Homeಕರೋನಾ ತಲ್ಲಣಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

ಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

- Advertisement -
- Advertisement -

ಉತ್ತರ ಪ್ರದೇಶದ ಎರಡು ಹೃದಯ ಕಲಕುವ ಫೋಟೋಗಳು ಬಹಳ ದುಃಖದಿಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗುತ್ತಿವೆ. ಗ್ರಾಮೀಣ ಉತ್ತರ ಪ್ರದೇಶದ ಕೋವಿಡ್ ಪೀಡಿತ ಕುಟುಂಬಗಳ ಪರಿಸ್ಥಿತಿಯನ್ನು ಇವು ತೆರೆದಿಡುತ್ತವೆ.

ಒಂದು ಫೋಟೊ, ಒಬ್ಬ ವಯಸ್ಸಾದ, ಗಡ್ಡದ ವ್ಯಕ್ತಿಯು ಮಹಿಳೆಯ ಮೃತ ದೇಹವನ್ನು ಬೈಸಿಕಲ್‌ನಲ್ಲಿ ಸಾಗಿಸುತ್ತಿರುವುದನ್ನು ತೋರಿಸುತ್ತದೆ. ಇನ್ನೊಂದರಲ್ಲಿ, ಬೈಸಿಕಲ್ ಶವದ ಸಮೇತ ನೆಲಕ್ಕೆ ಒರಗಿದ್ದನ್ನು ತೋರಿಸುತ್ತದೆ.

ಕೊನೆಗೆ ಆ ವ್ಯಕ್ತಿಗೆ ಸಹಾಯ ಮಾಡಿದ ಸ್ಥಳೀಯ ಪೊಲೀಸರು ಸಾಮಾಜಿಕ ಬಹಿಷ್ಕಾರ ಮತ್ತು ಭಯದ ಕ್ರೂರ ಕತೆಯನ್ನು ಬಹಿರಂಗಪಡಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಫೋಟೋದಲ್ಲಿರುವ ವ್ಯಕ್ತಿ, 70 ವರ್ಷದ ತಿಲಖ್‌ಧಾರಿ, ಉತ್ತರ ಪ್ರದೇಶದ ಜೌನ್‌ಪುರದ ಅಂಬರ್ಪುರ್ ಗ್ರಾಮದ ನಿವಾಸಿ. ಈ ಗ್ರಾಮವು ರಾಜ್ಯ ರಾಜಧಾನಿ ಲಕ್ನೋದಿಂದ 275 ಕಿ.ಮೀ. ದೂರದಲ್ಲಿದೆ. ಅವರ ಪತ್ನಿ ಕೋವಿಡ್‌ನಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಆಸ್ಪತ್ರೆಯು ಅವರ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಮನೆಗೆ ಕಳುಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸ್ಥಳೀಯರು ಊರಿನ ಸ್ಮಶಾನದಲ್ಲಿ ಶವಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಹಳ್ಳಿಯಲ್ಲಿ ಸೋಂಕಿನ ಹರಡುವಿಕೆಗೆ ಕಾರಣವಾಗುತ್ತದೆ ಎಂಬುದು ಅವರ ನಂಬಿಕೆ.

ಈ ಪ್ರದೇಶಗಳಲ್ಲಿ ಕೋವಿಡ್ ಬೇರೆಡೆಯಷ್ಟು ತೀವ್ರವಾಗಿ ಇಲ್ಲದಿದ್ದರೂ, ಸ್ಥಳೀಯರು ಕೋವಿಡ್ ಕುರಿತು ತುಂಬ ಭಯಭೀತರಾಗಿದ್ದಾರೆ. ಗ್ರಾಮಸ್ಥರನ್ನು ಮನವೊಲಿಸಲು ಸಾಧ್ಯವಾಗದೆ, ತಿಲಖ್‌ಧಾರಿ ತನ್ನ ಹೆಂಡತಿಯ ಶವವನ್ನು ಹತ್ತಿರದ ಸಾಯಿ ನದಿ ದಂಡೆಗೆ ರವಾನಿಸಲು ನಿರ್ಧರಿಸಿದರು. ಗ್ರಾಮಸ್ಥರು ದೇಹವನ್ನು ಎತ್ತಲು ಸಹ ಸಹಾಯ ಮಾಡಲು ನಿರಾಕರಿಸಿದರು.

