Homeಕರೋನಾ ತಲ್ಲಣಕೊರೊನಾ ಕರ್ತವ್ಯ: ನೀಟ್ ಪರೀಕ್ಷೆಯಿಂದ ವಂಚಿತರಾಗಲಿದ್ದಾರೆ 5,000 ವೈದ್ಯಕೀಯ ಇಂಟರ್ನ್‌ಗಳು

ಕೊರೊನಾ ಕರ್ತವ್ಯ: ನೀಟ್ ಪರೀಕ್ಷೆಯಿಂದ ವಂಚಿತರಾಗಲಿದ್ದಾರೆ 5,000 ವೈದ್ಯಕೀಯ ಇಂಟರ್ನ್‌ಗಳು

- Advertisement -
- Advertisement -

ಕೇರಳ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶದ 5,000ಕ್ಕೂ ಹೆಚ್ಚು ವೈದ್ಯಕೀಯ ಇಂಟರ್ನ್‌ಗಳು ಕೊರೊನಾ ಸಾಂಕ್ರಾಮಿಕದ ತುರ್ತು ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿದ್ದರಿಂದ 2022ರ ನೀಟ್ ಪಿಜಿ ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿಲ್ಲ.

ವೈದ್ಯಕೀಯ ವಿದ್ಯಾರ್ಥಿಗಳು ನೀಟ್‌-ಪಿಜಿ 2022 ಪರೀಕ್ಷೆ ಬರೆಯಲು ಇಂಟರ್ನ್‌ಶಿಪ್ ಪೂರ್ಣಗೊಳಿಸಿರಬೇಕು. ಆದರೆ, ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿಯು ಇಂಟರ್ನ್‌ಶಿಪ್ ಪೂರ್ಣಗೊಳಿಸುವ ಕಟ್-ಆಫ್ ದಿನಾಂಕವನ್ನು ಜುಲೈ 31ಕ್ಕೆ ವಿಸ್ತರಿಸಿದೆ. ಹೀಗಾಗಿ, ಪರೀಕ್ಷೆಗೂ ಮುನ್ನವೇ ವಿದ್ಯಾರ್ಥಿಗಳ ಇಂಟರ್ನ್‌ಶಿಪ್ ಮುಗಿಯುವುದಿಲ್ಲವಾದ್ದರಿಂದ ಈ ಇಂಟರ್ನ್‌ಗಳು ಪರೀಕ್ಷೆ ಬರೆಯಲು ಅನರ್ಹರಾಗುತ್ತಾರೆ.

’ಕೇರಳದಲ್ಲಿ 3,500 ಕ್ಕೂ ಹೆಚ್ಚು ಇಂಟರ್ನಿಗಳು ಕೋವಿಡ್ ವಿರುದ್ಧ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ನಾವು ಪಿಜೆಗೆ ಪ್ರವೇಶ ಪಡೆಯಲು ನಮ್ಮ ಮೊದಲ ಪ್ರಯತ್ನವನ್ನು ಕಳೆದುಕೊಳ್ಳುತ್ತಿರುವುದು ಕಳವಳಕಾರಿ ಸಂಗತತಿ’ ಎಂದು ಕೇರಳದ ಐಎಂಎ-ಮೆಡಿಕಲ್ ಸ್ಟೂಡೆಂಟ್ಸ್ ನೆಟ್ವರ್ಕ್‌ನ ಸಂಚಾಲಕ ವಿಷ್ಣು ಗೋಪನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“5,000 ಕ್ಕೂ ಹೆಚ್ಚು ಇಂಟರ್ನಿಗಳು ನೀಟ್‌-ಪಿಜಿ 2022 ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುವುದಿಲ್ಲ. ಭಾರತದ ಇತಿಹಾಸದಲ್ಲಿ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಶೂನ್ಯ ವರ್ಷವೇ ಇರಲಿಲ್ಲ” ಎಂದು ಐಎಂಎ – ಜೂನಿಯರ್ ಡಾಕ್ಟರ್ಸ್ ನೆಟ್ವರ್ಕ್‌ನ ರಾಷ್ಟ್ರೀಯ ಕಾರ್ಯದರ್ಶಿ ಡಾ. ಕರಣ್ ಜುನೇಜಾ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸುವ ಮೂಲಕ ದೇಶಾದ್ಯಂತ ಕೊರೊನಾ ಹರಡಿತು: ಪಿಎಂ ಮೋದಿ

