Homeಮುಖಪುಟಕೋವಿಡ್ ಸಾವುಗಳು ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ: ವರದಿಗೆ ಕಿಡಿಕಾರಿದ ಕೇಂದ್ರ

ಕೋವಿಡ್ ಸಾವುಗಳು ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ: ವರದಿಗೆ ಕಿಡಿಕಾರಿದ ಕೇಂದ್ರ

- Advertisement -
- Advertisement -

ಭಾರತದ ಹಲವು ರಾಜ್ಯಗಳು ಕೋವಿಡ್ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯನ್ನು ಮುಚ್ಚಿಡುತ್ತಿವೆ ಎಂಬ ಆರೋಪ ಕಳೆದ ನಾಲ್ಕೈದು ತಿಂಗಳಿಂದ ಪದೇ ಪದೇ ಕೇಳಿಬರುತ್ತಿದೆ. ರಾಜ್ಯ ಸರ್ಕಾರಗಳು ನೀಡುತ್ತಿರುವ ವರದಿ ಸುಳ್ಳೆಂದು ಹಲವಾರು ಪತ್ರಿಕೆಗಳು ಚಿತಾಗಾರಗಳಲ್ಲಿ ಲೆಕ್ಕ ಹಾಕಿ ದಾಖಲೆ ಸಮೇತ ನಿರೂಪಿಸಿದ್ದಾರೆ. ಅಲ್ಲದೇ ಬಿಹಾರ ಸರ್ಕಾರ ಕೋವಿಡ್ ಸಾವುಗಳ ಸಂಖ್ಯೆ ಮುಚ್ಚಿಟ್ಟಿದೆ ಎಂದು ಪಾಟ್ನಾ ಹೈಕೋರ್ಟ್ ಆಡಿಟ್‌ಗೆ ಸೂಚಿಸಿದಾಗ ಒಂದೇ ದಿನ ಬಿಹಾರ 3500 ಹೆಚ್ಚು ಸಾವುಗಳನ್ನು ಪರಿಷ್ಕರಿಸಿ ಸೇರಿಸಿತ್ತು.. ಇಷ್ಟೆಲ್ಲ ನಡೆಯುತ್ತಿರುವ ಸಂದರ್ಭ ಭಾರತದಲ್ಲಿ ಕೋವಿಡ್ ಸಾವುಗಳು ಸರ್ಕಾರ ಪ್ರಕಟಿಸಿದ ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ ಎಂಬ ಸುದ್ದಿ ಲೇಖನದ ವಿರುದ್ಧ ಕೇಂದ್ರ ಸರ್ಕಾರ ತಿರುಗಿಬಿದ್ದಿದೆ.

ಭಾರತದಲ್ಲಿ ಅಧಿಕೃತ ಕೋವಿಡ್‌ ಸಾವುಗಳ ಸಂಖ್ಯೆಗಿಂತ 5-7 ಹೆಚ್ಚಿದ ಎಂಬ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಇದು ಯಾವುದೇ ಸಾಂಕ್ರಾಮಿಕ ರೋಗಶಾಸ್ತ್ರೀಯ ಪುರಾವೆಗಳಿಲ್ಲದ ದತ್ತಾಂಶ ಎಂದು ಟೀಕಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಪತ್ರಿಕೆ ಅಥವಾ ವರದಿಯ ಹೆಸರು ಹೇಳದೆ ಕಿಡಿಕಾರಿದೆ.

ಯಾವುದೇ ಆಧಾರವಿಲ್ಲದ, ಊಹಾಪೋಹದಿಂದ ಕೂಡಿದ ವರದಿಯಿದು. ಯಾವುದೇ ದೇಶ ಅಥವಾ ಪ್ರದೇಶದ ಸಾವಿನ ಪ್ರಮಾಣವನ್ನು ನಿರ್ಧರಿಸಲು ಮರಣ ಪ್ರಮಾಣವನ್ನು ಅಂದಾಜು ಮಾಡಲು ನಿಯತಕಾಲಿಕವು ಬಳಸಿದ ಅಧ್ಯಯನಗಳು ಮೌಲ್ಯೀಕರಿಸಿದ ಸಾಧನಗಳಲ್ಲ ಎಂದು ಕೇಂದ್ರ ಹೇಳಿದೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಪಿಐಬಿ ಫ್ಯಾಕ್ಟ್‌ಚೆಕ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆರೋಗ್ಯ ಸಚಿವಾಲಯ ಸರಿಯಾದ, ಪಾರದರ್ಶಕ ಮಾಹಿತಿಯನ್ನು ಪ್ರಕಟಿಸುತ್ತಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಲೇಖನದಲ್ಲಿ ಪುರಾವೆಯಾಗಿ ವಿಮಾ ಹಕ್ಕುಗಳ ಆಧಾರದ ಮೇಲೆ ತೆಲಂಗಾಣದಲ್ಲಿ ನಡೆಸಿದ ಅಧ್ಯಯನವನ್ನು ಹೆಸರಿಸಲಾಗಿದೆ. ಅಲ್ಲಿಯೂ ವೈಜ್ಞಾನಿಕ ದತ್ತಾಂಶಗಳು ಲಭ್ಯವಿಲ್ಲ ಎಂದು ಕೇಂದ್ರದ ಹೇಳಿಕೆ ತಿಳಿಸಿದೆ.

“ಮತದಾನದ ಸಮೀಕ್ಷೆಗಳನ್ನು ನಡೆಸುವುದು, ಊಹಿಸುವುದು ಮತ್ತು ವಿಶ್ಲೇಷಿಸುವುದರಲ್ಲಿ ಚೆನ್ನಾಗಿ ಪರಿಣತಿ ಹೊಂದಿರುವ ಪ್ರಶ್ನಮ್” ಮತ್ತು “ಸಿ-ವೋಟರ್” ಎಂಬ ಗುಂಪುಗಳು ನಡೆಸಿದ ಇತರ ಎರಡು ಅಧ್ಯಯನಗಳನ್ನು ಲೇಖಣ ಆಧರಿಸಿದೆ. ಆದರೆ ಅವು ಎಂದಿಗೂ ಸಾರ್ವಜನಿಕ ಆರೋಗ್ಯ ಸಂಶೋಧನೆಯೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಕೇಂದ್ರ ಹೇಳಿದೆ.

ತಮ್ಮದೇ ಆದ ಅಂದಾಜು ಅಭಿಪ್ರಾಯಗಳ ಮೂಲಕ ವಿಶ್ವಾಸಾರ್ಹವಲ್ಲದ ಸ್ಥಳೀಯ ಸರ್ಕಾರದ ದತ್ತಾಂಶಗಳಿಂದ, ಕಂಪನಿಯ ದಾಖಲೆಗಳಿಂದ ಮತ್ತು ಶ್ರದ್ಧಾಂಜಲಿ ಬರಹಗಳ ವಿಶ್ಲೇಷಣೆಗಳಿಂದ ಈ ವರದಿ ರಚಿಸಲಾಗಿದೆ ಎಂದು ಕೇಂದ್ರ ಕಿಡಿಕಾರಿದೆ.


ಇದನ್ನೂ ಓದಿ: ಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ: ಕೋವಿಡ್ ನಿರ್ವಹಣೆ ಕುರಿತು ಮೋದಿ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...