Homeಕರೋನಾ ತಲ್ಲಣಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

ಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

- Advertisement -
- Advertisement -

ಉತ್ತರ ಪ್ರದೇಶದ ಎರಡು ಹೃದಯ ಕಲಕುವ ಫೋಟೋಗಳು ಬಹಳ ದುಃಖದಿಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗುತ್ತಿವೆ. ಗ್ರಾಮೀಣ ಉತ್ತರ ಪ್ರದೇಶದ ಕೋವಿಡ್ ಪೀಡಿತ ಕುಟುಂಬಗಳ ಪರಿಸ್ಥಿತಿಯನ್ನು ಇವು ತೆರೆದಿಡುತ್ತವೆ.

ಒಂದು ಫೋಟೊ, ಒಬ್ಬ ವಯಸ್ಸಾದ, ಗಡ್ಡದ ವ್ಯಕ್ತಿಯು ಮಹಿಳೆಯ ಮೃತ ದೇಹವನ್ನು ಬೈಸಿಕಲ್‌ನಲ್ಲಿ ಸಾಗಿಸುತ್ತಿರುವುದನ್ನು ತೋರಿಸುತ್ತದೆ. ಇನ್ನೊಂದರಲ್ಲಿ, ಬೈಸಿಕಲ್ ಶವದ ಸಮೇತ ನೆಲಕ್ಕೆ ಒರಗಿದ್ದನ್ನು ತೋರಿಸುತ್ತದೆ.

ಕೊನೆಗೆ ಆ ವ್ಯಕ್ತಿಗೆ ಸಹಾಯ ಮಾಡಿದ ಸ್ಥಳೀಯ ಪೊಲೀಸರು ಸಾಮಾಜಿಕ ಬಹಿಷ್ಕಾರ ಮತ್ತು ಭಯದ ಕ್ರೂರ ಕತೆಯನ್ನು ಬಹಿರಂಗಪಡಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಫೋಟೋದಲ್ಲಿರುವ ವ್ಯಕ್ತಿ, 70 ವರ್ಷದ ತಿಲಖ್‌ಧಾರಿ, ಉತ್ತರ ಪ್ರದೇಶದ ಜೌನ್‌ಪುರದ ಅಂಬರ್ಪುರ್ ಗ್ರಾಮದ ನಿವಾಸಿ. ಈ ಗ್ರಾಮವು ರಾಜ್ಯ ರಾಜಧಾನಿ ಲಕ್ನೋದಿಂದ 275 ಕಿ.ಮೀ. ದೂರದಲ್ಲಿದೆ. ಅವರ ಪತ್ನಿ ಕೋವಿಡ್‌ನಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಆಸ್ಪತ್ರೆಯು ಅವರ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಮನೆಗೆ ಕಳುಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸ್ಥಳೀಯರು ಊರಿನ ಸ್ಮಶಾನದಲ್ಲಿ ಶವಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಹಳ್ಳಿಯಲ್ಲಿ ಸೋಂಕಿನ ಹರಡುವಿಕೆಗೆ ಕಾರಣವಾಗುತ್ತದೆ ಎಂಬುದು ಅವರ ನಂಬಿಕೆ.

ಈ ಪ್ರದೇಶಗಳಲ್ಲಿ ಕೋವಿಡ್ ಬೇರೆಡೆಯಷ್ಟು ತೀವ್ರವಾಗಿ ಇಲ್ಲದಿದ್ದರೂ, ಸ್ಥಳೀಯರು ಕೋವಿಡ್ ಕುರಿತು ತುಂಬ ಭಯಭೀತರಾಗಿದ್ದಾರೆ. ಗ್ರಾಮಸ್ಥರನ್ನು ಮನವೊಲಿಸಲು ಸಾಧ್ಯವಾಗದೆ, ತಿಲಖ್‌ಧಾರಿ ತನ್ನ ಹೆಂಡತಿಯ ಶವವನ್ನು ಹತ್ತಿರದ ಸಾಯಿ ನದಿ ದಂಡೆಗೆ ರವಾನಿಸಲು ನಿರ್ಧರಿಸಿದರು. ಗ್ರಾಮಸ್ಥರು ದೇಹವನ್ನು ಎತ್ತಲು ಸಹ ಸಹಾಯ ಮಾಡಲು ನಿರಾಕರಿಸಿದರು.

