮತ್ತು ಶ್ರದ್ಧಾಂಜಲಿ ಬರಹಗಳ ವಿಶ್ಲೇಷಣೆಗಳಿಂದ ಈ ವರದಿ ರಚಿಸಲಾಗಿದೆ ಎಂದು ಕೇಂದ್ರ ಕಿಡಿಕಾರಿದೆ.


ಇದನ್ನೂ ಓದಿ: ಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ: ಕೋವಿಡ್ ನಿರ್ವಹಣೆ ಕುರಿತು ಮೋದಿ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...