Homeಮುಖಪುಟಮನೆಯಲ್ಲೇ ಕೊರೊನಾ ಟೆಸ್ಟ್ ಮಾಡಿಕೊಳ್ಳಲು ಅನುಮತಿ- ಯಾರು ಬಳಸಬಹುದು ಎಂಬ ಮಾಹಿತಿ ಇಲ್ಲಿದೆ

ಮನೆಯಲ್ಲೇ ಕೊರೊನಾ ಟೆಸ್ಟ್ ಮಾಡಿಕೊಳ್ಳಲು ಅನುಮತಿ- ಯಾರು ಬಳಸಬಹುದು ಎಂಬ ಮಾಹಿತಿ ಇಲ್ಲಿದೆ

- Advertisement -
- Advertisement -

ಕೊರೊನಾ ಸೋಂಕು ಪತ್ತೆ ಹಚ್ಚಲು ಮನೆಯಲ್ಲಿಯೇ ರ್‍ಯಾಪಿಡ್ ಆಂಟಿಜೆನ್ ಕಿಟ್‌ಗಳನ್ನು ಬಳಸಿಕೊಂಡು ಪರೀಕ್ಷೆ ನಡೆಸಲು ಹೋಂ ಟೆಸ್ಟ್ ಕಿಟ್‌ಗಳಿಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಬುಧವಾರ ಅನುಮತಿ ನೀಡಿದೆ. ಜೊತೆಗೆ ಇದನ್ನು ಯಾರು ಮತ್ತು ಹೇಗೆ ಬಳಸಬಹುದು ಎಂಬುದರ ಕುರಿತು ವಿವರವಾದ ಮಾರ್ಗಸೂಚಿಗಳನ್ನು ನೀಡಿದೆ.

ಕೊರೊನಾ ರೋಗಲಕ್ಷಣವುಳ್ಳ ವ್ಯಕ್ತಿಗಳು ಮತ್ತು ಪ್ರಯೋಗಾಲಯದಲ್ಲಿ ಪಾಸಿಟಿವ್ ಬಂದ ವ್ಯಕ್ತಿಯ ಸಂಪರ್ಕಕ್ಕೆ ಬಂದ ವ್ಯಕ್ತಿಗಳು ಮಾತ್ರ ಮನೆಯಲ್ಲಿ ಈ ಹೋಂ ಕಿಟ್‌ಗಳನ್ನು ಬಳಸಬೇಕು ಎಂದು ಐಸಿಎಂಆರ್ ಸ್ಪಷ್ಟಪಡಿಸಿದೆ.

“ಈ ಹೋಂ ಕಿಟ್‌ಗಳನ್ನು ಬಳಸಿ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದ ಎಲ್ಲ ವ್ಯಕ್ತಿಗಳು ಇದನ್ನು ಅಧಿಕೃತ ಎಂದು ಪರಿಗಣಿಸಬಹುದು ಜೊತೆಗೆ ಮತ್ತೊಮ್ಮೆ ಕೊರೊನಾ ಪರೀಕ್ಷೆಯ ಅಗತ್ಯವಿಲ್ಲ. ಆದರೆ, ರೋಗ ಲಕ್ಷಣಗಳಿದ್ದು, ನೆಗೆಟಿವ್ ಬಂದರೆ, ಅವರು ಆರ್‌ಟಿಪಿಸಿಆರ್‌ ಟೆಸ್ಟ್ ಮಾಡಿಸಿಕೊಳ್ಳಬೇಕು” ಎಂದು ಐಸಿಎಂಆರ್ ಹೇಳಿದೆ.

ಇದನ್ನೂ ಓದಿ: ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

CoviSelfTM (PathoCatch) COVID-19 OTC ಆಂಟಿಜೆನ್ ಎಲ್ಎಫ್ ಸಾಧನವನ್ನು ಪುಣೆ ಮೂಲದ ಮೈಲಾಬ್ ಡಿಸ್ಕವರಿ ಸೊಲ್ಯೂಷನ್ಸ್ ಲಿಮಿಟೆಡ್ ತಯಾರಿಸಿದೆ. ಅಪ್ಲಿಕೇಶನ್‌ನಲ್ಲಿ ವಿವರಿಸಿದ ಪ್ರಕ್ರಿಯೆಯ ಪ್ರಕಾರ ಮನೆಯಲ್ಲಿ ಪರೀಕ್ಷೆಯನ್ನು ನಡೆಸಬೇಕು. ಈ ಅಪ್ಲಿಕೇಶನ್‌, ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಬೇಕು ಎಂದು ಐಸಿಎಂಆರ್ ಹೇಳಿದೆ.

“ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪರೀಕ್ಷಾ ಕಾರ್ಯವಿಧಾನದ ಸಮಗ್ರ ಮಾರ್ಗದರ್ಶಿಯಾಗಿದೆ. ಇದು ರೋಗಿಗೆ ಪಾಸಿಟಿವ್ ಅಥವಾ ನೆಗೆಟಿವ್ ಪರೀಕ್ಷಾ ವರದಿಯನ್ನು ನೀಡುತ್ತದೆ” ಪರೀಕ್ಷಾ ವಿಧಾನವನ್ನು ಪೂರ್ಣಗೊಳಿಸಿದ ನಂತರ ಟೆಸ್ಟ್ ಪಟ್ಟಿಯ ಚಿತ್ರವನ್ನು ತೆಗೆದುಕೊಳ್ಳುವಂತೆ ಎಲ್ಲಾ ಬಳಕೆದಾರರಿಗೆ ಐಸಿಎಂಆರ್ ಸೂಚಿಸಿದೆ.

ಬಳಕೆದಾರರ ಫೋನ್‌ನ ಟೆಸ್ಟಿಂಗ್ ಡೇಟಾ, ಐಸಿಎಂಆರ್ ಕೋವಿಡ್ ಪರೀಕ್ಷಾ ಪೋರ್ಟಲ್‌ನೊಂದಿಗೆ ಸಂಪರ್ಕಿಸಲಾಗಿದ್ದು, ಸರ್ವರ್‌ನಲ್ಲಿ ಎಲ್ಲಾ ಡೇಟಾವನ್ನು ಅಂತಿಮವಾಗಿ ಸಂಗ್ರಹಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ.


ಇದನ್ನೂ ಓದಿ: ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...