Homeಕೊರೊನಾಕೊರೊನಾ ಪರಿಹಾರ ವಿಳಂಬ: ಬಿಹಾರ, ಆಂಧ್ರ ಪ್ರದೇಶ, ಕೇರಳಕ್ಕೆ ಸುಪ್ರೀಂ ತರಾಟೆ

ಕೊರೊನಾ ಪರಿಹಾರ ವಿಳಂಬ: ಬಿಹಾರ, ಆಂಧ್ರ ಪ್ರದೇಶ, ಕೇರಳಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರವನ್ನು ನೀಡುವಲ್ಲಿ ವಿಫಲವಾದ ಮತ್ತು ಪರಿಹಾರ ಪಾವತಿ ಮಾಡುವಲ್ಲಿ ವಿಳಂಬ ಮಾಡಿದ ರಾಜ್ಯಗಳನ್ನು ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದೆ.

ಆಂಧ್ರ ಪ್ರದೇಶ ಮತ್ತು ಬಿಹಾರ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಮಧ್ಯಾಹ್ನ 2 ಗಂಟೆಯ ವಿಚಾರಣೆಗೆ ಹಾಜರಾಗಬೇಕೆಂದು ನ್ಯಾಯಮೂರ್ತಿ ಎಂಆರ್ ಶಾ ನೋಟಿಸ್ ನೀಡಿದ್ದಾರೆ. ಅವರ್‍ಯಾರು ಕಾನೂನಿಗಿಂತ ಮೇಲಲ್ಲ ಎಂದು ನ್ಯಾಯಮೂರ್ತಿಗಳು ಕಿಡಿ ಕಾರಿದ್ದಾರೆ.

ಜೊತೆಗೆ ಕೇರಳ, ಹರಿಯಾಣ, ಗುಜರಾತ್ ಸೇರಿದಂತೆ ಇತರ ರಾಜ್ಯಗಳ ಸಾವಿನ ಲೆಕ್ಕ ಮತ್ತು ಪರಿಹಾರ ಅರ್ಜಿಗಳ ಲೆಕ್ಕದ ಬಗ್ಗೆ ನ್ಯಾಯಾಲಯ ಪ್ರಶ್ನಿಸಿದ್ದು ರಾಜ್ಯ ಸರ್ಕಾರಗಳ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ.

ಹಿಂದಿನ ನ್ಯಾಯಾಲಯದ ಆದೇಶದ ನಂತರ ಆಂಧ್ರಪ್ರದೇಶವು ಸುಮಾರು 36,000 ಪರಿಹಾರ ಅರ್ಜಿಗಳನ್ನು ದಾಖಲಿಸಿದೆದೆ, ಅದರಲ್ಲಿ 31,000 ಅರ್ಜಿಗಳು ಪರಿಹಾರಕ್ಕೆ ಅರ್ಹವಾಗಿವೆ. ಆದರೆ, ಇದುವರೆಗೆ 11,000 ಅರ್ಜಿದಾರರಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ.

ಇದನ್ನೂ ಓದಿ: ಆಸ್ಕರ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ’ಜೈ ಭೀಮ್’ ದೃಶ್ಯಗಳು: ಅತ್ಯುನ್ನತ ಗೌರವ ಎಂದ ತಂಡ

“ಪರಿಹಾರವನ್ನು ಪಾವತಿಸಲು ಪದೇ ಪದೇ ನಿರ್ದೇಶನಗಳನ್ನು ನೀಡಲಾಗುತ್ತಿದೆ. ಈ ವಿಷಯದಲ್ಲಿ ಆಂಧ್ರಪ್ರದೇಶದ ಭಾಗದಲ್ಲಿ ಸಂಪೂರ್ಣ ನಿರ್ದಯತೆ ಇದೆ. ಈ ನ್ಯಾಯಾಲಯದ ಆದೇಶಗಳನ್ನು ಅನುಸರಿಸುವಲ್ಲಿ ರಾಜ್ಯವು ಗಂಭೀರವಾಗಿಲ್ಲ ಎಂದು ತೋರುತ್ತಿರುವುದು ಅತ್ಯಂತ ದುರದೃಷ್ಟಕರವಾಗಿದೆ. ಪರಿಹಾರ ನೀಡದಿರುವುದಕ್ಕೆ ಯಾವುದೇ ಸಮರ್ಥನೆ ಇಲ್ಲ” ಎಂದು ನ್ಯಾಯಾಲಯ ಕಿಡಿಕಾರಿದೆ.

“ಅರ್ಹ ಹಕ್ಕುದಾರರಿಗೆ ಪರಿಹಾರ ಪಾವತಿ ಮಾಡದಿರುವುದು ನಮ್ಮ ಹಿಂದಿನ ಆದೇಶಕ್ಕೆ ತೋರಿದ ಅವಿಧೇಯತೆಯಾಗಿದೆ. ಇದಕ್ಕೆ ಮುಖ್ಯ ಕಾರ್ಯದರ್ಶಿ ಜವಾಬ್ದಾರರಾಗಿರುತ್ತಾರೆ. ಮುಖ್ಯ ಕಾರ್ಯದರ್ಶಿಯವರು ವಾಸ್ತವಿಕವಾಗಿ ಮಧ್ಯಾಹ್ನ 2 ಗಂಟೆಗೆ ಹಾಜರಾಗಿ, ಸ್ಪಷ್ಟನೆ ನೀಡಲಿ” ಎಂದು ನ್ಯಾಯಮೂರ್ತಿ ಶಾ ಹೇಳಿದ್ದಾರೆ.

