Homeಕರೋನಾ ತಲ್ಲಣಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

ಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

- Advertisement -
- Advertisement -

ಉತ್ತರ ಪ್ರದೇಶದ ಎರಡು ಹೃದಯ ಕಲಕುವ ಫೋಟೋಗಳು ಬಹಳ ದುಃಖದಿಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗುತ್ತಿವೆ. ಗ್ರಾಮೀಣ ಉತ್ತರ ಪ್ರದೇಶದ ಕೋವಿಡ್ ಪೀಡಿತ ಕುಟುಂಬಗಳ ಪರಿಸ್ಥಿತಿಯನ್ನು ಇವು ತೆರೆದಿಡುತ್ತವೆ.

ಒಂದು ಫೋಟೊ, ಒಬ್ಬ ವಯಸ್ಸಾದ, ಗಡ್ಡದ ವ್ಯಕ್ತಿಯು ಮಹಿಳೆಯ ಮೃತ ದೇಹವನ್ನು ಬೈಸಿಕಲ್‌ನಲ್ಲಿ ಸಾಗಿಸುತ್ತಿರುವುದನ್ನು ತೋರಿಸುತ್ತದೆ. ಇನ್ನೊಂದರಲ್ಲಿ, ಬೈಸಿಕಲ್ ಶವದ ಸಮೇತ ನೆಲಕ್ಕೆ ಒರಗಿದ್ದನ್ನು ತೋರಿಸುತ್ತದೆ.

ಕೊನೆಗೆ ಆ ವ್ಯಕ್ತಿಗೆ ಸಹಾಯ ಮಾಡಿದ ಸ್ಥಳೀಯ ಪೊಲೀಸರು ಸಾಮಾಜಿಕ ಬಹಿಷ್ಕಾರ ಮತ್ತು ಭಯದ ಕ್ರೂರ ಕತೆಯನ್ನು ಬಹಿರಂಗಪಡಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಫೋಟೋದಲ್ಲಿರುವ ವ್ಯಕ್ತಿ, 70 ವರ್ಷದ ತಿಲಖ್‌ಧಾರಿ, ಉತ್ತರ ಪ್ರದೇಶದ ಜೌನ್‌ಪುರದ ಅಂಬರ್ಪುರ್ ಗ್ರಾಮದ ನಿವಾಸಿ. ಈ ಗ್ರಾಮವು ರಾಜ್ಯ ರಾಜಧಾನಿ ಲಕ್ನೋದಿಂದ 275 ಕಿ.ಮೀ. ದೂರದಲ್ಲಿದೆ. ಅವರ ಪತ್ನಿ ಕೋವಿಡ್‌ನಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಆಸ್ಪತ್ರೆಯು ಅವರ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಮನೆಗೆ ಕಳುಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸ್ಥಳೀಯರು ಊರಿನ ಸ್ಮಶಾನದಲ್ಲಿ ಶವಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಹಳ್ಳಿಯಲ್ಲಿ ಸೋಂಕಿನ ಹರಡುವಿಕೆಗೆ ಕಾರಣವಾಗುತ್ತದೆ ಎಂಬುದು ಅವರ ನಂಬಿಕೆ.

ಈ ಪ್ರದೇಶಗಳಲ್ಲಿ ಕೋವಿಡ್ ಬೇರೆಡೆಯಷ್ಟು ತೀವ್ರವಾಗಿ ಇಲ್ಲದಿದ್ದರೂ, ಸ್ಥಳೀಯರು ಕೋವಿಡ್ ಕುರಿತು ತುಂಬ ಭಯಭೀತರಾಗಿದ್ದಾರೆ. ಗ್ರಾಮಸ್ಥರನ್ನು ಮನವೊಲಿಸಲು ಸಾಧ್ಯವಾಗದೆ, ತಿಲಖ್‌ಧಾರಿ ತನ್ನ ಹೆಂಡತಿಯ ಶವವನ್ನು ಹತ್ತಿರದ ಸಾಯಿ ನದಿ ದಂಡೆಗೆ ರವಾನಿಸಲು ನಿರ್ಧರಿಸಿದರು. ಗ್ರಾಮಸ್ಥರು ದೇಹವನ್ನು ಎತ್ತಲು ಸಹ ಸಹಾಯ ಮಾಡಲು ನಿರಾಕರಿಸಿದರು.

