Homeಕೊರೊನಾಕೊರೊನಾ ಪರಿಹಾರ ವಿಳಂಬ: ಬಿಹಾರ, ಆಂಧ್ರ ಪ್ರದೇಶ, ಕೇರಳಕ್ಕೆ ಸುಪ್ರೀಂ ತರಾಟೆ

ಕೊರೊನಾ ಪರಿಹಾರ ವಿಳಂಬ: ಬಿಹಾರ, ಆಂಧ್ರ ಪ್ರದೇಶ, ಕೇರಳಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರವನ್ನು ನೀಡುವಲ್ಲಿ ವಿಫಲವಾದ ಮತ್ತು ಪರಿಹಾರ ಪಾವತಿ ಮಾಡುವಲ್ಲಿ ವಿಳಂಬ ಮಾಡಿದ ರಾಜ್ಯಗಳನ್ನು ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದೆ.

ಆಂಧ್ರ ಪ್ರದೇಶ ಮತ್ತು ಬಿಹಾರ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಮಧ್ಯಾಹ್ನ 2 ಗಂಟೆಯ ವಿಚಾರಣೆಗೆ ಹಾಜರಾಗಬೇಕೆಂದು ನ್ಯಾಯಮೂರ್ತಿ ಎಂಆರ್ ಶಾ ನೋಟಿಸ್ ನೀಡಿದ್ದಾರೆ. ಅವರ್‍ಯಾರು ಕಾನೂನಿಗಿಂತ ಮೇಲಲ್ಲ ಎಂದು ನ್ಯಾಯಮೂರ್ತಿಗಳು ಕಿಡಿ ಕಾರಿದ್ದಾರೆ.

ಜೊತೆಗೆ ಕೇರಳ, ಹರಿಯಾಣ, ಗುಜರಾತ್ ಸೇರಿದಂತೆ ಇತರ ರಾಜ್ಯಗಳ ಸಾವಿನ ಲೆಕ್ಕ ಮತ್ತು ಪರಿಹಾರ ಅರ್ಜಿಗಳ ಲೆಕ್ಕದ ಬಗ್ಗೆ ನ್ಯಾಯಾಲಯ ಪ್ರಶ್ನಿಸಿದ್ದು ರಾಜ್ಯ ಸರ್ಕಾರಗಳ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ.

ಹಿಂದಿನ ನ್ಯಾಯಾಲಯದ ಆದೇಶದ ನಂತರ ಆಂಧ್ರಪ್ರದೇಶವು ಸುಮಾರು 36,000 ಪರಿಹಾರ ಅರ್ಜಿಗಳನ್ನು ದಾಖಲಿಸಿದೆದೆ, ಅದರಲ್ಲಿ 31,000 ಅರ್ಜಿಗಳು ಪರಿಹಾರಕ್ಕೆ ಅರ್ಹವಾಗಿವೆ. ಆದರೆ, ಇದುವರೆಗೆ 11,000 ಅರ್ಜಿದಾರರಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ.

ಇದನ್ನೂ ಓದಿ: ಆಸ್ಕರ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ’ಜೈ ಭೀಮ್’ ದೃಶ್ಯಗಳು: ಅತ್ಯುನ್ನತ ಗೌರವ ಎಂದ ತಂಡ

“ಪರಿಹಾರವನ್ನು ಪಾವತಿಸಲು ಪದೇ ಪದೇ ನಿರ್ದೇಶನಗಳನ್ನು ನೀಡಲಾಗುತ್ತಿದೆ. ಈ ವಿಷಯದಲ್ಲಿ ಆಂಧ್ರಪ್ರದೇಶದ ಭಾಗದಲ್ಲಿ ಸಂಪೂರ್ಣ ನಿರ್ದಯತೆ ಇದೆ. ಈ ನ್ಯಾಯಾಲಯದ ಆದೇಶಗಳನ್ನು ಅನುಸರಿಸುವಲ್ಲಿ ರಾಜ್ಯವು ಗಂಭೀರವಾಗಿಲ್ಲ ಎಂದು ತೋರುತ್ತಿರುವುದು ಅತ್ಯಂತ ದುರದೃಷ್ಟಕರವಾಗಿದೆ. ಪರಿಹಾರ ನೀಡದಿರುವುದಕ್ಕೆ ಯಾವುದೇ ಸಮರ್ಥನೆ ಇಲ್ಲ” ಎಂದು ನ್ಯಾಯಾಲಯ ಕಿಡಿಕಾರಿದೆ.

“ಅರ್ಹ ಹಕ್ಕುದಾರರಿಗೆ ಪರಿಹಾರ ಪಾವತಿ ಮಾಡದಿರುವುದು ನಮ್ಮ ಹಿಂದಿನ ಆದೇಶಕ್ಕೆ ತೋರಿದ ಅವಿಧೇಯತೆಯಾಗಿದೆ. ಇದಕ್ಕೆ ಮುಖ್ಯ ಕಾರ್ಯದರ್ಶಿ ಜವಾಬ್ದಾರರಾಗಿರುತ್ತಾರೆ. ಮುಖ್ಯ ಕಾರ್ಯದರ್ಶಿಯವರು ವಾಸ್ತವಿಕವಾಗಿ ಮಧ್ಯಾಹ್ನ 2 ಗಂಟೆಗೆ ಹಾಜರಾಗಿ, ಸ್ಪಷ್ಟನೆ ನೀಡಲಿ” ಎಂದು ನ್ಯಾಯಮೂರ್ತಿ ಶಾ ಹೇಳಿದ್ದಾರೆ.