ಇನ್ನು, ಬಿಹಾರವು ತೀರಾ ಕಡಿಮೆ ಕೊರೊನಾ ಸಾವುಗಳ ವರದಿ ಮಾಡಿದೆ ಎಂದ ನ್ಯಾಯಾಲಯ, “ನೀವು ಡೇಟಾವನ್ನು ಸಹ ನವೀಕರಿಸುವುದಿಲ್ಲ. ನಿಮ್ಮ ಪ್ರಕಾರ ಕೇವಲ 12,000 ಜನರು ಸಾವನ್ನಪ್ಪಿದ್ದಾರೆ. ನಮಗೆ ನೈಜ ಸಂಗತಿಗಳು ಬೇಕು. ನಮ್ಮ ಹಿಂದಿನ ಆದೇಶದ ನಂತರ ಇತರ ರಾಜ್ಯಗಳಲ್ಲಿ ಸಂಖ್ಯೆಗಳು ಹೆಚ್ಚಿವೆ. ಬಿಹಾರದಲ್ಲಿ ಕೇವಲ 12,000 ಮಂದಿ ಸತ್ತಿದ್ದಾರೆ ಎಂಬುದನ್ನು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ” ಎಂದು ತರಾಟೆ ತೆಗೆದುಕೊಂಡಿದ್ದಾರೆ.

ಬಿಹಾರದಲ್ಲಿ ಇದುವರೆಗೆ ಸುಮಾರು ಎಂಟು ಲಕ್ಷ ಕೊರೊನಾ ಪ್ರಕರಣಗಳಿಂದ 12,145 ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿವೆ.

ಇದನ್ನೂ ಓದಿ: ಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಕೊರೊನಾ ಪರಿಹಾರಕ್ಕಾಗಿ ಸ್ವೀಕರಿಸಿದ ಅರ್ಜಿಗಳ ಸಂಖ್ಯೆ ಮತ್ತು ರಾಜ್ಯಗಳಲ್ಲಿ ದಾಖಲಾದ ಸಾವುಗಳ ನಡುವಿನ “ಅತ್ಯಂತ ಗಂಭೀರ” ಅಂತರದ ಬಗ್ಗೆ ಉನ್ನತ ನ್ಯಾಯಾಲಯವು ಕೇರಳ ಸೇರಿದಂತೆ ಇತರ ರಾಜ್ಯಗಳನ್ನು ಸಹ ತರಾಟೆಗೆ ತೆಗೆದುಕೊಂಡಿದೆ.

ಗುಜರಾತ್‌ನಲ್ಲಿ 10,174 ಸಾವುಗಳು ವರದಿಯಾಗಿವೆ. ಆದರೆ ಸುಮಾರು 91,000 ಪರಿಹಾರ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ನ್ಯಾಯಾಲಯವು ತೋರಿಸಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಕೇರಳವು 51,000 ಕ್ಕೂ ಹೆಚ್ಚು ಸಾವುಗಳನ್ನು ವರದಿ ಮಾಡಿದೆ. ಆದರೆ 27,000 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿವೆ. ಹರಿಯಣದಲ್ಲಿ 10,000 ಕ್ಕೂ ಹೆಚ್ಚು ಸಾವುಗಳಾಗಿದ್ದು, 7,360 ಅರ್ಜಿಗಳನ್ನು ಸ್ವೀಕರಿಸಿದೆ ಎಂದು ಹರಿಯಾಣ ನ್ಯಾಯಾಲಯಕ್ಕೆ ತಿಳಿಸಿದೆ.

“ಕೇರಳ ಕೇವಲ 27,000 ಅರ್ಜಿಗಳನ್ನು ಹೇಗೆ ಸ್ವೀಕರಿಸಿದೆ..? ಇತರ ರಾಜ್ಯಗಳಲ್ಲಿ ಸಾವುಗಳಿಗಿಂತ ಹೆಚ್ಚು ಅರ್ಜಿಗಳು ದಾಖಲಾಗಿವೆ. ಇಲ್ಲಿ ಏಕೆ ವಿರುದ್ಧ ಪ್ರವೃತ್ತಿ ಇದೆ..? ನೀವು ಈಗಾಗಲೇ ಮೃತರ ವಿವರಗಳನ್ನು ಹೊಂದಿದ್ದೀರಿ. ನಿಮ್ಮ ಅಧಿಕಾರಿಗಳು ಹೋಗಿ ಪರಿಹಾರದ ಬಗ್ಗೆ ಸಂತ್ರಸ್ತ ಕುಟುಂಬಗಳಿಗೆ ಹೇಳಬೇಕು. ಅವರಿಗೆ ಪರಿಹಾರವನ್ನು ನೀಡಲೇಬೇಕು,” ಎಂದು ನ್ಯಾಯಾಲಯ ಆದೇಶಿಸಿದೆ.

ಅಕ್ಟೋಬರ್‌ನಲ್ಲಿ ನ್ಯಾಯಾಲಯವು ಯಾವುದೇ ರಾಜ್ಯವು ಕೊರೊನಾ ಪರಿಹಾರವನ್ನು ನಿರಾಕರಿಸುವಂತಿಲ್ಲ. ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಹಣವನ್ನು ವಿತರಿಸಬೇಕು ಎಂದು ಆದೇಶಿಸಿತ್ತು.


ಇದನ್ನೂ ಓದಿ: ಕೊರೊನಾ ಸಾಂಕ್ರಾಮಿಕದಿಂದ ಮಾರಾಟದಲ್ಲಿ ದಾಖಲೆ ಬರೆದ ಡೋಲೊ-650

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...