ಕೇರಳ ಆರೋಗ್ಯ ಸೇವೆಗಳ ವಿಶ್ವವಿದ್ಯಾಲಯದ ಅಡಿಯಲ್ಲಿ 25 ವೈದ್ಯಕೀಯ ಕಾಲೇಜುಗಳಿವೆ. ಇಂಟರರ್ನ್‌ಶಿಪ್ ಅರ್ಹತೆಯನ್ನು ವಿಸ್ತರಿಸುವ ನಿರ್ಧಾರವನ್ನು ಗುಜರಾತ್ ಇಂಟರ್ನ್ ವೈದ್ಯರ ಸಂಘದ ಅಧ್ಯಕ್ಷ ಡಾ ಮೀತ್‌ ಘೋನಿಯಾ ಅವರು ಸ್ವಾಗತಿಸಿದ್ದಾರೆ.

“ಸಾಂಕ್ರಾಮಿಕ ಸಮಯದಲ್ಲಿ ಸರ್ಕಾರವು ಅವರನ್ನು ಉದ್ಯೋಗಿಗಳಾಗಿ ಬಳಸಿಕೊಂಡಿದೆ ಎಂಬ ಏಕೈಕ ಕಾರಣದಿಂದ ಅವರು ಪರೀಕ್ಷೆಗೆ ಅರ್ಹರಾಗುವುದಿಲ್ಲ. ಅವರು ಕೊರೊನ ವಿರುದ್ದದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಅವರ ಇಂಟರ್ನ್‌ಶಿಪ್ ತಡವಾಗಿ ಪ್ರಾರಂಭವಾಗಿದೆ. ಈಗ ಅವರು ಪರೀಕ್ಷೆಗೆ ಅರ್ಹತೆ ಪಡೆಯುವುದಿಲ್ಲ. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಸರ್ಕಾರವನ್ನು ವಿನಂತಿಸುತ್ತೇವೆ” ಎಂದು ಘೋನಿಯಾ ಹೇಳಿದ್ದಾರೆ.

ಈ ಇಂಟರ್ನ್‌ಗಳು ತಮ್ಮ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದಿದ್ದರೆ, ಅವರು ಒಂದು ವರ್ಷದವರೆಗೆ ಅವಕಾಶಗಳಿಂದ ವಂಚಿತರಾಗುತ್ತಾರೆ. ಜೂನಿಯರ್ ವೈದ್ಯರು ಆರೋಗ್ಯ ಕ್ಷೇತ್ರದಲ್ಲಿ ಬೆನ್ನೆಲುಬಾಗಿದ್ದಾರೆ. ಇಂಟರ್ನ್‌ಗಳು ಪರೀಕ್ಷೆಯನ್ನು ತಪ್ಪಿಸಿಕೊಳ್ಳುವುದು ನಮ್ಮ ಆರೋಗ್ಯ ವ್ಯವಸ್ಥೆಯ ಮೇಲೆ ಹೆಚ್ಚು ಪರಿಣಾಮ ಬೀರುವುದಲ್ಲದೆ, ಜನರಿಗೂ ಸಮಸ್ಯೆಯಾಗಲಿದೆ ಎಂದು ಡಾ.ಕರಣ್ ಜುನೇಜಾ ಹೇಳಿದ್ದಾರೆ.


ಇದನ್ನೂ ಓದಿ: ಅಂಬೇಡ್ಕರ್‌‌‌ ಭಾವಚಿತ್ರಕ್ಕೆ ಅವಮಾನಿಸಿದ ರಾಯಚೂರು ನ್ಯಾಯಾಧೀಶ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...