Homeಮುಖಪುಟಕೋವಿಡ್ ಸಾವುಗಳು ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ: ವರದಿಗೆ ಕಿಡಿಕಾರಿದ ಕೇಂದ್ರ

ಕೋವಿಡ್ ಸಾವುಗಳು ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ: ವರದಿಗೆ ಕಿಡಿಕಾರಿದ ಕೇಂದ್ರ

- Advertisement -
- Advertisement -

ಭಾರತದ ಹಲವು ರಾಜ್ಯಗಳು ಕೋವಿಡ್ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯನ್ನು ಮುಚ್ಚಿಡುತ್ತಿವೆ ಎಂಬ ಆರೋಪ ಕಳೆದ ನಾಲ್ಕೈದು ತಿಂಗಳಿಂದ ಪದೇ ಪದೇ ಕೇಳಿಬರುತ್ತಿದೆ. ರಾಜ್ಯ ಸರ್ಕಾರಗಳು ನೀಡುತ್ತಿರುವ ವರದಿ ಸುಳ್ಳೆಂದು ಹಲವಾರು ಪತ್ರಿಕೆಗಳು ಚಿತಾಗಾರಗಳಲ್ಲಿ ಲೆಕ್ಕ ಹಾಕಿ ದಾಖಲೆ ಸಮೇತ ನಿರೂಪಿಸಿದ್ದಾರೆ. ಅಲ್ಲದೇ ಬಿಹಾರ ಸರ್ಕಾರ ಕೋವಿಡ್ ಸಾವುಗಳ ಸಂಖ್ಯೆ ಮುಚ್ಚಿಟ್ಟಿದೆ ಎಂದು ಪಾಟ್ನಾ ಹೈಕೋರ್ಟ್ ಆಡಿಟ್‌ಗೆ ಸೂಚಿಸಿದಾಗ ಒಂದೇ ದಿನ ಬಿಹಾರ 3500 ಹೆಚ್ಚು ಸಾವುಗಳನ್ನು ಪರಿಷ್ಕರಿಸಿ ಸೇರಿಸಿತ್ತು.. ಇಷ್ಟೆಲ್ಲ ನಡೆಯುತ್ತಿರುವ ಸಂದರ್ಭ ಭಾರತದಲ್ಲಿ ಕೋವಿಡ್ ಸಾವುಗಳು ಸರ್ಕಾರ ಪ್ರಕಟಿಸಿದ ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ ಎಂಬ ಸುದ್ದಿ ಲೇಖನದ ವಿರುದ್ಧ ಕೇಂದ್ರ ಸರ್ಕಾರ ತಿರುಗಿಬಿದ್ದಿದೆ.

ಭಾರತದಲ್ಲಿ ಅಧಿಕೃತ ಕೋವಿಡ್‌ ಸಾವುಗಳ ಸಂಖ್ಯೆಗಿಂತ 5-7 ಹೆಚ್ಚಿದ ಎಂಬ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಇದು ಯಾವುದೇ ಸಾಂಕ್ರಾಮಿಕ ರೋಗಶಾಸ್ತ್ರೀಯ ಪುರಾವೆಗಳಿಲ್ಲದ ದತ್ತಾಂಶ ಎಂದು ಟೀಕಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಪತ್ರಿಕೆ ಅಥವಾ ವರದಿಯ ಹೆಸರು ಹೇಳದೆ ಕಿಡಿಕಾರಿದೆ.

ಯಾವುದೇ ಆಧಾರವಿಲ್ಲದ, ಊಹಾಪೋಹದಿಂದ ಕೂಡಿದ ವರದಿಯಿದು. ಯಾವುದೇ ದೇಶ ಅಥವಾ ಪ್ರದೇಶದ ಸಾವಿನ ಪ್ರಮಾಣವನ್ನು ನಿರ್ಧರಿಸಲು ಮರಣ ಪ್ರಮಾಣವನ್ನು ಅಂದಾಜು ಮಾಡಲು ನಿಯತಕಾಲಿಕವು ಬಳಸಿದ ಅಧ್ಯಯನಗಳು ಮೌಲ್ಯೀಕರಿಸಿದ ಸಾಧನಗಳಲ್ಲ ಎಂದು ಕೇಂದ್ರ ಹೇಳಿದೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಪಿಐಬಿ ಫ್ಯಾಕ್ಟ್‌ಚೆಕ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆರೋಗ್ಯ ಸಚಿವಾಲಯ ಸರಿಯಾದ, ಪಾರದರ್ಶಕ ಮಾಹಿತಿಯನ್ನು ಪ್ರಕಟಿಸುತ್ತಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಲೇಖನದಲ್ಲಿ ಪುರಾವೆಯಾಗಿ ವಿಮಾ ಹಕ್ಕುಗಳ ಆಧಾರದ ಮೇಲೆ ತೆಲಂಗಾಣದಲ್ಲಿ ನಡೆಸಿದ ಅಧ್ಯಯನವನ್ನು ಹೆಸರಿಸಲಾಗಿದೆ. ಅಲ್ಲಿಯೂ ವೈಜ್ಞಾನಿಕ ದತ್ತಾಂಶಗಳು ಲಭ್ಯವಿಲ್ಲ ಎಂದು ಕೇಂದ್ರದ ಹೇಳಿಕೆ ತಿಳಿಸಿದೆ.

“ಮತದಾನದ ಸಮೀಕ್ಷೆಗಳನ್ನು ನಡೆಸುವುದು, ಊಹಿಸುವುದು ಮತ್ತು ವಿಶ್ಲೇಷಿಸುವುದರಲ್ಲಿ ಚೆನ್ನಾಗಿ ಪರಿಣತಿ ಹೊಂದಿರುವ ಪ್ರಶ್ನಮ್” ಮತ್ತು “ಸಿ-ವೋಟರ್” ಎಂಬ ಗುಂಪುಗಳು ನಡೆಸಿದ ಇತರ ಎರಡು ಅಧ್ಯಯನಗಳನ್ನು ಲೇಖಣ ಆಧರಿಸಿದೆ. ಆದರೆ ಅವು ಎಂದಿಗೂ ಸಾರ್ವಜನಿಕ ಆರೋಗ್ಯ ಸಂಶೋಧನೆಯೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಕೇಂದ್ರ ಹೇಳಿದೆ.

ತಮ್ಮದೇ ಆದ ಅಂದಾಜು ಅಭಿಪ್ರಾಯಗಳ ಮೂಲಕ ವಿಶ್ವಾಸಾರ್ಹವಲ್ಲದ ಸ್ಥಳೀಯ ಸರ್ಕಾರದ ದತ್ತಾಂಶಗಳಿಂದ, ಕಂಪನಿಯ ದಾಖಲೆಗಳಿಂದ ಮತ್ತು ಶ್ರದ್ಧಾಂಜಲಿ ಬರಹಗಳ ವಿಶ್ಲೇಷಣೆಗಳಿಂದ ಈ ವರದಿ ರಚಿಸಲಾಗಿದೆ ಎಂದು ಕೇಂದ್ರ ಕಿಡಿಕಾರಿದೆ.


ಇದನ್ನೂ ಓದಿ: ಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ: ಕೋವಿಡ್ ನಿರ್ವಹಣೆ ಕುರಿತು ಮೋದಿ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...