Homeಕರೋನಾ ತಲ್ಲಣಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

ಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

- Advertisement -
- Advertisement -

ಉತ್ತರ ಪ್ರದೇಶದ ಎರಡು ಹೃದಯ ಕಲಕುವ ಫೋಟೋಗಳು ಬಹಳ ದುಃಖದಿಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗುತ್ತಿವೆ. ಗ್ರಾಮೀಣ ಉತ್ತರ ಪ್ರದೇಶದ ಕೋವಿಡ್ ಪೀಡಿತ ಕುಟುಂಬಗಳ ಪರಿಸ್ಥಿತಿಯನ್ನು ಇವು ತೆರೆದಿಡುತ್ತವೆ.

ಒಂದು ಫೋಟೊ, ಒಬ್ಬ ವಯಸ್ಸಾದ, ಗಡ್ಡದ ವ್ಯಕ್ತಿಯು ಮಹಿಳೆಯ ಮೃತ ದೇಹವನ್ನು ಬೈಸಿಕಲ್‌ನಲ್ಲಿ ಸಾಗಿಸುತ್ತಿರುವುದನ್ನು ತೋರಿಸುತ್ತದೆ. ಇನ್ನೊಂದರಲ್ಲಿ, ಬೈಸಿಕಲ್ ಶವದ ಸಮೇತ ನೆಲಕ್ಕೆ ಒರಗಿದ್ದನ್ನು ತೋರಿಸುತ್ತದೆ.

ಕೊನೆಗೆ ಆ ವ್ಯಕ್ತಿಗೆ ಸಹಾಯ ಮಾಡಿದ ಸ್ಥಳೀಯ ಪೊಲೀಸರು ಸಾಮಾಜಿಕ ಬಹಿಷ್ಕಾರ ಮತ್ತು ಭಯದ ಕ್ರೂರ ಕತೆಯನ್ನು ಬಹಿರಂಗಪಡಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಫೋಟೋದಲ್ಲಿರುವ ವ್ಯಕ್ತಿ, 70 ವರ್ಷದ ತಿಲಖ್‌ಧಾರಿ, ಉತ್ತರ ಪ್ರದೇಶದ ಜೌನ್‌ಪುರದ ಅಂಬರ್ಪುರ್ ಗ್ರಾಮದ ನಿವಾಸಿ. ಈ ಗ್ರಾಮವು ರಾಜ್ಯ ರಾಜಧಾನಿ ಲಕ್ನೋದಿಂದ 275 ಕಿ.ಮೀ. ದೂರದಲ್ಲಿದೆ. ಅವರ ಪತ್ನಿ ಕೋವಿಡ್‌ನಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಆಸ್ಪತ್ರೆಯು ಅವರ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಮನೆಗೆ ಕಳುಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸ್ಥಳೀಯರು ಊರಿನ ಸ್ಮಶಾನದಲ್ಲಿ ಶವಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಹಳ್ಳಿಯಲ್ಲಿ ಸೋಂಕಿನ ಹರಡುವಿಕೆಗೆ ಕಾರಣವಾಗುತ್ತದೆ ಎಂಬುದು ಅವರ ನಂಬಿಕೆ.

ಈ ಪ್ರದೇಶಗಳಲ್ಲಿ ಕೋವಿಡ್ ಬೇರೆಡೆಯಷ್ಟು ತೀವ್ರವಾಗಿ ಇಲ್ಲದಿದ್ದರೂ, ಸ್ಥಳೀಯರು ಕೋವಿಡ್ ಕುರಿತು ತುಂಬ ಭಯಭೀತರಾಗಿದ್ದಾರೆ. ಗ್ರಾಮಸ್ಥರನ್ನು ಮನವೊಲಿಸಲು ಸಾಧ್ಯವಾಗದೆ, ತಿಲಖ್‌ಧಾರಿ ತನ್ನ ಹೆಂಡತಿಯ ಶವವನ್ನು ಹತ್ತಿರದ ಸಾಯಿ ನದಿ ದಂಡೆಗೆ ರವಾನಿಸಲು ನಿರ್ಧರಿಸಿದರು. ಗ್ರಾಮಸ್ಥರು ದೇಹವನ್ನು ಎತ್ತಲು ಸಹ ಸಹಾಯ ಮಾಡಲು ನಿರಾಕರಿಸಿದರು.