ಹತಾಶೆಯಲ್ಲಿ, ತಿಲಿಕ್‌ಧಾರಿ ಅದನ್ನು ತನ್ನ ಸೈಕಲ್‌ನಲ್ಲಿ ಸಾಗಿಸಲು ನಿರ್ಧರಿಸಿದ್ದಾರೆ ಎಂದು ಜೌನ್‌ಪುರದ ಮಡಿಯಾಹೂನ್‌ನ ಹಿರಿಯ ಪೊಲೀಸ್ ಅಧಿಕಾರಿ ಪಿ. ಉಪಾಧ್ಯಾಯ ಹೇಳಿದರು.
ಆದರೆ ಅರ್ಧದಾರಿಯಲ್ಲೇ, 70 ವರ್ಷ ವಯಸ್ಸಿನ ತಿಲಕ್‌ಧಾರಿ ಅವರಿಗೆ ಸೈಕಲ್ ನಿಯಂತ್ರಣ ತಪ್ಪಿತು. ಶವದ ಸಮೇತ ಸೈಕಲ್ ನೆಲಕ್ಕೆ ಉರುಳಿತು.

ರಸ್ತೆಯಲ್ಲಿ ಹಣೆ ಮೇಲೆ ಕೈ ಹೊತ್ತು ಅಸಹಾಯಕತೆಯಿಂದ ಕುಳಿತಿದ್ದ ತಿಲಕ್‌ಧಾರಿಯನ್ನು ಹಾದುಹೋಗುವ ಪೊಲೀಸ್ ಒಬ್ಬರು ಗಮನಿಸಿ, ಹಿರಿಯ ಅಧಿಕಾರಿಗೆ ತಿಳಿಸಿದರು.
ಕೂಡಲೇ ಪೊಲೀಸರು ಅಂತ್ಯಕ್ರಿಯೆಗೆ ಬೇಕಾದ ಎಲ್ಲಾ ವಸ್ತುಗಳನ್ನು ತಂದರು. ಸ್ಥಳೀಯ ಮುಸ್ಲಿಂ ವ್ಯಕ್ತಿಯ ಸಹಾಯದಿಂದ ಅಂತ್ಯಕ್ರಿಯೆ ನಡೆಸಲಾಯಿತು.

ದೇಶದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ ಇದುವರೆಗೆ 3,00,041 ಪ್ರಕರಣಗಳನ್ನು ದಾಖಲಿಸಿದೆ ಮತ್ತು 11,943 ಸಾವುಗಳು ದಾಖಲಾಗಿವೆ.

ಒಟ್ಟಾರೆಯಾಗಿ, ದೇಶವು ಇಂದು 3,79 ಲಕ್ಷ ಕೊರೊನಾ ವೈರಸ್ ಪ್ರಕರಣಗಳಲ್ಲಿ ಅತಿ ಹೆಚ್ಚು ಏರಿಕೆ ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ 3,645 ಸಾವುಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಶವಸಂಸ್ಕಾರದಲ್ಲಿ ಮುಸ್ಲಿಮರ ಸಮರ್ಪಣಾ ಮನೋಭಾವ

ಕೋವಿಡ್ ಈ ದೇಶದಲ್ಲಿ ಬಿಡಾರ ಹೂಡಿ ಒಂದು ವರ್ಷವಾದರೂ ಬಹುತೇಕರಿಗೆ ಸರಿಯಾದ ವೈಜ್ಞಾನಿಕ ತಿಳವಳಿಕೆ ನೀಡುವಲ್ಲಿ ಸರ್ಕಾರ ಮತ್ತು ಸಮಾಜ ಸೋತಿವೆ. ಹೀಗಾಗಿಯೇ ಎಷ್ಟೊ ಕುಟುಂಬಗಳು ತಮ್ಮ ಮನೆ ಸದಸ್ಯರು ಕೋವಿಡ್‌ನಿಂದ ಮೃತರಾದಾಗ ಶವಸಂಸ್ಕಾರಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಇಲ್ಲಿ ಗಮನಾರ್ಹವಾದ, ಪ್ರಶಂಸನೀಯವಾದ ಮತ್ತು ಅನಕರಣೀಯವಾದ ಕೆಲಸವನ್ನು ನೂರಾರು ಕಡೆ ಮುಸ್ಲಿಂ ಯುವಕರು ಮಾಡುತ್ತಿದ್ದಾರೆ. ಅವರು ಜಾತಿ-ಧರ್ಮ ನೋಡದೇ ಕೋವಿಡ್ ಶವಗಳ ಅಂತ್ಯ ಸಂಸ್ಕಾರ ಮಾಡುತ್ತಿದ್ದಾರೆ.


ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಷ್ಟ ಕಾಲದಲ್ಲಿ ಮನುಷ್ಯರು ಮಾನವೀಯತೆಯನ್ನು ತೋರಿಸಬೇಕೇ ಹೊರತು ಅಮಾನವೀಯತೆಯನ್ನು ಅಲ್ಲ.

LEAVE A REPLY

Please enter your comment!
Please enter your name here

- Advertisment -

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...