ಇನ್ನು, ಬಿಹಾರವು ತೀರಾ ಕಡಿಮೆ ಕೊರೊನಾ ಸಾವುಗಳ ವರದಿ ಮಾಡಿದೆ ಎಂದ ನ್ಯಾಯಾಲಯ, “ನೀವು ಡೇಟಾವನ್ನು ಸಹ ನವೀಕರಿಸುವುದಿಲ್ಲ. ನಿಮ್ಮ ಪ್ರಕಾರ ಕೇವಲ 12,000 ಜನರು ಸಾವನ್ನಪ್ಪಿದ್ದಾರೆ. ನಮಗೆ ನೈಜ ಸಂಗತಿಗಳು ಬೇಕು. ನಮ್ಮ ಹಿಂದಿನ ಆದೇಶದ ನಂತರ ಇತರ ರಾಜ್ಯಗಳಲ್ಲಿ ಸಂಖ್ಯೆಗಳು ಹೆಚ್ಚಿವೆ. ಬಿಹಾರದಲ್ಲಿ ಕೇವಲ 12,000 ಮಂದಿ ಸತ್ತಿದ್ದಾರೆ ಎಂಬುದನ್ನು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ” ಎಂದು ತರಾಟೆ ತೆಗೆದುಕೊಂಡಿದ್ದಾರೆ.

ಬಿಹಾರದಲ್ಲಿ ಇದುವರೆಗೆ ಸುಮಾರು ಎಂಟು ಲಕ್ಷ ಕೊರೊನಾ ಪ್ರಕರಣಗಳಿಂದ 12,145 ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿವೆ.

ಇದನ್ನೂ ಓದಿ: ಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಕೊರೊನಾ ಪರಿಹಾರಕ್ಕಾಗಿ ಸ್ವೀಕರಿಸಿದ ಅರ್ಜಿಗಳ ಸಂಖ್ಯೆ ಮತ್ತು ರಾಜ್ಯಗಳಲ್ಲಿ ದಾಖಲಾದ ಸಾವುಗಳ ನಡುವಿನ “ಅತ್ಯಂತ ಗಂಭೀರ” ಅಂತರದ ಬಗ್ಗೆ ಉನ್ನತ ನ್ಯಾಯಾಲಯವು ಕೇರಳ ಸೇರಿದಂತೆ ಇತರ ರಾಜ್ಯಗಳನ್ನು ಸಹ ತರಾಟೆಗೆ ತೆಗೆದುಕೊಂಡಿದೆ.

ಗುಜರಾತ್‌ನಲ್ಲಿ 10,174 ಸಾವುಗಳು ವರದಿಯಾಗಿವೆ. ಆದರೆ ಸುಮಾರು 91,000 ಪರಿಹಾರ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ನ್ಯಾಯಾಲಯವು ತೋರಿಸಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಕೇರಳವು 51,000 ಕ್ಕೂ ಹೆಚ್ಚು ಸಾವುಗಳನ್ನು ವರದಿ ಮಾಡಿದೆ. ಆದರೆ 27,000 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿವೆ. ಹರಿಯಣದಲ್ಲಿ 10,000 ಕ್ಕೂ ಹೆಚ್ಚು ಸಾವುಗಳಾಗಿದ್ದು, 7,360 ಅರ್ಜಿಗಳನ್ನು ಸ್ವೀಕರಿಸಿದೆ ಎಂದು ಹರಿಯಾಣ ನ್ಯಾಯಾಲಯಕ್ಕೆ ತಿಳಿಸಿದೆ.

“ಕೇರಳ ಕೇವಲ 27,000 ಅರ್ಜಿಗಳನ್ನು ಹೇಗೆ ಸ್ವೀಕರಿಸಿದೆ..? ಇತರ ರಾಜ್ಯಗಳಲ್ಲಿ ಸಾವುಗಳಿಗಿಂತ ಹೆಚ್ಚು ಅರ್ಜಿಗಳು ದಾಖಲಾಗಿವೆ. ಇಲ್ಲಿ ಏಕೆ ವಿರುದ್ಧ ಪ್ರವೃತ್ತಿ ಇದೆ..? ನೀವು ಈಗಾಗಲೇ ಮೃತರ ವಿವರಗಳನ್ನು ಹೊಂದಿದ್ದೀರಿ. ನಿಮ್ಮ ಅಧಿಕಾರಿಗಳು ಹೋಗಿ ಪರಿಹಾರದ ಬಗ್ಗೆ ಸಂತ್ರಸ್ತ ಕುಟುಂಬಗಳಿಗೆ ಹೇಳಬೇಕು. ಅವರಿಗೆ ಪರಿಹಾರವನ್ನು ನೀಡಲೇಬೇಕು,” ಎಂದು ನ್ಯಾಯಾಲಯ ಆದೇಶಿಸಿದೆ.

ಅಕ್ಟೋಬರ್‌ನಲ್ಲಿ ನ್ಯಾಯಾಲಯವು ಯಾವುದೇ ರಾಜ್ಯವು ಕೊರೊನಾ ಪರಿಹಾರವನ್ನು ನಿರಾಕರಿಸುವಂತಿಲ್ಲ. ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಹಣವನ್ನು ವಿತರಿಸಬೇಕು ಎಂದು ಆದೇಶಿಸಿತ್ತು.


ಇದನ್ನೂ ಓದಿ: ಕೊರೊನಾ ಸಾಂಕ್ರಾಮಿಕದಿಂದ ಮಾರಾಟದಲ್ಲಿ ದಾಖಲೆ ಬರೆದ ಡೋಲೊ-650

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...