ಹತಾಶೆಯಲ್ಲಿ, ತಿಲಿಕ್‌ಧಾರಿ ಅದನ್ನು ತನ್ನ ಸೈಕಲ್‌ನಲ್ಲಿ ಸಾಗಿಸಲು ನಿರ್ಧರಿಸಿದ್ದಾರೆ ಎಂದು ಜೌನ್‌ಪುರದ ಮಡಿಯಾಹೂನ್‌ನ ಹಿರಿಯ ಪೊಲೀಸ್ ಅಧಿಕಾರಿ ಪಿ. ಉಪಾಧ್ಯಾಯ ಹೇಳಿದರು.
ಆದರೆ ಅರ್ಧದಾರಿಯಲ್ಲೇ, 70 ವರ್ಷ ವಯಸ್ಸಿನ ತಿಲಕ್‌ಧಾರಿ ಅವರಿಗೆ ಸೈಕಲ್ ನಿಯಂತ್ರಣ ತಪ್ಪಿತು. ಶವದ ಸಮೇತ ಸೈಕಲ್ ನೆಲಕ್ಕೆ ಉರುಳಿತು.

ರಸ್ತೆಯಲ್ಲಿ ಹಣೆ ಮೇಲೆ ಕೈ ಹೊತ್ತು ಅಸಹಾಯಕತೆಯಿಂದ ಕುಳಿತಿದ್ದ ತಿಲಕ್‌ಧಾರಿಯನ್ನು ಹಾದುಹೋಗುವ ಪೊಲೀಸ್ ಒಬ್ಬರು ಗಮನಿಸಿ, ಹಿರಿಯ ಅಧಿಕಾರಿಗೆ ತಿಳಿಸಿದರು.
ಕೂಡಲೇ ಪೊಲೀಸರು ಅಂತ್ಯಕ್ರಿಯೆಗೆ ಬೇಕಾದ ಎಲ್ಲಾ ವಸ್ತುಗಳನ್ನು ತಂದರು. ಸ್ಥಳೀಯ ಮುಸ್ಲಿಂ ವ್ಯಕ್ತಿಯ ಸಹಾಯದಿಂದ ಅಂತ್ಯಕ್ರಿಯೆ ನಡೆಸಲಾಯಿತು.

ದೇಶದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ ಇದುವರೆಗೆ 3,00,041 ಪ್ರಕರಣಗಳನ್ನು ದಾಖಲಿಸಿದೆ ಮತ್ತು 11,943 ಸಾವುಗಳು ದಾಖಲಾಗಿವೆ.

ಒಟ್ಟಾರೆಯಾಗಿ, ದೇಶವು ಇಂದು 3,79 ಲಕ್ಷ ಕೊರೊನಾ ವೈರಸ್ ಪ್ರಕರಣಗಳಲ್ಲಿ ಅತಿ ಹೆಚ್ಚು ಏರಿಕೆ ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ 3,645 ಸಾವುಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಶವಸಂಸ್ಕಾರದಲ್ಲಿ ಮುಸ್ಲಿಮರ ಸಮರ್ಪಣಾ ಮನೋಭಾವ

ಕೋವಿಡ್ ಈ ದೇಶದಲ್ಲಿ ಬಿಡಾರ ಹೂಡಿ ಒಂದು ವರ್ಷವಾದರೂ ಬಹುತೇಕರಿಗೆ ಸರಿಯಾದ ವೈಜ್ಞಾನಿಕ ತಿಳವಳಿಕೆ ನೀಡುವಲ್ಲಿ ಸರ್ಕಾರ ಮತ್ತು ಸಮಾಜ ಸೋತಿವೆ. ಹೀಗಾಗಿಯೇ ಎಷ್ಟೊ ಕುಟುಂಬಗಳು ತಮ್ಮ ಮನೆ ಸದಸ್ಯರು ಕೋವಿಡ್‌ನಿಂದ ಮೃತರಾದಾಗ ಶವಸಂಸ್ಕಾರಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಇಲ್ಲಿ ಗಮನಾರ್ಹವಾದ, ಪ್ರಶಂಸನೀಯವಾದ ಮತ್ತು ಅನಕರಣೀಯವಾದ ಕೆಲಸವನ್ನು ನೂರಾರು ಕಡೆ ಮುಸ್ಲಿಂ ಯುವಕರು ಮಾಡುತ್ತಿದ್ದಾರೆ. ಅವರು ಜಾತಿ-ಧರ್ಮ ನೋಡದೇ ಕೋವಿಡ್ ಶವಗಳ ಅಂತ್ಯ ಸಂಸ್ಕಾರ ಮಾಡುತ್ತಿದ್ದಾರೆ.


ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಷ್ಟ ಕಾಲದಲ್ಲಿ ಮನುಷ್ಯರು ಮಾನವೀಯತೆಯನ್ನು ತೋರಿಸಬೇಕೇ ಹೊರತು ಅಮಾನವೀಯತೆಯನ್ನು ಅಲ್ಲ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....