Homeಕರೋನಾ ತಲ್ಲಣಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

ಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

- Advertisement -
- Advertisement -

ಉತ್ತರ ಪ್ರದೇಶದ ಎರಡು ಹೃದಯ ಕಲಕುವ ಫೋಟೋಗಳು ಬಹಳ ದುಃಖದಿಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗುತ್ತಿವೆ. ಗ್ರಾಮೀಣ ಉತ್ತರ ಪ್ರದೇಶದ ಕೋವಿಡ್ ಪೀಡಿತ ಕುಟುಂಬಗಳ ಪರಿಸ್ಥಿತಿಯನ್ನು ಇವು ತೆರೆದಿಡುತ್ತವೆ.

ಒಂದು ಫೋಟೊ, ಒಬ್ಬ ವಯಸ್ಸಾದ, ಗಡ್ಡದ ವ್ಯಕ್ತಿಯು ಮಹಿಳೆಯ ಮೃತ ದೇಹವನ್ನು ಬೈಸಿಕಲ್‌ನಲ್ಲಿ ಸಾಗಿಸುತ್ತಿರುವುದನ್ನು ತೋರಿಸುತ್ತದೆ. ಇನ್ನೊಂದರಲ್ಲಿ, ಬೈಸಿಕಲ್ ಶವದ ಸಮೇತ ನೆಲಕ್ಕೆ ಒರಗಿದ್ದನ್ನು ತೋರಿಸುತ್ತದೆ.

ಕೊನೆಗೆ ಆ ವ್ಯಕ್ತಿಗೆ ಸಹಾಯ ಮಾಡಿದ ಸ್ಥಳೀಯ ಪೊಲೀಸರು ಸಾಮಾಜಿಕ ಬಹಿಷ್ಕಾರ ಮತ್ತು ಭಯದ ಕ್ರೂರ ಕತೆಯನ್ನು ಬಹಿರಂಗಪಡಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಫೋಟೋದಲ್ಲಿರುವ ವ್ಯಕ್ತಿ, 70 ವರ್ಷದ ತಿಲಖ್‌ಧಾರಿ, ಉತ್ತರ ಪ್ರದೇಶದ ಜೌನ್‌ಪುರದ ಅಂಬರ್ಪುರ್ ಗ್ರಾಮದ ನಿವಾಸಿ. ಈ ಗ್ರಾಮವು ರಾಜ್ಯ ರಾಜಧಾನಿ ಲಕ್ನೋದಿಂದ 275 ಕಿ.ಮೀ. ದೂರದಲ್ಲಿದೆ. ಅವರ ಪತ್ನಿ ಕೋವಿಡ್‌ನಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಆಸ್ಪತ್ರೆಯು ಅವರ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಮನೆಗೆ ಕಳುಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸ್ಥಳೀಯರು ಊರಿನ ಸ್ಮಶಾನದಲ್ಲಿ ಶವಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಹಳ್ಳಿಯಲ್ಲಿ ಸೋಂಕಿನ ಹರಡುವಿಕೆಗೆ ಕಾರಣವಾಗುತ್ತದೆ ಎಂಬುದು ಅವರ ನಂಬಿಕೆ.

ಈ ಪ್ರದೇಶಗಳಲ್ಲಿ ಕೋವಿಡ್ ಬೇರೆಡೆಯಷ್ಟು ತೀವ್ರವಾಗಿ ಇಲ್ಲದಿದ್ದರೂ, ಸ್ಥಳೀಯರು ಕೋವಿಡ್ ಕುರಿತು ತುಂಬ ಭಯಭೀತರಾಗಿದ್ದಾರೆ. ಗ್ರಾಮಸ್ಥರನ್ನು ಮನವೊಲಿಸಲು ಸಾಧ್ಯವಾಗದೆ, ತಿಲಖ್‌ಧಾರಿ ತನ್ನ ಹೆಂಡತಿಯ ಶವವನ್ನು ಹತ್ತಿರದ ಸಾಯಿ ನದಿ ದಂಡೆಗೆ ರವಾನಿಸಲು ನಿರ್ಧರಿಸಿದರು. ಗ್ರಾಮಸ್ಥರು ದೇಹವನ್ನು ಎತ್ತಲು ಸಹ ಸಹಾಯ ಮಾಡಲು ನಿರಾಕರಿಸಿದರು.