ಹತಾಶೆಯಲ್ಲಿ, ತಿಲಿಕ್‌ಧಾರಿ ಅದನ್ನು ತನ್ನ ಸೈಕಲ್‌ನಲ್ಲಿ ಸಾಗಿಸಲು ನಿರ್ಧರಿಸಿದ್ದಾರೆ ಎಂದು ಜೌನ್‌ಪುರದ ಮಡಿಯಾಹೂನ್‌ನ ಹಿರಿಯ ಪೊಲೀಸ್ ಅಧಿಕಾರಿ ಪಿ. ಉಪಾಧ್ಯಾಯ ಹೇಳಿದರು.
ಆದರೆ ಅರ್ಧದಾರಿಯಲ್ಲೇ, 70 ವರ್ಷ ವಯಸ್ಸಿನ ತಿಲಕ್‌ಧಾರಿ ಅವರಿಗೆ ಸೈಕಲ್ ನಿಯಂತ್ರಣ ತಪ್ಪಿತು. ಶವದ ಸಮೇತ ಸೈಕಲ್ ನೆಲಕ್ಕೆ ಉರುಳಿತು.

ರಸ್ತೆಯಲ್ಲಿ ಹಣೆ ಮೇಲೆ ಕೈ ಹೊತ್ತು ಅಸಹಾಯಕತೆಯಿಂದ ಕುಳಿತಿದ್ದ ತಿಲಕ್‌ಧಾರಿಯನ್ನು ಹಾದುಹೋಗುವ ಪೊಲೀಸ್ ಒಬ್ಬರು ಗಮನಿಸಿ, ಹಿರಿಯ ಅಧಿಕಾರಿಗೆ ತಿಳಿಸಿದರು.
ಕೂಡಲೇ ಪೊಲೀಸರು ಅಂತ್ಯಕ್ರಿಯೆಗೆ ಬೇಕಾದ ಎಲ್ಲಾ ವಸ್ತುಗಳನ್ನು ತಂದರು. ಸ್ಥಳೀಯ ಮುಸ್ಲಿಂ ವ್ಯಕ್ತಿಯ ಸಹಾಯದಿಂದ ಅಂತ್ಯಕ್ರಿಯೆ ನಡೆಸಲಾಯಿತು.

ದೇಶದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ ಇದುವರೆಗೆ 3,00,041 ಪ್ರಕರಣಗಳನ್ನು ದಾಖಲಿಸಿದೆ ಮತ್ತು 11,943 ಸಾವುಗಳು ದಾಖಲಾಗಿವೆ.

ಒಟ್ಟಾರೆಯಾಗಿ, ದೇಶವು ಇಂದು 3,79 ಲಕ್ಷ ಕೊರೊನಾ ವೈರಸ್ ಪ್ರಕರಣಗಳಲ್ಲಿ ಅತಿ ಹೆಚ್ಚು ಏರಿಕೆ ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ 3,645 ಸಾವುಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಶವಸಂಸ್ಕಾರದಲ್ಲಿ ಮುಸ್ಲಿಮರ ಸಮರ್ಪಣಾ ಮನೋಭಾವ

ಕೋವಿಡ್ ಈ ದೇಶದಲ್ಲಿ ಬಿಡಾರ ಹೂಡಿ ಒಂದು ವರ್ಷವಾದರೂ ಬಹುತೇಕರಿಗೆ ಸರಿಯಾದ ವೈಜ್ಞಾನಿಕ ತಿಳವಳಿಕೆ ನೀಡುವಲ್ಲಿ ಸರ್ಕಾರ ಮತ್ತು ಸಮಾಜ ಸೋತಿವೆ. ಹೀಗಾಗಿಯೇ ಎಷ್ಟೊ ಕುಟುಂಬಗಳು ತಮ್ಮ ಮನೆ ಸದಸ್ಯರು ಕೋವಿಡ್‌ನಿಂದ ಮೃತರಾದಾಗ ಶವಸಂಸ್ಕಾರಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಇಲ್ಲಿ ಗಮನಾರ್ಹವಾದ, ಪ್ರಶಂಸನೀಯವಾದ ಮತ್ತು ಅನಕರಣೀಯವಾದ ಕೆಲಸವನ್ನು ನೂರಾರು ಕಡೆ ಮುಸ್ಲಿಂ ಯುವಕರು ಮಾಡುತ್ತಿದ್ದಾರೆ. ಅವರು ಜಾತಿ-ಧರ್ಮ ನೋಡದೇ ಕೋವಿಡ್ ಶವಗಳ ಅಂತ್ಯ ಸಂಸ್ಕಾರ ಮಾಡುತ್ತಿದ್ದಾರೆ.


ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಷ್ಟ ಕಾಲದಲ್ಲಿ ಮನುಷ್ಯರು ಮಾನವೀಯತೆಯನ್ನು ತೋರಿಸಬೇಕೇ ಹೊರತು ಅಮಾನವೀಯತೆಯನ್ನು ಅಲ್ಲ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...