ಹತಾಶೆಯಲ್ಲಿ, ತಿಲಿಕ್‌ಧಾರಿ ಅದನ್ನು ತನ್ನ ಸೈಕಲ್‌ನಲ್ಲಿ ಸಾಗಿಸಲು ನಿರ್ಧರಿಸಿದ್ದಾರೆ ಎಂದು ಜೌನ್‌ಪುರದ ಮಡಿಯಾಹೂನ್‌ನ ಹಿರಿಯ ಪೊಲೀಸ್ ಅಧಿಕಾರಿ ಪಿ. ಉಪಾಧ್ಯಾಯ ಹೇಳಿದರು.
ಆದರೆ ಅರ್ಧದಾರಿಯಲ್ಲೇ, 70 ವರ್ಷ ವಯಸ್ಸಿನ ತಿಲಕ್‌ಧಾರಿ ಅವರಿಗೆ ಸೈಕಲ್ ನಿಯಂತ್ರಣ ತಪ್ಪಿತು. ಶವದ ಸಮೇತ ಸೈಕಲ್ ನೆಲಕ್ಕೆ ಉರುಳಿತು.

ರಸ್ತೆಯಲ್ಲಿ ಹಣೆ ಮೇಲೆ ಕೈ ಹೊತ್ತು ಅಸಹಾಯಕತೆಯಿಂದ ಕುಳಿತಿದ್ದ ತಿಲಕ್‌ಧಾರಿಯನ್ನು ಹಾದುಹೋಗುವ ಪೊಲೀಸ್ ಒಬ್ಬರು ಗಮನಿಸಿ, ಹಿರಿಯ ಅಧಿಕಾರಿಗೆ ತಿಳಿಸಿದರು.
ಕೂಡಲೇ ಪೊಲೀಸರು ಅಂತ್ಯಕ್ರಿಯೆಗೆ ಬೇಕಾದ ಎಲ್ಲಾ ವಸ್ತುಗಳನ್ನು ತಂದರು. ಸ್ಥಳೀಯ ಮುಸ್ಲಿಂ ವ್ಯಕ್ತಿಯ ಸಹಾಯದಿಂದ ಅಂತ್ಯಕ್ರಿಯೆ ನಡೆಸಲಾಯಿತು.

ದೇಶದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ ಇದುವರೆಗೆ 3,00,041 ಪ್ರಕರಣಗಳನ್ನು ದಾಖಲಿಸಿದೆ ಮತ್ತು 11,943 ಸಾವುಗಳು ದಾಖಲಾಗಿವೆ.

ಒಟ್ಟಾರೆಯಾಗಿ, ದೇಶವು ಇಂದು 3,79 ಲಕ್ಷ ಕೊರೊನಾ ವೈರಸ್ ಪ್ರಕರಣಗಳಲ್ಲಿ ಅತಿ ಹೆಚ್ಚು ಏರಿಕೆ ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ 3,645 ಸಾವುಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಶವಸಂಸ್ಕಾರದಲ್ಲಿ ಮುಸ್ಲಿಮರ ಸಮರ್ಪಣಾ ಮನೋಭಾವ

ಕೋವಿಡ್ ಈ ದೇಶದಲ್ಲಿ ಬಿಡಾರ ಹೂಡಿ ಒಂದು ವರ್ಷವಾದರೂ ಬಹುತೇಕರಿಗೆ ಸರಿಯಾದ ವೈಜ್ಞಾನಿಕ ತಿಳವಳಿಕೆ ನೀಡುವಲ್ಲಿ ಸರ್ಕಾರ ಮತ್ತು ಸಮಾಜ ಸೋತಿವೆ. ಹೀಗಾಗಿಯೇ ಎಷ್ಟೊ ಕುಟುಂಬಗಳು ತಮ್ಮ ಮನೆ ಸದಸ್ಯರು ಕೋವಿಡ್‌ನಿಂದ ಮೃತರಾದಾಗ ಶವಸಂಸ್ಕಾರಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಇಲ್ಲಿ ಗಮನಾರ್ಹವಾದ, ಪ್ರಶಂಸನೀಯವಾದ ಮತ್ತು ಅನಕರಣೀಯವಾದ ಕೆಲಸವನ್ನು ನೂರಾರು ಕಡೆ ಮುಸ್ಲಿಂ ಯುವಕರು ಮಾಡುತ್ತಿದ್ದಾರೆ. ಅವರು ಜಾತಿ-ಧರ್ಮ ನೋಡದೇ ಕೋವಿಡ್ ಶವಗಳ ಅಂತ್ಯ ಸಂಸ್ಕಾರ ಮಾಡುತ್ತಿದ್ದಾರೆ.


ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಷ್ಟ ಕಾಲದಲ್ಲಿ ಮನುಷ್ಯರು ಮಾನವೀಯತೆಯನ್ನು ತೋರಿಸಬೇಕೇ ಹೊರತು ಅಮಾನವೀಯತೆಯನ್ನು ಅಲ್ಲ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...