Homeಮುಖಪುಟಕೋವಿಡ್ ಸಾವುಗಳು ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ: ವರದಿಗೆ ಕಿಡಿಕಾರಿದ ಕೇಂದ್ರ

ಕೋವಿಡ್ ಸಾವುಗಳು ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ: ವರದಿಗೆ ಕಿಡಿಕಾರಿದ ಕೇಂದ್ರ

- Advertisement -
- Advertisement -

ಭಾರತದ ಹಲವು ರಾಜ್ಯಗಳು ಕೋವಿಡ್ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯನ್ನು ಮುಚ್ಚಿಡುತ್ತಿವೆ ಎಂಬ ಆರೋಪ ಕಳೆದ ನಾಲ್ಕೈದು ತಿಂಗಳಿಂದ ಪದೇ ಪದೇ ಕೇಳಿಬರುತ್ತಿದೆ. ರಾಜ್ಯ ಸರ್ಕಾರಗಳು ನೀಡುತ್ತಿರುವ ವರದಿ ಸುಳ್ಳೆಂದು ಹಲವಾರು ಪತ್ರಿಕೆಗಳು ಚಿತಾಗಾರಗಳಲ್ಲಿ ಲೆಕ್ಕ ಹಾಕಿ ದಾಖಲೆ ಸಮೇತ ನಿರೂಪಿಸಿದ್ದಾರೆ. ಅಲ್ಲದೇ ಬಿಹಾರ ಸರ್ಕಾರ ಕೋವಿಡ್ ಸಾವುಗಳ ಸಂಖ್ಯೆ ಮುಚ್ಚಿಟ್ಟಿದೆ ಎಂದು ಪಾಟ್ನಾ ಹೈಕೋರ್ಟ್ ಆಡಿಟ್‌ಗೆ ಸೂಚಿಸಿದಾಗ ಒಂದೇ ದಿನ ಬಿಹಾರ 3500 ಹೆಚ್ಚು ಸಾವುಗಳನ್ನು ಪರಿಷ್ಕರಿಸಿ ಸೇರಿಸಿತ್ತು.. ಇಷ್ಟೆಲ್ಲ ನಡೆಯುತ್ತಿರುವ ಸಂದರ್ಭ ಭಾರತದಲ್ಲಿ ಕೋವಿಡ್ ಸಾವುಗಳು ಸರ್ಕಾರ ಪ್ರಕಟಿಸಿದ ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ ಎಂಬ ಸುದ್ದಿ ಲೇಖನದ ವಿರುದ್ಧ ಕೇಂದ್ರ ಸರ್ಕಾರ ತಿರುಗಿಬಿದ್ದಿದೆ.

ಭಾರತದಲ್ಲಿ ಅಧಿಕೃತ ಕೋವಿಡ್‌ ಸಾವುಗಳ ಸಂಖ್ಯೆಗಿಂತ 5-7 ಹೆಚ್ಚಿದ ಎಂಬ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಇದು ಯಾವುದೇ ಸಾಂಕ್ರಾಮಿಕ ರೋಗಶಾಸ್ತ್ರೀಯ ಪುರಾವೆಗಳಿಲ್ಲದ ದತ್ತಾಂಶ ಎಂದು ಟೀಕಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಪತ್ರಿಕೆ ಅಥವಾ ವರದಿಯ ಹೆಸರು ಹೇಳದೆ ಕಿಡಿಕಾರಿದೆ.

ಯಾವುದೇ ಆಧಾರವಿಲ್ಲದ, ಊಹಾಪೋಹದಿಂದ ಕೂಡಿದ ವರದಿಯಿದು. ಯಾವುದೇ ದೇಶ ಅಥವಾ ಪ್ರದೇಶದ ಸಾವಿನ ಪ್ರಮಾಣವನ್ನು ನಿರ್ಧರಿಸಲು ಮರಣ ಪ್ರಮಾಣವನ್ನು ಅಂದಾಜು ಮಾಡಲು ನಿಯತಕಾಲಿಕವು ಬಳಸಿದ ಅಧ್ಯಯನಗಳು ಮೌಲ್ಯೀಕರಿಸಿದ ಸಾಧನಗಳಲ್ಲ ಎಂದು ಕೇಂದ್ರ ಹೇಳಿದೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಪಿಐಬಿ ಫ್ಯಾಕ್ಟ್‌ಚೆಕ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆರೋಗ್ಯ ಸಚಿವಾಲಯ ಸರಿಯಾದ, ಪಾರದರ್ಶಕ ಮಾಹಿತಿಯನ್ನು ಪ್ರಕಟಿಸುತ್ತಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಲೇಖನದಲ್ಲಿ ಪುರಾವೆಯಾಗಿ ವಿಮಾ ಹಕ್ಕುಗಳ ಆಧಾರದ ಮೇಲೆ ತೆಲಂಗಾಣದಲ್ಲಿ ನಡೆಸಿದ ಅಧ್ಯಯನವನ್ನು ಹೆಸರಿಸಲಾಗಿದೆ. ಅಲ್ಲಿಯೂ ವೈಜ್ಞಾನಿಕ ದತ್ತಾಂಶಗಳು ಲಭ್ಯವಿಲ್ಲ ಎಂದು ಕೇಂದ್ರದ ಹೇಳಿಕೆ ತಿಳಿಸಿದೆ.

“ಮತದಾನದ ಸಮೀಕ್ಷೆಗಳನ್ನು ನಡೆಸುವುದು, ಊಹಿಸುವುದು ಮತ್ತು ವಿಶ್ಲೇಷಿಸುವುದರಲ್ಲಿ ಚೆನ್ನಾಗಿ ಪರಿಣತಿ ಹೊಂದಿರುವ ಪ್ರಶ್ನಮ್” ಮತ್ತು “ಸಿ-ವೋಟರ್” ಎಂಬ ಗುಂಪುಗಳು ನಡೆಸಿದ ಇತರ ಎರಡು ಅಧ್ಯಯನಗಳನ್ನು ಲೇಖಣ ಆಧರಿಸಿದೆ. ಆದರೆ ಅವು ಎಂದಿಗೂ ಸಾರ್ವಜನಿಕ ಆರೋಗ್ಯ ಸಂಶೋಧನೆಯೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಕೇಂದ್ರ ಹೇಳಿದೆ.

ತಮ್ಮದೇ ಆದ ಅಂದಾಜು ಅಭಿಪ್ರಾಯಗಳ ಮೂಲಕ ವಿಶ್ವಾಸಾರ್ಹವಲ್ಲದ ಸ್ಥಳೀಯ ಸರ್ಕಾರದ ದತ್ತಾಂಶಗಳಿಂದ, ಕಂಪನಿಯ ದಾಖಲೆಗಳಿಂದ ಮತ್ತು ಶ್ರದ್ಧಾಂಜಲಿ ಬರಹಗಳ ವಿಶ್ಲೇಷಣೆಗಳಿಂದ ಈ ವರದಿ ರಚಿಸಲಾಗಿದೆ ಎಂದು ಕೇಂದ್ರ ಕಿಡಿಕಾರಿದೆ.


ಇದನ್ನೂ ಓದಿ: ಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ: ಕೋವಿಡ್ ನಿರ್ವಹಣೆ ಕುರಿತು ಮೋದಿ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...