Homeಕರೋನಾ ತಲ್ಲಣಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

ಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

- Advertisement -
- Advertisement -

ಉತ್ತರ ಪ್ರದೇಶದ ಎರಡು ಹೃದಯ ಕಲಕುವ ಫೋಟೋಗಳು ಬಹಳ ದುಃಖದಿಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗುತ್ತಿವೆ. ಗ್ರಾಮೀಣ ಉತ್ತರ ಪ್ರದೇಶದ ಕೋವಿಡ್ ಪೀಡಿತ ಕುಟುಂಬಗಳ ಪರಿಸ್ಥಿತಿಯನ್ನು ಇವು ತೆರೆದಿಡುತ್ತವೆ.

ಒಂದು ಫೋಟೊ, ಒಬ್ಬ ವಯಸ್ಸಾದ, ಗಡ್ಡದ ವ್ಯಕ್ತಿಯು ಮಹಿಳೆಯ ಮೃತ ದೇಹವನ್ನು ಬೈಸಿಕಲ್‌ನಲ್ಲಿ ಸಾಗಿಸುತ್ತಿರುವುದನ್ನು ತೋರಿಸುತ್ತದೆ. ಇನ್ನೊಂದರಲ್ಲಿ, ಬೈಸಿಕಲ್ ಶವದ ಸಮೇತ ನೆಲಕ್ಕೆ ಒರಗಿದ್ದನ್ನು ತೋರಿಸುತ್ತದೆ.

ಕೊನೆಗೆ ಆ ವ್ಯಕ್ತಿಗೆ ಸಹಾಯ ಮಾಡಿದ ಸ್ಥಳೀಯ ಪೊಲೀಸರು ಸಾಮಾಜಿಕ ಬಹಿಷ್ಕಾರ ಮತ್ತು ಭಯದ ಕ್ರೂರ ಕತೆಯನ್ನು ಬಹಿರಂಗಪಡಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಫೋಟೋದಲ್ಲಿರುವ ವ್ಯಕ್ತಿ, 70 ವರ್ಷದ ತಿಲಖ್‌ಧಾರಿ, ಉತ್ತರ ಪ್ರದೇಶದ ಜೌನ್‌ಪುರದ ಅಂಬರ್ಪುರ್ ಗ್ರಾಮದ ನಿವಾಸಿ. ಈ ಗ್ರಾಮವು ರಾಜ್ಯ ರಾಜಧಾನಿ ಲಕ್ನೋದಿಂದ 275 ಕಿ.ಮೀ. ದೂರದಲ್ಲಿದೆ. ಅವರ ಪತ್ನಿ ಕೋವಿಡ್‌ನಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಆಸ್ಪತ್ರೆಯು ಅವರ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಮನೆಗೆ ಕಳುಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸ್ಥಳೀಯರು ಊರಿನ ಸ್ಮಶಾನದಲ್ಲಿ ಶವಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಹಳ್ಳಿಯಲ್ಲಿ ಸೋಂಕಿನ ಹರಡುವಿಕೆಗೆ ಕಾರಣವಾಗುತ್ತದೆ ಎಂಬುದು ಅವರ ನಂಬಿಕೆ.

ಈ ಪ್ರದೇಶಗಳಲ್ಲಿ ಕೋವಿಡ್ ಬೇರೆಡೆಯಷ್ಟು ತೀವ್ರವಾಗಿ ಇಲ್ಲದಿದ್ದರೂ, ಸ್ಥಳೀಯರು ಕೋವಿಡ್ ಕುರಿತು ತುಂಬ ಭಯಭೀತರಾಗಿದ್ದಾರೆ. ಗ್ರಾಮಸ್ಥರನ್ನು ಮನವೊಲಿಸಲು ಸಾಧ್ಯವಾಗದೆ, ತಿಲಖ್‌ಧಾರಿ ತನ್ನ ಹೆಂಡತಿಯ ಶವವನ್ನು ಹತ್ತಿರದ ಸಾಯಿ ನದಿ ದಂಡೆಗೆ ರವಾನಿಸಲು ನಿರ್ಧರಿಸಿದರು. ಗ್ರಾಮಸ್ಥರು ದೇಹವನ್ನು ಎತ್ತಲು ಸಹ ಸಹಾಯ ಮಾಡಲು ನಿರಾಕರಿಸಿದರು.