ಹತಾಶೆಯಲ್ಲಿ, ತಿಲಿಕ್‌ಧಾರಿ ಅದನ್ನು ತನ್ನ ಸೈಕಲ್‌ನಲ್ಲಿ ಸಾಗಿಸಲು ನಿರ್ಧರಿಸಿದ್ದಾರೆ ಎಂದು ಜೌನ್‌ಪುರದ ಮಡಿಯಾಹೂನ್‌ನ ಹಿರಿಯ ಪೊಲೀಸ್ ಅಧಿಕಾರಿ ಪಿ. ಉಪಾಧ್ಯಾಯ ಹೇಳಿದರು.
ಆದರೆ ಅರ್ಧದಾರಿಯಲ್ಲೇ, 70 ವರ್ಷ ವಯಸ್ಸಿನ ತಿಲಕ್‌ಧಾರಿ ಅವರಿಗೆ ಸೈಕಲ್ ನಿಯಂತ್ರಣ ತಪ್ಪಿತು. ಶವದ ಸಮೇತ ಸೈಕಲ್ ನೆಲಕ್ಕೆ ಉರುಳಿತು.

ರಸ್ತೆಯಲ್ಲಿ ಹಣೆ ಮೇಲೆ ಕೈ ಹೊತ್ತು ಅಸಹಾಯಕತೆಯಿಂದ ಕುಳಿತಿದ್ದ ತಿಲಕ್‌ಧಾರಿಯನ್ನು ಹಾದುಹೋಗುವ ಪೊಲೀಸ್ ಒಬ್ಬರು ಗಮನಿಸಿ, ಹಿರಿಯ ಅಧಿಕಾರಿಗೆ ತಿಳಿಸಿದರು.
ಕೂಡಲೇ ಪೊಲೀಸರು ಅಂತ್ಯಕ್ರಿಯೆಗೆ ಬೇಕಾದ ಎಲ್ಲಾ ವಸ್ತುಗಳನ್ನು ತಂದರು. ಸ್ಥಳೀಯ ಮುಸ್ಲಿಂ ವ್ಯಕ್ತಿಯ ಸಹಾಯದಿಂದ ಅಂತ್ಯಕ್ರಿಯೆ ನಡೆಸಲಾಯಿತು.

ದೇಶದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ ಇದುವರೆಗೆ 3,00,041 ಪ್ರಕರಣಗಳನ್ನು ದಾಖಲಿಸಿದೆ ಮತ್ತು 11,943 ಸಾವುಗಳು ದಾಖಲಾಗಿವೆ.

ಒಟ್ಟಾರೆಯಾಗಿ, ದೇಶವು ಇಂದು 3,79 ಲಕ್ಷ ಕೊರೊನಾ ವೈರಸ್ ಪ್ರಕರಣಗಳಲ್ಲಿ ಅತಿ ಹೆಚ್ಚು ಏರಿಕೆ ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ 3,645 ಸಾವುಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಶವಸಂಸ್ಕಾರದಲ್ಲಿ ಮುಸ್ಲಿಮರ ಸಮರ್ಪಣಾ ಮನೋಭಾವ

ಕೋವಿಡ್ ಈ ದೇಶದಲ್ಲಿ ಬಿಡಾರ ಹೂಡಿ ಒಂದು ವರ್ಷವಾದರೂ ಬಹುತೇಕರಿಗೆ ಸರಿಯಾದ ವೈಜ್ಞಾನಿಕ ತಿಳವಳಿಕೆ ನೀಡುವಲ್ಲಿ ಸರ್ಕಾರ ಮತ್ತು ಸಮಾಜ ಸೋತಿವೆ. ಹೀಗಾಗಿಯೇ ಎಷ್ಟೊ ಕುಟುಂಬಗಳು ತಮ್ಮ ಮನೆ ಸದಸ್ಯರು ಕೋವಿಡ್‌ನಿಂದ ಮೃತರಾದಾಗ ಶವಸಂಸ್ಕಾರಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಇಲ್ಲಿ ಗಮನಾರ್ಹವಾದ, ಪ್ರಶಂಸನೀಯವಾದ ಮತ್ತು ಅನಕರಣೀಯವಾದ ಕೆಲಸವನ್ನು ನೂರಾರು ಕಡೆ ಮುಸ್ಲಿಂ ಯುವಕರು ಮಾಡುತ್ತಿದ್ದಾರೆ. ಅವರು ಜಾತಿ-ಧರ್ಮ ನೋಡದೇ ಕೋವಿಡ್ ಶವಗಳ ಅಂತ್ಯ ಸಂಸ್ಕಾರ ಮಾಡುತ್ತಿದ್ದಾರೆ.


ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಷ್ಟ ಕಾಲದಲ್ಲಿ ಮನುಷ್ಯರು ಮಾನವೀಯತೆಯನ್ನು ತೋರಿಸಬೇಕೇ ಹೊರತು ಅಮಾನವೀಯತೆಯನ್ನು ಅಲ್ಲ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...