ಹತಾಶೆಯಲ್ಲಿ, ತಿಲಿಕ್‌ಧಾರಿ ಅದನ್ನು ತನ್ನ ಸೈಕಲ್‌ನಲ್ಲಿ ಸಾಗಿಸಲು ನಿರ್ಧರಿಸಿದ್ದಾರೆ ಎಂದು ಜೌನ್‌ಪುರದ ಮಡಿಯಾಹೂನ್‌ನ ಹಿರಿಯ ಪೊಲೀಸ್ ಅಧಿಕಾರಿ ಪಿ. ಉಪಾಧ್ಯಾಯ ಹೇಳಿದರು.
ಆದರೆ ಅರ್ಧದಾರಿಯಲ್ಲೇ, 70 ವರ್ಷ ವಯಸ್ಸಿನ ತಿಲಕ್‌ಧಾರಿ ಅವರಿಗೆ ಸೈಕಲ್ ನಿಯಂತ್ರಣ ತಪ್ಪಿತು. ಶವದ ಸಮೇತ ಸೈಕಲ್ ನೆಲಕ್ಕೆ ಉರುಳಿತು.

ರಸ್ತೆಯಲ್ಲಿ ಹಣೆ ಮೇಲೆ ಕೈ ಹೊತ್ತು ಅಸಹಾಯಕತೆಯಿಂದ ಕುಳಿತಿದ್ದ ತಿಲಕ್‌ಧಾರಿಯನ್ನು ಹಾದುಹೋಗುವ ಪೊಲೀಸ್ ಒಬ್ಬರು ಗಮನಿಸಿ, ಹಿರಿಯ ಅಧಿಕಾರಿಗೆ ತಿಳಿಸಿದರು.
ಕೂಡಲೇ ಪೊಲೀಸರು ಅಂತ್ಯಕ್ರಿಯೆಗೆ ಬೇಕಾದ ಎಲ್ಲಾ ವಸ್ತುಗಳನ್ನು ತಂದರು. ಸ್ಥಳೀಯ ಮುಸ್ಲಿಂ ವ್ಯಕ್ತಿಯ ಸಹಾಯದಿಂದ ಅಂತ್ಯಕ್ರಿಯೆ ನಡೆಸಲಾಯಿತು.

ದೇಶದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ ಇದುವರೆಗೆ 3,00,041 ಪ್ರಕರಣಗಳನ್ನು ದಾಖಲಿಸಿದೆ ಮತ್ತು 11,943 ಸಾವುಗಳು ದಾಖಲಾಗಿವೆ.

ಒಟ್ಟಾರೆಯಾಗಿ, ದೇಶವು ಇಂದು 3,79 ಲಕ್ಷ ಕೊರೊನಾ ವೈರಸ್ ಪ್ರಕರಣಗಳಲ್ಲಿ ಅತಿ ಹೆಚ್ಚು ಏರಿಕೆ ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ 3,645 ಸಾವುಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಶವಸಂಸ್ಕಾರದಲ್ಲಿ ಮುಸ್ಲಿಮರ ಸಮರ್ಪಣಾ ಮನೋಭಾವ

ಕೋವಿಡ್ ಈ ದೇಶದಲ್ಲಿ ಬಿಡಾರ ಹೂಡಿ ಒಂದು ವರ್ಷವಾದರೂ ಬಹುತೇಕರಿಗೆ ಸರಿಯಾದ ವೈಜ್ಞಾನಿಕ ತಿಳವಳಿಕೆ ನೀಡುವಲ್ಲಿ ಸರ್ಕಾರ ಮತ್ತು ಸಮಾಜ ಸೋತಿವೆ. ಹೀಗಾಗಿಯೇ ಎಷ್ಟೊ ಕುಟುಂಬಗಳು ತಮ್ಮ ಮನೆ ಸದಸ್ಯರು ಕೋವಿಡ್‌ನಿಂದ ಮೃತರಾದಾಗ ಶವಸಂಸ್ಕಾರಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಇಲ್ಲಿ ಗಮನಾರ್ಹವಾದ, ಪ್ರಶಂಸನೀಯವಾದ ಮತ್ತು ಅನಕರಣೀಯವಾದ ಕೆಲಸವನ್ನು ನೂರಾರು ಕಡೆ ಮುಸ್ಲಿಂ ಯುವಕರು ಮಾಡುತ್ತಿದ್ದಾರೆ. ಅವರು ಜಾತಿ-ಧರ್ಮ ನೋಡದೇ ಕೋವಿಡ್ ಶವಗಳ ಅಂತ್ಯ ಸಂಸ್ಕಾರ ಮಾಡುತ್ತಿದ್ದಾರೆ.


ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಷ್ಟ ಕಾಲದಲ್ಲಿ ಮನುಷ್ಯರು ಮಾನವೀಯತೆಯನ್ನು ತೋರಿಸಬೇಕೇ ಹೊರತು ಅಮಾನವೀಯತೆಯನ್ನು ಅಲ್ಲ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...